ಬೆಳ್ತಂಗಡಿ; ಸಿ.ಪಿ.ಐ.ಎಂ ಪಕ್ಷದ ತಾಲೂಕು ಸಮ್ಮೇಳನ
ಬೆಳ್ತಂಗಡಿ; ಇಂದು ನಮ್ಮ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ಸರಕಾರ ಅತಿ ಭ್ರಷ್ಟ ಸರಕಾರವಾಗಿದ್ದು, ಇಂತಹ ಭ್ರಷ್ಟ ಮತ್ತು ಕಾರ್ಮಿಕ ವಿರೋದಿ ಸರಕಾರವನ್ನು ಹಿಮ್ಮೆಟ್ಟಿಸುವುದು ಭಾರತೀಯರ ಇಂದಿನ ಕರ್ತವ್ಯವಾಗಿದ್ದು ಆ ಮೂಲಕ ರೈತರ, ಕಾರ್ಮಿಕರ ಬದುಕಿನ ರಕ್ಷಣೆ ಮಾಡಬೇಕಾದ್ದು ಇಂದಿನ ಅತೀ ಅಗತ್ಯ ಕೆಲಸವಾಗಿದೆ ಎಂದು ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳ ಸದಸ್ಯರಾದ ಡಾ.ಕೃಷ್ಣಪ್ಪ ಕೊಂಚಾಡಿ ಹೇಳಿದರು.ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸವಾದಿ) ಸಿಪಿಐ(ಎಂ) ಬೆಳ್ತಂಗಡಿ ತಾಲೂಕು 10 ನೇ ಸಮ್ಮೇಳನವನ್ನು ಉದ್ಗಾಟಿಸಿ ಮಾತಾಡುತ್ತಿದ್ದರು. ಕೇವಲ...
ತತಲೆಮರೆಸಿ ಕೊಂಡಿದ್ದ 34 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ವಾರೆಂಟ್ ಅರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಪಡಂಗಡಿಯ ಲಾಡಿ ಮನೆ ನಿವಾಸಿ ಹಮೀದ್ ಯಾನೆ ಜಬ್ಬಾರ್ ಹಮೀದ್ ಯಾನೆ ಕುಂಞಿಮೋನು ಬಂಧಿತ ಆರೋಪಿ. ಈತನನ್ನು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ...
ದಲಿತ ಚಳವಳಿಗೆ 50 ಬೆಳ್ತಂಗಡಿ ಯಲ್ಲಿ ಸಂಭ್ರಮಾಚರಣೆ ಸಮಿತಿ ರಚನೆ
ಬೆಳ್ತಂಗಡಿ; ಕರ್ನಾಟಕ ದಲಿತ ಸಂಘರ್ಷ ಸಮಿತಿ ಇದೀಗ 50 ರ ಸಂಭ್ರಮದಲ್ಲಿದೆ ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಯಲ್ಲಿ ದಲಿತ ಚಳವಳಿಯ 50ರ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದ್ದು ಇದಕ್ಕಾಗಿ ಪೂರ್ಣ ಪ್ರಮಾಣದ ಸಮಿತಿಯನ್ನು ಬಿಕೆ ವಸಂತ್ ಅವರ ಅಧ್ಯಕ್ಷತೆಯಲ್ಲಿ ಚೆನ್ನಕೇಶವ ಅವರ ಗೌರವ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.ಸಮಿತಿ ವಿವರ ಇಂತಿದೆ.ಅಧ್ಯ ಕ್ಷರು, ಬಿ.ಕೆ ವಸಂತ್, ಗೌರವಾಧ್ಯಕ್ಷರು; ಚೆನ್ನಕೇಶವ. ಕಾರ್ಯಾಧ್ಯಕ್ಷರುಗಳು; ಶೇಖರ ಕುಕ್ಕೇಡಿ, ಬೇಬಿ ಸುವರ್ಣ, ಅಣ್ಣು ಸಾಧನ ಪದ್ಮುಂಜ, ನೇಮಿರಾಜ್ ಕಿಲ್ಲೂರು, ಸಂಜೀವ ಆರ್ ಬೆಳ್ತಂಗಡಿ, ರಮೇಶ್ ಆರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ; ಅಚ್ಚುಶ್ರೀ ಬಾಂಗೇರು,ಕೋಶಾಧಿಕಾರಿ ಶ್ರೀಧರ ಎಸ್. ಕಳೆಂಜ ಉಪಾಧ್ಯಕ್ಷರುಗಳು ಪ್ರಭಾಕರ...
ಮುಂಡಾಜೆ; ಭಾರೀ ಮಳೆಗೆ ರಸ್ತೆಗೆ ಕುಸಿದು ಬಿದ್ದ ಗುಡ್ಡ
ಬೆಳ್ತಂಗಡಿ; ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರ ಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಮುಚ್ವಿಹೀಗಿದೆ.ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆಯ ಸಮೀಪ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿದಿದೆ. ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು ಬಿದ್ದಿದೆ. ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ...
ಬೆಳ್ತಂಗಡಿ; ತ್ರಿಸ್ಟಾರ್ ವೈನ್ಸ್ ನ ಬೀಗ ಒಡೆದು ಕಳ್ಳತನ
ಬೆಳ್ತಂಗಡಿ; ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರುಸಾವಿರಕ್ಕೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಮದ್ಯದ ಬಾಟ್ಲಿಗಳನ್ನೂ ಕಳ್ಳತನ ಮಾಡಲಾಗಿದ್ದು ಇದರಬಗ್ಗೆ ಹೆಚ್ಚಿನ ಮಾಹುತಿಗಳು ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
ನೆರಿಯದಲ್ಲಿ ನದಿಗಿಳಿದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತ್ಯು
ಬೆಳ್ತಂಗಡಿ; ನೆರಿಯದಲ್ಲಿ ನದಿಗೆ ಇಳಿದಿದ್ದ ತೋಟತ್ತಾಡಿ ನಿವಾಸಿ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತನೇ ಮೃತಪಟ್ಟಿರುವ ಯುವಕನಾಗಿದ್ದಾನೆ.ಈತ ಭಾನುವಾರ ಗೆಳೆಯರೊಂದಿಗೆ ಮೀನು ಹಿಡಿಯಲು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರ ನೇತೃತ್ವದಲ್ಲಿ ನಡೆಸಿದ ಹುಡುಕಾಟದಲ್ಲಿ ಮೃತದೇಹ ಪತ್ತೆಯಾಗಿದೆಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭಾರೀ ಮಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ ತಾಸುಗಟ್ಟಲೆ ಭಾರೀ ಮಳೆ ಸುರಿದಿದ್ದು. ಅಲ್ಲಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಉಜಿರೆಯಿಂದ , ಮುಂಡಾಜೆಯವರೆಗೆ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ರಸ್ತೆಯಲ್ಲಿರುವ ದೊಡ್ಡ ಹೊಂಡಗಳಲ್ಲಿ ಮಳೆ ನೀರು ನಿಂತ ಪರಿಣಾಮ ದ್ವಿಚಕ್ರ ಸೇರಿದಂತೆ ವಾಹನ ಸವಾರರರು ಪರದಾಡುತ್ತ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಗುರುವಾಯನಕೆರೆ ಕಾರುಗಳ ನಡುವೆ ಅಪಘಾತ
ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗುರಯವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡುವೆ ಅಪಘಾತ ಸಂಭವಿಸಿದೆ.ಐ20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಕಾರುಗಳು ಎರಡೂ ಜಖಂಗೊಂಡಿದೆ.
ನೆಲ್ಯಾಡಿ; ನದಿಗೆ ಬಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಸಾವು
ನೆಲ್ಯಾಡಿ; ಬೆಂಗಳೂರು ಮೂಲದ ಖಾಸಗಿ ಸ್ವೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಗುದ್ದಿದ ರಭಸಕ್ಕೆ ಬಸ್ನ ಡ್ರೈವರ್ ಬಸ್ನಿಂದ ಹೊರಗಡ ಎಸೆಯಲ್ಪಟ್ಟು ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಈ ಖಾಸಗಿ ಸ್ಲಿಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್- ಅಪ್ ಮಾಡಲು...
ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ
World Mental Health Day celebrations: Marathon run in Ujire ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.ಅವರು ಗುರುವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಮ್ಯಾರಥಾನ್ ಓಟವನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು....














