ಪ್ರಧಾನಿ ಬಗೆಗಿನ ರಕ್ಷಿತ್ ಶಿವರಾಂ ಹೇಳಿಕೆ ಖಂಡನೀಯ; ಶ್ರೀನಿವಾಸ ರಾವ್

0

ಬೆಳ್ತಂಗಡಿ;"ಬಾಂಗ್ಲಾದೇಶದಲ್ಲಿ ಹಾಸಿಗೆ ದಿಂಬು ಹಿಡಿದುಕೊಂಡು ಓಡಿದ ಪ್ರಸಂಗ ಭಾರತದ ಪ್ರಧಾನಿಯವರಿಗೂ ಅತಿ ಶೀಘ್ರ ಬರಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿಯಲ್ಲಿ ಸೋಮವಾರ ನಡೆದ ಪುಂಜಾಲಕಟ್ಟೆ- ಚಾರ್ಮಾಡಿ ಹಿತರಕ್ಷಣ ಸಮಿತಿಯ ಜನಾಗ್ರಹ ಸಭೆಯಲ್ಲಿ ಹೇಳಿರುವುದು ಖಂಡನೀಯ" ಎಂದು ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸರಾವ್ ಹೇಳಿದರು.ಅವರು ಮಂಗಳವಾರ ಗುರುವಾಯನಕೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ "ಇಂತಹ ಹೇಳಿಕೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದರ ಜತೆ ದೇಶದ ಶಾಂತಿ ಕದಡಲು ಕಾರಣವಾಗುತ್ತದೆ" ಎಂದರು.ಶಾಸಕ ಹರೀಶ್ ಪೂಂಜಾ ಅವರ ಕುರಿತು ಭ್ರಷ್ಟಾಚಾರ ಆರೋಪ ಮಾಡಿದ ಬಗ್ಗೆ ಈಗಾಗಲೇ...

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಭೀಕರ ಕೊಲೆ

0

ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ ಕೊಲೆಗಾರರು ಯಾರು ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ

ಶಾಸಕ ಹರೀಶ್ ಪೂಂಜ ಅವರಿಂದ ಮಳೆ‌ಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ

0

ಬೆಳ್ತಂಗಡಿ; ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯಿಂದ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು,...

ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ ಚಿನ್ನದ ಪದಕ

0

ಬೆಳ್ತಂಗಡಿ : ಬಂದಾರು ಗ್ರಾಮದ ಬೊಳ್ಜೆ ನಿವಾಸಿ ಚಿದಾನಂದ ಪೂಜಾರಿ ಮತ್ತು ಪಾರ್ವತಿ ದಂಪತಿಯ ಪುತ್ರಿ, ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರುಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್(2024/25)ನಲ್ಲಿ 80 ಕೆ.ಜಿ. ವಿಭಾಗದ ಸೀನಿಯ‌ರ್ ಮತ್ತು ಜೂನಿಯ‌ರ್ ಮಟ್ಟದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಈಕೆ 2021ರಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,2022ರಲ್ಲಿ ಉಜಿರೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ , ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಮಹಿಳೆಯರ ಖೇಲೋ...

ಬೆಳ್ತಂಗಡಿ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ರಾಷ್ಟ್ರಪತಿಗೆ ಮನವಿ

0

ಬೆಳ್ತಂಗಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲ್ಲೂಕು ಕಛೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು. ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮಿಣ ಬ್ಲಾಕ್‌ ಅಧ್ಯಕ್ಷರಾದ ನಾಗೇಶ್ ಗೌಡ ರವರು, ಮಾಜಿ ಜಿಲ್ಲಾ ಪಂಚಾಯಿತಿಯ ಸದಸ್ಯರಾದ ಧರಣೇಂದ್ರ ಕುಮಾರ್ ರವರು,...

ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ ಸಮಾರಂಭ ಹಾಗೂ ಕೂರತ್ ತಂಙಳ್ ಅನುಸ್ಮರಣೆ

0

ಬೆಳ್ತಂಗಡಿ; ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ತಾಲೂಕಿನ 77 ಮೊಹಲ್ಲಾದ ಖಾಝಿ ಸ್ವೀಕಾರ ಸಮಾರಂಭ ಅ 17 ರಂದು ಗುರುವಾಯನಕೆರೆ ಎಫ್ ಎಂ ಗಾರ್ಡನ್ ನಲ್ಲಿ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್ ಹಾದಿ ತಂಙಳ್ ಮದನಿ ಯವರ ಅಧ್ಯಕ್ಷತೆಯಲ್ಲಿ ಜರಗಿತು. ಖಾಝಿ ಯಾಗಿ ಅಧಿಕಾರ ಸ್ವೀಕರಿಸಿದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ರವರು ಮಾತನಾಡಿ ಧರ್ಮ ಸಂಬಂಧವಾದ ಆರಾಧನೆ. ನಿಖಾಹ್.ವ್ಯಾಪಾರ ಸಂಬಂಧಿಸಿದಂತೆ ಇಸ್ಲಾಮಿನ ಕರ್ಮ ಶಾಸ್ತ್ರಗಳಿಗೆ ನ್ಯಾಯ ದೊರಕಿಸಿಕೊಡಲು ನನಗೆ ಅಧಿಕಾರ ನೀಡಿದ್ದೀರಿ ಇನ್ನು ಮುಂದಕ್ಕೆ ನನ್ನ ಮಾತನ್ನು...

ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು

0

ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16) ಮೃತ ಬಾಲಕ. ಈತ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಕಾರ್ಯಕ್ರಮವೊಂದಕ್ಕೆ ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದು, ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ನಾಪತ್ತೆಯಾಗಿದ್ದ. ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಇತರರಿಗೆ ಮಾಹಿತಿ...

ಲಾಯಿಲ ಗ್ರಾಮಸಭೆಯಲ್ಲಿ ಶೇಖರ ಲಾಯಿಲ ಅವರಿಂದ ವಿನೂತನ ಪ್ರತಿಭಟನೆ

0

ಬೆಳ್ತಂಗಡಿ:ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಶೇಖ‌ರ್ ಲಾಯಿಲ ಅವರು ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ವೇದಿಕೆಯ ಎದುರು ಮಲಗಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಗ್ರಾಮ ಸಭೆಯಲ್ಲಿ ನಡೆಯಿತು.ಲಾಯಿಲ ಗ್ರಾಮಪಂಚಾಯತ್ ನ 2024-25ನೇ ಸಾಲಿನ ಮೊದಲ ಹಂತದ ಗ್ರಾಮಸಭೆಯು ಪಂಚಾಯತ್ ನ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು.ನೇತಾಜಿನಗರ ಪಡ್ಲಾಡಿ 1ನೇ ವಾರ್ಡ್ ನಲ್ಲಿ ಕಾನೂನು ಬಾಹಿರ ನಿವೇಶನ ಹಂಚಿಕೆಯಾಗಿದೆ. ಒಂದು ಸೆಂಟ್ಸ್ ನಿವೇಶನ ಇಲ್ಲದ ಗ್ರಾಮಸ್ಥರಿಗೆ ನಿವೇಶನ ನೀಡದೆ,ಜಮೀನು,ಜಾಗ,ತೋಟವಿದ್ದ ಶ್ರೀಮಂತರಿಗೆ ಹಾಗೂ ಪಂಚಾಯತ್...

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ ಕಾರ್ಯಕ್ರಮ

0

ಬೆಳ್ತಂಗಡಿ:ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸುವ ಪ್ರಯತ್ನ ನಡೆಸಬೇಕು, ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಲು ಪ್ರಯತ್ನಿಸಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ...

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

0

ಬೆಳ್ತಂಗಡಿ; ಬಿಜೆಪಿಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು.ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚಾರ್, ಬದ್ರುದ್ದೀನ್ ಕಾಜೂರು, ಪ್ರಧಾನ ಕಾರ್ಯದರ್ಶಿ ವಿಶಾಲ್, ಅಶ್ರಫ್, ಪದಾಧಿಕಾರಿಗಳಾದಹಂಝ, ಸುಬಿನ್ ಮೊದಲಾದವರು ಉಪಸ್ಥಿತರಿದ್ದರು.