ಸೌತಡ್ಕ ದೇವಸ್ಥಾನಕ್ಕೆ ಖರೀದಿಸಿದ ಸ್ಟಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ವರ್ಗಾಯಿಸಿದ ನಡೆಯ ವಿರುದ್ದ ಭಕ್ತರ ಆಕ್ರೋಶ ; ಸೌತಡ್ಕ ದೇವಸ್ಥಾನ ಹಿತರಕ್ಷಣಾ ವೇದಿಕೆ ರಚನೆ: ಮರು ಹಸ್ತಾಂತರಕ್ಕೆ ಅಗ್ರಹಿಸಿ ಅನಿರ್ಧಷ್ಟವದಿ ಧರಣಿಗೆ ನಿರ್ಧಾರ.

0

. ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತರ, ಹಿತೈಷಿಗಳಿಂದ ಹಣ ಸಂಗ್ರಹಿಸಿ ಖರೀದಿಸಲಾಗಿದ್ದ ಸ್ಟಿರಾಸ್ತಿಗಳನ್ನು ಮಹಾಗಣಪತಿ ಸೇವಾ ಟ್ರಸ್ಟ್ ಎಂಬ ಬೇನಾಮಿ ಟ್ರಸ್ಟ್ ಗೆ ಮತ್ತು ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಹೆಸರಿಗೆ ಅಕ್ರಮವಾಗಿ ವರ್ಗಾವಣೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದೇವಳದ ಭಕ್ತಾದಿಗಳು ಪಕ್ಷ ಬೇಧ ಮರೆತು ಹೋರಾಟಕ್ಕೆ ಮುಂದಾಗಿದ್ದು ಆ ಬಗ್ಗೆ ಇತ್ತೀಚೆಗೆ ಕೊಕ್ಕಡದ ಅಪೇಕ್ಷಾ ಸಭಾ ಭವನದಲ್ಲಿ ಸೌತಡ್ಕ ಮಹಾಗಣಪತಿ ದೇವಸ್ಥಾನದ...

ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ

0

ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿರುವ 12 ಯಂತ್ರಗಳ ಪೈಕಿ 1 ಯಂತ್ರ ಕೆಟ್ಟು ಹೋಗಿ ತಿಂಗಳಾದರೂ ರಿಪೇರಿ ಮಾಡದ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಡಯಾಲೀಸಸ್ ಯಂತ್ರಕ್ಕೆ ಸಂಬಂಧಿಸಿದ ವಸ್ತುಗಳನ್ನು ಹೊರಗಡೆ ಬೇಕಾಬಿಟ್ಟಿ ಇಟ್ಟಿರುವ ಬಗ್ಗೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಾಗ ಸ್ಟಾಕ್ ರೂಂ ನ ಕೊರತೆಯಿಂದ ಹೊರಗಡೆ ಇಡಬೇಕಾದ...

ಬೆಳ್ತಂಗಡಿ; ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

0

ಬೆಳ್ತಂಗಡಿ : ಗ್ಯಾರೇಜ್ ನಲ್ಲಿ ರಿಪೇರಿಗೆ ಇರಿಸಿದ್ದ ಓಮಿನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ಬೆಳ್ತಂಗಡಿಯಲ್ಲಿ ಅ.22 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ನಗರದ ಕಲ್ಲಗುಡ್ಡೆ ರಸ್ತೆಯಲ್ಲಿ ಅ.22 ರಂದು ರಾತ್ರಿ ಓಮಿನಿ ಕಾರನ್ನು ಬೆಳ್ತಂಗಡಿ ಗ್ಯಾರೇಜಿನ ಮ್ಯಾಕ್ಯಾನಿಕ್ ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಚಾಲಕ ಕಾರಿನಿಂದ ಹೊರಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು...

ಮಿತ್ತಬಾಗಿಲು: ಕಾಡಾನೆ ಗಳ ದಾಳಿ ಕೃಷಿಗೆ ಹಾನಿ

0

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ಭೂಮಿಗೆ ದಾಳಿ ನಡೆಸಿದ್ದು ಕೃಷಿ ಹಾನಿ ಉಂಟುಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದೆ.ಸೋಮವಾರ ರಾತ್ರಿ ಸಮೀಪದ ಮಲವಂತಿಗೆ ಗ್ರಾಮದಲ್ಲಿ 6ಕ್ಕಿಂತ ಅಧಿಕ ಕಾಡಾನೆಗಳು ತೋಟಗಳಿಗೆ ನುಗ್ಗಿ ಹಾನಿ ಉಂಟುಮಾಡಿದ್ದವು.ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದೆ. ಕಾಡಾನೆಗಳನ್ನು ಅರಣ್ಯಕ್ಕೆ...

ಬೆಳ್ತಂಗಡಿ: ನ23 ರಂದು ತಾಲೂಕಿನ 3 ಗ್ರಾ.ಪಂ ಗಳಿಗೆ ಉಪ ಚುನಾವಣೆ

0

ಬೆಳ್ತಂಗಡಿ; ತಾಲೂಕಿನಲ್ಲಿ ತೆರವಾಗಿರುವ ಮೂರು ಗ್ರಮಾಪಂಚಾಯತು ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.ತಾಲೂಕಿನ ಉಜಿರೆ ಗ್ರಾಮದ1, ಕುವೆಟ್ಟು ಗ್ರಾಮದ 1, ಹಾಗೂ ಇಳಂತಿಲ ಗ್ರಾಮದ1 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ನ 6ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನ 12 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ನ13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ನ15ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ, ನ 23ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಚುನಾವಣೆನಡೆಯಲಿದೆ ನ 26ರ.ದು ಬೆಳ್ತಂಗಡಿ ಯಲ್ಲಿ ಮತಗಳ ಎಣಿಕೆ ಕಾರ್ಯ...

ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

0

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ , ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು , ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ , ಡಿಎನ್ಎ ಪರೀಕ್ಷೆ ನಡೆಸಬೇಕಾಗಿದೆ.ಸ್ಥಳೀಯರೇ ಯಾರಾದರೂ...

ಮಲವಂತಿಗೆ ಕಾಡಾನೆ ದಾಳಿ ನೂರಾರು ಅಡಿಕೆ ಮರಗಳು ನಾಶ

0

ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟಾಗಿದೆ,ಆನೆಗಳು ಇಲ್ಲಿನ ನಿವಾಸಿ ಸದಾಶಿವ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ್ದು ಸುಮಾರು 150 ಅಡಿಕೆ ಮರಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದೆ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ಕಾಡಾನೆಗಳು ನೆಲಕ್ಕೆ ಉರುಳಿಸಿದೆ. ಇವರದ್ದೇ ಸುಮಾರು ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣವಾಗಿ ನಶಗೊಳಿಸಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ. ಆರಕ್ಕೂ...

ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ

0

ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕುಂಭಶ್ರೀ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ರಾಷ್ಟ್ರೀಯ ವಿದ್ಯಾ ಗೌರವ್ ಚಿನ್ನದ ಪದಕ ಪ್ರಶಸ್ತಿ, ಪ್ರಬುದ್ಧ ಭಾರತ, ಸ್ಟಾರ್ ಆಫ್ ಏಷ್ಯಾ ಪ್ರಶಸ್ತಿಗಳು ಲಭಿಸಿವೆ. ಇದೀಗ ಕುಂಭಶ್ರೀ ವಿದ್ಯಾ ಸಂಸ್ಥೆ ಇಡೀ ಕರ್ನಾಟಕ ರಾಜ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಅತ್ಯುತ್ತಮ ಶಾಲೆ ಎಂದು ಗುರುತಿಸಲ್ಪಟ್ಟು...

ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ‌ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ ಕಾರ್ಯ

0

ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ ಯಶೋವರ್ಮ ಹೇಳಿದರು. ಅವರು ಭಾನುವಾರ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್...

ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ

0

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು.ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ,...