ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ; ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿಯಲ್ಲಿ "ಸಹಪಠ್ಯ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯ ಅಭಿವೃದ್ಧಿ" ಎನ್ನುವ ಧ್ಯೇಯ ವಾಕ್ಯದ ಪರಿಕಲ್ಪನೆಯಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಹಮ್ಮಿಕೊಂಡ ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಯು ವೇಣೂರು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೇತೃತ್ವದಲ್ಲಿ ವೇಣೂರು ಪ್ರೌಢಶಾಲಾ ಸಭಾಂಗಣದಲ್ಲಿ ಆಗಸ್ಟ್ 30ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ರಾಷ್ಟ್ರೀಯ...

ಕಳಿಯ ಗ್ರಾ.ಪಂ ವತಿಯಿಂದ ನಿವೇಶನಕ್ಕೆ ಜಾಗ ಕಾದಿರಿಸುವಂತೆ ಅಧಿಕರಿಗಳಿಗೆ ಮನವಿ

0

ಬೆಳ್ತಂಗಡಿ; ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ.ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಆಡಳಿತ ಮಂಡಳಿಯ ಒಮ್ಮತದ ತೀರ್ಮಾನದಂತೆ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮಾನ್ಯ ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,ಮತ್ತು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಬೇಟಿಯ ನಿಯೋಗದಲ್ಲಿ ಅಧ್ಯಕ್ಷರಾದ ದಿವಾಕರ ಎಂ, ಉಪಾದ್ಯಕ್ಷೆ ಶ್ರೀಮತಿ ಇಂದಿರಾ, ಕಾರ್ಯದರ್ಶಿ ಕುಂಙ ಕೆ, ಸದಸ್ಯರಾದ ಅಬ್ದುಲ್ ಕರೀಮ್,ಸುದಾಕರ...

ಧರ್ಮಸ್ಥಳದಲ್ಲಿ ಕಾಡಾನೆ ದಾಳಿ ವ್ಯಾಪಕ‌ ಕೃಷಿ ಹಾನಿ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ವಿವಿದೆಡೆಗಳಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.ಇಲ್ಲನ ನೇರ್ತನೆ ನಿವಾಸಿ ಜೋಸೆಫ್ ಪಿ.ಕೆ ಎಂಬವರ ತೋಟಕ್ಕೆ ನುಗ್ಗಿದ ಅನೆಗಳು ಅಡಿಕೆ ಹಾಗೂ ಬಾಳೆ ಗಿಡಗಳನ್ನು ನೆಲಸಮ ಗೊಳಿಸಿದೆ. ಜೇಮ್ಸ್ ಎಂಬವರ ತೋಟದಲ್ಲಿ ಎರಡು ತೆಂಗಿನ ಮರಗಳನ್ನು ನಾಶಗೊಳಿಸಿದ್ದು ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶಗೊಳಿಸಿದೆ. ಅಲ್ಲದೆ ರಾಜನ್ ಎಂಬವರ ತೋಟಕ್ಕೆ‌ನುಗ್ಗಿ ಅಲ್ಲಿ ನೆಡಲಾಗಿದ್ದ ಸುಮಾರು 100ಕ್ಕೂ ಹೆಚ್ಚು ಮರಗೆಣಸಿನ ಗಿಡಗಳನ್ನು ಸಂಲೂರ್ಣವಾಗಿ ನಾಶಗೊಳಿಸಿದೆ, ಬಿಜು ಎಂಬವರ ತೋಟಕ್ಕೂ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದೆೆ. ಒಂದು ಮರಿಯಾನೆ ಸೇರಿದಂತೆ ಎರಡು...

ಉರುವಾಲು ಹಾಗು ಪದ್ಮುಂಜ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟ ಪದಗ್ರಹಣ ಸಮಾರಂಭ

0

ಬೆಳ್ತಂಗಡಿ; ನಮ್ಮ ಜೀವನದಲ್ಲಿ ನಾವು ಯಾವ ರೀತಿ ಬದುಕಬೇಕು ಎಂದು ಸ್ಪಷ್ಟ ದೂರ ದೃಷ್ಟಿಯನ್ನ ಇಟ್ಟುಕೊಂಡು ನಿರ್ದಿಷ್ಟ ಗುರಿ ಸಾಧನೆ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳು ಪ್ರಮುಖ ಪಾತ್ರ ವಹಿಸಿದೆಇವುಗಳ ನಿರ್ವಹಣೆಗೆ ಅಚ್ಚುಕಟ್ಟಾದ ಆಡಳಿತ ವ್ಯವಸ್ಥೆಯನ್ನು ಜಾರಿಗೆ ಮಾಡಿ ಅರ್ಹರಿಗೆ ಬೇಕಾದ ಸೌಲಭ್ಯಗಳನ್ನು ಯೋಜನೆಯು ಒದಗಿಸುತ್ತಿರು ವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರೈತ ಬಂದು ಆಹಾರೋದ್ಯಮ ಮಾಲಕರಾದ ಶಿವ ಶಂಕರ್ ನಾಯಕ್ ರವರು ಹೇಳಿದರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ...

ದಿಡುಪೆ; ಜೀಗುಜ್ಜೆ ಕೊಯ್ಯುತ್ತಿದ್ದ ವೇಳೆ ಜಾರಿ ಬಿದ್ದು ವ್ಯಕ್ತಿ ಸಾವು

0

ಬೆಳ್ತಂಗಡಿ; ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (41) ಎಂಬವರಾ ಗಿದ್ದಾರೆ.ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭಿರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು.ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು...

ಚಾರ್ಮಾಡಿ; ಮಳೆಯ ನಡುವೆಯೂ ಕುಡಿಯುವ ನೀರಿಗಾಗಿ ಪ್ರತಿಭಟನೆ

0

ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತಿನ ಬೀಟಿಗೆ ಪ್ರದೇಶದ ಹಲವು ಮನೆಗಳಿಗೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರು ಸ್ಥಗಿತಗೊಂಡಿದ್ದು ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಇಲ್ಲಿನ ನಿವಾಸಿಗಳು ಗುರುವಾರ ಬೆಳಗ್ಗೆ ಚಾರ್ಮಾಡಿ ಗ್ರಾ.ಪಂ ನ ಎದುರು ಪ್ರತಿಭಟನೆ ನಡೆಸಿದರು.ಬೆಳಗ್ಗೆ ಕಚೇರಿ ತೆರೆಯುವ ಮೊದಲೇ ಗ್ರಾಮಪಂಚಾಯತಿನ ಎದುರು ಪ್ರತಿಭಟನೆ ಆರಂಭಿಸಿದ ಜನರು ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿದ ಬಳಿಕ ಮಾತ್ರ ಗ್ರಾ.ಪಂ ಕಚೇರಿಯ ಬಾಗಿಲು ತೆರೆಯಲು ಅವಕಾಶ ನೀಡುವುದಾಗಿ ತಿಳಿಸಿ ಪ್ರತಿಭಟನೆ ಮುಂದು ವರಿಸಿದರು.ಸ್ಥಳಕ್ಕೆ ಆಗಮಿಸಿದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಟನಾ ಕಾರರೊಂದಿಗೆ...

ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ

0

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ'ಸೋಜ ರವರ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಆ. 28ರಂದು ಬೆಳ್ತಂಗಡಿಯ ಮೂರು ಮಾರ್ಗದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಭ್ರಷ್ಟಾಚಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಎನ್ನುವಂತಹ ಮಾದರಿಯಾಗಿ ದೇಶಕ್ಕೆ ತೋರಿಸಿಕೊಟ್ಟಿದೆ. ಈ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಜನರಿಗೆ ತೋರಿಸುವಂತಹ...

SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ.

0

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರತೀ ಮೂರು ವರ್ಷಗಳಿಗೆ ನಡೆಯುವ ಆಂತರಿಕ ಚುನಾವಣೆಲ್ಲಿ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿಗಳಾಗಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಸಾಲಿ ಮದ್ದಡ್ಕ, ಸಮಿತಿ ಸದಸ್ಯರಾಗಿ ನವಾಝ್ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್ ಆಯ್ಕೆಯಾದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಮಿತಿಯ ಅಧ್ಯಕ್ಷ ನವಾಝ್ ಕಟ್ಟೆ ಪಕ್ಷದ ಕಾರ್ಯಾ...

ಬೆಳ್ತಂಗಡಿ ಪಟ್ಟಣ ಪಂಚಾಯತು ಅಧ್ಯಕ್ಷರಾಗಿ ಜಯಾನಂದ ‌ಗೌಡ ಆಯ್ಕೆ

0

ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣಪಂಚಾಯತಿನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು ಇವರಿಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿರುವುದಾಗಿ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅವರು ಪ್ರಕಟಿಸಿದರು. ಚುನಾವಣೆಯಲ್ಲಿ ದ.ಕ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

ಪಡಂಗಡಿ; ಕಾರು ಡಿಕ್ಕಿಹೊಡೆದು ಪಾದಚಾರಿ ಮೃತ್ಯು

0

ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ ಎಂಬವರಾಗಿದ್ದಾರೆ.ಈ ಬಗ್ಗೆಪಡಂಗಡಿಯ ಲಕ್ಷ್ಮೀ ಎಂಬವರು ದೂರು ನೀಡಿದ್ದು ಲಕ್ಷ್ಮೀ ರವರ ಪತಿಯ ಸಹೋದರ ಆನಂದ ಎಂಬವರು, ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಅದೇ ರಸ್ತೆಯಲ್ಲಿ ಆಲ್ಲೋ ಕಾರಿನ ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಅನಂದ ರವರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ...