ಮಹಿಳಾ ದೌರ್ಜನ್ಯದ ವಿರುದ್ದ  ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ಮಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಗುಜರಾತ್ ನ ಸೂರತ್ ನಿಂದ 200 ಕಿ.ಮಿ. ದೂರದಲ್ಲಿ ಬುಧವಾರ ಮಧ್ಯಾಹ್ನ 2 ರ ಸುಮಾರಿಗೆ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ನಿವಾಸಿ ಮೂಸಾ ಕುಂಞಿ ಯಾನೆ ಶರೀಫ್ ಎಂದು...

ಆದಿವಾಸಿ ಸಮುದಾಯಗಳಿಗೆ  ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಮನವಿ

0

ಬೆಳ್ತಂಗಡಿ; ಶತಮಾನಗಳಿಂದ‌ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿತುವ ಬೆಳ್ತಂಗಡಿ ತಾಲೂಕಿನ ಆದಿವಾಸಿ ಸಮುದಾಯದ ಕುಟುಂಬಗಳಿಗೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ  ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು....

ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ಮನವಿ

0

ಬೆಳ್ತಂಗಡಿ.ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಳಗಾವಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಭೇಟಿ ಮಾಡಿ ಮನವಿ ಮಾಡಿದರು, ಮನವಿಗೆ ಸಚಿವರೂ ಪೂರಕವಾಗಿ ಸ್ಪಂದನೆ ಮಾಡಿದ್ದು ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ' ಅಧ್ಯಕ್ಷರಾದ ಶಾಹುಲ್...

ಉಪ್ಪಿನಂಗಡಿ ಅನ್ಯ ರಾಜ್ಯದ ವ್ಯಕ್ತಿಯ ಕೊಲೆ ಪ್ರಕರಣ; ಬೆಳ್ತಂಗಡಿ ಕಲ್ಮಂಜ ನಿವಾಸಿಯ ಬಂಧನ

0

ಬೆಳ್ತಂಗಡಿ; ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಸಮೀಪ ನಡೆದ ಕೊಲೆ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿವಾಸಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂದಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಅಂಚೆ ಕಲ್ಮಂಜ ಗ್ರಾಮ,ನಿವಾಸಿ ಬಾಬು ಯಾನೆ ರುದ್ರ (68) ಎಂಬಾತನಾಗಿದ್ದಾನೆ.ಈತನನ್ನು ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಘಟನೆಯ ಹಿನ್ನಲೆ; ಡಿ 4 ರಂದು ಉಪ್ಪಿನಂಗಡಿ ಯ ಹೊಸ ಬಸ್ ನಿಲ್ದಾಣದ ಹಿಂಬದಿಯ ನಿರ್ಮಾಣ ಹಂತದಲದಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅನ್ಯ ರಾಜ್ಯದ ಕಾರ್ಮಿಕನೊಬ್ಬನ ಮೃತದೇಹ ಕಂಡು ಬಂದಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್...

ಯಕ್ಷ ಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ:ಡಿ 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ:ಅರುವ ಕೊರಗಪ್ಪ ಶೆಟ್ಟಿಯವರಿಗೆ ಯಕ್ಷ ಸಂಭ್ರಮ 2024 ಪ್ರಶಸ್ತಿ ಪ್ರಧಾನ:

0

ಬೆಳ್ತಂಗಡಿ: ಯಕ್ಷ ಧ್ರುವಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಇದೇ ಬರುವ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು. ಅವರು ಬೆಳ್ತಂಗಡಿ ಲಯನ್ಸ್ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಪಟ್ಲ ಫೌಂಡೇಶನ್ ಮಹಾಪೋಷಕರಾದ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿಯವರ ಮಾರ್ಗದರ್ಶನದಂತೆಕಳೆದ ಎರಡು ವರ್ಷಗಳಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ ಯಶಸ್ವಿಯಾಗಿ ನಡೆದಿದ್ದು, ತಾಲೂಕಿನ ವಿವಿಧ ಕಡೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುವಾಯನಕೆರೆ ಶಕ್ತಿನಗರದ...

ಲಾಯಿಲ; ಕಾನೂನು ಪಾಲಿಸದೆ ಕಟ್ಟಡ ನಿರ್ಮಾಣ, ಕಾಮಗಾರಿ ಸ್ಥಗಿತಗೊಳಿಸಿ ಗ್ರಾ.ಪಂ ಆದೇಶ

0

ಬೆಳ್ತಂಗಡಿ; ಲಾಯಿಲ ಗ್ರಾಮದಲ್ಲಿ ವಾಸ್ತವ್ಯದ ಕಟ್ಟಡ ನಿರ್ಮಾಣದ ಪರವಾನಿಗೆ ಪಡೆದು ಕಾನೂನುಗಳನ್ನೂ ಮೀರಿ ಕಟ್ಟಡ ನಿರ್ಮಾಣವಾಗುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳು ತನಿಖೆ ನಡೆಸಿ ವಾಣಿಜ್ಯ ಉದ್ದೇಶದ ಕಟ್ಟಡದ ಕಾಮಗಾರಿಯನ್ನು ಮುಂದಿನ ಆದೇಶದ ವರೆಗೆ ಸ್ಥಗಿತಗೊಳಿಸುವಂತೆ ಲಾಯಿಲ ಗ್ರಾಮ ಪಂಚಾಯತು ಆದೇಶ ನೀಡಿದೆ.ಲಾಯಿಲ ಗ್ರಾಮದ ರಾಘವೇಂದ್ರ ಮಠದ ಸಮೀಪ ಸ.ನಂ 232/1p4ನಲ್ಲಿ ರಫೀಕ್ ಎಂಬವರು ನಿರ್ಮಾಣ ಮಾಡುತ್ತಿದ್ದ ಕಟ್ಟಡದ ಕಾಮಗಾರಿಗೆ ಸಮರ್ಪಕವಾದ ಅನುಮತಿಗಳನ್ನು ಪಡೆಯದೆ ಕಾಮಗಾರಿಗಳನ್ನು ಮಾಡಲಾಗುತ್ತಿದೆ,ಗ್ರಾಮ ಪಂಚಾಯತು ಆಡಳಿತವು ಕಟ್ಟಡ ನಿರ್ಮಾಣಕ್ಕೆ ವಿಧಿಸಿದ್ದ ಶರ್ತಗಳನ್ನು ಉಲ್ಲಂಘಿಸಿರುವುದಾಗಿ ಆರೋಪಿಸಿ ಲಾಯಿಲ ನಿವಾಸಿ...

ಬಂದಾರು; ರಿಕ್ಷಾದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್) ಎಫ್ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್ ಅವರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.ಇಳಂತಿಲ ಗ್ರಾಮದ ನಿವಾಸಿ ಅಬ್ದುಲ್ ಕರೀಂ (39) ಹಾಗೂ ಮೊಗ್ರು ಗ್ರಾಮದ ಅಟೋ ಚಾಲಕ ಸಾಧಿಕ್ (34) ಶಿಕ್ಷೆಗೆ ಒಳಗಾದವರಾಗಿದ್ದಾರೆ.ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು 2023ರ ಜೂನ್ 18ರಂದು ಬಂದಾರು ಗ್ರಾಮದ ನೇಲೋಳ್ಪಲ್ಕೆ ಎಂಬಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಂಟಾಲ ಎಂಬಲ್ಲಿಗೆ ತಲುಪುವ ವೇಳೆ ಅಟೋರಿಕ್ಷದಲ್ಲಿ ‌ಬಂದ ಆರೋಪಿಗಳು ರಿಕ್ಷಾವನ್ನು...

ಬೆಳ್ತಂಗಡಿ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ

0

ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್...

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.ವಿಧಾನಸಭೆ ಸ್ಪೀಕರ್. ಉಪಮುಖ್ಯಮಂತ್ರಿ,...

ಕೌಕ್ರಾಡಿ ಮನೆ ತೆರವು ಪ್ರಕರಣ; ಆರೋಪಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

0

ಬೆಳ್ತಂಗಡಿ; ಬಡ ದಲಿತ ವೃದ್ದೆ ರಾಧಮ್ಮ ಅವರ ಮನೆ ದ್ವಂಸ ಮಾಡಿದ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಮತ್ತು ರಾಧಮ್ಮನ ಗಂಡ ಮುತ್ತು ಸ್ವಾಮಿ ಮೇಲೆ ಹಲ್ಲೆ ನಡೆಸಿದ ಕೌಕ್ರಾಡಿ ಗ್ರಾಮ ಆಡಳಿತಾದಿಕಾರಿ ಸಿದ್ದುಲಿಂಗು ಜಂಗಮ ಶೆಟ್ಟಿ ಅವರ ಮೇಲೆ ಕಾನೂನು ಬದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ, ಅವರುಗಳನ್ನು ಅಮಾನತ್ತು ಮಾಡಿ ಬಂಧಿಸಲು ದಲಿತ ಹಕ್ಕು ಸಮಿತಿ ಒತ್ತಾಯಿಸುತ್ತದೆ ಎಂದು ದಲಿತ ಹಕ್ಕು ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಈಶ್ವರಿ ಶಂಕರ್ ಹೇಳಿದರು.ಅವರು ಸೋಮವಾರ ಡಿ.ಎಚ್.ಎಸ್. ಮತ್ತು ಡಿ.ವೈ.ಎಫ್.ಐ. ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್...