ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಯಶ್ ಭೇಟಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಕುಟುಂಬಸ್ಥರೊಂದಿಗೆ ಮಂಗಳವಾರ ಭೇಟಿ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.ಮಣ್ಣಿನ ಹರಕೆಗೆಂದೇ ಪ್ರಸಿದ್ದವಾಗಿರುವ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೂ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಹೆದ್ದಾರಿ ಕಾಮಗಾರಿ ಅವಾಂತರ: ತಾಲೂಕಿನ ಏಕೈಕ ಇಂಡಸ್ಟ್ರಿಯಲ್ ಎಸ್ಟೇಟ್ ಮುಚ್ಚುವ ಭೀತಿ, ಉದ್ದಿಮೆದಾರರಿಂದ ಪ್ರತಿಭಟನೆಯ ಎಚ್ಚರಿಕೆ
ಬೆಳ್ತಂಗಡಿ; ತಾಲೂಕಿನಲ್ಲಿ ಪೂಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪ್ರಯಾಣಿಕರು ಅನುಭವಿಸುತ್ತಿರುವ ಸಂಕಟಗಳು ಒಂದೆಡೆಯಾದರೆ ರಸ್ತೆಯ ಬದಿಗಳಲ್ಲಿ ವಾಸಿಸುವ ಮನೆಗಳಿಗೆ ನೀರು ನುಗ್ಗಿ ಸಂಕಷ್ಟದಲ್ಲಿದ್ದಾರೆ. ಇದೀಗ ಕಾಶೀಬೆಟ್ಟುವಿನಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಲಕ್ಷಾಂತರ ಸಾಲಮಾಡಿ ವ್ಯವಹಾರಗಳನ್ನು ನಡೆಸುತ್ತಿರುವವರ ಬದುಕನ್ನೂ ಈ ಹೆದ್ದಾರಿ ಕಾಮಗಾರಿ ಕಸಿದುಕೊಳ್ಳುತ್ತಿದೆ.ಕಾಶಿಬೆಟ್ಟುವಿನಲ್ಲಿ ಹೆದ್ದಾರಿಕಾಮಗಾರಿಗಾಗಿ ರಸ್ತೆಯನ್ನು ಅಗೆದು ಹಾಕಲಾಗಿದೆ, ಇದೀಗ ಇವರಿಗೆ ರಸ್ತೆ ಸಂಪರ್ಕವೇ ಇಲ್ಲವಾಗಿದೆ ನೀರು ಕೆಸರು ನೇರವಾಗಿ ಇವರ ಅಂಗಡಿಗಳಿಗೆ ಫ್ಯಾಕ್ಟರಿ ಗಳಿಗೆ ನುಗ್ಗುತ್ತಿದೆ. ಈ ಬಗ್ಗೆ ಯಾರಲ್ಲಿ ದೂರು ನೀಡಿದರೂ ಯಾರೂ ಇವರ ಸಮಸ್ಯೆಗಳಿಗೆ...
ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರ; ಎಸ್.ಐ.ಟಿ ತನಿಖೆಗೆ ರಕ್ಷಿತ್ ಶಿವರಾಂ ಒತ್ತಾಯ
ಬೆಳ್ತಂಗಡಿ; ನಗರದಲ್ಲಿ ನಡೆದಿರು ಐ ಬಿ ಕಾಮಗಾರಿಯಲ್ಲಿ ಕೋಟ್ಯಾಂತರ ರುಪಾಯಿ ಅವ್ಯವಹಾರವಾಗಿದ್ದು ಈ ಬಗ್ಗೆ ಸರಕಾರ ಎಸ್.ಐ.ಟಿ ತನಿಖೆ ನಡೆಸಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐ.ಬಿ ಕಾಮಗಾರಿ ಪೂರ್ಣಗೊಂಡ ಬಳಿಕ ಎರಡು ಕೋಟಿ ರೂ ಹೆಚ್ಚುವರಿ ಅನುದಾನವನ್ನು ಮಂಜೂರು ಗೊಳಿಸಲಾಗಿದೆ ಯಾವುದೇ ರೀತಿಯಲ್ಲಿ ಕಾನೂನನ್ನು ಪಾಲಿಸದೆ ಈ ಅನುದಾನವನ್ನು ಮಂಜೂರು ಗೊಳಿಸಲಾಗಿದೆ ಇದರಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಅವರು ಆರೋಪಿಸಿದರು. ಐ ಬಿ ಕಾಮಗಾರಿಯ ಅವ್ಯವಹಾರದ ಬಗ್ಗೆ ಲೋಕಾಯುಕ್ತರಿಗೂ ದೂರು ನೀಡಲಾಗಿದೆ...
ಮದ್ದಡ್ಕದಲ್ಲಿ ರಸ್ತೆ ಮಧ್ಯೆ ಕೆಟ್ಟು ನಿಂತ ಸರಕಾರಿ ಬಸ್ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ; ಮದ್ದಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸ್ ರಸ್ತೆಯ ಮದ್ಯದಲ್ಲಿಯೇ ಕೆಟ್ಟು ನಿಂತಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ರಸ್ತೆಯ ಮಧ್ಯದಲ್ಲಿಯೇ ಬಸ್ ಕೆಟ್ಟು ನಿಂತಿದೆ. ಅಗೆದು ಹಾಕಿರುವ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಕಾದು ನಿಲ್ಲುವಂತಾಗಿದೆ.
ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ನಿವಾಸಿ ಯೋಗೀಶ (26) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ ಗರ್ಭಿಣಿಯಾದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ನೆರೆ ಸಂತ್ರಸ್ತರಿಗೆ ನೆರವಿಗೆ ಬನ್ನಿ: ಸರಕಾರಕ್ಕೆ ಪ್ರತಾಪ ಸಿಂಹ ನಾಯಕ್ ಒತ್ತಾಯ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ನೆರವಾಗಲು ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಜಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಮುಖ್ಯಮಂತ್ರಿಗಳಿಗೆ ಹಾಗೂ ಸಚಿವರುಗಳಿಗೆ ಪತ್ರಬರೆದು ಕೇಳಿಕೊಂಡಿದ್ದಾರೆ.ಮಳೆಯಿಂದಾಗಿ ಸಾವಿರಾರು ಜನರು ಸಮಸ್ಯೆ ಎದುರಿಸುತ್ತಿದ್ದು ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ಸರಕಾರ ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳಬೇಕಾಗಿದೆ. ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ನೀಡುವ ಕಾರ್ಯವನ್ನೂ ಮಾಡಬೇಕಾಗಿದೆ ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ, ಕಂದಾಯ...
ಶಾಸಕರನ್ನು ಹುಡುಕಿಕೊಡಿ ಬೆಳ್ತಂಗಡಿ ಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ 15 ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಇನ್ನೂ ಏನೂ ಆಗಿಲ್ಲ. ಆದರೆ ಶಾಸಕ ಹರೀಶ್ ಪೂಂಜಾ...
ತುಂಬಿದ ಪೆರ್ನಾಲೆ ಕೆರೆ ಆತಂಕದಲ್ಲಿ ಜನರು; ಕೆರೆಯ ಗೇಟ್ ತೆಗೆಯುವ ಪ್ರಯತ್ನಗಳು ವಿಫಲ; ಸ್ಥಳಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಆಗಮನ ನಿರೀಕ್ಷೆ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು ಕೆರೆಯ ಕೆಳ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿಸಿದೆ.ಇದೀಗ ನೀರಿನಲ್ಲಿ ಮುಳುಗಿ ಗೇಟ್ ಅನ್ನು ತೆರೆಯಲು ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡ ಆಗಮಿಸುವ ನಿರೀಕ್ಷೆಯಿದ್ದು ಜನರು ತಜ್ಞರ ಆಗಮನಕ್ಕಾಗಿ ಕಾಯುತ್ತಿದ್ದಾರೆ.ಅರಣ್ಯ ಭಾಗದಲ್ಲಿ ಸುಮಾರು 27 ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿರುವ ಈ ಕೆರೆ ಗ್ರಾಮದ ಸುಮಾರು 300ಕ್ಕಿಂತ ಅಧಿಕ ಕುಟುಂಬಗಳಿಗೆ ಬೇಸಿಗೆಯ ಕೃಷಿ ನೀರಿಗೆ ಆಧಾರವಾಗಿದೆ.ಈ ಬಾರಿ...
ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಕುಸಿದ ಮನೆ
ಚಾರ್ಮಾಡಿ; ತಾಲೂಕಿನಲ್ಲಿ ಮಳೆಯ ಹಾನಿ ಮುಂದುವರಿದಿದ್ದು ಭೀಕರ ಮಳೆಗೆ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಂಧಿನಗರದಲ್ಲಿ ಮನೆಯೊಂದು ಭಾಗಶ ಕುಸಿದು ಬಿದ್ದಿದೆ. ಇಲ್ಲಿನ ನಿವಾಸಿ ಇಸ್ಮಾಯಿಲ್ ಅವರ ಮನೆಯ ಗೋಡೆ ಶುಕ್ರವಾರ ಮಧ್ಯಾಹ್ನದ ವೇಳೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು. ಕಂದಾಯ. ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರು ಬೇಟಿ ನೀಡಿದ್ದಾರೆ. ವಿಕಾಯ ಗಾಂಧಿ ನಗರ ತಂಡದ ಸದಸ್ಯರು ಕೂಡಲೇ ಮನೆಯೊಳಗೆ ಬಿದ್ದಿದ್ದ ಕಲ್ಲು ಮಣ್ಣುಗಳನ್ನು ತೆರವು ಗೊಳಿಸಿದ್ದಾರೆ.
ಬೆಳ್ತಂಗಡಿ ಬಾವಿಗೆ ಬಿದ್ದು ಮಹಿಳೆ ಸಾವು
ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಮಹಿಳೆಯೊಬ್ಬರು ಮನೆಯ ಮುಂದಿನ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳ್ತಂಗಡಿ ಕೃಷಿ ಇಲಾಖೆಯ ಸೀಡ್ ಫಾರ್ಮ್ ರಸ್ತೆಯ ಬದಿಯಲ್ಲಿರುವ ಮನೆಯ ನಿವಾಸಿ ಸುಮಾಲಿನಿ 63 ಎಂಬವರಾಗಿದ್ದಾರೆ.ಮಹಿಳೆ ಬಾವಿಗೆ ಬಿದ್ದಿದ್ದಾರೆ.ಅವರು ಬಿದ್ದಿರುವುದನ್ನು ಮನೆಯವರು ಗಮನಿಸಿದ್ದು ಕೂಡಲೇ ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದಾರೆ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಜಲೀಲ್ ಬಾಬಾ, ಹಾಗೂ ಅಲ್ಫಾಸ್ ಲಾಯಿಲ ಅವರು ಬಾವಿಯಲ್ಲಿ ಮುಳುಗಿ ಏಳುತ್ತಿದ್ದ ಮಹಿಳೆಯನ್ನು ಸಾಹಸಿಕವಾಗಿ ಬಾವಿಯಿಂದ ಮೇಲೆತ್ತಿದ್ದಾರೆ ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆಕೆ ಮೃತಪಟ್ಟುದ್ದಾರೆ. ಘಟನೆಯ ಬಗ್ಗೆ...















