ಬೆಳ್ತಂಗಡಿ : ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಬಂಧಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸರು

0

ಬೆಳ್ತಂಗಡಿ : ಹಲವು ಸಮಯಗಳಿಂದ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್...

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಎಸ್.ಐ.ಟಿ ತಂಡ ಧರ್ಮಸ್ಥಳದಲ್ಲಿ  ತನಿಖೆ ಆರಂಭ

0

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಎಂಬಾತನನ್ನು 17-12-2022 ರಂದು ಹಲ್ಲೆ ನಡೆಸಿ ಬಳಿಕ 18-12-2022 ರಂದು ಕೊಲೆ ಮಾಡಿ ತೋಟದಲ್ಲಿ ಬೆತ್ತಲೆಗೊಳಿಸಿ ಹಾಕಿದ್ದರು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು. ಈ ಪ್ರಕರಣ...

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಾರಂಭೋತ್ಸವ ವಿವಿಧ ಕಾರ್ಯಾಲಯಗಳ ಉದ್ಘಾಟನೆ

0

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಾರಂ ಭೋತ್ಸವವು ಮಾ.2ರಂದು ನಡೆಯಿತು. ಉಡುಪಿ ಹಂಗಾರಕಟ್ಟೆ ಬಾಳೆಕುದ್ರು ಮಠದ ಪರಮಪೂಜ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಡ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ಶೀಧರ ಜಿ. ಭಿಡೆಮನೆ ಮುಂಡಾಜೆ, ಬೆಂಗಳೂರು ಕ್ಷೇಮವನನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್‌,...

ಬೆಳ್ತಂಗಡಿ : ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ ಬಿಹಾರದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

0

ಬೆಳ್ತಂಗಡಿ : ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಬಂದು ಚಿನ್ನವನ್ನು ಪಡೆದು ರಾಸಾಯನಿಕ ಬಳಸಿ ಕರಗಿಸಿ ತೆಗೆದುಕೊಂಡುಹೋಗಿ ವಂಚನೆ ಮಾಡಿ ಪರಾರಿಯಾದ ಪ್ರಕರಣ ಸಂಬಂಧ ವೇಣೂರು ಪೊಲೀಸರು 18 ದಿನದಲ್ಲಿಯೇ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಮಹಿಳೆಯೊಬ್ಬರ ಮನೆಗೆ ಸೇಲ್ಸ್ ಮ್ಯಾನ್ ರೂಪದಲ್ಲಿ ಆಗಮಿಸಿ ಚಿನ್ನ ದ ಒಡವೆಗಳನ್ನು ತೊಳೆದಯ ಪಾಲಿಶ್ ಮಾಡಿಕೊಡುವ ನೆಪದಲ್ಲಿ ಚಿನ್ನವನ್ನು ಫೆ.10 ರಂದು ಪಡೆದು ಕರಗಿಸಿ ವಂಚನೆ ಮಾಡಿ ಪರಾರಿಯಾಗಿದ್ದ ಪ್ರಕರಣ ಸಂಬಂಧ ಆರೋಪಿ ಬಿಹಾರ ರಾಜ್ಯದ ಸುಫೋಲ್ ಜಿಲ್ಲೆಯ ತ್ರಿವೇಣೆಗಂಝ್...

ಉಜಿರೆ ಮನೆ ಕೆಡವಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

0

ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ ಸಂಪೂರ್ಣವಾಗಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದಿದ್ದು ಇದರ ವಿಡಿಯೋ ಮಾಡಿದ ಬಾಲಕಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ರಫೀಕ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆ.27 ರಂದು ರಾಜೀವಿ ಮತ್ತು ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ರಫೀಕ್ ಎಂಬಾತ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಮನಗಂಡು ಮನೆಯೊಳಗೆ ಅಕ್ರಮವಾಗಿ ಪ್ರವೇಶ...

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರಣ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

0

ಬೆಳ್ತಂಗಡಿ: (ಫೆ-28): ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು...

ಉಜಿರೆಯಲ್ಲಿ ಸರಕಾರಿ ಜಾಗದಲ್ಲಿದ್ದ ಮನೆ ಧ್ವಂಸ ಜೀವಬೆದರಿಕೆ ಪೊಲೀಸರಿಗೆ ದೂರು

0

ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ ಸಂಪೂರ್ಣವಾಗಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ನಡೆದಿದ್ದು ಇದರ ವಿಡಿಯೋ ಮಾಡಿದ ಅಪ್ರಾಪ್ತ ಬಾಲಕಿಗೆ ಈತ ಬೆದರಿಕೆಯನ್ನೂ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.ರಾಜೀವಿಯವರು ಸದ್ರಿ ಮನೆಯಲ್ಲಿ ಪತಿ‌ ಹಾಗೂ ಮಗಳೊಂದಿಗೆ ವಾಸವಾಗಿದ್ದರು.ಫೆ.27 ರಂದು 11.00 ಗಂಟೆಗೆ ರಾಜೀವಿ ಮತ್ತು ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ...

ಬೆಳ್ತಂಗಡಿ;  ಅಕ್ರಮ ಗೋಹತ್ಯಾ ಪ್ರಕರಣ ದಾಖಲು. ಆರೋಪಿಯ ಮನೆ ಆವರಣ ಜಪ್ತಿ.

0

ದಿನಾಂಕ: 26.02.2026 ರಂದು ರಾತ್ರಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸುತೇಶ್‌ ಕೆ ಪಿ ರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳದಲ್ಲಿದ್ದ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು...

ಧರ್ಮಸ್ಥಳ ಮರದಿಂದ ಬಿದ್ದು ವ್ಯಕ್ತಿ ಸಾವು

0

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ಲ ಕೆಂಬರ್ಜೆ ನಿವಾಸಿ ಸುರೇಶ್ ಗೌಡ (40)ರವರು ಮರದಿಂದ ಬಿದ್ದು ಮೃತ ಪಟ್ಟ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಮಾವಿನಕಾಯಿ ಕೀಳಲು ಮರ ಹತ್ತಿದ ಸುರೇಶ್ ಅವರು ಆಕಸ್ಮಿಕವಾಗಿ ಮರದಿಂದ ಬಿದ್ದ ಪರಿಣಾಮವಾಗಿ ಅಲ್ಲಿಯೇ ಸಾವನಪ್ಪಿದ್ದರು. ಮೃತರು ಪತ್ನಿ ಮಮತಾ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರಿಸುದಾರರಿದ್ದರೆ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ

0

ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ಫೆ.22 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತ ವ್ಯಕ್ತಿಯ ವಾರೀಸುದಾರರ ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸು ಠಾಣೆ: 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ...