ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು ನಿವಾಸಿ ನಿಮಿಲ್ ಆರ್.ಕೆ (37), ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ಇರ್ಷಾದ್ (40) ಮತ್ತು ಮುಸ್ತಾಫ (49) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಈ ದರೋಡೆ ಜಾಲದಲ್ಲಿ ಒಟ್ಟು 16 ಆರೋಪಿಗಳು ಭಾಗಿಯಾಗಿದ್ದು, ಸದ್ಯ ಬಂಧಿತರಾಗಿರುವ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 10...
ಆಡಳಿತ ಚುರುಕುಗೊಳಿಸಲು ಮುಂದಾದ ಸರಕಾರ ತಾಲೂಕು ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆಸಲು ಸರಕಾರ ಸೂಚನೆ
ಬೆಳ್ತಂಗಡಿ; ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿ ವಾರ ಜಿಲ್ಲಾ/ತಾಲೂಕು/ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಪ್ರತಿ ವಾರ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಬೇಕು , ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಆದೇಶಿಸಿರುವ ರಾಜ್ಯ ಸರ್ಕಾರ , ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಪ್ಯಾಪಕ...
ದ.ಕ ಜಿಲ್ಲೆಯಲ್ಲಿ ಜು.3 ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 03.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ...
ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆಭೇಟಿ
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಮಾತುಕತೆ ನಡೆಸಿದರು. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಎಂಬಲ್ಲಿ ಸರಕಾರಿ ಜಾಗದಲ್ಲಿ ನೆರಿಯ ಗ್ರಾಮದ ಅಂಬ್ಲೆ ನಿವಾಸಿ ರಾಜಪ್ಪ ಗೌಡ(57) ಎಂಬವರು ಅಕ್ರಮವಾಗಿ ಯಾವುದೇ ಅನುಮತಿ ಇಲ್ಲದೆ ಹೆಬ್ಬಲಸು ಮರವನ್ನು ಕಡಿಯುತ್ತಿರುವ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್ ಗೆ ಬಂದ ಖಚಿತ ಮಾಹಿತಿ ಮೇರೆಗೆ ಜೂ.29 ರಂದು ದಾಳಿ ಮಾಡಿದ್ದಾರೆ.ಸರಕಾರಿ ಜಾಗಕ್ಕೆ ದಾಳಿ...
ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆನ್ಲೈನ್ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ರಾಜ್ಯದ 1,281 ಶಾಲಾ-ಕಾಲೇಜುಗಳ 1,31,039 ವಿದ್ಯಾರ್ಥಿಗಳು ಏಕಕಾಲದಲ್ಲಿ ಆನ್ಲೈನ್ ಮೂಲಕ ಮಾಹಿತಿಯನ್ನು ಪಡೆದರು.‘ಯುವಜನತೆ ನಮ್ಮ ದೇಶದ ಆಸ್ತಿ....
ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ
ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ರೋಟೇರಿಯನ್ ಅಶೋಕ್ ಹೆಬ್ಬಾರ್ ಮಾತನಾಡಿ ಜೀವನದಲ್ಲಿ ಹಣ ಗಳಿಕೆಯೇ ಮುಖ್ಯವಲ್ಲ ಸಮಾಜಕ್ಕೆ ಸಹಾಯವಾಗುವ ಕನಸುಗಳನ್ನು ಕಟ್ಟಿಕೊಳ್ಳಬೇಕು ಇಂತಹ ಸೌಲಭ್ಯಗಳನ್ನು ಪಡೆದವರು ಸಮಾಜಕ್ಕೆ ಮರಳಿ ನೀಡುವ ಮನಸ್ಸು ಮತ್ತು ಅವಕಾಶಗಳು ಲಭ್ಯವಾಗಲಿ ಎಂದು ಬೈಸಿಕಲ್ ವಿತರಿಸಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ...
ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್. ಎನ್ ನರಗುಂದ ನೇಮಕ
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್. ಎನ್ ನರಗುಂದ ನೇಮಕವಾಗಿದ್ದರೆ. ಕಳೆದ ಎರಡುವರೆ ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ ಇತ್ತೀಚೆಗೆ ದ.ಕ ಜಿಲ್ಲೆಯ ಮೂಲ್ಕಿ ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದರು. ತೆರವಾದ ಸ್ಥಾನಕ್ಕೆ ಇದೀಗ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್.ಎನ್ ನರಗುಂದ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹ ಮೂರ್ತಿ ಜಿ.ಕೆ ಆದೇಶಿಸಿದ್ದಾರೆ.
ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಬಡ್ಡಿ ಸಹಿತ ಠೇವಣಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ
ಬೆಳ್ತಂಗಡಿ: ನಗರದ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಅಂದಾಜು ರೂ.30.45 ಕೋಟಿಗೂ ಅಧಿಕ ಹಣ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಹಕರ ನ್ಯಾಯಾಲಯಕ್ಕೆ ನೀಡಿ ದೂರಿನ ವಿಚಾರಣೆ ನಡೆದಿದ್ದು, ದೂರುದಾರರಾದ ದಯಾನಂದ ನಾಯಕ್ ಸೇರಿದಂತೆ 28 ಮಂದಿ ಗ್ರಾಹಕರಿಗೆ ಆಡಳಿತ ಮಂಡಳಿ 45 ದಿವಸದ ಒಳಗೆ ಶೇ.6 ಬಡ್ಡಿ ಸೇರಿಸಿ, ಅವರ ಠೇವಣಿಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದ ಆದೇಶ ನೀಡಿದೆ. ಅದಲ್ಲದೆ ಎಲ್ಲಾ 28 ಮಂದಿ ದೂರುದಾರರಿಗೆ ಉಂಟಾದ ಸೇವೆಯ ಕೊರತೆ,...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ನ್ಯಾಯಲಯ CC No. 597/2017 CR NO. 169/2016. ಕಲಂ, 379, 201 ಐಪಿಸಿ (ಕಾರಿನಿಂದ ಎ.ಟಿ.ಎಂ ಕಾರ್ಡ್ ಕಳ್ಳತನ ಮಾಡಿ ಹಣ ಡ್ರಾಂ ಮಾಡಿದ) ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆ ಕವಲಗುಂಟ, ಪೆನಮೂರು ನಿವಾಸಿ ಶ್ರೀನಿವಾಸ (35) ಎಂಬಾತನನ್ನು ಬೆಳ್ತಂಗಡಿ...















