ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಭಕ್ತರ ಪಾದಯಾತ್ರೆ ನಡೆಯಿತು.ತಾಕೂಕಿನ ವಿವಿಧ ಭಾಗಗಳಿಂದ ಹಾಗೂ ಇತರ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪಾದಯಾತ್ರೆಯಲ್ಲಿ ಭಾಗಿಗಳಾದರು.ಧರ್ಮಸ್ಥಳದಲ್ಲಿ ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಈ ಯೋಜನೆಗಳು ಗ್ರಾಮೀಣ ಪ್ರದೇಶದ ಮನೆಗಳನ್ನು ಬೆಳಗಿದೆ ಎಂಬ ಸಾರ್ಥಕತೆ ಇದೆ. ಈ...

ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

0

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ವಿದ್ಯಾರ್ಥಿನಿ ಹೃಶ್ವಿ (17) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೃತರಿಗೆ ತಂದೆ, ತಾಯಿ, ಸಹೋದರ ಇದ್ದಾರೆ.

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ; ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

0

ಬೆಳ್ತಂಗಡಿ; ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್‌ ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ ಡಾ. ಝೆಲಾಲೆಮ್ ಬಿರಹಾನು ಟಾಪ್ಸಿ ಹೇಳಿದರು.ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾ ಸಬಲೀಕರಣ, ಆರ್ಥಿಕ ಒಳಗೊಳ್ಳುವಿಕೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ...

ಬೆಳ್ತಂಗಡಿ ಗ್ರಾಪಂ  ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ  ಅಭ್ಯರ್ಥಿಗಳಿಗೆ ಜಯ.

0

ಬೆಳ್ತಂಗಡಿ. ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿದ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.

ಕುವೆಟ್ಟು; ಗ್ರಾ.ಪಂ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

0

ಬೆಳ್ತಂಗಡಿ; ಕುವೆಟ್ಟು ಗ್ರಾಮಪಂಚಾಯತಿನ ಒಂದನೇ ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಗೆಲುವನ್ನು ಪಡೆದಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲತಿ ಅವರಿಗೆ 196ಮತಗಳು ಲಭಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಅವರಿಗೆ 59ಮತಗಳು ಮಾತ್ರ ಲಭಿಸಿದವು. ಎರಡು ಮತಗಳು ತಿರಸ್ಕೃತಗೊಂಡಿದೆ.

ಅಲ್‌ಫಿಯ್ಯಾ ಮೋಳ್ ಸ್ಮರಣಾರ್ಥ ರಕ್ತದಾನ ಶಿಬಿರ

0

ಬೆಳ್ತಂಗಡಿ; ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಮರ್ಹೂಮ ಅಲ್ ಫಿಯ್ಯಾ ಮೋಳು ಕುಂಡಡ್ಕ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರುಸಹಯೋಗದಲ್ಲಿ ನಡೆದ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಕೆ.ಶಾಹುಲ್ ಹಮೀದ್ ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ಫೈಝಲ್ ಮೂರುಗೋಳಿ,ಶರೀಫ್ ಬೆಲಾಲ್ ಮೊದಲಾದವರು ಮಾತನಾಡಿದರು.ಮೃತ ಬಾಲಕಿಯ ತಂದೆ ಹಾರಿಸ್ ಹನೀಫಿ ಕುಂಡಡ್ಕ ಉಪಸ್ಥಿತರಿದ್ದರು.

ಮಂಜೂಷಾ” ವಸ್ತುಸಂಗ್ರಹಾಲಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ಮಾನ್ಯತೆ

0

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು.ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು...

ಉಜಿರೆ ವಿಮುಕ್ತಿ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ

0

ಬೆಳ್ತಂಗಡಿ: ಸಂಸಾರ ವೆಂಬ ರಥದಲ್ಲಿ ಪುರುಷ ಮಹಿಳೆ ಎರಡು ಚಕ್ರಗಳಿದ್ದಂತೆ. ಇಬ್ಬರೂ ಸರಿಸಮಾನವಾಗಿ ಹೆಜ್ಜೆ ಹಾಕಿದರೆ ಸಂಸಾರದ ಹಾದಿ ಸುಗಮವಾಗಿ ಸಾಗುವುದು. ಅಂತೆಯೇ ದೇಶ, ಸಮಾಜದ ಅಭಿವೃದ್ಧಿಯ ದೃಷ್ಟಿಯಲ್ಲಿ ಜತೆಯಾಗಿ ಸಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ನ 23 ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ಲಾಯಿಲದ ವಿಮುಕ್ತಿ ಸ್ವಸಹಾಯ ಸಂಘಗಳ ಟ್ರಸ್ಟ್ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗೃಹ ನಿರ್ವಹಣೆಯಲ್ಲಿಮಹಿಳೆಯರಿಗಿರುವಷ್ಟು ಶಕ್ತಿ ಪುರುಷರಿಗಿಲ್ಲ. ಮಹಿಳೆಯರು ಸಮಾಜದ ಬದಲಾವಣೆಗೆ ಶಕ್ತಿ ನೀಡಿದೆ. ಸರಕಾರದ ಮಹಿಳಾ...

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

0

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮವು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಶಾದಿ ಮಹಲ್ ಗುರುವಾಯನಕೆರೆಯಲ್ಲಿ ಶುಕ್ರವಾರ ನಡೆಯಿತು.ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕರಾಳವಾದ ಹೊಸ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಸಮುದಾಯದ ನಾಯಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಕ್ಫ್ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಇಲ್ಯಾಸ್ ತುಂಬೆ ಮಾತನಾಡಿ ಧಾರ್ಮಿಕ ಕಾರ್ಯಕ್ಕೆ, ದಾನ ಅಥವಾ ಪರೋಪಕಾರಿ ಉದ್ದೇಶಕ್ಕಾಗಿ ಶಾಶ್ವತವಾಗಿ...

ಬೆಳ್ತಂಗಡಿ ಪಂಚಾಯಿತಿ ಉಪಚುನಾವಣೆ; ಶಾಂತಿಯುತ ಮತದಾನ

0

ಬೆಳ್ತಂಗಡಿ: ತಾಲೂಕಿನಲ್ಲಿ ಶನಿವಾರ ನಡೆದ ಪಂಚಾಯಿತಿ ಉಪಚುನಾವಣೆಗೆ ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಒಟ್ಟು ಮೂರು ಕಡೆ ಮತದಾನ ನಡೆದಿದ್ದು ಉಜಿರೆ 8ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ 2036 ಮತದಾರರ ಪೈಕಿ 953 ಮತದಾರರು ಮತ ಚಲಾಯಿಸಿದ್ದು 46.83ಶೇ. ಮತದಾನ ದಾಖಲಾಗಿದೆ.ಕುವೆಟ್ಟಿನಲ್ಲಿ ಒಂದನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ 1,410 ಮತದಾರರ ಪೈಕಿ 257 ಮಂದಿ ಮತ ಚಲಾಯಿಸಿದ್ದು 18.23ಶೇ. ಮತದಾನವಾಗಿದೆ.ಇಳಂತಿಲದ ಒಂದನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ1,257 ಮತದಾರರ ಪೈಕಿ 782 ಮಂದಿ ಮತ ಚಲಾಯಿಸಿದ್ದು 62.21ಶೇ. ಮತದಾನ ದಾಖಲಾಗಿದೆ.