ಕಕ್ಕಿಂಜೆ; ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ ವಾಹನ ಸಂಚಾರ ಅಸ್ತವ್ಯಸ್ತ

0

ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ಬುಧವಾರ ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.ಸ್ಥಳೀಯರು ಲಾರಿಯನ್ನು ರಸ್ತೆಯಿಂದ ಸ್ಥಳಾಂತರಿಸಲು ಸಹಕರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.

ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ

0

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ - ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ'ಸೋಜ(19) ಮೃತಪಟ್ಟ ಯುವತಿ. ಪ್ರಿಯಾಂಕ 8 ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನ.5ರಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಭಜನಾ ಪರಿಷತ್ ನೇತೃತ್ವದಲ್ಲಿ ಭಜಕರ ಸಮಾವೇಶ, ಕ್ರಮಕ್ಕೆ ಒತ್ತಾಯ

0

ಬೆಳ್ತಂಗಡಿ : ಭಜನಾ ಪರಿಷತ್‌ ಬೆಳ್ತಂಗಡಿ,ಕುಣಿತ ಭಜನಾ ತರಬೇತಿದಾರರ ಸಂಘ, ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನ ಬಳಿಯಿಂದ ಖಂಡನಾ ಮೆರವಣಿಗೆ ಮತ್ತು ಬೆಳ್ತಂಗಡಿ ಆಡಳಿತ ಸೌಧದ ಆವರಣದಲ್ಲಿ ಭಜಕರ ಸಮಾವೇಶವು ನ.4 ರಂದು ನಡೆಯಿತು.ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸುಬ್ರಹ್ಮಣ್ಯ ಅಗರ್ತ, ಧನಂಜಯ ರಾವ್ ಬಿ.ಕೆ, ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಗಿರಿಜ ಭಟ್ ಮಾತನಾಡಿ, ಭಜಕರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವ...

ಲಾಯಿಲ ನಿವಾಸಿ ಯುವಕ ಆತ್ಮಹತ್ಯೆ

0

ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆ

0

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆಯಾದ ಘಟನೆ ಭಾನುವಾರದಂದು ನಡೆದಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ  ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿದೆ.ಮೃತ ದಂಪತಿಗಳನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.ಅಕ್ಟೋಬರ್ 31 ರಂದು ದಂಪತಿಗಳು ಮನೆಯಿಂದ ನಾಪತ್ತೆಯಾಗಿದ್ದು. ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದಾರೆ. ಇವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ...

ಭಾರೀ ಮಳೆಗೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

0

ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಕಕ್ಕಿ‌ಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ ಮನೆಯವರು ಯಾರೂ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ‌. ಮನೆ ಬಹುತೇಕ ಕುಸಿದು ಬಿದ್ದಿದೆ

ಕುತ್ಲೂರು; ಮುರಿದು ಬಿದ್ದ ಸೇತುವೆ, ಕಡಿದ ಸಂಪರ್ಕ, ಗ್ರಾಮಸ್ಥರಿಂದ ಪ್ರತಿಭಟನೆ

0

ಬೆಳ್ತಂಗಡಿ; ಕುತ್ಲೂರು ಗ್ರಾಮದ ಅಲಂಬಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳಾದರೂ ಸೇತುವೆ ದುರಸ್ತಿ ಅಥವಾ ಹೊಸ ಸೇತುವೆಯ ನಿರ್ಮಾಣ ಕಾರ್ಯ ಮಾಡದಿರುವ ಸರಕಾರದ ಅಧಿಕಾರಿಗಳ ನೀತಿಯನ್ನು ಖಂಡಿಸಿ, ಕುತ್ಲೂರಿನ ಮುರಿದ ಸೇತುವೆಯ ಮೇಲೆ ಈ ಸೇತುವೆಯನ್ನು ಅವಲಂಬಿಸಿರುವ ಆದಿವಾಸಿಗಳು ಹಾಗೂ ಸ್ಥಳೀಯರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ ಆದಿವಾಸಿಗಳು ಸೇರಿದಂತೆ ನೂರಾರು ಜನರು ಪ್ರತಿನಿತ್ಯ ಉಪಯೋಗಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳೇ ಕಳೆದರೂ...

ಅಂಡಿಂಜೆ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಒಡೆದು ಕಳ್ಳತನ

0

ಬೆಳ್ತಂಗಡಿ; ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು, ನಗದು ಮತ್ತು ಚಿನ್ನಾವರಣ ಕಳವುಗೈದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಿಂಜೆಯಲ್ಲಿ ನಡೆದಿದೆ.ಅಂಡಿಂಜೆ ಗ್ರಾಮದ ಪಾಂಡಿಲು ಹೊಸ ಮನೆಯ ಸುಜಾತ ಎಂಬವರು ಅ. 27 ರಂದು ಮನೆಗೆ ಬೀಗ ಹಾಕಿ ಅಳಿಯೂರಿನಲ್ಲಿ ಇರುವ ತವರು ಮನೆಗೆ ತೆರಳಿದ್ದರು. ಅ. 28ರಂದು ಮಧ್ಯಾಹ್ನ ವಾಪಸು ಬಂದಾಗ ಮನೆಯ ಬಾಗಿಲಿನ ಬೀಗ ಒಡೆದಿದ್ದು ಕಂಡುಬಂದಿದೆ. ಪರಿಶೀಲಿಸಿದಾಗ ಕಪಾಟಿನಲ್ಲಿದ್ದ 25,000 ರೂ. ನಗದು ಹಾಗೂ ಐದು ಗ್ರಾಂ ತೂಕದ ಚಿನ್ನದ ಒಂದು ಜತೆ ಬೆಂಡೂಲೆ...

ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ಬಂಧನ

0

ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಜಸ್ಟ್ ಮಿಸ್ ಅಗಿ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುವಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರು ಲಾಕ್ ಅಗಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಕಟ್ಟಡದ ನೆಲ ಮಹಡಿಯಲ್ಲಿರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಅ.13 ರಂದು ಭಾನುವಾರ ರಾತ್ರಿ ಕಳ್ಳತನ ನಡೆದಿತ್ತು ಅಂದೆ ದಿನ ರಾತ್ರಿ ಉಜಿರೆಯ...

ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು

0

ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ ಅ 9 ರಂದು ಅಪರಿಚಿತ ವ್ಯಕ್ರಿಯೊಬ್ಬ ಕರೆ ಮಾಡಿ ಆನ್ಲೈನ್ ಕೆಲಸದ ಆಪರ್ ನೀಡಿದ್ದು ಅದರಂತೆ ಮಹಿಖೆ ಕೆಲಸ ಆರಂಭಿಸಿದ್ದು ಆ ಬಳಿಕ ಆರೋಪಿಗಳು ವಿವಿಧ ಕಾರಣಗಳನ್ನು ತಿಳಿಸಿ ಅವರಿಂದ ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮೂಲಕ 4,25,934 ರೂ ಹಣವನ್ನು ವರ್ಗಾಯಿಸಿಕೊಂಡು ಬಳಿಕ ಕರೆ ಸ್ವೀಕರಿಸದೆ...