ಕೊಕ್ರಾಡಿ ಬೈಕ್ ಹಾಗೂ ಓಮ್ನಿ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ; ಕೊಕ್ರಾಡಿ ಗ್ರಾಮದ ಕುಂಟಾಲ್ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ವ್ಯಕ್ತಿಯನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ ಹೊಡೆದಿದೆ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊಕ್ರಾಡಿ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಆಗಾಗ ಅಪಘಾತ ಗಳು ಸಂಭವಿಸುತ್ತಿದೆ, ಅಪಘಾತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜನರು...
ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ; ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ.ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿರುವುದಾಗಿ ತಿಳಿದು ಬಂದಿದ ರಸ್ತೆಗೆ ಬಿದ್ದಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಾಗಿದೆ
ಕಾಶಿಬೆಟ್ಟುವಿಲ್ಲಿ ಚರಂಡಿಗೆ ಬಿದ್ದ ಕಾರು
ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ಘಟನೆ ನಡೆದಿದೆ.ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಮಳೆಯಿಂದಾಗಿ ರಸ್ತೆ ಜಾರುವ ಸ್ಥಿತಿಯಲ್ಲಿದೆ, ವಾಹನ ಚಾಲಕರು ಜಾಗರೂೂಕತೆಯಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆಯಿದೆೆ
ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ
ಹೊಸದಿಲ್ಲಿ: ಕರ್ನಾಟಕದ ಸಂಡೂರು, ಶಿಗ್ಗಾಂವಿ,ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ನ.13 ರಂದು ರಾಜ್ಯದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನ.23 ರಂದು ಫಲಿತಾಂಶ ಪ್ರಕಟವಾಗಲಿದೆ. ಅ.25 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.30 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಮಹಾರಾಷ್ಟ್ರ ಜಾರ್ಖಂಡ್ ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ಎರಡನೇ ಹಂತವು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನ.23 ರಂದು ಮತಎಣಿಕೆ ನಡೆಯಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.
ಕೊಕ್ಕಡ ಕೆನರಾ ಬ್ಯಾಂಕ್ ಎದುರು ಗ್ರಾಹಕರ ಪ್ರತಿಭಟನೆ
ಬೆಳ್ತಂಗಡಿ; ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಗ್ರಾಹಕರಿಗೆ ಆಗುತ್ತಿರುವ ಹಲವಾರು ತೊಂದರೆಗಳ ವಿರುದ್ದ ಸೋಮವಾರ ಬೆಳಗ್ಗೆ 10 ಗಂಟೆಗೆ ಬ್ಯಾಂಕ್ ಎದುರುಗಡೆ ಕೆನರಾ ಬ್ಯಾಂಕ್ ದೌರ್ಜನ್ಯ ವಿರೋಧೀ ಸಮಿತಿ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿಯ ದರಣಿ ಸತ್ಯಾಗ್ರಹ ಪ್ರಾರಂಭ ಆಗಿ ಸಂಜೆ 7 ಗಂಟೆ ವರೆಗೂ ಮುಂದುವರೆದು, ಬ್ಯಾಂಕ್ ಅಧಿಕಾರಿಗಳು ಮತ್ತು ಮೇಲಾಧಿಕಾರಿಗಳು ಕೊಟ್ಟ ಬೇಡಿಕೆ ಈಡೇರಿಸುವ ಭರವಸೆ ಮೇರೆಗೆ ದರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.ಬ್ಯಾಂಕಿನಲ್ಲಿ ಕಳೆದ ವರ್ಷ ತನಕ ಸುಮಾರು 19 ವರ್ಷ ಸರಾಫರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರನ್ನು ಅನ್ಯಾಯವಾಗಿ ವಜಾ ಗೊಳಿಸಿದ್ದನ್ನು...
ಆಯುಷ್ ಫೆಡರೆಷನ್ ಆಫ್ ಇಂಡಿಯಾ(ಎ ಎಫ್ ಐ),ಕರ್ನಾಟಕ(ರಿ)ಇದರ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ಆಯುಷ್ ಫೆಡರೆಷನ್ ಆಫ್ ಇಂಡಿಯಾ(ಎ ಎಫ್ ಐ),ಕರ್ನಾಟಕ(ರಿ)ಇದರ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಓಷಿಯನ್ ಪರ್ಲ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎ ಎಫ್ ಐ ಬೆಳ್ತಂಗಡಿ ಘಟಕದ ನೂತನ ಅಧ್ಯಕ್ಷರಾಗಿರುವ ಡಾ.ಸುಷ್ಮಾ ಡೋಂಗ್ರೆ ಇವರು ವಹಿಸಿದ್ದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಅಯುಷ್ ವೈದ್ಯರುಗಳ ಸಂಪೂರ್ಣ ಸಹಕಾರವನ್ನು ಮುಂದಿನ ಅವಧಿಯ ಕಾರ್ಯಕ್ರಮಗಳಿಗೆ ನೀಡುವಂತೆ ವಿನಂತಿಸಿಕೊಂಡರು. ಪದಗ್ರಹಣ ಸಭಾರಂಭವನ್ನು ಎ ಎಫ್ ಐದಕ್ಷಿಣಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ಮಂಗಳೂರಿನ ಡಾ.ಕೃಷ್ಣ ಗೋಖಲೆ ಇವರು ನಿರ್ವಹಿಸಿಕೊಟ್ಟರು.ಮುಖ್ಯ ಅತಿಥಿಗಳಾಗಿ ಕೆ.ಎಂ.ಸಿ...
ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೊಲೀಸರಿಗೆ ದೂರು
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಸುಳ್ಳುಸುದ್ದಿ ಸಂದೇಶವನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ಗಳಲ್ಲಿ ರವಾನಿಸಿದ ಬಗ್ಗೆ ಕೊಯ್ಯೂರು ನಿವಾಸಿ ವಿಜಯ ಕುಮಾರ್ ಇವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಟ್ರಸ್ಟಿನ ಚಟುವಟಿಕೆಗಳ ಬಗ್ಗೆ ಹಾಗೂ ವೈಯುಕ್ತಿವಾಗಿ ನಿಂದನಾತ್ಮಕವಾಗಿ ಸಂದೇಶಗಳನ್ನು ಹರಡಿರುವ ಬಗ್ಗೆ ದೂರು ನೀಡಲಾಗಿದೆ. ಪೊಲೀಸರು ದೂರನ್ನು ಸ್ವೀಕರಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ; 20ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ; ಪ್ರಕರಣವೊಂದರಲ್ಲಿ ಆರೋಪಿಯಾಗಿ ಕಳೆದ 20ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರು ನಿವಾಸಿ ಅಬ್ದುಲ್ ರಹಿಮಾನ್ (50) ಎಂಬಾತನಾಗಿದ್ದಾನೆ. 1998 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆಆರುತಿಂಗಳು ಶಿಕ್ಷೆಗೆ ಒಳಪಟ್ಟ ಈತ ಬಳಿಕ ತಲೆ ಮರೆಸಿಕೊಂಡಿದ್ದ ಈತನನ್ನು ಪುತ್ತೂರು ಪೊಲೀಸರ ಸಹಕಾರದೊಂದಿಗೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಸ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಆಂಬೇಡ್ಕರ್ ಅವರಿಗೆ ಅವಮಾನ ಕ್ರಮಕ್ಕೆ ಒತ್ತಾಯಿಸಿ ಡಿ.ಎಸ್.ಎಸ್. ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರಿಗೆ ದೂರು
ಬೆಳ್ತಂಗಡಿ; ಭಾರತದ ರಾಷ್ಟ್ರೀಯ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಅವಮಾನ ಮಾಡಿ,ಜಾತಿ ಜಾತಿಗಳ ಮಧ್ಯೆ ದ್ವೇಷದ ವಿಷ ಬೀಜ ಬಿತ್ತಿದ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ವಿಶ್ವಹಿಂದೂ ಪರಿಷತ್ ಇದರ ಸಹಸಂಚಾಲಕ ಉಮೇಶ್ ನಾಯ್ಕ ಸೂಡಎಂಬಾತನ ಮೇಲೆ ದೇಶದ ದ್ರೋಹದ ಪ್ರಕರಣವನ್ನು ದಾಖಲಿಸಿ ಆತನನ್ನು ಈ ಕನ್ನಡ ನಾಡಿನಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ,ಹಾಗೂ ದಲಿತ ಚಳುವಳಿಗೆ ಐವತ್ತರ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ ಇದರ...














