ಡಿ.4ಉಜಿರೆಯಲ್ಲಿ ಫುಟ್ಬಾಲ್ ಪಂದ್ಯಾಟ

0

ಬೆಳ್ತಂಗಡಿ; ಎಸ್.ಎಂ ವೈ.ಎಂ ಧರ್ಮಸ್ಥಳ ಹಾಗೂ ಬಂಗಾಡಿ ಇದರ ಸಹಕಾರದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಇಂಟರ್ ಪ್ಯಾರಿಷ್ ಫುಟ್ಬಾಲ್ ಪಂದ್ಯಾಟ ಡಿ. 4 ಶನಿವಾರ ಉಜಿರೆಯ ಎಸ್.ಡಿ.ಎಂ ಅಜ್ಜರಕಾಡು ಮೈದಾನದಲ್ಲಿ ನಡೆಯಲಿದೆ.ಫುಟ್ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಉಡುಪಿ ಹಾಗೂ ಕೊಡಗು ಜಿಲ್ಲೆಯ 20ಕ್ಕೂ ಅಧಿಕ ತಂಡಗಳು ಭಾಗವಹಿಸಲಿದ್ದಾರೆ.ಸಂಜೆ ನಾಲ್ಕು ಗಂಟೆಗೆ ಪಂದ್ಯಾಟ ಆರಂಭಗೊಳ್ಳಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಲಿದ್ದಾರೆ.ಮೂಡಬಿದ್ರೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಸಂದೇಶ್ ಪಿ‌‌ ಜಿ ಅವರು...

ಎಲ್ಲಿಯೂ ಇಲ್ಲದ ಬೈಪಾಸ್ ರಸ್ತೆ ಕಕ್ಕಿಂಜೆಗೆ ಮಾತ್ರ ಯಾಕೆ? ಪೇಟೆಯಲ್ಲಿಯೇ ಹೆದ್ದಾರಿ ಹಾದು ಹೋಗಲಿ ನಾಗರಿಕರ ಒತ್ತಾಯ

0

ಬೆಳ್ತಂಗಡಿ: ಪುಂಜಾಲಕಟ್ಟೆ ಮತ್ತು ಚಾರ್ಮಾಡಿ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯ ಭಾಗವಾಗಿ, ಕಕ್ಕಿಂಜೆಯಲ್ಲಿ ರಸ್ತೆ ಬೈಪಾಸ್ ಮಾರ್ಗದ ತಿರುಗಿಸಲು ಪ್ರಸ್ತಾವಿಸಲಾಗಿದೆ. ಈ ತಿರುಗುವಿಕೆಯು ಕಕ್ಕಿಂಜೆ ಪಟ್ಟಣದ ಬೆಳವಣಿಗೆ ಮತ್ತು ಸ್ಥಳೀಯ ವ್ಯಾಪಾರಿಗಳ ಜೀವನೋಪಾಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಮತ್ತು ಬೈಪಾಸ್ ಮೂಲಕ ರಸ್ತೆ ತಿರುಗಿಸುವುದರಿಂದ ಪಟ್ಟಣದ ಮೂಲಕ ಸಾಗುವ ಸಂಚಾರವು ಕಡಿಮೆಯಾಗುತ್ತದೆ, ಕಕ್ಕಿಂಜೆ ಪೇಟೆಯ ಮುಲಕ ಪ್ರಯಾಣೊಸುವ ಸ್ಥಳೀಯ ಜಮರಿಗೂ ವಿದ್ಯಾರ್ಥಿಗಳಿಗು ಸಮಸ್ಯೆಯಾಗಾಗುತ್ತದೆ, ಇದರಿಂದ ಸ್ಥಳೀಯ ವ್ಯಾಪಾರಿಗಳು ಮತ್ತು ವ್ಯಾಪಾರಕ್ಕೆ ಅವಲಂಬಿತರಾಗಿರುವವರು ಆರ್ಥಿಕ ಹಾನಿಯನ್ನು ಅನುಭವಿಸಬೇಕಾಗುತ್ತದೆ ಎಂದು...

ಮಂಗಳೂರು; ಮೂವರು ಮಕ್ಕಳನ್ನು ಬಾವಿಗೆ ದೂಡಿ ಹತ್ಯೆ, ಆರೋಪಿಗೆ ಮರಣ‌ದಂಡನೆ ವಿಧಿಸಿದ ನ್ಯಾಯಾಲಯ

0

ಮಂಗಳೂರು; ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಮರಣದಂಡನೆ ವಿಧಿಸಿ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಆರೋಪಿ ಹಿತೇಶ್ ಶೆಟ್ಟಿಗಾರ್ (36) ಗಲ್ಲು ಶಿಕ್ಷೆಗೆ ಗುರಿಯಾದ ಆರೋಪಿ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ ಜೂನ್ 23, 2022 ರಂದು ಹಿತೇಶ್ ಶೆಟ್ಟಿಗಾ‌ರ್ ಕುಡಿದು ಬಂದು ಆಗ ತಾನೇ ಶಾಲೆಯಿಂದ ಮನೆಗೆ ಬಂದಿದ್ದ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ್ (11), ದಕ್ಷಿತ್ (5) ಮಕ್ಕಳನ್ನು...

ಅರ್ಕುಳದಲ್ಲಿ ಅಪಘಾತ; ಬೆಳ್ತಂಗಡಿ ಮುಂಡೂರಿನ ಯಕ್ಷಗಾನ ಕಲಾವಿದ ಮೃತ್ಯು

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಫರಂಗಿ ಪೇಟೆ ಸಮೀಪ ಅರ್ಕುಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮುಂಡೂರು ಪರಂಬುಡೆ ನಿವಾಸಿ ಶೇಖರ ಆಚಾರ್ಯ ಪುತ್ರ ಸಸಿಹಿತ್ತು ಮೇಳದ ಕಲಾವಿದ, ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯಾಗಿರುವ ಪುನೀತ್ (22) ಸಾವನ್ನಪ್ಪಿದ ಯುವಕನಾಗಿದ್ದಾನೆ. ಫರಂಗಿಪೇಟೆ ಸಮೀಪದ ಅರ್ಕುಳ ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ

0

ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ  ಗಾಯಗೊಂಡಿದ್ದಾರೆ‌. ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದಿಗೆ ಗಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇತರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಹಳೆಪೇಟೆ ಎಸ್.ಡಿ.ಟಿ.ಯು ಅಟೋ ಚಾಲಕರ ಸಂಘದವರು ಹಾಗೂ ಸ್ಥಳೀಯರು ಸೇರಿ ಕಾರನ್ನು ರಸ್ತೆ ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅನುವುಮಾಡಿ ಕೊಟ್ಟರು.

ಕೆ.ಎಸ್.ಎಂ.ಸಿ.ಎ ವತಿಯಿಂದ ಕ್ರಿಸ್ಮಸ್ ಕಪ್ ಕ್ರೀಡಾಕೂಟ

0

ಬೆಳ್ತಂಗಡಿ; ಕೆ.ಎಸ್. ಎಂ ಸಿ ಎ ವತಿಯಿಂದ ಕ್ರಿಸ್ಮಸ್ ಕಪ್ 2024 ಬೆಳ್ತಂಗಡಿ ಧರ್ಮಪ್ರಾಂತ್ಯದ ಮಟ್ಟದ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ಶನಿವಾರ ತೋಟತ್ತಾಡಿಯ ಸೈಟ್ ಸಾವಿಯೋ ಶಾಲಾ ವಠಾರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ವಿಜೇತ ತಂಡಗಳಿಗೆಬಹುಮಾನಗಳನ್ನು ವಿತರಿಸಿ ಮಾತನಾಡಿ ಕೆ.ಎಸ್. ಎಂ‌.ಸಿ ಎ ಸಂಘಟನೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಕಿ ಕ್ರೀಡಾಕೂಟವನ್ನು ಆಯೋಜಿನಸಿದ್ದಾರೆ. ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದರು. ಕೆ.ಎಸ್.ಎಂ.ಸಿ ಎ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು...

ಮಾಣಿಯಲ್ಲಿ ಬೈಕ್ ಅಪಘಾತ, ಬೆಳ್ತಂಗಡಿ ಮುರದ ಬಾಲಕ ಸಾವು ಹಲವರಿಗೆ ಗಾಯ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರದ ಕುಟುಂಬ ಸಂಚರಿಸುತ್ತಿದ್ದ ಬೈಕ್ ಈಚರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಜೆ 6.30 ರ ವೇಳೆಗೆ ಸಂಭವಿಸಿದೆ.ಮೃತ ಮಗುವನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಅವರ ಹಿರಿಯ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ...

ತುಳುನಾಡಿನ ಸಂಪ್ರದಾಯಗಳನ್ನು ಮೀರಿ ನೇಮ ಕಟ್ಟುತ್ತಿರುವುದು ನೋವಿನ ವಿಚಾರ; ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ, ನಲಿಕೆ ಯವರ ಸಮಾಜ ಸೇವಾ ಸಂಘ

0

ಬೆಳ್ತಂಗಡಿ; ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ  ಮೂಡಾಯಿ ಪಲ್ಕೆ ಎಂಬಲ್ಲಿ ಉದ್ಬವ ಆದಿಲಿಂಗೇಶ್ವರ ಕ್ಷೇತ್ರದಲ್ಲಿ ತುಳುನಾಡಿನ ಸಂಪ್ರದಾಯ ಕಟ್ಟು ಕಟ್ಟಳೆ ಗಳನ್ನು ಮೀರಿ ನಲಿಕೆ ಸಮುದಾಯ ದವರಲ್ಲದವರು ಗುಳಿಗ ದೈವದ ನೇಮ‌ಕಟ್ಟುವ ಕಾರ್ಯವನ್ನು ಮಾಡುತ್ತಿದ್ದಾರೆ ಇದು ಸಮುದಾಯಕ್ಕೆ ಹಾಗೂ ದೈವ ಭಕ್ತರಿಗೆ ನೋವನ್ನು ಉಂಟುಮಾಡುತ್ತಿದೆ ಎಂದು ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಪ್ರಭಾಕರ ಶಾಂತಿಕೋಡಿ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಚಾರಗಳನ್ನು ತಿಳಿಸಿದರು.ಪುರಾತನ ಕಾಲದಿಂದಲೂ ನಲಿಕೆ ಸಮುದಾಯದವರು ಮಾತ್ರ ಮಾಡುತ್ತಾ ಬಂದಿರುವ ಗುಳಿಗ ದೈವದ...

ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

0

ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು.ಬಿಷಪ್ ಹೌಸ್ ನ ಧರ್ಮಗುರುಗಳಾದ ಫಾ. ಕುರಿಯಾಕೋಸ್ ವೆಟ್ಟುವಯಿ, ಫಾ. ಅಬ್ರಹಾಂ ಪಟ್ಟೇರಿ ಇದ್ದರು.ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾ ತಾಲೂಕು ಸಮಿತಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿ.ಸಿ, ಉಪಾಧ್ಯಕ್ಷ ಜೋಬಿ, ಪ್ರಧಾನ ಕಾರ್ಯದರ್ಶಿ ಪ್ರಿನ್ಸ್ ತೋಮಸ್, ಅಶ್ರಫ್ ಲಾಯಿಲ, ರಿಚಾರ್ಡ್ ಗೋವಿಯಸ್, ಫ್ರಾನ್ಸೀಸ್, ಸನ್ನಿ ಹಾಗೂ ಇತರರು ಇದ್ದರು.

ಡಾ. ಮನಮೋಹನ್ ಸಿಂಗ್ ಅವರಸಾಧನೆ, ಕೊಡುಗೆಗಳು ದೇಶಕ್ಕೆಎಂದಿಗೂ ಅಜರಾಮರ. ರಕ್ಷಿತ್ ಶಿವರಾಮ್

0

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTEಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ...