ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ.
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಗಳಾಗಿ ವಿ.ಜಿ ರಾಜೇಶ್ ಭಟ್ ಸವಣಾಲು ,ನಾರಾಯಣ ಪೂಜಾರಿ ಮಚ್ಚಿನ,ಸುರೇಶ್ ಬೈರ ಲಾಯಿಲ,ಜಾರ್ಜ್ ಎಮ್ ವಿ ಚಿಬಿದ್ರೆ ಇವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಎಮ್ ಅಬ್ಬಾಸ್ ಅಲಿ ನೇಮಕ ಮಾಡಿದ್ದಾರೆ.
ಮುಂಡಾಜೆ: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಅಪಾರ ನಷ್ಟ
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಎರಡು ಲಕ್ಷ ರೂ.ಗಿಂತ ಅಧಿಕ ನಷ್ಟ ಸಂಭವಿಸಿದೆ.ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ ಮಂಗಳವಾರ ಬೆಳಗಿನ ಜಾವ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿ ಸುಮಾರು 3ಕ್ವಿಂಟಲ್ ರಬ್ಬರ್ ಹಾಗು ಒಂದು ಕ್ವಿಂಟಾಲ್ ಅಡಕೆ ಬೆಂಕಿಗೆ ಆಹುತಿಯಾಗಿದೆ.ಸ್ಮೋಕ್ ಹೌಸ್ ನ ಶೀಟುಗಳು ಸುಟ್ಟು ಹೋಗಿವೆ.ಸ್ಥಳೀಯರು ಮತ್ತು ಅಗ್ನಿ ಶಾಮಕ ದಳ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.ಆದರೂ ಸ್ಮೋಕ್ ಹೌಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಬಿ ಆಚರಣೆ
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ.ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯಪ್ರಮುಖರು,ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಬೆಳ್ತಂಗಡಿ ಮಹಿಳೆಯರ ಮೇಲನಿ ದೌರ್ಜನ್ಯ ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಯಿಂದ ಪ್ರತಿಭಟನೆ
ಬೆಳ್ತಂಗಡಿ; ಮಹಿಳೆಯರ ಮೇಲೆನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಯಿಂದ ರಾಜ್ಯದಾದ್ಯಂತ ನಡೆಯುವ ಪ್ರತಿಭಟನೆಯ ಅಂಗವಾಗಿಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ( Aipwa) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಸಭೆ ನಡೆಸಲಾಯಿತು. ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಯಿಂದ ಮೆರವಣಿಗೆ ಹೊರಟು ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನಾ ಸಭೆನಡೆಯಿತು . ಸಭೆಯನ್ನು ಉದ್ಧೇಶಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ, ರಾಜ್ಯ ಸಮಿತಿ ಸದಸ್ಯ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ವಸ್ತ್ರ ಚಿತ್ರಕಲಾ ಉದ್ಯಮಿ (ಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಫೈಂಟಿಂಗ್) ತರಬೇತಿಯ ಸಮಾರೋಪ
ಉಜಿರೆ : ಮನುಷ್ಯನಿಗೆ ವಿದ್ಯೆ ದೊಡ್ಡ ಸಂಪತ್ತು,ನಮ್ಮ ಕನಸುಗಳನ್ನು ನನಸಾಗಿಸಲು ಇರಬೇಕು ನಾವು ಕಲಿತ ವಿದ್ಯೆ ಆದರ ಜೊತೆ ಅದನ್ನು ಬಳಸುವ ಸಂಸ್ಕಾರ ಸಹ ಇದ್ದಲ್ಲಿ ಮಾತ್ರ ವಿದ್ಯೆಗೆ ಬೆಲೆ ಬರುವುದು. ನಿಮಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೆಚ್ಚು ಇದೆ ಅದರಲ್ಲಿ ತೊಡಗಿಸಿಕೊಂಡು ಅದನ್ನು ಕಲಿತು ವೃತ್ತಿಯನ್ನಾಗಿಸಿಕೊಂಡು ಬೆಳೆಯಬೇಕು ಆವಾಗ ನೀವು ಗ್ರಾಹಕರ ಹತ್ತಿರ ಹೋಗಬೇಕಾಗಿಲ್ಲ ಅವರೇ ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ ಎಂದು ಉಜಿರೆ ಸಂಧ್ಯಾ ಪ್ರೇಶ್ನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು /ಯಶಸ್ವಿ ಮಹಿಳಾ ಉದ್ಯಮಿಯಾದ ಶ್ರೀಮತಿ ಅರ್ಚನಾ ರಾಜೇಶ್ ಪೈ ಅಭಿಪ್ರಾಯಪಟ್ಟರು.ಉಜಿರೆ...
ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದಲ್ಲಿ ಮತ್ತು ಆರೋಗ್ಯಂ ಯೋಜನೆಯಡಿ ಸೇವಾಭಾರತಿ (ರಿ.), ಕನ್ಯಾಡಿ ಇದರ ಸಂಯೋಜನೆಯಲ್ಲಿ ಸೆಪ್ಟೆಂಬರ್ 15ರಂದು ಬೃಹತ್ ರಕ್ತದಾನ ಶಿಬಿರವು ಅರಸಿನಮಕ್ಕಿಯ ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಮಲ್ನಾಡು ವಸ್ತ್ರಲಾಯ ಅರಸಿನಮಕ್ಕಿ ಮಾಲಕರಾದ ಶ್ರೀ ಧರ್ಣಪ್ಪ ಗೌಡ ಉದ್ಘಾಟಿಸಿ, ರಕ್ತದಾನ ಮಾಡುವುದು ಒಂದು ಮಹತ್ತರವಾದ...
ಯುವ ವಾಹಿನಿ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮನಸ್ಸು ಅಂತರಾಳದ ಅವಲೋಕನ ಕಾರ್ಯಕ್ರಮ
ಯುವವಾಹಿನಿ (ರಿ)ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ "ಮನಸು "ಅಂತರಾಳದ ಅವಲೋಕನ ಎಂಬ ಕಾರ್ಯಕ್ರಮವು ದಿನಾಂಕ 15/ 9 /2024 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ರಕ್ಷಾ ರಾಘ್ನೇಶ್ ಉದ್ಯಮಿಗಳು ಅನ್ನಪೂರ್ಣ ಮೆಟಲ್ ಬೆಳ್ತಂಗಡಿ ಇವರು ಮಾತನಾಡುತ್ತಾ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ,ಯುವ ವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ, ಇನ್ನಷ್ಟು ಸಮಾಜಕ್ಕೆ ಯುವ...
ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ ಮಟ್ಟದ ಕಾಲೇಜಾಗಿ ಗುರುತಿಸಿದೆ: ಮೂಡುಬಿದಿರೆ ಭಟ್ಟಾರಕ ಶ್ರಿಗಳು
ಬೆಳ್ತಂಗಡಿ: ಭಾರತದ ಸಂಸ್ಕಾರ, ಸಂಸ್ಕೃತಿಯ ಪರಂಪರೆಯಿಂದ ಜಗತ್ತಿನಲ್ಲಿ ಭಾರತ ಉನ್ನತ ಮಟ್ಟದಲ್ಲಿ ಬೆಳಗುತ್ತಿದೆ.ಅದೇ ರೀರಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ರಾಜ್ಯದ ಪೋಷಕರು ಎಕ್ಸೆಲ್ ಕಾಲೇಜನ್ನು ಪ್ರೀತಿಸುತ್ತಿದ್ದು ಇಂದು ಶಿಕ್ಷಣ ಕ್ರಾಂತಿಯಲ್ಲಿ ಎಕ್ಸೆಲ್ ಕಾಲೇಜು ರಾಜ್ಯಮಟ್ಟದಲ್ಲಿ ಬೆಳೆದಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದು ಮೂಡಬಿದರೆ ಜೈನ ಮಠದ ಸ್ವಸ್ತಿ ಶ್ರಿ ಭಾರತಭೂಷಣ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾರ್ಯವರ್ಯ ಶ್ರಿ ಗಳು ನುಡಿದರು. ಅವರು ಭಾನುವಾರ ಗುರುವಾಯನಕೆರೆ ಕುವೆಟ್ಟು ಎಕ್ಸೆಲ್ ಪದವಿ ಪೂರ್ವ ಕಾಲೇಜು...
ಬಂದಾರು: ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ ದಿವ್ಯಶ್ರೀ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು , ಮಾಜಿ...
ಕುತ್ಲೂರಿನಲ್ಲಿ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ಪ್ರಕರಣ ದಾಖಲು
ಬೆಳ್ತಂಗಡಿ; ತಾಲೂಕಿನ ಕುತ್ಲೂರು ಗ್ರಾಮದಲ್ಲಿ ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿ ನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ಆದೋಪಿ ವಿದ್ಯಾರ್ಥಿನಿಯೊಂದಿಗೆಕಳೆದ ಕೆಲದಿನಗಳಿಂದ ಅನ್ಯೋನ್ಯವಾಗಿದ್ದರು, ಈ ವಿಚಾರ ಆಕೆಯ ತಾಯಿಗೆ ತಿಳಿದು ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಆತ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ. ಇದೇ ಕಾರಣಕ್ಕೆ ಸೆ....















