ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

0

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಇಸುಬು ಯು.ಕೆ ನೇಮಕ ಇವರನ್ನು ನೇಮಕ ಮಾಡಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ ಎಲ್ಲ ಸ್ಥಾನಗಳಲ್ಲಿಯೂ ಸಹಕಾರ ಭಾರತಿಗೆ ಗೆಲುವು

0

ಬಂಗಾಡಿ : ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಡಿ. 8 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಮತಗಳ ಅಂತರದಲ್ಲಿ ವಿಜಯಶಾಲಿಯಾಗಿದ್ದಾರೆ. ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ಸಾಲಗಾರ ಹಿಂದುಳಿದ ವರ್ಗ ಎ ಕ್ಷೇತ್ರದಿಂದ ರಮೇಶ್ ಕೆಂಗಾಜೆ, ಸಾಲಗಾರ...

ಬೆಳ್ತಂಗಡಿ; ತಾಲೂಕಿನ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ 6 ಕೋಟಿ 25 ಲಕ್ಷ ಅನುದಾನ ಮಂಜೂರು; ರಕ್ಷಿತ್ ಶಿವರಾಮ್

0

ಬೆಳ್ತಂಗಡಿ; ತಾಲೂಕಿನವಿವಿಧ ರಸ್ತೆಗಳ ಸೇತುವೆಗಳ ನಿರ್ಮಾಣಕ್ಕೆ ರೂ 6.25 ಕೋಟಿ ಅನುದಾನ ಮಂಜೂರಾ ಗಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ...

ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು

0

ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ನಿವಾಸಿ ರಾಜೇಂದ್ರಪೂಜಾರಿ (45) ಎಂಬವ ರಾಗಿದ್ದಾರೆ. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಮೃತಪಟ್ಟಿದ್ದಾರೆ.

ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಕಾಣುವಂತೆ ಗೃಹ ಸಚಿವರಿಗೆ ಶೇಖರ ಲಾಯಿಲ ಮನವಿ

0

ಬೆಳ್ತಂಗಡಿ; ಜಿಲ್ಲೆಯ ಮೂಲನಿವಾಸಿವಾದಿವಾಸಿಗಳು ಹಕವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೂಗೊಳ್ಳುವಂತೆ ರಾಜ್ಯ ಸರಕಾರದ ಗೃಹಸಚಿವರಾದ ಡಾ.ಜಿ ಪರಮೇಶ್ವರ್ ಅವರಿಗೆ ಆದಿವಾಸಿ ಹಕ್ಕುಗಳ ಸಮಿತಿ ಸಂಚಾಲಕ ಶೇಖರ ಲಾಯಿಲ ಅವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಮನವಿ ಸಲ್ಲಿಸಲಾಯಿತು.ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ವಾಸಿಸುತ್ತಿರುವ ಮೂಲನಿವಾಸಿಗಳು ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿದ್ದಾರೆ ಈ ಕುಟುಂಬಗಳಿಗೆ ಕೂಡಲೇ ರಸ್ತೆ, ವಿದ್ಯುತ್, ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು,ನೆರಿಯ ಗ್ರಾಮದ ಬಾಂಜಾರು ಮಲೆ ನುವಾಸಿಗಳ ಜಮೀನಿನ ಮೇಲೆ ನ್ಯಾಯಾಲಯದಲ್ಲಿ ಸರಕಾರ ಹಾಕಿರುವ ವ್ಯಾಜ್ಯವನ್ನು...

ಧರ್ಮಸ್ಥಳ ಕಲ್ಲೇರಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

0

ಬೆಳ್ತಂಗಡಿ; ಧರ್ಮಸ್ಥಳ ಕಲ್ಲೇರಿಯಲ್ಲಿಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಕಲ್ಲೇರಿ ನಿವಾಸಿ ಸುರೇಶ್ ಗೌಡ 52ಎಂಬವರಾಗಿದ್ದರೆ.ಇವರ ಕಳೆದ ಕೆಲ ದಿನಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದುವ ನ 26 ರಿಂದ ನಾಪತ್ತೆಯಾಗಿದ್ದರು.ಶುಕ್ರವಾರ ಬೆಳಗ್ಗೆ ಇವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.  ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮೃತದೇಹವನ್ನು ಬಾವಿಯಿಂದ ಮೇಲೆತ್ತಲು ಸಹಕರಿಸಿದರು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

0

ಬೆಳ್ತಂಗಡಿ; ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ ವೇದಿಕೆಯನ್ನು ಮಾದರಿಯಾಗಿಸೋಣ ಎಂದು ಸುನ್ನೀ ಯುವಜನ ಸಂಘದ (ಎಸ್‌ವೈಎಸ್) ಕಾರ್ಕಳ ಝೋನ್ ಕಾರ್ಯದರ್ಶಿ ಮೌಲಾನಾ ಹುಸೈನ್ ಸ‌ಅದಿ ಹೊಸ್ಮಾರ್ ಅಭಿಪ್ರಾಯಪಟ್ಟರು. ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಇದರ ವತಿಯಿಂದ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ನ.28 ರಂದು ನಡೆದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ ಮತ್ತು...

ಧರ್ಮಸ್ಥಳ; 12.90ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ

0

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿಬಂದ ಕುಟುಂಬ ವೊಂದರ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ.12.90 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ ಪ್ರಕರಣ ನ.24ರಂದು ಘಟನೆ ನಡೆದಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾಪು ಕೋಟಿ ಗ್ರಾಮದ ಜೋಗಿ ಕಂಪೌಂಡ್‌ನ ನಿವಾಸಿ ಗಾಯತ್ರಿ ಆರ್.ಜೋಗಿ ಎಂಬವರಿಗೆ ಸೇರಿದ ಬ್ಯಾಗ್‌ನಲ್ಲಿದ್ದ ರೂ.10 ಸಾವಿರ ನಗದು ಹಾಗೂ ರೂ.12.80 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದಾರೆ.ಗಾಯತ್ರಿ ಅವರು ತಮ್ಮ ಮಗಳು...

ವೇಣೂರು ನದಿನೀರಿನಲ್ಲಿ ಮುಳುಗಿ ಮೂವರು ಯುವಕರು ಸಾವು

0

ಬೆಳ್ತಂಗಡಿ; ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾ ಗಿದ್ದಾರೆ ಎಂದುವೇಣೂರು ಚರ್ಚನ ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರು ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು ತೆರಳಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು...

ಆದಿವಾಸಿಗಳ ವಸತಿ ಪ್ರದೇಶಗಳಿಗೆ ಮೂಲಭೂತ ಸಲಭ್ಯಗಳ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯ ತೀರ್ಮಾನಗಳ ಅನುಷ್ಠಾನಕ್ಕೆ ಜಯಾನಂದ ಪಿಲಿಕಳ ಒತ್ತಾಯ.

0

ಬೆಳ್ತಂಗಡಿ; ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅರಣ್ಯವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ತಿಳಿಸಿದ್ದಾರೆ.ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಅಳಿವಿನಂಚಿನಲ್ಲಿರುವ ಆದಿವಾಸಿ ಸಮುದಾಯಗಳ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಭೆಯಲ್ಲಿ ದ.ಕ ಜಿಲ್ಲೆಯ ಆದಿವಾಸಿಗಳ ಪ್ರತಿನಿಧಿಯಾಗಿ ಜಯಾನಂದ ಪಿಲಿಕಳ ಅವರು ಭಾಗಿಯಾಗಿ ಜಿಲ್ಲೆಯ ಆದಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆಯುವ ಕಾರ್ಯವನ್ನು ಮಾಡಿದ್ದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...