ಬೆಳ್ತಂಗಡಿ ಪಟ್ಟಣ ಪಂಚಾಯತು ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ
ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣಪಂಚಾಯತಿನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು ಇವರಿಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿರುವುದಾಗಿ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅವರು ಪ್ರಕಟಿಸಿದರು. ಚುನಾವಣೆಯಲ್ಲಿ ದ.ಕ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ಪಡಂಗಡಿ; ಕಾರು ಡಿಕ್ಕಿಹೊಡೆದು ಪಾದಚಾರಿ ಮೃತ್ಯು
ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ ಎಂಬವರಾಗಿದ್ದಾರೆ.ಈ ಬಗ್ಗೆಪಡಂಗಡಿಯ ಲಕ್ಷ್ಮೀ ಎಂಬವರು ದೂರು ನೀಡಿದ್ದು ಲಕ್ಷ್ಮೀ ರವರ ಪತಿಯ ಸಹೋದರ ಆನಂದ ಎಂಬವರು, ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಅದೇ ರಸ್ತೆಯಲ್ಲಿ ಆಲ್ಲೋ ಕಾರಿನ ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಅನಂದ ರವರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ...
ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಡಿ.ಎಚ್.ಒ ಭೇಟಿ ಪರಿಶೀಲನೆ
ಬೆಳ್ತಂಗಡಿ; ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ತಾಲೂಕು ಆಸ್ಪತ್ರೆಯಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಲಾಯಿತು. ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿ...
ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ
ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕು ಘಟಕ ಇದರ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಿಂದ ಬೇರೆ ತಾಲೂಕು ಜಿಲ್ಲೆಗಳಿಗೆ ವರ್ಗಾವಣೆಯಾದ ಶಿಕ್ಷಕರುಗಳಿಗೆ ಬೀಲ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕರಾದ ಶ್ರೀ ಎಸ್ ಎಲ್ ಭೋಜೇಗೌಡ ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿ ವರ್ಗಾವಣೆ ಸರಕಾರಿ ನೌಕರರ ಹಕ್ಕು ಅದು ಕಾಲಕಾಲಕ್ಕೆ ಸರಿಯಾಗಿ ನಡೆದರೆ ಯಾವುದೇ ಸಮಸ್ಯೆ ಗೊಂದಲಗಳು ಉಂಟಾಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದವರು ಪ್ರತಿ ಶಿಕ್ಷಕರ ಸಮಸ್ಯೆಯನ್ನು ತಿಳಿದುಕೊಂಡು ಪರಿಹರಿಸಲು ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸುತ್ತಿರುವುದು ಶ್ಲಾಘನೀಯವಾಗಿದೆ...
ಧರ್ಮಸ್ಥಳ ಸೇವಾ ಸಹಕಾರಿ ಸಂಘದ ವತಿಯಿಂದ “ಕಂಡಡ್ ಒಂಜಿ ದಿನ” ಕಾರ್ಯಕ್ರಮ
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಪುದುವೆಟ್ಟು ಗ್ರಾಮದ ನಿಡ್ವಾಳ ಗದ್ದೆಯಲ್ಲಿ ಕಂಡಡ್ ಒಂಜಿ ದಿನ ಕಾರ್ಯಕ್ರಮ ಆ.25ರಂದು ಸಂಭ್ರಮದಿಂದ ನಡೆಯಿತು.ನೂರಾರು ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಕೆಸರಿನೋಕುಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ .ಬೆಳಗ್ಗೆ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪ ವ್ಯಕ್ತ ಪಡಿಸಿ ಶುಭ ಹಾರೈಸಿದರು. ವಿಧಾನ ಪರಿಷತ್ ಸದಸ್ಯ...
ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕಾರ್ಯವನ್ನು ಕರ್ನಾಟಕ ಸರಕಾರ ಮಾಡಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅಧಿಕಾರಕ್ಕೆ ಬಂದು ಆರು ತಿಂಗಳೊಳಗೆ ಕರ್ನಾಟಕದ ಜನತೆಗೆ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಿದ್ದಾರೆ ಎಂದರು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ ಮಾತನಾಡಿ ರಾಜ್ಯ ಸರಕಾರ ನುಡಿ ದಂತೆ...
ಸರಕಾರಿ ನೌಕರರ ವಿವಿದೊದ್ದೇಶ ಸಹಕಾರ ಸಂಘದ .ಮಹಾಸಭೆ
ಬೆಳ್ತಂಗಡಿ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಅ.25ರಂದು ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು. 2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು. ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು...
ಕೊಕ್ಕಡದಲ್ಲಿ ಬಿರುಗಾಳಿ ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರ ಹಳ್ಳದಲ್ಲಿ ಭಾನುವಾರ ಅಪರಾಹ್ನ ಭಾರೀ ಬಿರುಗಾಳಿ ಬೀಸಿದ್ದು ಮನೆಗಳಿಗೆ ಹಾಗೂ ಕೃಷಿಗೆ ವ್ಯಾಪಕ ಹಾನಿ ಸಂಭವಿಸಿದೆ.ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿರುಗಾಳಿ ಎದ್ದಿದ್ದು ಜನರಲ್ಲಿ ಭಯ ಮೂಡಿಸಿತ್ತು. ಈಪರಿಸರದಲ್ಲಿ ಭಾರೀ ಗಾಳಿಗೆ ನೂರಾರು ಅಡಿಕೆ ಮರಗಳು ಮುರಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಇಲ್ಲಿನನಿವಾಸಿ ರತ್ನಾವತಿ ಎಂಬವರ ಮನೆಯ ಹಂಚು ಹಾಗೂ ಶೀಟ್ ಗಳು ಸಂಪೂರ್ಣವಾಗಿ ಗಾಳಿಗೆ ಹಾರಿ ಹೋಗಿದೆ. ಪಿಜಿನಡ್ಕ ಕಾಲೊನಿಯ ಹಲವು ಮನೆಗಳ ಮೇಲ್ವಾವಣಿಗೆ ಹಾನು ಸಂಭವಿಸಿದೆ. ಹಾನಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಹಿಂದೆಂದೂ...
ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,ಮೃತ ಬಾಲಕೃಷ್ಣ ಭಟ್ ಅವರ ಮಗಳ ಗಂಡ ಹಾಗೂ ಮೊಮ್ಮಗ (ಮಗಳ ಮಗ) ಸೇರಿ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಹೊರ ಬಂದಿದ್ದು ಕೇರಳ ಕಾಸರಗೋಡಿನ ನಿವಾಸಿಗಳಾಗಿರುವ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ ರಾಘವೇಂದ್ರ ಕೆದಿಲಾಯ (53) ಹಾಗೂ ಅವರ ಮಗ...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ
ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ (ಆ.24) ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ....















