ಕೇಂದ್ರದ ಉಜ್ವಲ ನೀತಿಯಿಂದ ಬಡವರ ಬದುಕು ಕತ್ತಲು: ಸಂತೋಷ್ ಕುಮಾರ್ ಲಾಯಿಲ

0

ಬೆಳ್ತಂಗಡಿ;  ಕೇಂದ್ರ ಸರಕಾರದ ದ್ವಿಮುಖ ನೀತಿ ಪದೇ ಪದೇ ಬಯಲಾಗುತ್ತಿದೆ. ಬಡವರ ಪರ, ಬ್ರಷ್ಟಾಚಾರ ವಿರೋಧಿ ಎನ್ನುತ್ತಿದ್ದ ಕೇಂದ್ರ ಸರಕಾರ ಇದೀಗ ಬಡ ಮಹಿಳೆಯರಿಗಾಗಿ ರೂಪಿಸಿದ್ದ ಉಜ್ವಲ ಯೋಜನೆಯನ್ನು ಶೂಲವಾಗಿ ಪರಿವರ್ತಿಸಿದೆ. ಬಡ ಹೆಣ್ಣುಮಕ್ಕಳಿಗಾಗಿ ಉಜ್ವಲ ಯೋಜನೆಯಡಿ ವರ್ಷಕ್ಕೆ 12 ಸಿಲಿಂಡರ್ ಸಬ್ಸಿಡಿ ಮೂಲಕ ನೀಡಲಾಗುತ್ತಿತ್ತು. ಆದರೆ ನಂತರ ಅದನ್ನು 9ಕ್ಕೆ ಸೀಮಿತ ಮಾಡಲಾಯಿತು. ಇದೀಗ ಕೇವಲ 4ಕ್ಕೆ ಸೀಮಿತ ಮಾಡಿರುವುದು ಬಡ ಕುಟುಂಬಗಳ ಬದುಕಿಗೆ ನುಂಗಲಾರದ ತುತ್ತಾಗಿದೆ ಎಂದು ಜಿಲ್ಲಾ ಕೆ.ಡಿ.ಪಿ ಸದಸ್ಯ ಕಾಂಗ್ರೆಸ್ ಮುಖಂಡ ಸಂತೋಷ್ ಕುಮಾರ್ ಲಾಯಿಲ ಹೇಳಿದ್ದಾರೆ.  ...

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

0

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಬುತ ಕಬಡ್ಡಿ ತೀರ್ಪುಗಾರರಾಗಿ, ತರಬೇತಿದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಹೆಸರು ಗಳಿಸಿದ್ದರು. ಮೃತರು ಪತ್ನಿ ಶಿಕ್ಷಕಿ ಜ್ಯೋತಿ ಅಖಿಲ್ ಕುಮಾರ್, ಮಕ್ಕಳಾದ ಒರ್ವೆ ಪುತ್ರಿ, ಓರ್ವ ಪುತ್ರ, ಸಹೋದರ ಅಮರ್, ಸಹೋದರಿ ಅನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಬೆಳ್ತಂಗಡಿ ಸರಕಾರಿ‌ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ‌ ಕಿರುಕುಳ‌; ಚಂದ್ರಶೇಖರ್ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25 ವರ್ಷಗಳಿಂದ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವುದಾಗಿ ದೌರ್ಜನ್ಯ ಕ್ಕೆ ಒಳಗಾದ ಮಹಿಳೆ‌...

ಬೆಳ್ತಂಗಡಿ; ಮದ್ದಡ್ಕದಲ್ಲಿ ಕಾರು ಬೈಕ್ ನಡುವೆ  ಅಪಘಾತ

0

ಬೆಳ್ತಂಗಡಿ; ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರಂದು ಬೆಳಿಗ್ಗೆ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಬೈಕ್ ಸವಾರರು ಮನೆಯಿಂದ ಹೊರಟು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

0

ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ 2023 ರಲ್ಲಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಈ  ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ  ಇದೇ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮದ ಗ್ರಾಮೀಣ ಅಂಚೆ ವಿತರಕ ಆಗಿರುವ ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ. ಪ್ರಯಾಣಿಕರು ಎಚ್ವರಿಕೆ ವಹಿಸುವಂತೆ ಅರಣ್ಯ ಇಲಾಖೆ‌ ಎಚ್ಚರಿಸಿದೆ.ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲಿಯೇ ಕೆಲಹೊತ್ತು ಇದ್ದ ಚಿರತೆ ಅರಣ್ಯದತ್ತ ಹೋಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.ಮಳೆ...

ಉಜ್ವಲಾ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ- ರಕ್ಷಿತ್ ಶಿವರಾಂ

0

ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ದೇಶದ 10 ಕೋಟಿ ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಅದೇ ಮಹಿಳೆಯರ ಮೇಲೆಯೇ ಹೊಸ ಆರ್ಥಿಕ ಹೊರೆ ಹೇರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ 12 ಸಿಲಿಂಡರ್‌ಗಳವರೆಗೆ ಸಬ್ಸಿಡಿ ಸೌಲಭ್ಯ ದೊರೆಯುತ್ತಿತ್ತು. ನಂತರ ಅದನ್ನು 9ಕ್ಕೆ ಇಳಿಸಲಾಯಿತು. ಇದೀಗ ಸಬ್ಸಿಡಿ ಸಿಗುವ ಸಿಲಿಂಡರ್‌ಗಳ ಸಂಖ್ಯೆಯನ್ನು ಕೇವಲ 4ಕ್ಕೆ ಸೀಮಿತಗೊಳಿಸಿರುವುದು ಬಡ ಕುಟುಂಬಗಳ ಬದುಕಿಗೆ...

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷೀತ್ ಶಿವರಾಮ್ ರವರಿಗೆ ಅಭಿನಂದನೆಗಳು: ಸಂತೋಷ್ ಕುಮಾರ್ ಲಾಯಿಲ

0

ಬೆಳ್ತಂಗಡಿ : ನೂತನ ಬೆಳ್ತಂಗಡಿ ನ್ಯಾಯಾಲಯದ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸುತ್ತಿದ್ದ ಬೇಡಿಕೆಗೆ ಇದೀಗ ರಾಜ್ಯ ಸರಕಾರದಿಂದ ಸ್ಪಂದನೆ ದೊರೆತಿದ್ದು, ದಿನಾಂಕ 14-06-2026 ರಂದು ಬೆಳ್ತಂಗಡಿ ನೂತನ ನ್ಯಾಯಾಲಯದ ಶಂಕ್ಷಾಪಣೆಯಾಗಲಿದ್ದು ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಬೆಳ್ತಂಗಡಿ ವಕೀಲರ ಸಂಘ ಕಳೆದ 10-12 ವರ್ಷಗಳಿಂದ ನಿರಂತರವಾಗಿ ಈ...

ಧರ್ಮಸ್ಥಳ; ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರು ಆಸ್ಪತ್ರೆಯ ವೈದ್ಯರು ಆಗಮಿಸಿ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರ ಭೂಮಿಯಲ್ಲಿ ದಫನ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

0

ಬೆಳ್ತಂಗಡಿ; ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಸಮೀಪ ಸಂಭವಿಸಿದೆ. ಮೂವರು ಪ್ರಯಾಣಿಕರನ್ನು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದಿದೆ. ಗಾಯಾಳುಗಳನ್ನು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.