ಬೆಳ್ತಂಗಡಿ; ಕೊಯ್ಯೂರು ನಿವಾಸಿ ಮಹಿಳೆ ನಾಪತ್ತೆ

0

ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿಯಾಗಿರುವ ರಝೀನ(24ವ) ಎಂಬವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬವರ ಪತ್ನಿಯಾದ ರಝೀನರ 2ವರ್ಷದ ಮಗ 40 ದಿನಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ ಅವರು ಕೊಯ್ಯರಿನ ತಾಯಿ ಮನೆಯಲ್ಲಿದ್ದರು. ರಝೀನ 22-06-2025ರಂದು ಸಂಜೆ 4.00ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದಳು ಆದರೆ ಆಕೆ ಗಂಡನ ಮನೆಗೆ ಹೋಗದಿರುವುದರಿಂದ ಸಂಬಂಧಿಕರು,ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ರಝೀನ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು...

ನೆರಿಯ: ಸಾಕು ನಾಯಿ ಮೇಲೆ ಚಿರತೆ ದಾಳಿ

0

ಬೆಳ್ತಂಗಡಿ:ಮನೆಯಂಗಳ ಪ್ರವೇಶಿಸಿದ ಚಿರತೆ ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.ಇಲ್ಲಿನ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದಾಗ ಅದು ಬೊಬ್ಬೆ ಹೊಡೆಯುವ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ನಾಯಿಯನ್ನು ಗಾಯಗೊಳಿಸಿ ಚಿರತೆ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಮನೆಯವರು ತಿಳಿಸಿದ್ದಾರೆ.ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ನೆರಿಯ ಶಾಖೆಯ ಡಿಆರ್‌ ಎಫ್ ಒ ರವಿಚಂದ್ರ,ಚಿಬಿದ್ರೆ ಶಾಖೆಯ ಡಿಆರ್ ಎಫ್ ಒ ನಾಗೇಶ್...

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

0

ಬೆಳ್ತಂಗಡಿ (ಜೂ-24): ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಮುಸ್ಲಿಮರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡುವಂತೆ ಅಧಿಕಾರಿಗಳಲ್ಲಿ ಕೋರಿದ ಹಿನ್ನಲೆಯಲ್ಲಿ ಈ ಕುರಿತು ರೈತರು ಮಹದೇವಪುರದಲ್ಲಿ ಶ್ರೀರಂಗ ಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಜೊತೆ ನಡೆದ ಸಭೆಯಲ್ಲಿ, ಮುಸ್ಲಿಮರಿಗೆ ಕಂದಾಯ ಇಲಾಖೆ ಅಧಿಕಾರಿಗಳು...

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ನಮಿತಾ ಪೂಜಾರಿ ಅವರಿಗೆ ಅಭಿನಂದನೆ.

0

ಬೆಳ್ತಂಗಡಿ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ...

ಅಳದಂಗಡಿ; ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ

0

ಬೆಳ್ತಂಗಡಿ: ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಸೋಮವಾರ ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ( ಐ.ಡಿ.ಎ.)ದ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ನಿಯೋಜಿತ ಅಧ್ಯಕ್ಷ ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಫ್ರೊ. ಪಿ.ಪಿ.ಪ್ರಭು ಉದ್ಘಾಟಿಸಿದರು.ಐ.ಡಿ.ಎ.ಪುತ್ತೂರು ಘಟಕದ ಅಧ್ಯಕ್ಷೆ ಡಾl ಆಶಾ ಪಿದಮಲೆ, ಬೆಳ್ತಂಗಡಿ ಸ್ವಾತಿ ದಂತ ಚಿಕಿತ್ಸಾಲಯದ ಡಾl ಶಶಿಧರ ಡೋಂಗ್ರೆ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ , ಡಾl ರಾಘವೇಂದ್ರ...

ರಾಜ್ಯ ಸರಕಾರದ ವಿರುದ್ದ ತಾಲೂಕಿನ ಗ್ರಾ.ಪಂ ಕಚೇರಿಗಳ ಎದುರು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ತಾಲೂಕಿನಾದ್ಯಂತ ಗ್ರಾಮಪಂಚಾಯತು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.‌ ಪ್ರತಿಭಟನಾಕಾರರು ಗ್ರಾ.ಪಂ ಅಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.ಪ್ರತಿ ಗ್ರಾಮಪಂಚಾಯತಿನ ಎದುರು ನಡೆದ ಪ್ರತಿಭಟನೆಗಳಲ್ಲಿ ಪಕ್ಷದ ಸ್ಥಳೀಯ ಮುಖಂಡರುಗಳು ಜನಪ್ರತಿನಿಧಿಗಳು ಭಾಗವಹಿಸಿ ಸರಜಾರ ಅನುಸರಿಸುತ್ತಿರುವ ನೀತಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತಿನ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದಪಟ್ಟಣ ಪಂಚಾಯತು ಅಧ್ಯಕ್ಷ...

ಬೆಳ್ತಂಗಡಿ;  ಕಲ್ಪತರು ನರ್ಸಿಂಗ್ ಸ್ಕೂಲ್ನಲ್ಲಿ  ಲ್ಯಾಂಪ್ ಲೈಟಿಂಗ್ ಮತ್ತು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

0

ಬೆಳ್ತಂಗಡಿ; ಕಲ್ಪತರು ನರ್ಸಿಂಗ್ ಸ್ಕೂಲ್ ಜೂನ್ 23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ತಮ್ಮ ಆಶೀರ್ವಚನ ನೀಡಿ ಮಾತನಾಡುತ್ತಾ “ನೀವು ಇಂದು ಈ ದೀಪವನ್ನು ಮಾತ್ರವಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರಾಗಿದ್ದೀರಿ. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್,...

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿಯಿರುವ ವ್ಯಕ್ತಿ ಠಾಣೆಗೆ ಶರಣಾಗತಿ; ಎಸ್.ಪಿ ಸ್ಪಷ್ಟನೆ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತಾನೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟನೆ ನೀಡಿದ್ದಾರೆ.ಧರ್ಮಸ್ಥಳ ಪೊಲೀಸರು ಈ ಪತ್ರದ ಬಗ್ಗೆ ಸದ್ರಿ ವಕೀಲರುಗಳನ್ನು ಸಂಪರ್ಕಿಸಿದ್ದು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಥ ಕೃತ್ಯಗಳ ಬಗ್ಗೆ ತನಗೆ ಮಾಹಿತಿಯಿರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದನಿರುವುದಾಗಿ ತಿಳಿಸಿರುತ್ತಾರೆ. ಎಂದು ವಕೀಲರು ಪೊಲೀಸರುಲಿಗೆ ಮಾಹಿತಿ ನೀಡಿದ್ದಾರೆ....

ಬೆಳ್ತಂಗಡಿ; ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಲಾಯಿಲದ ಸಿರಿಲ್ ಜೋಸೆಪ್ ಗೆ ಚಿನ್ನದ ಪದಕ

0

ಬೆಳ್ತಂಗಡಿ; ಮಣಿಪಾಲ್ ನಲ್ಲಿ ನಡೆದ 9 ನೆಯ ರಾಷ್ಟ್ರೀಯ ಮಾಟ್ಟದ ಐಬಿಎಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ದೃಷ್ಟಿ ಸಮಸ್ಯೆ ಇರುವವರ ( visually impaired) ಸ್ಪರ್ಧೆಯಲ್ಲಿ ಲಾಯಿಲ ನಿವಾಸಿ ಸಿರಿಲ್ ಜೋಸೆಫ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.ಜೂನ್ 21 ಹಾಗೂ 22 ರಂದು ರಾಷ್ಟ್ರ ಮಟ್ಟದ ಈ ಪಂದ್ಯಾಟ ಮಣಿಪಾಲ್ ನಲ್ಲಿ ನಡೆದಿತ್ತು. ಸಿರಿಲ್ ಜೋಸೆಫ್ ಅವರು ಪ್ರಸ್ತುತ ಬೆಳ್ತಂಗಡಿಯ ಫಿಟ್ನೆಸ್ ಪಾರ್ಕ್ ಮಲ್ಟಿ ಜಿಮ್ ನಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಚ್ಚಿನ; ಪಾಲಡ್ಕ  ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

0

ಮಚ್ಚಿನ :ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇದರ ಸಿ ಎಸ್ ಆರ್ ಆಕ್ಟಿವಿಟಿ 2024- 25 ರ ಮಂಗಳ ಅಕ್ಷರ ಮಿತ್ರ ಅಂಗನವಾಡಿ ನಿರ್ಮಾಣ ಯೋಜನೆ ಅಡಿಯಲ್ಲಿ 29ಲಕ್ಷ ಅನುದಾನದಲ್ಲಿ ಮಚ್ಚಿನ ಗ್ರಾಮದ ಪಾಲಡ್ಕ ಇಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣಾ ಕಾರ್ಯಕ್ರಮ ಜೂ 22 ರಂದು ನೆರವೇರಿತು.ಎಂಸಿಎಫ್ ನ ಮುಖ್ಯ ಉತ್ಪಾದನಾಧಿಕಾರಿ  ಎಸ್. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜಾ ಇವರು ನೂತನ ಅಂಗನವಾಡಿ ಕೇಂದ್ರವನ್ನು ಲೋಕಾರ್ಪಣೆಗೈದು ಶುಭ ಹಾರೈಸಿದರು....