ಉಜಿರೆಯ ರಬ್ಬರ್ ಸೊಸೈಟಿಯಿಂದ ಮಾದರಿ ಸೇವಾಕಾರ್ಯ:
ಬೆಳ್ತಂಗಡಿ ತಾಲೂಕು, ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಅಧ್ಯಕ್ಷರಾದ ಶ್ರೀಧರ್ ಬಿಢೆ, ಉಪಾಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಸೊಸೈಟಿಯಿಂದ ರೂ. 50,000 ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.
ಮುಳಿಯ ಜುವೆಲ್ಲರ್ಸ್, ಬೆಳ್ತಂಗಡಿ ಇವರಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ದಯಾ ವಿಶೇಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಮುಳಿಯ ಜುವೆಲ್ಲರ್ಸ್ ವತಿಯಿಂದ ಸಿಬ್ಬಂದಿಗಳು ಆಗಮಿಸಿ ಶಾಲೆಯ ನಿರ್ದೇಶಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರನ್ನು ಸನ್ಮಾನಿಸಿ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ವಿಕಲಚೇತನ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅವರ ಸರ್ವತೋಮುಖ ಏಳಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶಾಲೆಯನ್ನು ಪ್ರಶಂಸಿದರು. ವಂ.ಫಾ.ವಿನೋದ್ ಮಸ್ಕರೇನಸ್ ರವರು ಮಾತನಾಡಿ ಮುಳಿಯ ಜುವೆಲ್ಲರ್ಸ್ ರವರು ನಮ್ಮ ಶಾಲಾ ವಾರ್ಷಿಕೋತ್ಸವದ ವೇಳೆ...
ಕಲ್ಮಂಜ; ಕಾಡಾನೆ ದಾಳಿ ವ್ಯಾಪಕವಾದ ಕೃಷಿ ಹಾನಿ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿಗಳಾದ ಎಂ.ಎಸ್.ಪ್ರಕಾಶ್ಮತ್ತು ಶ್ರೀನಿವಾಸ ನಾಯ್ಕ ಎಂಬವರಿಗೆ ಸೇರಿದ ತೋಟಗಳಿಗೆ ಕಾಡಾನೆಗಳು ನುಗ್ಗಿದೆ. ತೋಟದಲ್ಲಿ ಸುಮಾರು ನೂರಕ್ಕಿಂತ ಅಧಿಕ ಬಾಳೆ ಗಿಡ, 15 ಕ್ಕೂ ಅಧಿಕ ಅಡಿಕೆ ಗಿಡ, ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದೆ. ಕಾಡಾನೆಗಳಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.ಘಟನೆಯ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ ರೈತ ಸಂಘ ಬೆಳ್ತಂಗಡಿ ತಾಲೂಕು ಅದ್ಯಕ್ಷರಾದ ಪಾಂಗಳ ಲಕ್ಷ್ಮಣ ಗೌಡ ಹೇಳಿದರು.ಅವರು ಮಂಗಳವಾರ ಕರ್ನಾಟಕಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅರಣ್ಯ ಕಾಯ್ದೆಗೆ ತಿದ್ದುಪಡಿ ತರಬೇಕು, ಕಸ್ತೂರಿ ರಂಗನ್ ವರದಿ ಜಾರಿಗೆ ತರಬಾರದು, ರೈತರ ಭೂಮಿ ಉಚಿತ ಪ್ಲಾಟಿಂಗ್ ಮಾಡಬೇಕು, ಅಡಿಕೆ ಆಮದು ನಿಷೇದಿಸಬೇಕು, ರೈತರಿಗೆ ಮನೆ ಕಟ್ಟಲು ಕನ್ವರ್ಶನ್...
ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ
ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಮಂಗಳವಾರ ನಾಮಪತ್ರ ಸಲ್ಲಿಸಿದರು.ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಯಿಲತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ,...
ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿ, ಕಬಡ್ಡಿ ಆಟಗಾರ ಚಿನ್ಮಯ ಗೌಡ ನಿಧನ
ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದರು.ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಕಾಲೇಜಿಗೆ ತೆರಳುತ್ತಿದ್ದರು.ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಬಂದಾರು ಗ್ರಾಮ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನವೆಂಬರ್ 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು.ಶ್ರೀ ಕ್ಷೇತ್ರದಲ್ಲಿ ಜನವರಿ 07 ರಿಂದ 12 ರ ವರೆಗೆ ನಡೆಯುವಬ್ರಹ್ಮಕಲಶೋತ್ಸವ ತಯಾರಿ ಬಗ್ಗೆ ದಿಕ್ಸೂಚಿ ಭಾಷಣಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥರಾದ ಬಜಗುತ್ತು ಬಾಲಕೃಷ್ಣ ಪೂಜಾರಿಯವರು ಮಾತನಾಡುತ್ತ ಬ್ರಹ್ಮಕಲಶೋತ್ಸವದ ತಯಾರಿಯಲ್ಲಿ ಮಹಿಳಾ ಸಮಿತಿಯ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ದೇವರ ಪುಣ್ಯ ದ ಕಾರ್ಯದಲ್ಲಿ ಭಾಗಿಯಾಗುವುದು ಮುಖ್ಯ....
ಉರುವಾಲು; ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪಿಗೆ 3 ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೊಕ್ಸ್ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವ ನಾಯ್ಕ (57) ಶಿಕ್ಷೆಗೊಳಗಾದವನು. ಈತ ಜ.23ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು....
ನ.15 ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ವಿರುದ್ದದ ಹೋರಾಟಕ್ಕೆ ಕೆ.ಎಸ್.ಎಂ.ಸಿ ಎ ಬೆಂಬಲ
ಬೆಳ್ತಂಗಡಿ; ಗುಂಡ್ಯದಲ್ಲಿ ನ15ರಂದು ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ)ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಹಾಗೂ ನಿರ್ದೇಶಕ ವಂ. ಫಾ. ಆದರ್ಶ್ ಜೋಸೆಫ್ ತಿಳಿಸಿದ್ದಾರೆ. ನಾಡಿನ ಜನರನ್ನು ಕಾಡುತ್ತಿರುವ ಈ ಸಮಸ್ಯೆಯ ಬಗ್ಗೆ ಸರಕಾರದ ನ ಸೆಳೆಯಲು ನಡೆಸುತ್ತಿರುವ ಈ ಹೋರಾಟದಲ್ಲಿ ನಮ್ಮ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಕಸ್ತೂರಿ...













