ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ಅವರಿಗೆ ದಯಾ ಸಂಸ್ಥೆಯಿಂದ ಅಭಿನಂದನೆ
ಬೆಳ್ತಂಗಡಿ; ಅಂಧ ,ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು.ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಇಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ವಿನೋದ ಮಸ್ಕರೇನ್ಸ್ , ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಿತ್...
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಪ್ರತಿಭಟನೆ ವರದಿ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ; ಹರೀಶ್ ಪೂಂಜ
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯನ್ನು ಸಮರ್ಪಕವಾಗಿ ಮಾಡಲಾಗಿಲ್ಲ ಅದರಲ್ಲಿರುವ ವಿಚಾರಗಳು ವಾಸ್ತವದಿಂದ ದೂರವಾಗಿದೆ ಮೆಲೆನಾಡಿನ ಜನರ ಜೀವನವನ್ನು ಕಸಿದುಕೊಳ್ಳುವ ಈ ವರದಿಯನ್ನು ಸರಕಾರ ತಿರಸ್ಕರಿಸಬೇಕು ಎಂದುಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ವತಿಯಿಂದಕಸ್ತೂರಿ ರಂಗನ್ ವರದಿಯನ್ನು ಕೈಬಿಡುವಂತೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.ಸರಕಾರ ಯಾವುದೇ ಇರಲಿ ಅದು ಜನರ ಹಿತಕಾಯಬೇಕು ಕಾಂಗ್ರೆಸ್ ಸರಕಾರ ಇರಲಿ ಬಿಜೆಪಿ ಸರಕಾರ ಇರಲಿ ಜನರ ಬದುಕಿನೊಂದಿಗೆ ಚೆಲ್ಲಾಟವಾಡುವ ಕಾರ್ಯ ಮಾಡಿದರೆ ಅದನ್ನು ಜನರೊಂದಿಗೆ ನಿಂತು ವಿರೋಧಿಸುತ್ತೇನೆ....
ನೆರಿಯ, ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ; ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು , ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ
ಬೆಳ್ತಂಗಡಿ: ತುಮಕೂರಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 110 ಮೀಟರ್ ಹರ್ಡಲ್ಸ್ ನಲ್ಲಿ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಆಯ್ಕೆಯಾಗಿರುತ್ತಾರೆ.ಇವರು ಈವರೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಹಲವುಬಾರಿ ಚಿನ್ನ ಹಾಗೂ ಬೆಳ್ಳಿಯ ಪದಕಗಳನ್ನು ಪಡೆದು ಗ್ರಾಮೀಣ ಜನರಿಗೆ ಸ್ಪೂರ್ತಿ ನೀಡುತ್ತಿರುವ ಉತ್ತಮ ಪ್ರತಿಭೆ ಆಗಿರುತ್ತಾರೆ. ಒಡಿಸ್ಸಾದ ಭುವನೇಶ್ವರದಲ್ಲಿ ನಡೆಯುವ 39 ನೆಯ ಕಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೂ ಈಗಾಗಲೇ ಆಯ್ಕೆಯಾಗಿರುವ ಇವರು ಮುಂಬರುವ ದಿನಗಳಲ್ಲಿ 2 ರಾಷ್ಟ್ರ ಮಟ್ಟದ...
ಮುಂಡಾಜೆ: ಆಟೋರಿಕ್ಷಾಕ್ಕೆ ಕಾರುಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್( 39) ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತ...
ಉಪ್ಪಿನಂಗಡಿ: ಜಾಗದ ವಿವಾದ ಕೃಷಿಕನ ಕೊಲೆ
ಉಪ್ಪಿನಂಗಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನ.8ರ ರಾತ್ರಿ ನಡೆದಿದೆ. ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ವ್ಯಕ್ತಿ. ಅವರನ್ನು ಸಮೀಪದ ಸಂಬಂಧಿ ಹರೀಶ್ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಇಲ್ಲಿನ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಅಪಘಾತ; ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.ತುಷಾರ್ ರವರು ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.
ಬೆಳ್ತಂಗಡಿ : ಧರ್ಮಸ್ಥಳ ಅಜಿಕುರಿ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆ ದಾಳಿ; ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಬೆಳಗ್ಗೆ ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆ ನಡೆಯುತ್ತಿರುವುದು ಕಂಡುಬಂದಿದ್ದು ಮರಳುಗಾರಿಕೆಗೆ ಬಳಸಲಾಗುತ್ತಿದ್ದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರೂ ಅಗಿದ್ದು.ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000...
ಸೌತಡ್ಕ ದೇವಸ್ಥಾನಕ್ಕೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟಿಗೂ ಸಂಬಂಧವಿಲ್ಲ; ಟ್ರಸ್ಟ್ ಕಾನೂನು ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆ ಅಧ್ಯಕ್ಷರಿಂದ ಸ್ಪಷ್ಟನೆ
ಬೆಳ್ತಂಗಡಿ; ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಕಾನೂನು ಬದ್ದವಾಗಿ ಕಾರ್ಯ ನಿರ್ವಹಿಸುತ್ತಿದೆ. ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಯಾವುದೇ ಸಂಬಂಧವಿಲ್ಲ. ಟ್ರಸ್ಟ್ ನ ಆದಾಯವನ್ನು ಅದರ ರಚನೆಯ ಮೂಲ ಉದ್ದೇಶದಂತೆ ವ್ಯಯ ಮಾಡಲಾಗುತ್ತಿದೆ. ಟ್ರಸ್ಟಿಗೆ ಮೂವರು ವ್ಯಕ್ತಿಗಳು ಟ್ರಸ್ಟ್ ಡೀಡ್ ಬರೆದು ಕೊಟ್ಟ ಜಮೀನನ್ನು ಟ್ರಸ್ಟ್ ಉಪಯೋಗಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಮಾಹಿತಿ ನೀಡಿದರು. ಬೆಳ್ತಂಗಡಿ ಯಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಮಿತಿಯ ಹೆಸರಿನಲ್ಲಿ ಟ್ರಸ್ಟಿನ ಮೇಲೆ ಹಲವಾರು ಆರೋಪಗಳನ್ನು ಮಾಡುತ್ತಿದ್ದು ಅದು...
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿಕನ್ನಡ ರಾಜ್ಯೋತ್ಸವ - 2024ವಿವಿಧ ಕ್ಷೇತ್ರದ ಗಣ್ಯರಿಗೆ ಮತ್ತು ಜಿಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷರಾದ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಮಂದಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದ್ದು,...













