ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ: ದಿನೇಶ್ ಗುಂಡೂರಾವ್

0

ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು."ಗ್ರಾಮೀಣ ಪ್ರದೇಶದಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳ ಬೇಡಿಕೆ ಹೆಚ್ಚುತ್ತಿದ್ದು, ಬೆನಕ ಆಸ್ಪತ್ರೆ ಇದಕ್ಕೆ ಉತ್ತಮವಾಗಿ ಸ್ಪಂದಿಸಿದೆ. ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ರಿಯಾಯಿತಿ ದರದ ಸೇವೆ ಸಿಗುವಂತಾಗಲಿ. ಬೆನಕ ಆಸ್ಪತ್ರೆಯ ಸೇವೆ, ರೋಗಿಗಳ ಕಾಳಜಿ,...

ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ; ಡಾ.ಡಿ ವೀರೇಂದ್ರ ಹೆಗ್ಗಡೆಯವರು. ಧರ್ಮಸ್ಥಳದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ,

0

ಬೆಳ್ತಂಗಡಿ; ವಾಲಿಬಾಲ್ ಬಹಳ ಪ್ರಮುಖವಾದ ಕ್ರೀಡೆ ಆಟಗಾರರು ನಿರಂತರ ಅಭ್ಯಾಸದಿಂದ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ, ನಿರಂತರವಾದ ತಲ್ಲೀನತೆ, ತೊಡಗಿಸಿಕೊಳ್ಳುವಿಕೆ ಅಗತ್ಯವಾಗಿದೆ, ಆಟ ಕೇವಲ ಒಂದು ದಿನಕ್ಕಾಗಿ ಆಗಬಾರದು ಸ್ಥಳೀಯ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರಸ್ಪೆಕ್ಟ್ರಮ್ ಧರ್ಮಸ್ಥಳ ಇದರ ವತಿಯಿಂದ ಧರ್ಮಸ್ಥಳ ದಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿ ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು...

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವ ದನೇಶ್ ಗುಂಡೂರಾವ್

0

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರೂ ತಿಂಗಳಿಗೆ ಕೇವಲ 15ಹೆರಿಗೆಗಳು ಮಾತ್ರ ಆಗುತ್ತಿದೆ. ಉಚಿತ ವ್ಯವಸ್ಥೆ ಇದ್ದರೂ ಯಾಕೆ ಜನ ಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯರುಗಳನ್ಬು ಪ್ರಶ್ನಿಸಿದರು.ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಘಟಕಗಳ ಉದ್ಘಾಟನೆಗೆಂದು ಆಗಮಿಸಿದ ವೇಳೆ ಆಸ್ಪತ್ರೆಯ ಪ್ರಗತಿಯ ಬಗ್ಗೆ ಪ್ರಶ್ನಿಸಿ ವೈದ್ಯರುಗಳನ್ನು ತರಾಟೆಗೆ ತೆಗೆದುಕೊಂಡರು.ತಾಲೂಕು ಆಸ್ಪತ್ರೆಯಲ್ಲಿ ತಿಂಗಳಿಗೆ 15ಹೆರಿಗೆಗಳು ಮಾತ್ರ ನಡೆಯುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಸಚಿವರು ತಜ್ಞ ವೈದ್ಯರು, ಅನಸ್ತೇಷಿಯಾ ಸ್ಪೆಷ್ಯಲಿಸ್ಟ್ ಎಲ್ಲರೂ ಇದ್ದಾರೆ ಆದರೆ ಜನ ಯಾಕೆ...

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ

0

ಬೆಳ್ತಂಗಡಿ;  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯನ್ನು ನೀಡಲಾಯಿತು ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ...

ಮಚ್ಚನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ  ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಮಚ್ಚಿನದಲ್ಲಿ ನಡೆಯಿತು.ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ನೆರವೇರಿಸಿ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿದ್ದರು, ವೇದಿಕೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರು...

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

0

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 24ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜನವರಿ 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ...

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

0

ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಶುಕ್ರವಾರ ನಡೆಯಿತು. ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ,ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ,ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ...

ಉಪ್ಪಿನಂಗಡಿಯಲ್ಲಿ ಗಾಂಜಾ ಸಾಗಾಟ ಪತ್ತೆ, ಬೆಳ್ತಂಗಡಿ ಪುತ್ತಿಲ ನಿವಾಸಿ ಬಂಧನ

0

ಬೆಳ್ತಂಗಡಿ; ಅಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದುರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಅಬ್ದುಲ್ ಸಲೀಂ (35) ಎಂಬಾತನನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಅವರು ಗುರುವಾರ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಟೋ ರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ವಾಹನವನ್ನು ಸುತ್ತುವರಿದು ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ...

ಮುಂಡಾಜೆ; ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನಕ್ಕೆ ಚಾಲನೆ

0

ಬೆಳ್ತಂಗಡಿ: ಮಂಗಳೂರಿನ ಸಂಸ್ಕಾರ ಭಾರತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನ ಕಾರ್ಯಕ್ರಮಕ್ಕೆ ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.ಸಂಸ್ಕಾರ ಭಾರತಿಯ ತಾಲೂಕು ಅಧ್ಯಕ್ಷ ಸಂಪತಾ ಸುವರ್ಣ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು,ತಾಲೂಕಿನ 81 ಗ್ರಾಮಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಸಾಧಕರ ಮನೆಗಳಿಗೆ ತೆರಳಿ ಸಂಸ್ಕಾರ ಭಾರತಿಯ ಸದಸ್ಯರು, ಗ್ರಾಮಸ್ಥರು ಹಾಗೂ ಗಣ್ಯರು ತೆರಳಿ ಸನ್ಮಾನಿಸಿದರು.ಸಹಕಾರಿ ಕ್ಷೇತ್ರದ ಶ್ರೀಧರ ಜಿ.ಭಿಡೆ, ಸಾಮಾಜಿಕ ಕ್ಷೇತ್ರದ ಅನಂತ ಭಟ್ ಮಚ್ಚಿಮಲೆ, ಅಡೂರು ವೆಂಕಟ್ರಾಯ, ರಾಜಕೀಯ ಕ್ಷೇತ್ರದ ಕೊರಗಪ್ಪ ನಾಯ್ಕ,...