ಬೆಳ್ತಂಗಡಿ ವಕೀಲರ ಸಂಘದಿಂದ ಜೆ.ಕೆ.ಪೌಲ್ ಅವರಿಗೆ ಶ್ರದ್ದಾಂಜಲಿ ಸಭೆ

0

ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ  ಜೆ ಕೆ ಪೌಲ್ ಇವರು ನಿನ್ನೆ ನಿಧನ ಹೊಂದಿದ್ದು ಇವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಇಂದು ವಕೀಲರ ಭವನದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಶ್ರದ್ಧಾಂಜಲಿ ಸಭೆಯಲ್ಲಿ ಅವರ ಸಹಪಾಠಿಯಾಗಿದ್ದ  ಸುಬ್ರಹ್ಮಣ್ಯ ಕುಮಾರ್ ಅಗರ್ತ ಜೆಕೆ ಪೌಲ್ ಇವರ ಕಾಲೇಜಿನ ದಿನಗಳು ಹಾಗೂ ವಕೀಲ ವೃತ್ತಿಯಲ್ಲಿ ಅವರು ತನ್ನನ್ನು ತಾನು ತೊಡಗಿಸಿದ್ದನ್ನು ಸ್ಮರಿಸಿದರು. ವಕೀಲರಾದ ಬಿ.ಕೆ ಧನಂಜಯ್ ರಾವ್ ಇವರು ಜೆಕೆ ಪೌಲ್ ಇವರ ವ್ಯಕ್ತಿತ್ವ ಹಾಗೂ ವೃತ್ತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ರೀತಿಯನ್ನು ವಿವರಿಸಿದರು.ವಕೀಲರಾದ...

ಗೇರುಕಟ್ಟೆ : ಪರಪ್ಪು ಹಿದಾಯತುಸ್ಸಿಬಿಯಾನ್ ಮದರಸದಲ್ಲಿ ಫತ್ಹೇ ಮುಂಬಾರಕ್

0

ಮದರಸ ಪ್ರಾರಂಭೋತ್ಸವ.ಬೆಳ್ತಂಗಡಿ;  ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನ ಸೂಚನೆಯಂತೆ ಹಿದಾಯತುಸ್ಸಿಬಿಯಾನ್ ಮದರಸದಲ್ಲಿಂದು ಫತ್ಹೇ ಮುಬಾರಕ್ ಮದರಸ ಪ್ರಾರಂಬೋತ್ಸವ ಕಾರ್ಯಕ್ರಮ ನಡೆಯಿತು.ಖತೀಬರಾದ ಮಹಮ್ಮದ್ ಮಿಸ್ಬಾಹಿ ದುವಾ ನೆರವೇರಿಸಿ ಒಂದನೇ ತರಗತಿಗೆ ಖುರ್ ಆನ್ ಅಕ್ಷರ ಬರೆಯಿಸುವ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಮಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಸದರ್ ಮುಅಲ್ಲಿಮ್ ಅಬೂಬಕ್ಕರ್ ಸಿದ್ದೀಕ್ಮುಈನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಮುಅಲ್ಲಿಮರಾದ ಹಸೈನಾರ್ ಸಅದಿ, ಝಿಯಾದ್ಮುಈನಿ, ಇಲ್ಯಾಸ್ ಮದನಿ, ಅಧೀನ ಸಮಿತಿಗಳ ಪದಾಧಿಕಾರಿಗಳು ಪೋಷಕರು...

ಖ್ಯಾತ ನ್ಯಾಯವಾದಿ ಜೆ.ಕೆ ಪೌಲ್ ನಿಧನ

0

ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕರಂಬಾರು ನಿವಾಸಿಯಾಗಿದ್ದ ಅವರು ಕಾರ್ಕಳದಲ್ಲಿ ವಾಸವಾಗಿದ್ದರು.ಮೃತ ದೇಹ ಶಿರ್ಲಾಲು ಮನೆಗೆ ತರಲಾಗಿದ್ದು ಇಂದು ಅಂತ್ಯ ಕ್ರಿಯೆ ಸ್ಥಳೀಯ ಚರ್ಚ್ ನಲ್ಲಿ ನಡೆಯಲಿದೆ. ಸರಳ ವ್ಯಕ್ತಿತ್ವ ಹಾಗೂ ಎಲ್ಲರಲ್ಲೂ ಸ್ನೇಹದಿಂದಿರುತ್ತಿದ್ದ ಅವರು ಪತ್ನಿ ಇಬ್ಬರು ಮಕ್ಕಳು...

ಕಕ್ಕಿಂಜೆ; ಗಾಳಿ ಮಳೆಗೆ   ವ್ಯಾಪಕ ಹಾನಿ

0

ಬೆಳ್ತಂಗಡಿ; ತಾಲೂಕಿನ ಹಲವೆಡೆ ಮಂಗಳವಾರ ಅಪರಾಹ್ನ ಭಾರೀ ಗಾಳೊ ಬೀಸಿದ್ದು ವ್ಯಾಪಕ ಹಾನಿ ಸಂಭವಿಸಿದೆ.ಕಕ್ಕಿಂಜರ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.ಕಕ್ಕಿಂಜೆ ಕತ್ತರಿಗುಡ್ಡೆ ಪರಿಸರದಲ್ಲಿ ಭಾರೀ ಗಾತ್ರದ ಮರವೊಂದು ಮನೆ ಮೇಲೆ ಮುರಿದು ಬಿದ್ದು ಮನೆಗೆ ಹಾನಿ ಸಂಭವಿಸಿದೆ. ಕಕ್ಕಿಂಜೆ ಪೇಟೆಯಲ್ಲಿಯೂ ಗಾಳಿಯ ಅಬ್ಬರಕ್ಕೆ ಎರಡು ಅಂಗಡಿಗಳಿಗೆ ಹಾನಿ ಸಂಭವಿಸಿದೆ. ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಗಾಳಿಯ ಅಬ್ಬರಕ್ಕೆ ಮನೆಯೊಂದರ ಶೀಟು ಹಾರಿ ಹೋಗಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ.

0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ ಸಿ ಇಮ್ರಾನ್ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ

ಬೆಳ್ತಂಗಡಿ; ನಗರದಲ್ಲಿ  ಶಟರ್ ಮುರಿದು ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನ

0

ಬೆಳ್ತಂಗಡಿ: ಶಟರ್ ಮುರಿದು ಅಡಿಕೆ ಅಂಗಡಿಯೊಳಗೆ ಕಳ್ಳರು ನುಗ್ಗಿದ ಘಟನೆ ಮಂಗಳವಾರ ಬೆಳ್ತಂಗಡಿ ನಗರದಲ್ಲಿ ನಡೆದಿದೆ.ಸಂತೆಕಟ್ಟೆ ಬಳಿಯ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿರುವುದಾಗಿ ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮಾರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿಯ ವೇಳೆ...

ಬೀಡಿ ಕಾರ್ಮಿಕರ ವೇತನ ಕಡಿತ ವಿರೋಧಿಸಿ ಪ್ರತಿಭಟನೆ

0

ಬೆಳ್ತಂಗಡಿ; ಬೀಡಿ ಕಾರ್ಮಿಕರ ವೇತನ ಈಗಿರುವ ವೇತನ ರೂ 315 ಕ್ಕಿಂತ ಕಡಿಮೆಗೆ ಅಂದರೆ ರೂ.270 ಕ್ಕೆ ನಿಗದಿಗೊಳಿಸಿ ಕನಿಷ್ಟ ವೇತನ ಜಾರಿ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ದ್ರೋಹಿ ನಡೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ ಸಿಐಟಿಯು ನೇತೃತ್ವದಲ್ಲಿ ನಡೆದ ಬೀಡಿ ಕಾರ್ಮಿಕರ ಆಕ್ರೋಶ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ನಡೆಯಿತುಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಮುಖಂಡ ಬಿ.ಎಂ ಭಟ್ ಬೆಲೆಏರಿಕೆಯ ಪ್ರತಿ ಅಂಶಕ್ಕೆ 4 ಪೈಸೆ ಇದ್ದ ಡಿ.ಎ. ಯನ್ನು 3...

ನಾಳೆ (ಎ8) ಪಿ.ಯು.ಸಿ ಫಲಿತಾಂಶ

0

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ(ಎ.8) ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ ಮಾ.20ರ ವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರದಂದು ಪ್ರಕಟನೆಯಲ್ಲಿ ತಿಳಿಸಿದೆ.

ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಸಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

0

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. 2017 ರಲ್ಲಿ ಬೆಳ್ತಂಗಡಿ ಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಆರೋಪಿ ಸಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ...

ನಕ್ಸಲ್ ನಾಯಕ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

0

ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯ ಇಬ್ಬರು ನಕ್ಸಲರನ್ನು ಮೂರು ದಿನ ಬೆಳ್ತಂಗಡಿ ಪೊಲೀಸರ ಕಸ್ಟಡಿಗೆ ಒಪ್ಪಿಸಿದೆ. ಪೊಲೀಸರು ಮೂರು ಪ್ರಕರಣವನ್ನು ತನಿಖೆ ನಡೆಸಲಿದ್ದಾರೆ‌. 8-112021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ...