ಬೆಳ್ತಂಗಡಿ : ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

0

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ  ಸತೀಶ್ @ ಸ್ಕೋರ್ಪಿಯಾ ಸತೀಶ್(35) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,ವೇಣೂರ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,ಪೂತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ,ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ. ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ...

ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ

0

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮ ಇನ್ಟ್ರಾ ಗ್ರಾಂ ನಲ್ಲಿ ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಡಾ.ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಕುಂದುತರುವ ಪ್ರಯತ್ನ ನಡೆಸಿ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ಹಾನಿಯುಂಟು ಮಾಡುವ ಪ್ರಯತ್ನ ನಡೆಸಿದ್ದಲ್ಲದೆ ಸಮಾಜದಲ್ಲಿ ವೈರತ್ವ ದ್ವೇಷ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ ಬಗ್ಗೆ ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರು ನೀಡಿದ ದೂರಿನಂತೆ...

ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

0

ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಮೇ 6 ರಂದು ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಇವರು ಚಲಾಯಿಸುತ್ತಿದ್ದ ಬೈಕ್ ಗೆ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು(ಮೇ...

ಬೆಳ್ತಂಗಡಿ : ಧರ್ಮಸ್ಥಳ ಮನೆಯ ಅಂಗಳದಲ್ಲಿ ನೇಣುಬಿಗಿದು ವೃದ್ಧ ಆತ್ಮಹತ್ಯೆ

0

ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ.6 ರಂದು ರಾತ್ರಿ 11 ಗಂಟೆಯಿಂದ ಮೇ.7 ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್ ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐತಪ್ಪ ಪೂಜಾರಿರವರ ಸೊಸೆ ಬೆಳಗ್ಗೆ 6 ಗಂಟೆಗೆ ಎದ್ದು ಮನೆಯ ಅಂಗಳಕ್ಕೆ ಬಂದಾಗ ಆತ್ಮಹತ್ಯೆ...

ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್   ಮೊಬೈಲ್  ಅನ್ನು ಎಸ್ ಐ.ಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ...

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ. 11 ವರ್ಷದ ನಿಷ್ಕ್ ಅವರು ಏಪ್ರಿಲ್ 20ರಿಂದ 29ರವರೆಗೆ ಡೆಹ್ರಾಡೂನ್‌ನಲ್ಲಿ ನಡೆದ 10 ದಿನಗಳ ಐಸ್ ಹಾಕಿ ರಾಜ್ಯ ಶಿಬಿರದಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ. ಜೂನ್ ತಿಂಗಳ ಕೊನೆಯ...

ಬೆಳ್ತಂಗಡಿ : ಲಾಯಿಲ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

0

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು - ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.ಸ್ಥಳೀಯ ನಿವಾಸಿಗೆ ದುರ್ವಾಸನೆ ಬಂದಿದ್ದರಿಂದ ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತನ ಅಂದಾಜು ಸುಮಾರು 45 ರಿಂದ...

ಬೆಳ್ತಂಗಡಿ : ಬೆಳಾಲು ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

0

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ(49) ಮೃತಪಟ್ಟರಾಗಿದ್ದಾರೆ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು...

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಬಿಜೆಪಿ ಗೆಲುವ; ಬೆಳ್ತಂಗಡಿ  ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

0

ಬೆಳ್ತಂಗಡಿ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ಕಚೇರಿ ಮುಂಭಾಗದಲ್ಲಿ ಸಿಡಿಮದ್ದು ಸಿಡಿಸಿ, ಜೈ ಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಲಾಯಿತು. ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಮಾತಾಡಿ ಪಂಚ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ, ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದನೆಯ 15 ವರ್ಷದ ಆಡಳಿತವನ್ನು ಮತದಾರರು ತಿರಸ್ಕಾರ...

ನಿಷೇಧಿತ ಎಂ.ಡಿ.ಎಂ.ಎ ಸಾಗಿಸುತ್ತಿದ್ದ ಇಬ್ಬರ ಬಂಧನ 42 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಪತ್ತೆ.

0

ಬೆಳ್ತಂಗಡಿ; ಬಂಟ್ವಾಳದಲ್ಲಿ ನಿಷೇಧಿತ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇವರಿಂದ 42 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಯನ್ನು ಪತ್ತೆಹಚ್ಚಿದ್ದಾರೆ.ಬಂಧಿತ ಆರೋಪಿಗಳುಮೊಹಮ್ಮದ್‌ ನಿಜಾಮುದ್ದೀನ್‌ (30) ಹಾಗೂ ಆತನ ಸಹೋದರ ಮೊಹಮದ್‌ ಶಾಹೀಂ (19) ಎಂಬವರಾಗಿದ್ದಾರೆ. ಮೇ 2 ರಂದು ಸಂಜೆ, ಮಂಜುನಾಥ ಟಿ, ಪೊಲೀಸ್‌ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆರವರಿಗೆ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಮಂಚಿ ಗ್ರಾಮದ ಪಂಜಾಲ ಕ್ರಾಸ್‌ ಎಂಬಲ್ಲಿಗೆ...