ಕುವೆಟ್ಟಿನಲ್ಲಿ ಅಕ್ರಮ ಗಾಂಜಾ ಮಾರಾಟ; ಪೊಲೀಸ್ ಕಾರ್ಯಾಚರಣೆ ಆರೋಪಿ ಬಂಧನ, ಗಾಂಜಾ ವಶಕ್ಕೆ

0

ಬೆಳ್ತಂಗಡಿ; ಕುವೆಟ್ಟು ಗ್ರಾಮದ ಸಬರ ಬೈಲು ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಪ್ರಕರಣವೊಂದನ್ನು ಮಂಗಳೂರಿನ ಸಿ.ಇ.ಎನ್ ಅಪರಾಥ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ (37) ಎಂಬಾತನಾಗಿದ್ದಾನೆ.ಖಚಿತ ಮಾಹಿತಿಯ ಮೇರೆಗೆ ಆ 31ರಂದು ರಾತ್ರಿಯ ವೇಳೆ ಸಿ‌.ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಂಜುನಾಥ್ ಟಿ ಹಾಗೂ ತಂಡ ಸಬರಬೈಲು ಬಸ್ ನಿಲ್ದಾಣಕ್ಕೆ ಬಂದಾಗ ಅನುಮಾನಾಸ್ಪದವಾಗಿ ನಿಂತಿದ್ದ ಮಹಮ್ಮದ್ ರೋಫಿಕ್ ನನ್ನು ವಶಕ್ಕೆ...

ಸವಣಾಲಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

0

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕೊನೆಗೂ ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು,...

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಅಕ್ಕಮ್ಮ ಅವರಿಗೆ ಶಾಸಕರಿಂದ ಅಭಿನಂದನೆ

0

ಬೆಳ್ತಂಗಡಿ; ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ, ಕರಿಮಣೇಲು ಗ್ರಾಮದ ಶ್ರೀಯುತ ಗಂಗಾಧರ ಪಾಟೀಲ್ ರವರ ಧರ್ಮಪತ್ನಿ ಶ್ರೀಮತಿ ಅಕ್ಕಮ್ಮ ರವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ಗೀತಾ ಅಧಿಕಾರ ಸ್ವೀಕಾರ

0

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಂಜ ಗ್ರಾಮ ಪಂಚಾಯತ್ ಅಧಿಕಾರಿಯಾಗಿರುವ ಆಗಿರುವ ಗೀತಾ ರವರು ಆ.31ರಂದು ಅಧಿಕಾರ ಸ್ವೀಕರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂತೋಷ್ ಪಾಟೀಲ್ ರವರು ಅಧಿಕಾರ ಹಸ್ತಾಂತರಿಸಿದರು.

ಜಾಗತಿಕ ಕಥೋಲಿಕ್ ಕಾಂಗ್ರೆಸ್ ಯೂತ್ ಕೌನ್ಸಿಲ್‌ ಸಂಯೋಜಕರಾಗಿ ರೋಬಿನ್ ಓಡಂಪಳ್ಳಿ ಆಯ್ಕೆ

0

ಬೆಳ್ತಂಗಡಿ; ಜಾಗತಿಕ ಕಥೋಲಿಕ್ ಕಾಂಗ್ರೆಸ್ ಇದರ ಯುವ ಘಟಕವಾಗಿರುವ ಜಾಗತಿಕ ಯೂತ್ ಕೌನ್ಸಿಲ್‌ ಇದರ ಜಾಗತಿಕ ಸಮಿತಿಯ ಸಂಯೋಜಕರಾಗಿ ಧರ್ಮಸ್ಥಳ ನಿವಾಸಿ ರೋಬಿನ್‌‌ ಓಡಂಪಳ್ಳಿ ಅವರು ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರತಿನಿಧಿಯಾಗಿರುವ ರೋಬಿನ್ ಅವರು ಈ ಹಿಂದೆ ಐ.ಸಿ ವೈ ಎಂ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾಗಿ, ಹಾಗೂ ಬೆಳ್ತಂಗಡಿ ಧರ್ಮಪ್ರಾಂತ್ಯದ ಯುವ ಘಟಕದ ಅಧ್ಯಕ್ಷರಾಗಿ ಸೇರಿದಂತೆ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಪೆರಿಯಡ್ಕ ಹಾಲು ಉಉತ್ಪಾದಕರ ಸಂಘದ ಮಹಾ ಸಭೆ

0

ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶ್ರೀ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು.ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ ಪ್ರಶಾಂತ್, ನಳಿನಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊoಡಿದ್ದರು.

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾ ಸಭೆರೂ.43..41 ಲಕ್ಷ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ.

0

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2023-24 ನೇ ಸಾಲಿನ 14 ನೇ ವಾರ್ಷಿಕ ಮಹಾಸಭೆ ಆಗಸ್ಟ್ 31 ರಂದು ಸಂಘದ ಕಛೇರಿ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ.ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. 2023-24 ನೇ ಸಾಲಿನಲ್ಲಿ ರೂ 106 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ 43.41 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರಿ. ಅನಿಲ್ ಎ.ಜೆ ರವರು ತಿಳಿಸಿದರು.ಸಂಘದ ಉಪಾಧ್ಯಕ್ಷ ಶ್ರೀ. ಜಾರ್ಜ್ ಎಮ್. ವಿ...

ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ; ಧರ್ಮಸ್ಥಳ ಗೇಟ್ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಆ 29 ರಂದು ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ಗೇಟಿನ ಸಮೀಪ ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ವ್ಯಕ್ತಿಗೆ ಸುಮಾರು 40ರಿಂದ 45ವರ್ಷ ಪ್ರಾಯ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತರ ಬಗ್ಗೆ ಯಾವುದೆ ಗುರುತುಗಳು ಪತ್ತೆಯಾಗಿಲ್ಲ. ವಾರಿಸುದಾರು ಇದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ‌.

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಉಜಿರೆ; ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು.ಅವರು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.“ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ ಯುವಜನತೆ ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮೂಲಕ ದೇಹಕ್ಕೆ ಅಗತ್ಯ ವ್ಯಾಯಾಮ ದಕ್ಕಿಸಿಕೊಳ್ಳಬೇಕು. ಆ...

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦0೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.. ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಅರಹಂತ ಇಂದ್ರ. ಶ್ರೀಕೀರ್ತಿ ಇಂದ್ರ ಹಾಗೂ ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು. ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ...