ಮುಂಡಾಜೆ ಗುಡ್ಡಕ್ಕೆ ಬೆಂಕಿ

0

ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಸುಮಾರು 20 ಅಡಿಯಿಂದ ಜಾರಿ ಬಿದ್ದ ಘಟನೆಯು ನಡೆದಿದ್ದು, ಅದೃಷ್ಟವಶಾತ್ ಗಾಯಗೊಳ್ಳದೆ ಅಪಾಯದಿಂದ ಪಾರಾಗಿದ್ದಾರೆ.ಗುಡ್ಡವನ್ನು ಸುಟ್ಟ ಬೆಂಕಿ ಸಮೀಪದಲ್ಲಿರುವ ರಬ್ಬರ್ ತೋಟಕ್ಕೂ ವ್ಯಾಪಿಸಿದ್ದು ರಬ್ಬರ್ ಗಿಡಗಳಿಗೂ ಹಾನಿ ಉಂಟಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದು ಬಂದಿಲ್ಲ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ; ಶ್ರದ್ಧಾ-ಭಕ್ತಿಯಂದಿಗೆ ನಿಸ್ವಾರ್ಥವಾಗಿ ಪಾದಯಾತ್ರೆ ಮಾಡಿದಾಗ ಹೆಚ್ಚಿನ ಫಲ  ಡಾ. ಹೆಗ್ಗಡೆ

0

ಧರ್ಮಸ್ಥಳ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದ ಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳನ್ನು ಪ್ರವಚನ ಮಂಟಪದಲ್ಲಿ ಅಭಿನಂದಿಸಿ ಮಾತನಾಡಿದರು.ವಿಷಕಂಠನಾದ ಶ್ರೀ ಮಂಜುನಾಥಸ್ವಾಮಿಗೆ ಎಲ್ಲಾ ದೋಷಗಳನ್ನು ಸ್ವೀಕರಿಸಿ ಲೋಕಕಲ್ಯಾಣ ಮಾಡುವ ಶಕ್ತಿ ಇದೆ. ಆದುದರಿಂದಲೇ ಅಪಘಾತದಲ್ಲಿ ಹಾಗೂ ಅಪಮೃತ್ಯುವಿನಲ್ಲಿ ಸತ್ತವರ ಮೋಕ್ಷಪ್ರಾಪ್ತಿಗಾಗಿ ಭಕ್ತರು ಧರ್ಮಸ್ಥಳಕ್ಕೆ...

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ‌ ಆರೋಪಿಯನ್ನು  ಬಂಧಿಸಿದ ವೇಣೂರು ಪೊಲೀಸರು

0

ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯೋಗೀಶ್ ಪೂಜಾರಿ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನವಾದ ಬಳಿಕ ಬಿಡುಗಡೆಯಾಗಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ, 2015 ರಿಂದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕವಲಿಗುಡ್ಡೆ ಮನೆಯ ಯೋಗೀಶ್ ಪೂಜಾರಿ(35) ಎಂಬಾತನನ್ನು ವೇಣೂರು ಪೊಲೀಸರು ಫೆ.13 ರಂದು...

ಬೆಳ್ತಂಗಡಿ ಅಗ್ನಿ ಆಕಸ್ಮಿಕ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ; ನಗರದ‌ ಸಂತೆಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಕಟ್ಟಡಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ಇಂದು ಬೆಳಗ್ಗೆ ನಗರದ ಸಂತೆಕಟ್ಟೆಯ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು.

ಉಜಿರೆ ತನುಷ್ ಶೆಟ್ಟಿ ದೂರು ಜಿತೇಂದ್ರ ಕೊಟ್ಟಾರಿ ವಿರುದ್ದ ಪ್ರಕರಣ‌ದಾಖಲಿಸಲು ನ್ಯಾಯಾಲಯ ಆದೇಶ

0

ಬೆಳ್ತಂಗಡಿ; ಉಜಿರೆಯ ತನುಷ್ ಶೆಟ್ಟಿ ಹಾಗೂ ಇತರರು ನೀಡಿದ ಖಾಸಗಿ ದೂರನ್ನು ಪುರಸ್ಕರಿಸಿ ಮಂಗಳೂರಿನ ಉದ್ಯಮಿ ಜಿತೇಂದ್ರ ಕೊಟ್ಟಾರಿ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ಅದರಂತೆ ಇದೀಗಮಂಗಳೂರು ಪೊಲೀಸರು ಜಿತೇಂದ್ರ ಕೊಟ್ಟಾರಿ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಹಿನ್ನಲೆಮಂಗಳೂರಿನಲ್ಲಿ 2024ರ ಅ 9ರಂದು ಮಂಗಳೂರಿನಲ್ಲಿ ವಾಹನ ಚಾಲನೆಯ ವೇಳೆ ಓವರ್ ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ  ಉದ್ಯಮಿ ಜಿತೇಂದ್ರಕೊಟ್ಟಾರಿ ಹಾಗೂ ತನುಷ್ ನಡುವೆ ವಾಗ್ವಾದ ನಡೆದಿದ್ದು ಈ ವೇಳೆ ಜಿತೇಂದ್ರ ಕೊಟ್ಟಾರಿ ಪಿಸ್ತೂಲು ತೆಗೆದು ಕೊಲೆ ಬೆದರಿಕೆ ಹಾಕಿದರು...

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಗ್ಯಾಸ್ ಸೋರಿಕೆ ಸ್ಪೋಟ; ಬೆಂಕಿಗೆ ವ್ಯಾಪಕ ನಾಶ

0

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ. ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ...

ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು

0

ಬೆಳ್ತಂಗಡಿ; ಬಚ್ವಲು ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಬೆಂಕಿತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಮಹಿಳೆ ನಡ ಕನ್ಯಾಡಿ ನಿವಾಸಿ ಮಂಜಪ್ಪ ನಾಯ್ಕ ಎಂಬವರ ಪತ್ನಿ ಮೀನಾಕ್ಷಿ (63) ಎಂಬವರಾಗಿದ್ದಾರೆ.ಇವರು ಫೆ. 7ರಂದು ಮನೆಯ ಬಚ್ಚಲು ಕೋಣೆಯಲ್ಲಿ ನೀರು ಬಿಸಿ ಮಾಡಲು ಬೆಂಕಿ ಹಚ್ಚುವ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿದೆ ಇವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ...

ಬೆಳ್ತಂಗಡಿ; ರೆಖ್ಯ ದರೋಡೆ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಲೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ನಂಜುಂಡ ಮಾಗಡಿ ಎಂಬಾತನಾಗಿದ್ದಾನೆ2017 ರಲ್ಲಿ ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ಈತ ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾ ಈತನನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಲಯವು...

13 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಆಲ್ವಿನ್ ರಾಡ್ರಿಗಸ್(53) ಎಂಬಾತನಾಗಿದ್ದಾನೆಆರೋಪಿ 2013ರಲ್ಲಿ ಮಡಂತ್ಯಾರು ನಿವಾಸಿ ಚಿತ್ರಶೇಖರ್ ಎಂಬವರ ಮೇಲೆ ಹಲ್ಲೆ ನಡೆಸಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿತ್ತು.ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬೆಂಗಳೂರಿನ ಸಂಪಿಗೆ ರಾಮನಗರದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಧರ್ಮಸ್ಥಳ ಪ್ರಕರಣ ವಿಚಾರಣೆ ಮಾ.5 ಕ್ಕೆ ಮದೂಡಿಕೆ

0

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ವರದಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದವರನ್ನು ಸಂತ್ರಸ್ತರು ಎಂದು ಪರಿಗಣಿಸಬೇಕು ಎಂಬ ಅರ್ಜಿಯ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡಲಾಗಿದೆಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ. 13ರಂದು ಪ್ರಕರಣದ ವಿಚಾರಣೆಗೆ ದಿನ ನಿಗದಿಯಾಗಿತ್ತು ಇಂದು ಮಹೇಶ್ ಶೆಟ್ಟಿ ತೊಮರೋಡಿ ಪರ ವಕೀಲರು ವಾದ ಮಂಡಿಸಬೇಕಾಗಿತ್ತು ಆದರೆ ಪ್ರಭಾರ ನ್ಯಾಯಾಧೀಶರು ಲಭ್ಯವಿಲ್ಲದ ಕಾರಣ ಮಾ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.