ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ ; ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್
ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಸರಜಾರದ ಗಮನ ಸೆಳೆದು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿ.ಕೆ ಹರಿಪ್ರಸಾದ್ ಅವರು ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ...
ಚಾರ್ಮಾಡಿ, ನದಿಯಲ್ಲಿ ದನದ ಮಾಂಸದ ಅವಶೇಷ ಪತ್ತೆ: ನದಿಯಲ್ಲಿ 11 ಗೋಣಿ ಚೀಲದಲ್ಲಿ ಗೋ ಮಾಂಸದ ತ್ಯಾಜ್ಯಗಳನ್ನು ತುಂಬಿಸಿ ಎಸೆದಿರುವ ದುಷ್ಕರ್ಮಿಗಳು
ಬೆಳ್ತಂಗಡಿ:ಚಾರ್ಮಾಡಿ ಸೇತುವೆ ಬಳಿ ದನದ ತಲೆ ಸೇರಿದಂತೆ ಮಾಂಸದ ಅವಶೇಷಗಳು ಸುಮಾರು ಹನ್ನೊಂದು ಗೋಣಿಯಲ್ಲಿ ಪತ್ತೆಯಾಗಿದೆ. ಚಾರ್ಮಾಡಿ ಗ್ರಾಮದ ಅನ್ನಾರು ಎಂಬಲ್ಲಿ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ದನದ ಮಾಂಸ ಮಾಡಿ ಉಳಿದ ತ್ಯಾಜ್ಯಗಳನ್ನು ಗೋಣಿಯಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಸಂಶಯಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮೂಡುಕೋಡಿ; ಪತಿಯಿಂದ ಪತ್ನಿಯ ಮೇಲೆ ಹಲ್ಲೆ; ಪ್ರಕರಣ ದಾಖಲು
ಬೆಳ್ತಂಗಡಿ : ಮೂಡುಕೋಡಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ.ಸುಮಾರು 16 ವರ್ಷಗಳ ಹಿಂದೆ ಭಾಗ್ಯ ನವೀನ್ ರವನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುತ್ತಾರೆ, ನವೀನ್ ಮದುವೆಯಾಗಿ ಸುಮಾರು 5 ವರ್ಷ ಅನ್ನೋನ್ಯವಾಗಿದ್ದು ನಂತರ ವಿಪರೀತ ಮದ್ಯ ಸೇವಿಸುವ ಚಟಹೊಂದಿ ವಿನಾ: ಕಾರಣ ಆಗಾಗ ಕ್ಷುಲ್ಲಕ ವಿಚಾರದಲ್ಲಿ ಮಾತಿನ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ...
ಮಚ್ಚಿನ ಸಿ.ಎ ಬ್ಯಾಂಕ್ ಚುನಾವಣೆ; ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು
ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ...
ಕೊಕ್ಕಡ, ಬೈಕ್ ಗೆ ಬಸ್ ಡಿಕ್ಕಿ : ಸವಾರ ಸಾವು:
ಬೆಳ್ತಂಗಡಿ - ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಡಿ 15 ಭಾನುವಾರ ಸಂಜೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕಾಪಿನಬಾಗಿಲುಎಂಬಲ್ಲಿ ಅಯ್ಯಪ್ಪ ಯಾತ್ರಾರ್ಥಿಗಳ ಬಸ್ಸಿನಡಿಗೆ ಬೈಕ್ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದು ,ಮೃತ ಬೈಕ್ ಸವಾರನನ್ನು ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಭ್ರಹ್ಮಣ್ಯಕ್ಕೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯರ...
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್; ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ ಬಹುಮಾನ ವಿತರಣೆ
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.)ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ. ಬೆಳ್ತಂಗಡಿ ವಲಯದ ಅಯೋಜಕತ್ವದಲ್ಲಿಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ ಬಹುಮಾನ ವಿತರಣಾ ಕಾರ್ಯಕ್ರಮವು ಡಿ. 12 ರಂದು ಗುರುವಾಯನಕೆರೆ ಛಾಯಾ ಭವನ ನಡೆಯಲಿರುವುದು. ಪ್ರಥಮ : ಎಝಲ್ ಬಿಯಾಂಕ ಬೆಳ್ತಂಗಡಿದ್ವಿತೀಯ : ಜಾಹ್ನವಿ ರೈ ಕುಕ್ಕೇಡಿ ವೇಣೂರುತೃತೀಯ : ಅನ್ಶಿ ಶೆಟ್ಟಿ ಗೇರುಕಟ್ಟೆ ಮೆಚ್ಚುಗೆ ಪಡೆದ ಚಿತ್ರಗಳುಶ್ರೀಯಾ. ಎಸ್ ಚಾರ್ಮಾಡಿಸುಗ್ಯ ಎಸ್ ಕೋಟ್ಯಾನ್ ನಿಟ್ಟಡೆಡೆನ್ವರ್ ಎವನ್ ಡಿಸೋಜಾ ಬೆಳ್ತಂಗಡಿವೈಷ್ಣವಿ ಹೆಬ್ಬಾರ್...
ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್ಡಿಪಿಐ ಪ್ರತಿಭಟನೆ.
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ - ಗೋವಿಂದರಗುಳಿ - ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದುರಸ್ತೆ ದುರಸ್ಥಿ ಆಗ್ರಹಿಸಿ ಎಸ್ಡಿಪಿಐ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.ಈ ಪ್ರದೇಶದ ರಸ್ತೆಗಳು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು,ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಸ್ಥಳೀಯ ಶಾಸಕರಂತು ಈ ಭಾಗದಲ್ಲಿ ಯಾವುದೇ ಕಾಮಗಾರಿಗಳಿಗೆ ಅನುದಾನಗಳನ್ನು ಒದಗಿಸುತ್ತಿಲ್ಲ ಎಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ...
ಮಾಲಾಡಿ; ಪಿಕಪ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಪೊಲೀಸರು; ಇಬ್ಬರ ಬಂಧನ ಪಿಕಪ್ ವಶಕ್ಕೆ
ಬೆಳ್ತಂಗಡಿ; ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೂಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂಬವರಾಗಿದ್ದಾರೆ.ಮಾಲಾಡಿ ಗ್ರಮದ ಅರ್ತಿಲ ಎಂಬಲ್ಲಿ ಟೆರೆನ್ಸ್ ಜೋಶಲ್ ವೇಗಸ್ ಎಂಬವರಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನವನ್ನು ಡಿ.2ರಂದು ರಾತ್ರಿ ಕಳ್ಳತನ ಮಾಡಲಾಗಿತ್ತು.ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು...
ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ರಾಷ್ಟ್ರಪತಿಗಳ ಭೇಟಿ
ಬೆಳ್ತಂಗಡಿ; ಡಿ12 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.
ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ತಲವಾರು ದಾಳಿ
ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ವ್ಯಕ್ತಿಯೊಬ್ಬ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ನಡೆದಿದೆ.ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ಪಡಂಗಡಿ ನಿವಾಸಿದಾವೂದ್ ಇಕ್ಬಾಲ್ ಅವರಿಗೆ ರೂ 50ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ...















