ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ
ಬೆಳ್ತಂಗಡಿ; ಪೌರ ಕಾರ್ಮಿಕರು ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಸರ್ಕಾರ ಅತ್ಯಂತ ದುರ್ಬಲ ವರ್ಗದವರ ಪರವಾಗಿ ಕೆಲಸ ಮಾಡುತ್ತದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ರವರು ಹೇಳಿದರು. ಅವರು ಸೋಮವಾರ ಧರ್ಮಸ್ಥಳದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪೌರ ಕಾರ್ಮಿಕರು ಹಾಗೂ ಸ್ವಚ್ಚತಾ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸರ್ಕಾರದ ಕೆಲವೊಂದು ನಿಯಮಾವಳಿಗಳನ್ನು ಬದಲಾವಣೆ ಮಾಡುವ ಸಂಬಂಧ ಮುಖ್ಯಮಂತ್ರಿ ,...
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀರಾಮಶಿಶು ಮಂದಿರದ ಕೃಷ್ಣೋತ್ಸವ; ಕಾಶಿ ಶೆಟ್ಟಿ ವಿದ್ಯಾ ಮಂದಿರ, ಅಡುಗೆ ಕೋಣೆ ಉದ್ಘಾಟನೆ
ಮೊಗ್ರು;. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರವಾಯನಕೆರೆ ಇವರ ಸ್ಮರಣಾರ್ಥ "ಕಾಶಿ ಶೆಟ್ಟಿ ವಿದ್ಯಾ ಮಂದಿರ" ಹಾಗೂ ಶಾಸಕರಾದ ಹರೀಶ್ ಪೂಂಜಾರವರ ನೆರವಿನಿಂದ ಮಕ್ಕಳ ಅನ್ನ ಯಜ್ಞಕ್ಕಾಗಿ ನಿರ್ಮಾಣಗೊಂಡ ಅಡುಗೆ ಕೊಠಡಿಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ನೆರವೇರಿತು. ಉದ್ಘಾಟನೆ ನೆರವೇರಿಸಿದ ಶ್ರೀ...
ಬೆಳ್ತಂಗಡಿ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಇಂದಬೆಟ್ಟು ಗ್ರಾಮದ ಬೀಟ್ ಸಿಬ್ಬಂದಿಗೆ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಕೋಳಿಗಳ ಕಾಲಿಗೆ ಬಾಳು ಕಟ್ಟಿ, ಅವುಗಳನ್ನು ಎದುರುಬದುರು ಹಾರಿಸಿ ಹಣವನ್ನು ಪಣವಾಗಿರಿಸಿ ಕೋಳಿ ಅಂಕ ನಡೆಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಪೊಲೀಸರನ್ನು ಕಂಡ ಕೆಲವರು ಕೋಳಿಗಳೊಂದಿಗೆ...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸೆ.10,11 ರಂದು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ”
ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ತಿಳಿಸಿದರು.ಅವರು ಸೋಮವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸೆ. 10 ರಂದು ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಂಗಳೂರು ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟಿಸುವರು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡುವರು.ಪ್ರಾಂಶುಪಾಲ ಪ್ರೊ. ಪಿ....
ಬೆಳ್ತಂಗಡಿ : ಮಾದಕವಸ್ತು ವಿರುದ್ಧ ಪೊಲೀಸರಿಂದ ಮುಂದುವರಿದ ಕಾರ್ಯಾಚರಣೆ ಇಬ್ಬರ ಬಂಧನ ಮೂವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು. ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಜೈಲಿಗಟ್ಟಿ ಮಾದಕವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ.ಎಮ್ ಸೆ.5 ರಂದು ಸಮಯ ಸಂಜೆ ಸುಮಾರು 3:30 ಗಂಟೆಗೆ ಠಾಣೆಯಿಂದ ಇಲಾಖಾ ಜೀಪಿನಲ್ಲಿ ಸಿಬ್ಬಂದಿಗಳ ಜೊತೆಯಲ್ಲಿ ಸಮಯ ಸುಮಾರು 3:45 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕರೆಯ ಸರಕಾರಿ ಪ್ರೌಢ ಶಾಲೆ ಮೈದಾನದ ಬಳಿ ಬಂದು ವಾಹನವನ್ನು ನಿಲ್ಲಿಸಿ ಮೈದಾನದ ಕೆಳಭಾಗದ ಗುಡ್ಡ-ಕಾಡು ಪ್ರದೇಶಕ್ಕೆ...
ಉಜಿರೆ; ಕೊನೆಗೂ ಅರಣ್ಯ ಸೇರಿದ ಕಾಡನೆ ಇಂಜಿನಿಯರಿಂಗ್ ಕಾಲೇಜ್ ಸಮೀಪ ಬೀಡು ಬಿಟ್ಟಿದ್ದ ಕಾಡಾನೆ
ಬೆಳ್ತಂಗಡಿ; ಉಜಿರೆಯ ಇಂಜಿನಿಯರಿಂಗ್ ಕಾಲೇಜಿನ ಕಂಪೌಂಡ್ನೊಳಗೆ ಸೇರಿಕೊಂಡು ಆತಂಕಮೂಡಿಸಿದ ಕಾಡನೆಯನ್ನು ಕೊನೆಗೂ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಹಾಗೂ ಅನೆ ಕಾರ್ಯಪಡೆ ಯಶಸ್ವಿಯಾಗಿದೆ.ಬೆಳಗ್ಗಿನಿಂದ ದಿನವಿಡೀ ಕಾರ್ಯಾಚರಣೆ ನಡೆಸಿದ ಬಳಿಕ ರಾತ್ರಿ 7.30 ರ ಸುಮಾರಿಗೆ ಕಾಡಾನೆ ಅಲ್ಲಿಂದ ಅರಣ್ಯದತ್ತ ತೆರಳಿದೆ.ಸಂಜೆಯ ವೇಳೆ ಕಾರ್ಯಾಚರಣೆ ನಡುವೆ ನೇರವಾಗಿ ಪೇಟೆಯತ್ತ ನುಗ್ಗಲು ಕಾಡಾನೆ ಪ್ರಯತ್ನಿಸಿದಾಗ ಆನೆ ಕಾರ್ಯಪಡೆ ಗುಂಡು ಹಾರಿಸಿ ಪಟಾಕಿ ಸಿಡಿಸಿ ಆನೆಯನ್ನು ಹಿಮ್ಮಟಿಸುವ ಕಾರ್ಯ ಮಾಡಿದರು.ಧ್ವನಿವರ್ಧಕ ಮೂಲಕ ಉಜಿರೆ ಪೇಟೆಯಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿಯ ವೇಳೆ ಜನರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ...
ಧರ್ಮಸ್ಥಳ: ಹದಗೆಟ್ಟ ನೇರ್ತನೆ ರಸ್ತೆ; ಟಿ.ವಿ ದೇವಸ್ಯ ನೇತೃತ್ವದಲ್ಲಿ ಸ್ಥಳೀಯರಿಂದ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರವೇ ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ಮಾಜಿ ಗ್ರಾ.ಪಂ ಸದಸ್ಯ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಭಾನುವಾರ ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿದರು.ಮಳೆ ಕಡಿಮೆಯಾದರೂ ಗ್ರಾಮಪಂಚಾಯತು ಅಡಳಿತ ಕನಿಷ್ಟ ದುರಸ್ತಿಗೂ ಮುಂದಾಗಿರಲಿಲ್ಲ ಈ ಹಿನ್ನಲೆಯಲ್ಲಿ ಇದೀಗ ಸ್ಥಳೀಯರ ನೇತೃತ್ವದಲ್ಲಿ ರಸ್ತೆಯ ದುರಸ್ತಿ ಕಾರ್ಯವನ್ನು ಮಾಡಲಾಗಿದೆ. ತಮ್ಮದೇ ಖರ್ಚಿನಲ್ಲಿ ಕಲ್ಲಿನ ಹುಡಿಯನ್ನು ತಂದು ಸುಮಾರು ಎರಡು ಕಿ.ಮೀ ವರೆಗೆ ರಸ್ತೆಯಲ್ಲಿ ಬಿದ್ದಿದ್ದ...
ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವುಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕಳೆದ ಜು.20 ರಿಂದ ದಿಡುಪೆ ಫಾಲ್ಸ್ ( ಕಡಮಗುಂಡಿ) ಜಲಪಾತ ವೀಕ್ಷಣೆಗೆ ಪ್ರವೇಶ ನಿಷೇಧ ಹೇರಲಾಗಿತ್ತು.
ಡ್ರಗ್ಸ್ ಮಾಫಿಯಾ ವಿರುದ್ದ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಮಾರಾಟಗಾರನ ಬಂಧನ ಗಾಂಜಾ ವಶಕ್ಕೆ
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಠಾಣೆಯ ಸಬ್ ಇನ್ಸ್ಪೆಕ್ಟರ್ ಆನಂದ್.ಎಂ ಮತ್ತು ತಂಡ ಸೆ.4 ರಂದು ರಾತ್ರಿ 9 ಗಂಟೆಗೆ ಇಲಾಖಾ ಜೀಪಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ನಗರದ ರೆಂಕೆದಗುತ್ತು ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಓರ್ವ ಯುವಕ ಪ್ಲಾಸ್ಟಿಕ್ ಚೀಲವೊಂದನ್ನು ಹಿಡಿದು ಬುಲ್ಲೆಟ್ ಬೈಕ್ ಬಳಿ ನಿಂತುಕೊಂಡಿದ್ದಾಗ ಈ ಬಗ್ಗೆ ಆತನನ್ನು ನಿಲ್ಲಿಸಿ ವಿಚಾರಿಸಿದಾಗ...
ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳಿಂದ ಆಗಬೇಕು: ಹರೀಶ್ ಪೂಂಜ
ಬೆಳ್ತಂಗಡಿ;: ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು ದೂರು, ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನ ಆರಂಭಿಸಲಾಗಿದ್ದು ಬೆಳ್ತಂಗಡಿ ತಾಲೂಕು ಮಟ್ಟದ ವೇಣೂರು ಹೋಬಳಿಯ ಪ್ರಜಾಸೇವಾ ಆಂದೋಲನ ಸಭೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಸೆ.5ರಂದು ಬೆಳಗ್ಗೆ ವೇಣೂರು ಭರತೇಶ ಸಮುದಾಯ ಭವನದಲ್ಲಿ ನಡೆಯಿತು. ಸಭೆಯನ್ನು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ ಅವರು ಮಾತನಾಡಿ, ಬೆಳ್ತಂಗಡಿ ತಾಲೂಕಿನ ಜನತೆಗೆ ಈ ಕಾರ್ಯಕ್ರಮ ಹೊಸದೇನಲ್ಲ....















