ಬೆಳ್ತಂಗಡಿ :ಕೊಲೆಯಾದ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ
ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದು ಬಳಿಕ ಸಾಂತ್ವನ ತಿಳಿಸಿದರು. ಕುಟುಂಬಸ್ಥರ ಜೊತೆ ಮಾತುಕತೆ ವೇಳೆ ಸುಮಂತ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಎಸ್ಪಿ ಜೊತೆ ಮಾತಾನಾಡಿರುವುದಾಗಿ ಬ್ರಿಜೇಶ್ ಚೌಟ ಮಾಹಿತಿ ನೀಡಿದರು. ಬಿಜೆಪಿಯ ಜಯಂತ್ ಕೋಟ್ಯಾನ್,ನಿತೇಶ್,ದಿನಕರ್,ವಸಂತ್ ಮಜಲ್, ವಿಜಯ ಕುಮಾರ್,ಲಕ್ಷ್ಮೀಕಾಂತ್,ಶಶಿರಾಜ್ ಶೆಟ್ಟಿ, ವಿನೀತ್ ಕೋಟ್ಯಾನ್ ಉಪಸ್ಥಿತರಿದ್ದರು.
ಅವಧಿ ಮುಗಿದ ಗ್ರಾಮ ಪಂಚಾಯತುಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿ ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ 42 ರಲ್ಲಿ ಉಪಬಂಧಿಸಿರುವಂತೆ ಗ್ರಾಮ ಪಂಚಾಯಿತಿಗಳನ್ನು...
ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ: – ಬೆನಕ ಹೆಲ್ತ್ ಸೆಂಟರ್ನಲ್ಲಿ ಹೊಸ ಅಧ್ಯಾಯ
ಉಜಿರೆ: (ಜ.16): ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, “ಇದು ಬೆಳ್ತಂಗಡಿ ತಾಲ್ಲೂಕಿಗೆ ಹೆಮ್ಮೆಯ ಕ್ಷಣ. ಐಯುಐ ವಿಭಾಗವು ಇಲ್ಲಿನ ಜನರಿಗೆ ಅತ್ಯಂತ ಅಗತ್ಯವಾಗಿತ್ತು. ಇದು ಡಾ. ಗೋಪಾಲಕೃಷ್ಣ ಹಾಗೂ ಡಾ. ಭಾರತಿ ಜಿಕೆ ಅವರ ಕನಸಿನ ಫಲಿತಾಂಶವಾಗಿದೆ. ಐಯುಐ...
ಜ17 ಉಸ್ತುವಾರಿ ಸಚಿವರಿಂದ ಕುಕ್ಕೇಡಿ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ಹಕ್ಕು ಪತ್ರ ವಿತರಣೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ಕುಕ್ಕೇಡಿಯಲ್ಲಿ ನವೀಕರಣಗೊಂಡಿರುವ ಅಂಬೇಡ್ಕರ್ ಭವನದ ಉದ್ಘಾಟನೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಲಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.ಜ. 17 ಶನಿವಾರದಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಸಚಿವರು ಬಳಿಕ ಕುಕ್ಕೇಡಿಗೆ ಆಗಮಿಸಿ ಕುಕ್ಕೇಡಿಯ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು ಬಳಿಕ 94ಸಿ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಬೆಳ್ತಂಗಡಿ : ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ
ಬೆಳ್ತಂಗಡಿ : ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬವವರು ಜ.16 ರಂದು ಬೆಳಿಗ್ಗೆ 8:15 ಗಂಟೆಗೆ ಮನೆಯ ಅಂಗಳದಲ್ಲಿರುವ ವೇಳೆ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸಂಭವಿಸಿದೆ. ಚಿರತೆ ದಾಳಿಯ ವೇಳೆ ತಕ್ಷಣ ಜೀವರಕ್ಷಣೆಗಾಗಿ ಹತ್ತಿರದ ಅಡಿಕೆ ಮರ ಏರಿದ್ದು. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜಪ್ಪ ನಾಯ್ಕ ಅವರ ಮಗ ಪ್ರಭಾಕರ...
ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ
ರಾಜ ಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿಪ್ರಕಟಗೊಂಡಿದೆ ಫೆ 8 ರಂದುಕರ್ನಾಟಕ ಸರಕಾರ. ಸೋಶಿಯಲ್ ವರ್ಕಸ್ ಅಸೋಸಿಯನ್. ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು. ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ (ರಿ) ಇವರ ಸಹಾಯದಲ್ಲಿ ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ..ಯಾರೇ ಕಡಬಡವರು ಅವರ ಬಳಿ ಬಂದರೆ ಅವರನ್ನು ಸೂಕ್ತವಾಗಿ ಆರಿಸಿ, ಅವರಿಗೆ ಸದಾ ಕೈಲಾದ ಸೇವೆಯ...
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ
ಬೆಳಾಲು : ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರು ವಹಿಸಿಕೊಂಡರು, ಅಭಿನಂದನಾ ಭಾಷಣಗಾರರಾಗಿ ವಿಜಯ ಮುಖ್ಯೋಪಾಧ್ಯಾಯಿನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇವರು ದೇವಸ್ಥಾನದ ಸ್ವಚ್ಛತೆ ಅಚ್ಚುಕಟ್ಟುತನ ಜಾತ್ರಾ ಮಹೋತ್ಸವದ ಯಶಸ್ವಿಗೆ ಸೇವೆ ಸಲ್ಲಿಸಿದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಊರ ಸಮಸ್ತ ಭಕ್ತ ಬಾಂಧವರಿಗೆ ತುಂಬು...
ವೇಣೂರು ಉರುಳಿನ ಹಗ್ಗದೊಂದಿಗೆ ಪೊದೆಗಳ ಮದ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ರಕ್ಷಣೆ
ಬೆಳ್ತಂಗಡಿ; ತೋಟ ಒಂದರಲ್ಲಿ ಗಿಡಗಂಟಿಗಳ ಪೊದೆಗಳ ಮಧ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ ಸುರಕ್ಷಿತವಾದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ವೇಣೂರು ಅರಣ್ಯ ವಲಯದ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ನಿನ್ಯಾರು ಎಂಬಲ್ಲಿ ಗುರುವಾರ ತೋಟವೊಂದರಲ್ಲಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ರಬ್ಬರ್ ತೋಟದಲ್ಲಿ ಸಿಲುಕಿ ಒದ್ದಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಎಲ್ಲೋ ಉರುಳಿಗೆ ಬಿದ್ದಿದ್ದ ಚಿರತೆ ಉರುಳು ಸಹಿತ ಅಲ್ಲಿಂದ ಮುಂದುವರಿದು ತೋಟದ ಪೊದೆಗಳ ಮಧ್ಯೆ ಸಿಲುಕಿಕೊಂಡಿತ್ತು.ಮೂಡಬಿದಿರೆ ಎಸಿಎಫ್ ಶ್ರೀಧರ್ ಪಿ....
ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಲೈಟ್ ಪತ್ತೆ ಮುಂದುವರಿದ ತನಿಖೆ
ಬೆಳ್ತಂಗಡಿ: ಸಂಬೋಳ್ಯ ದಲ್ಲಿ ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಕೆರೆಯಲ್ಲಿ ಹಳೆಯ ತುಕ್ಕುಹಿಡಿದ ಕತ್ತಿಯೂ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ಬುಧವಾರ ಮನೆಯಿಂದ ಬೆಳಗ್ಗೆ ಚದೇವಸ್ಥಾನಕ್ಕೆಂದು ಹೋದ ಸುಮಂತ್ (೧೫) ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿತ್ತು.ಗುರುವಾರ ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಕೆರೆಯ ನೀರನ್ನು ಸಂಪೂರ್ಣ ಬತ್ತಿಸಿ ಪರಿಶೀಲನೆ ನಡೆಸಿದ್ದಾರೆ.ಕೆರೆಯಲ್ಲಿ ಬಾಲಕ ಮನೆಯಿಂದ ತಂದಿದ್ದ ಲೈಟ್ ಪತ್ರೆಯಾಗಿದೆ. ಅದೇರೀತಿ ಹಳೆಯ ಕತ್ತಿಯೊಂದು ಕೆರೆಯಲ್ಲಿ ಪತ್ತೆಯಾಗಿದೆ.ಸೋಕೋ ತಂಡ ಹಾಗೂ ಪೊಲೀಸರು ಈ ವಸ್ತಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ....
ಕಳಿಯ ಬಾಲಕ ಸಾವು ಪ್ರಕರಣವನ್ನು ಕೊಲೆ ಪ್ರಕರಣ ಎಂದು ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು, ತನಿಖೆಗೆ ನಾಲ್ಕು ತಂಡಗಳ ರಚನೆ
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಸಂಬೋಳ್ಯ ದಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವನ್ನು ಕೊಲೆ ಪ್ರಕರಣ ಎಂದು ಪರಿವರ್ತಿಸಿ ತನಿಖೆ ನಡೆಸಲಾಗುತ್ತಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಬೆಳ್ತಂಗಡಿ ಡಿ.ವೈ.ಎಸ್.ಪಿ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಎಲ್ಲ ದೈಷ್ಟಿಯಲ್ಲಿಯೂ ತನಿಖೆ ನಡೆಯುತ್ತಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.ಸುಮಂತ್ (15) ಅವರ ಶವ ಪರೀಕ್ಷೆಯ ಬಳಿಕ ಬಂದ ಪ್ರಾಥಮಿಕ ವರದಿ ಪ್ರಕಾರ ಈತ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗುದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು...














