ಬೆಳ್ತಂಗಡಿ:ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಪುಸ್ತಕ ಪ್ರದರ್ಶನ ಮತ್ತು ಮಾರಾಟ
ಬೆಳ್ತಂಗಡಿ; ಗುರುವಾಯನಕೆರೆ ಶ್ರೀ ಶಾರದಾ ಕಲಾಮಂಟಪ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಪುತ್ತೂರು ಇದರ ಸಹಯೋಗದೊಂದಿಗೆ ಜೂನ್ 26ರಿಂದ 28 ರವರೆಗೆ ನಡೆಯುವ ಗ್ರಾಮೀಣ ಮಟ್ಟದ ಪುಸ್ತಕೋತ್ಸವ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಶ್ರೀನಾಥ್ ಎಂ ಪಿ ಮಾತನಾಡಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಪುಸ್ತಕ ಓದುವವರು ವಿರಳವಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿ ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಆಯೋಜನೆಗೊಂಡಿರುವುದು ಶ್ಲಾಘನೀಯವಾಗಿದೆ. ಪ್ರತಿ ಶಾಲಾ ಕಾಲೇಜುಗಳಲ್ಲಿ...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ – ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುರತ್ಕಲ್ ನಿವಾಸಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನಾಗಿದ್ದಾನೆ.ಈತ ಮಾದಕವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂ 25 ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್...
ಜಂಇಯ್ಯತುಲ್ ಉಲಮಾ ಶತಮಾನೋತ್ಸವ; ಗುರುವಾಯನಕೆರೆ ಯಲ್ಲಿ ಧ್ವಜಾರೋಹಣ
ಬೆಳ್ತಂಗಡಿ; ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ ಸಅದಿ ನೇರವೇರಿಸಿದರು.ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಸರ್ಕಲ್ ಅಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್ವೈಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್ ಶಾಫಿ, ಎಸ್ಎಮ್ಎ ಅಧ್ಯಕ್ಷ ಉಮರಬ್ಬ, ಆದಂ ಸಾಹೇಬ್, ಎಸ್ವೈಎಸ್ ಸಂಘಟನಾ ಕಾರ್ಯದರ್ಶಿ ಅಶ್ರಫ್, ಯುನಿಟ್ ಯುನಿಟ್ ಕಾರ್ಯದರ್ಶಿ ಉಸ್ಮಾನ್ ಅಲಾದಿ, ಸ್ಥಳೀಯ ಮಸೀದಿಯ...
ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ
ಬೆಳ್ತಂಗಡಿ, ಜೂ.26: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಿಎ...
ಸ್ನೇಹಕಿರಣ ಜಿಲ್ಲಾ ಮಹಿಳಾ ಒಕ್ಕೊಟ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ದಿನಾಂಕ ಜೂ 25 ರಂದು ಸಾನ್ತೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು. ಒಕ್ಕೂಟದ ಅಧ್ಯಕ್ಷರಾದ ಎಲಿಯಮ್ಮ ತೋಮಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿ ಸಿಸಿಲ್ಯಾ ತಾವ್ರೊರವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಮುಂದಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್. ಡಿ. ಎಸ್ ಸಂಸ್ಥೆಯ ನಿರ್ದೇಶಕರಾದ ಫಾ. ಆದರ್ಶ್ ಪಿ.ಎಸ್...
ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಬೆಳ್ತಂಗಡಿ; ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ "ಶ್ರಮಿಕ ಪ್ರತಿಭಾ ವಿದ್ಯಾರ್ಥಿ" ಸನ್ಮಾನ ಕಾರ್ಯಕ್ರಮವನ್ನು ಜೂನ್ 28, ಭಾನುವಾರ ಮೂರು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಪೂರ್ವಾಹ್ನ: 9.00 - ಸ್ವರಾಜ್ ಟವರ್ಸ್ ಸಭಾಭವನ ಅಳದಂಗಡಿ(ಅಳದಂಗಡಿ ಮತ್ತು ನಾರಾವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ - ಗ್ರಾಮಗಳು: ಬಡಗಕಾರಂದೂರು, ಪಿಲ್ಯ, ಸುಲ್ಕೇರಿಮೊಗ್ರು, ಸುಲ್ಕೇರಿ, ನಾವರ, ಕುದ್ಯಾಡಿ, ಬಳೆಂಜ, ನಾಲ್ಕೂರು,...
ಬೆಳ್ತಂಗಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹಲವರಿಗೆ ಗಾಯ
ಬೆಳ್ತಂಗಡಿ; ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಜೂ. 26 ರಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್, ಇಂಜಿನ್ ಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನ ಹಳದಿ...
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ
ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್...
ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ
ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ವಯಸ್ಸು ಸುಮಾರು 60-65 ವರ್ಷ ಆಗಿದ್ದು, ಎತ್ತರ 5.3 ಅಡಿ, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ, ಅಗಲ ಹಣೆ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಹಣೆಯ ಎಡಭಾಗ ಎಡಕಣ್ಣಿನ ಮೇಲ್ಬಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ […]
ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ :- “ಸ್ವಚ್ಛ ನೇತ್ರಾವತಿ” ಬೃಹತ್ ಸ್ವಚ್ಛತಾ ಅಭಿಯಾನ
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಧರ್ಮಸ್ಥಳ ಗ್ರಾಮ ಪಂಚಾಯತ್, ಸ್ವಚ್ಛ ಭಾರತ ಮಿಷನ್ (ಗ್ರಾ) ದ.ಕ., ಶ್ರೀ ಕ್ಷೇತ್ರ ಧರ್ಮಸ್ಥಳ, ರೋಟರಿ ಕ್ಲಬ್ ಬೆಳ್ತಂಗಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳ, ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶ್ರೀ ಶಕ್ತಿ ಗುಂಪುಗಳು, ಸ್ವ ಸಹಾಯ ಸಂಘಗಳು, ಇವುಗಳ ಆಶ್ರಯದಲ್ಲಿ ನೇತ್ರಾವತಿ ಸ್ನಾನಘಟ್ಟ ನದಿಕಿನಾರೆಯಲ್ಲಿ ಸ್ವಚ್ಛ ನೇತ್ರಾವತಿ ವಿಶೇಷ ಬೃಹತ್ ಸ್ವಚ್ಛತಾ...















