ಧರ್ಮಸ್ಥಳ; ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

0

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50 ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದುಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ,...

ಬೆಳ್ತಂಗಡಿ; ಅಖಿಲ ಭಾರತ ಮುಷ್ಕರ ಕಾರ್ಮಿಕರ ಬೃಹತ್ ಪ್ರತಿಭಟನೆ ತಸ್ತೆ ತಡೆ

0

ಬೆಳ್ತಂಗಡಿ; ಸಂವಿಧಾನ ಬದ್ದವಾದ ಕಾರ್ಮಿಕ ವರ್ಗದ, ರೈತ ವರ್ಗದ ಮೂಲಭೂತ ಹಕ್ಕುಗಳ ನಿರಾಕರಿಸುವಂತಹ, ಕಾರ್ಮಿಕರು ತ್ಯಾಗ ಬಲಿದಾನಗಳಿಂದ ಕಾನೂನು ರೂಪವಾಗಿ ಪಡೆದ ಹಕ್ಕು ಸವಲತ್ತುಗಳನ್ನು ರದ್ದು ಪಡಿಸಿ ಕಾರ್ಪರೇಟ್ ಕಂಪಪೆನಿಗಳ ಪರವಾದ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿ ಕೇಂದ್ರದ ಮೋದಿ ಸರಕಾರ ಭಾರತೀಯರಿಗೆ ದ್ರೋಹ ಎಸಗಿದ ಕೇಂದ್ರ ಸರಕಾರದ ಕಾರ್ಮಿಕ ದ್ರೋಹವನ್ನು ಎಂದೂ ಸಹಿಸೆವು ಎಂದು ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.ಅವರು ಇಂದು ಕೇಂದ್ರದ ಎನ್.ಡಿ.ಎ. ಸರಕಾರದ ರೈತ ವಿರೋದಿಯಾಗಿ, ಕಾರ್ಮಿಕ ಹಿತಕ್ಕ ಧಕ್ಕೆ ತರುವಂತಹ ದೋರಣೆಯನ್ನು ಜಾರಿ...

ಬೆಳ್ತಂಗಡಿ : ಬೆಳಾಲು ಗ್ರಾ. ಪಂ. ಬಿಲ್ಲು ಸಂಗ್ರಾಹಕ ಶಶಿಧರ್ ಕರ್ತವ್ಯದಿಂದ ಅಮಾನತು

0

ಬೆಳ್ತಂಗಡಿ : ಬೆಳಾಲು ಗ್ರಾಮ ಪಂಚಾಯತ್ ಬಿಲ್ಲು ಸಂಗ್ರಾಹಕ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಗ್ರಾಮಪಂಚಾಯತಿನ ಸದಸ್ಯರು ತುರ್ತು ಸಭೆಯಲ್ಲಿ ಚರ್ವಿಸಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ನಿರ್ಣಯಿಸಿದರು. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಂಡು ಅವರನ್ನು ಫೆ.11 ರಂದು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಪಿಕಪ್ & ಟಿಪ್ಪರ್ ನಲ್ಲಿ ಕರೆದೊಯ್ದ ಪ್ರಕರಣ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು 

0

ಬೆಳ್ತಂಗಡಿ : ಕಾನೂನು ಬಾಹಿರವಾಗಿ ಸರಕು ಸಾಗಣೆ ಎರಡು ವಾಹನದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಬಳೆಂಜ ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು KA-21-A-8776 ಪಿಕಪ್ ಮತ್ತು KA-70-2596 ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ...

ಸ್ವಂತ ನಿಧಿ ಕ್ರಿಯಾ  ಯೋಜನೆ ಪ್ರಕರಣದಲ್ಲಿ ಕುವೆಟ್ಟು ಗ್ರಾ.ಪಂ ನಿರ್ಣಯಗಳಿಗೆ ಮಧ್ಯಂತರ ತಡೆ – ಕರ್ನಾಟಕ ಹೈಕೋರ್ಟ್

0

ಬೆಂಗಳೂರು: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಏಕಸದಸ್ಯ ಪೀಠದಲ್ಲಿ ಮಾನ್ಯ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮುಂದಿರುವ ಅರ್ಜಿಯಲ್ಲಿ, ಕುವೆಟ್ಟು ಗ್ರಾಮ ಪಂಚಾಯತ್‌ ಹೊರಡಿಸಿದ್ದ 15.11.2025 ಹಾಗೂ 10.12.2025ರ ನಿರ್ಣಯಗಳ ಅನುಷ್ಠಾನಕ್ಕೆ ತಾತ್ಕಾಲಿಕ ಮಧ್ಯಂತರ ತಡೆ ಆದೇಶ ನೀಡಲಾಗಿದೆ. 2025–26 ಸಾಲಿನ ಸ್ವಂತ ನಿಧಿ ಕ್ರಿಯಾ ಶೀಲ ಯೋಜನೆಯ ಅನುಷ್ಠಾನದಲ್ಲಿ ವಾರ್ಡ್ ನಂ.1 ಅನ್ನು ಹೊರತುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ, ವಾರ್ಡ್ ನಂ.1 ರ ಪಂಚಾಯತ್ ಸದಸ್ಯರಾದ ಮುಸ್ತಫಾ ಗುರುವರಾಯಕರೆ, ಸಮೀರ್ ಸುನ್ನತ್ಕೆರೆ ಹಾಗೂ ಮೈಮೂನಾ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. 27 ಜನವರಿ 2026 ರಂದು ನ್ಯಾಯಾಲಯವು...

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಪಿಕಪ್ & ಟಿಪ್ಪರ್ ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ

0

ಬೆಳ್ತಂಗಡಿ : ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು KA-21-A-8776 ನಂಬರಿನ ಪಿಕಪ್ ಮತ್ತು KA-70-2596 ನಂಬರಿನ...

ಬೆಳ್ತಂಗಡಿ : ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ವರ್ಗಾವಣೆ

0

ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಇನ್ಸ್ಪೆಕ್ಟರ್ ಬಿ.ಜಿ ಸುಬ್ಬಾಪುರ ಮಠ ಗದಗ ಜಿಲ್ಲೆಯ ಮುಳಗುಂದ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಹುದ್ದೆಗೆ ಯಾರನ್ನು ನಿಯುಕ್ತಿಗೊಳಿಸದೇ ಇದ್ದು ಮುಂದಿನ ಪ್ರಕ್ರಿಯೆಯಲ್ಲಿ ಇನ್ಸ್ಪೆಕ್ಟರ್ ನೇಮಕವಾಗಲಿದೆ.

ತೆಕ್ಕಾರು ಪಿಕಪ್ ಪಲ್ಟಿ ಚಾಲಕ ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ. 11ರಂದು ನಡೆದಿದೆ.ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ.ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸುವ ವೇಳೆ ವಾಹನ ಪಲ್ಟಿಯಾಗಿದೆ. ಮೇಲ್ಬಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿದೆ. ಚಾಲಕ ವಾಹನದ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಪಿಕಪ್ ವಾಹನದಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

0

ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆರೋಗ್ಯ ಸೇವೆ ನೀಡುತ್ತಿರುವುದು ಅತ್ಯುತ್ತಮ ಸೇವೆಯಾಗಿದೆ ಎಂದು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಯಶೋಧರ ಅವರು ಹೇಳಿದರು.ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಚಾರ್ಮಾಡಿಯಲ್ಲಿ ಫೆ.11 ರಂದು ತೆರೆಯಲಾದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು.ಮಹಾಶಿವರಾತ್ರಿ...

ತೋಟತ್ತಾಡಿಯಲ್ಲಿ ಗೇರು ತೋಟದಲ್ಲಿ ಬೆಂಕಿ ಆಕಸ್ಮಿಕ

0

ಬೆಳ್ತಂಗಡಿ;  ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್,ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ...