ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಉಡುಪಿಯ ಶ್ರೀ ನಿಹಾಲ್ ವಿಲ್ಸನ್, ಕಾರ್ಕಳದ ಶ್ರೀ ಸಂದೀಶ್, ಆತ್ರಾಡಿಯ ಶ್ರೀ ರಮೇಶ್ ನಾಯ್ಕ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಮಾರ್ಚ್ 15 ರಂದು ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು. ನಿವೃತ್ತ ಮಹಿಳಾ ಆರೋಗ್ಯ...
ಬೆಳ್ತಂಗಡಿ ಅರಣ್ಯದೊಳಗಿನ ಆದಿವಾಸಿ ಕುಟುಂಬಗಳಿಗೆ ಬೆಳಕು ನೀಡುವ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ
ಬೆಳ್ತಂಗಡಿ; ಶತಮಾನಗಳಿಂದ ಕತ್ತಲೆಯಲ್ಲಿ ಬದುಕನ್ನು ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿ ಕುಟುಂಬಗಳು ಸೇರಿದಂತೆ ಅರಣ್ಯವಾಸಿಗಳಿಗೆ ಕೊನೆಗೂ ಬೆಳಕು ನೀಡುವ ಪ್ರಕ್ರಿಯೆ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಇದೀಗ ಮೊದಲ ಬಾರಿಗೆ ಮೆಸ್ಕಾ ಮೂಲಕ ವಿದ್ಯುತ್ ಸಂಪರ್ಕ ಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದ್ದು ಇದು ಸಧ್ಯದಲ್ಲಿಯೇ ಅನುಮೋದನೆಗೊಳ್ಳುವ ನಿರೀಕ್ಷೆಯಿದೆ. ಕತ್ತಲಲ್ಲಿರುವ ಆದಿವಾಸಿ ಕುಟುಂಬಗಳು ಬೆಳಕನ್ನು ಕಾಣುವ ದಿನ ದೂರವಿಲ್ಲ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಾಸಿಗಳು ವಿದ್ಯುತ್ ಬೆಳಕು ಕಾಣದೆ ಕತ್ತಲೆಯಲ್ಲಿರುವ ಬಗ್ಗೆ ಅವರ...
ಧರ್ಮಸ್ಥಳದ ಕುಮಾರಿ ಸೌಖ್ಯ ಎಸ್. ಜೈನ್: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ.ಈಕೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ, ಸೌಖ್ಯನಿಲಯ ಸುರೇಂದ್ರ ಜೈನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿ ಎಸ್.ಎಂ. ಸೌಮ್ಯ ದಂಪತಿಯ ಮಗಳು.ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.
ಸಂಭ್ರಮದ ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ
ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ ಪೀಳಿಗೆಗೆ ವರ್ಗಾಯಿಸುವ ಕೆಲಸ ಎಂದು ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಹೇಳಿದರು. ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ ಸಮಿತಿ ವತಿಯಿಂದ ನಡೆದ ಕಂಬಳ ಕೂಟದಲ್ಲಿ ಭಾಗವಹಿಸಿದ ಅವರು ಶುಭ ಕೋರಿದರು. ಈ ರೀತಿಯ ಕ್ರೀಡೆಯ ಮೂಲಕ ಹಿರಿಯರು ಕೊಡುಗೆ ನೀಡಿದ್ದಾರೆ. ಅದರ ಕಾರಣದಿಂದ ಪಾಶ್ಚಾತ್ಯ ಸಂಸ್ಕೃತಿ ಎಷ್ಟೇ ಪ್ರಭಾವ...
ಕೇರಳ ತಮಿಳು ನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ಹೊಸದಿಲ್ಲಿ: ಇಡೀ ದೇಶದ ಗಮನ ಸೆಳೆದಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ (ಮಾ.15) ಪ್ರಕಟಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭೆಗೆ ಏಪ್ರಿಲ್ 9 ರಂದು ಮತದಾನ ಪ್ರಾರಂಭವಾಗಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನಿಡಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದರು. 2026 ರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ...
ಶಾಸಕ ಹರೀಶ್ ಪೂಂಜ ಅವರಿಂದ ವೇಣೂರು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.
ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳ ಸಂಚಾಲಕರಾಗಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ 33 ನೇ ವರ್ಷದ ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳವು ಮಾರ್ಚ್ 21 ,22 ರಂದು ನಡೆಯಲಿದ್ದು , ಕಂಬಳದ ಪೂರ್ವಭಾವಿ ಸಭೆಯಲ್ಲಿ ಖ್ಯಾತ ಉದ್ಯಮಿ , ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ ಉಜಿರೆ ಇವರನ್ನು ಕಂಬಳ ಸಮಿತಿಯ ನೂತನ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ , ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ ಹಾಗೂ ಸಮಿತಿ ಪದಾಧಿಕಾರಿಗಳು, ಸಲಹೆಗಾರರು,...
ಬೆಳ್ತಂಗಡಿ ಕೆಲವೆಡೆ ಉತ್ತಮಮಳೆ; ಮರ ಉರುಳಿ ಬಿದ್ದು ವಿದ್ಯುತ್ ಲೈನ್ ಗೆ ಹಾನಿ
ಬೆಳ್ತಂಗಡಿ: ತಾಲೂಕಿನ ಹಲವೆಡೆ ಶನಿವಾರ ಸಂಜೆ ಮಳೆ ಸುರಿದಿದೆ.ಶಿಶಿಲ,ಕೊಕ್ಕಡ, ಧರ್ಮಸ್ಥಳಅರಸಿನಮಕ್ಕಿ,ಉಜಿರೆ,ನಿಡಿಗಲ್ ಮೊದಲಾದ ಕಡೆ ಗುಡುಗು,ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.ಉಳಿದ ಕೆಲವು ಕಡೆ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆ.21ರಂದು ಕೆಲವೆಡೆ ಪ್ರಥಮ ಮಳೆಯಾಗಿತ್ತು. 24ರಂದು ಮತ್ತೆ ಹಲವೆಡೆ ಮಳೆಯಾಗಿತ್ತು.ಇದೀಗ ಶನಿವಾರ ಮೂರನೇ ಬಾರಿ ಮಳೆ ಸುರಿದಿದೆ.ನಿಡ್ಲೆಯ ಕಳೆಂಜ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಖಾಸಗಿ ವಿದ್ಯುತ್ ಲೈನ್ ಟವರ್ ಮೇಲೆ ಬಿದ್ದು ವಿದ್ಯುತ್ ಲೈನ್ ಗೆ ಹಾನಿ ಉಂಟಾಗಿದ್ದು ಸಂಚಾರಕ್ಕೆ ಅಡಚಣೆಯಾಯಿತು.ಸ್ಥಳೀಯರೊಂದಿಗೆಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮರ...
ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ; ನಾಲ್ಕು ಕೋಳಿ ವಶಕ್ಕೆ
ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಯಾದ ಅನನ್ಯ ಶ್ರೀವತ್ಸವ್ ಐಪಿಎಸ್ ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಮಾ.13 ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ಶೆಟ್ಟಿಕೋಡಿ ಪ್ರದೇಶದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಆಧಾರದಲ್ಲಿ ಕರಾಯ–ಗುರುವಾಯನಕೆರೆ ರಸ್ತೆಯಿಂದ ಸುಮಾರು 400 ಮೀಟರ್ ಒಳಗಡೆ ಇರುವ ಮೈದಾನಕ್ಕೆ ತೆರಳಿ...
ಸುಲ್ಕೇರಿ ಮೊಗ್ರು ಮಾಳಿಗೆ ಬೈಲಿನ ಎಲ್ಲ ಮನೆಗಳಿಗೂ ವಿದ್ಯುತ್ ಭಾಗ್ಯ, ಸರ್ಕಾರದಿಂದ ಅನುದಾನ ಬಿಡುಗಡೆ, ಕೆಲಸ ಪ್ರಾರಂಭ : ರಕ್ಷಿತ್ ಶಿವರಾಂ ಮಾಹಿತಿ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಇತರ 16 ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲು ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ಸರಣಿ ಸಭೆಗಳ ನಂತರ ಅಡವಿಯಲ್ಲಿರುವ ಮತ್ತು ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿ ನಲ್ಲಿ ...















