ಉಪ್ಪಿನಂಗಡಿ : ನಾಲ್ಕು ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಬಂಧನ
ಉಪ್ಪಿನಂಗಡಿ: ಆರ್.ಕೆ. ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ ಗುರುದ್ವಾರ ಸಮೀಪದ ಡೊಂಗ್ರಿ ನಿವಾಸಿ ಮೊಹಮ್ಮದ್ ಅವರ ಪುತ್ರ ಜಮಿಲ್ ಚಾಚಾ (62) ಬಂಧಿತ ಆರೋಪಿ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಆರ್.ಕೆ. ಚಿನ್ನದಂಗಡಿ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಈತ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಆರೋಪಿಯ...
ಬೆಳ್ತಂಗಡಿ; ‘ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳು ಮತ್ತು ಕನ್ನಡ ರಂಗಭೂಮಿ, ಚಲನಚಿತ್ರ ನಟ ಮತ್ತು ನಿರ್ದೇಶಕ ಚೇತನ್ ರೈ ಮಾಣಿ ಭೇಟಿ
ಬೆಳ್ತಂಗಡಿ : ಆಗಸ್ಟ್ 24ರಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳುನಾಡಿನ ಹೆಮ್ಮೆಯ ತುಳು ಮತ್ತು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ನಟ ಮತ್ತು ನಿರ್ದೇಶಕರಾದ ಚೇತನ್ ರೈ ಮಾಣಿಯವರು ನಮ್ಮ ಸಂಸ್ಥೆಗೆ ಭೇಟಿ ನೀಡಿ ನಮ್ಮನ್ನುದ್ದೇಶಿಸಿ ಹಿತವಚನ ನೀಡಿದರು. ಅವರೊಂದಿಗೆ ಕರಾವಳಿ ಸುದ್ದಿಪತ್ರಿಕೆಯ ಸಂಪಾದಕರಾದ ಶ್ರೀ ರೋಷನ್ ಮಾರ್ಟಿಸ್ ರವರು ಸಂಸ್ಥೆಯ ಬೆಳವಣಿಗೆ ಹಾಗೂ ಸಂಸ್ಥೆಯ ಮುಂದಿನ ದಿನಗಳಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ರಶ್ಮಿತಾ, ಪೂರ್ಣಿಮಾ, ಲಿಖಿತಾ ರವರು ಪ್ರಾರ್ಥನೆ ಮಾಡಿ...
ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ತೆರಳಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಹಣ್ಣುಹಂಪಲು ವಿತರಿಸಿದರು. ಹುಟ್ಟುಹಬ್ಬದ ಆಚರಣೆಯನ್ನು ಸಮಾಜಮುಖಿ ಹಾಗೂ ಮಾನವೀಯ ಸೇವೆಯೊಂದಿಗೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸಂದೇಶ ನೀಡಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿ ಅಧ್ಯಕ್ಷ ಅಜರ್ ನಾವೂರು ಬೆಳ್ತಂಗಡಿ ವಿಧಾನಸಭಾ...
ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.25ರಂದು ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಈ ಹಿಂದೆ ಆ.26ರಂದು ಬುಧವಾರ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದರೂ, ಜಿಲ್ಲೆಯಲ್ಲಿ ಮಂಗಳವಾರ ಹಬ್ಬವನ್ನು ಆ.25ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಜೆಯನ್ನು ಒಂದು ದಿನ ಮುಂಚಿತವಾಗಿ ನೀಡಲು ಸರ್ಕಾರ ಆದೇಶಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಾರ್ಯಾಲಯದಿಂದ ಆ.24ರಂದು ಈ ಕುರಿತು ಅಧಿಕೃತ ಜ್ಞಾಪನ ಹೊರಡಿಸಲಾಗಿದೆ.2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿನ ಸರ್ಕಾರದ ಅಧಿಸೂಚನೆಯಂತೆ ಆ.26ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ...
ಬೆಳ್ತಂಗಡಿ; ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ
ಬೆಳ್ತಂಗಡಿ: ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು, ಕಾಂಗ್ರೆಸ್ ಪಕ್ಷವು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕೊಂಡೊಯ್ಯುವ ಹಾಗೂ ಅಭಿವೃದ್ಧಿ ಮತ್ತು ಜನಸೇವೆಗೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸಾರ್ವಜನಿಕ ಜೀವನದ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಪಕ್ಷದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ...
ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ತಪ್ಪಿಸಲು ಯತ್ನಿಸಿದ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡೇಟು
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದು ಉಡುಪಿಗೆ ಕರೆ ತರುತ್ತಿದ್ದ ಆರೋಪಿಯೋರ್ವ ತಪ್ಪಿಸಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡುಹಾರಿಸಿ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಮುಂಬೈನ ನಟೋರಿಯಸ್ ಗ್ಯಾಂಗ್ಸ್ಟರ್, ಬಿಹಾರ ರಾಜ್ಯದ ನಳಂದ ನಿವಾಸಿ ಅನುಜ್ ಪಾಟೀಲ್(35) ಎಂದು ಗುರುತಿಸಲಾಗಿದೆ. ಈತ ಡೇವಿಡ್ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ರಾಜು ಸಹಿತ ಮೂವರು ಶೂಟರ್ಗಳನ್ನು ಕಳುಹಿಸಿದ ಆರೋಪಿಯಾಗಿದ್ದಾನೆ.ಈ ಪ್ರಕರಣದ ತನಿಖೆ ಸಂಬಂಧ ಕುಂದಾಪುರ ಠಾಣೆಯ ಪೊಲೀಸ್ ಉಪನಿರೀಕ್ಷಕ...
ಉಡುಪಿ; ತಂದೆ ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಗ
ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು,...
ಶಾಸಕ ಹರೀಶ್ ಪೂಂಜ ಅವರಿಗೆಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ: ಬಂದಾರು, ಮೊಗ್ರು, ಕಣಿಯೂರು ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಕಾರ್ಯಕ್ರಮ ಆ.23 ರಂದು ಪದ್ಮುಂಜ ಸಿಎ ಬ್ಯಾಂಕ್ ನ ರೈತ ಸಭಾಭವನದಲ್ಲಿ ನಡೆಯಿತು. ಕಣಿಯೂರು ರೈತ ಬಂಧು ಮಾರುತಿಪುರ ಸಂಸ್ಥೆಯ ಮಾಲಕರಾದ ಶಿವಶಂಕರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ ಗುತ್ತು, ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ಪಿಲಿಗೂಡು ಚಾಮುಂಡೇಶ್ವರಿ ದೇವಸ್ಥಾನದ ಶಿಲ್ಪಿ ಪದ್ಮನಾಭ ಶಿಲ್ಪಿ, ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ...
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ
ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪಿಕ್ಅಪ್ ವಾಹನ ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 23ರ ಬೆಳಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಯೊಂದಿಗೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಬಳಿ KA 19 D 0948 ನೋಂದಣಿಯ ಪಿಕ್ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.ಈ ವೇಳೆ ವಾಹನದಲ್ಲಿ...
ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ
ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್ 29ರ ಶನಿವಾರದಿಂದ ಆಗಸ್ಟ್ 31ರ ಸೋಮವಾರದವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಆರಾಧನ ಮಹೋತ್ಸವದ ಕುರಿತು ಸಂಪೂರ್ಣ ಮಾಹಿತಿಯನ್ನು ವಿಚಾರಿಸಿ, ಕಾರ್ಯಕ್ರಮದ ಯಶಸ್ಸಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾಗೂ ತಮ್ಮ...















