ಧರ್ಮಸ್ಥಳ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಾಮೂಹಿಕ ಯೋಗ ಪ್ರದರ್ಶನ

0

ಧರ್ಮಸ್ಥಳ: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ “ಯೋಗ” ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 12ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಶುಭಾಶಂಸನೆ ಮಾಡಿದರು.ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಭಾಗ್ಯ ರಕ್ಷಣೆಗೆ ಯೋಗ ಸಹಕಾರಿಯಾಗಿದೆ. ಆಧುನಿಕ ಜೀವನಶೈಲಿ, ಆಹಾರ-ವಿಹಾರ ವಿಧಾನದಿಂದಾಗಿ ನಾವು ಅನೇಕ ಒತ್ತಡಗಳಿಗೆ ಒಳಗಾಗುತ್ತಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನಕ್ಕೆ...

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಅಡ್ಡ ಮತದಾನದ‌ಬಗ್ಗೆ ಕ್ಷೇತ್ರದಲ್ಲಿ ನಿರ್ಧಾರ ವಾಗಲಿ; ವಿಜಯೇಂದ್ರ

0

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆ‌ರ್.ಅಶೋಕ್ ಅವರಿಗ ಸಭೆ ಕರೆಯುವ ಸಂಬಂಧ ಮಾತನಾಡುವೆ; ನಾವೆಲ್ಲರೂ ದೇವರನ್ನು ನಂಬುವವರು. ಧರ್ಮಸ್ಥಳದಲ್ಲಿ ಸಭೆ ಕರೆದು ತಾಯಿಗೆ ದ್ರೋಹ ಮಾಡಿದ ಶಾಸಕರ ಮತ್ತು ಸತ್ಯದ ಬಗ್ಗೆ ಗೊತ್ತಾಗಬೇಕಿದೆ. ಶ್ರೀ ಕ್ಷೇತ್ರದಲ್ಲಿ ತೀರ್ಮಾನ ಆಗಬೇಕೆಂದು ನಿರ್ಧಾರ...

ಅಪಘಾತದಲ್ಲಿ ತೀವ್ರ ಗಾಯಗಳೊಂದಿಗೆ ಚಿಕಿತ್ಸೆಯಲ್ಲಿರುವ ಯೋಧ ಮತ್ತು ಮಗುವಿನ ಚೇತರಿಕೆಗಾಗಿ ಸರ್ವಧರ್ಮೀಯ ಕ್ಷೇತ್ರದಲ್ಲಿ ಯೋಧರ ಬಳಗದಿಂದ ಪ್ರಾರ್ಥನೆ

0

ಬೆಳ್ತಂಗಡಿ; ಆಕಸ್ಮಿಕ ಅಗ್ನಿ ಅವಘಡದಿಂದ ಸ್ಕೂಟರ್ ಹೊತ್ತಿ ಉರಿಯುವ ವೇಳೆ ಅದರಲ್ಲಿ ಪ್ರಯಾಣಿಸುತ್ತಿದ್ದ ಯೋಧ ಹಾಗೂ ಅವರ ಎಳೆಯ‌ ಮಗುವು ತೀವ್ರ‌ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಶೀಘ್ರ ಆರೋಗ್ಯ ಚೇತರಿಕೆಗಾಗಿ ಇತರ ಯೋಧರು ಮತ್ತು ಮಾಜಿ ಯೋಧರು ಸರ್ವಧರ್ಮೀಯ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಭಾರತೀಯತೆ ಎತ್ತಿಹಿಡಿದ್ದಿದ್ದಾರೆ. ಬೆಳಾಲು ಗ್ರಾಮದ ಕಾಡಂಡ ನಿವಾಸಿ ಯೋಧ ಮೋಹನ ಗೌಡ ಕೆ ಮತ್ತು ಪುತ್ರ ದಿಯಾನ್ ಅವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಅಗ್ನಿಗೆ ತುತ್ತಾಗಿ ಹೊತ್ತಿ‌ಉರಿದಿತ್ತು. ಈ ವೇಳೆ […]

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ 18ನೇ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ

0

ಬೆಳ್ತಂಗಡಿ (ಜೂನ್-21): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು. “ಪರ್ಯಾಯ ರಾಜಕಾರಣದ ಸಕಾರಾತ್ಮಕ ಹೆಜ್ಜೆ” ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿ, ಪಕ್ಷದ ಹೋರಾಟ, ಜನಸೇವೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಕಳೆದ 18 ವರ್ಷಗಳಿಂದ ನಡೆಸಿಕೊಂಡು ಬಂದಿರುವ...

ಸುಳ್ಯ ಆಕಸ್ಮಿಕವಾಗಿ ಬಾವಿಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತ್ಯು

0

ಸುಳ್ಯ; ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಅವಳಿ ಮಕ್ಕಳಿಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ವಸಂತ್ ಎಂಬವರ ಮಕ್ಕಳಾದ ಜಸ್ವಿತ್ ಹಾಗೂ ಜಾವಿನ್ (5) ಮೃತ ಮಕ್ಕಳಾಗಿದ್ದಾರೆ. ಮನೆಯ ಸಮೀಪದಲ್ಲಿದ್ದ ಸುಮಾರು 15 ಅಡಿ ಆಳದ ಬಾವಿಗೆ ಇವರಿಬ್ಬರೂ ಆಟವಾಡುವ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಕ್ಕಳ ತಂದೆ ವಸಂತ ಅವರು ವೆಲ್ಡಿಂಗ್ ಕೆಲಸಕ್ಕೆ ತೆರಳಿದ್ದರೆ, ತಾಯಿ ಅವರು ಕೂಲಿ ಕೆಲಸಕ್ಕೆ ಹೋಗಿದ್ದರು. ಘಟನೆ ನಡೆದ ವೇಳೆ ಮನೆಯಲ್ಲಿ ಅಜ್ಜ...

ಬೆಳ್ತಂಗಡಿ;ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

0

ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಜೂ. 20ರಂದು ನಡೆದಿದೆ.ಮನೆಯಲ್ಲಿ ಒಟ್ಟು ನಾಲ್ಕು ಮಂದಿ ಇದ್ದುಶ್ರೀಧರ ಅವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.ಇತರರು ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ಹಂಚು ತೆಗೆದು ಒಳನುಗ್ಗಿದ್ದು ಮನೆಯಲ್ಲಿ ಇದ್ದ ಕಪಾಟಿನ ಬೀಗ ಮುರಿದು ಸುಮಾರು 6 ಲಕ್ಷ ರೂ.ಗಿಂತ ಅಧಿಕ...

ರಾಜ್ಯಕ್ಕೆ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ. ಸಹಿತ ಇತರ ಸಾಧಕರಿಗೆ ಸಮ್ಮಾನ

0

ಬೆಳ್ತಂಗಡಿ, ಜೂ.20: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ಸಿಇಟಿಯಲ್ಲಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಹಾಗೂ ಬೋರ್ಡ್, ಜೆಇಇ ಸೇರಿದಂತೆ ಇತರೆ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಂಗಣದಲ್ಲಿ ಜೂ.20 ರಂದು ನಡೆದ ಸಮಾರಂಭದಲ್ಲಿ ಸಮ್ಮಾನಿಸಿ ಮಾತನಾಡಿದರು. ಎರಡು ವರ್ಷಗಳ ಹಿಂದೆ...

ಕಡಬ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಅನಾಥವಾದ ಮಗು

0

ಬೆಳ್ತಂಗಡಿ: ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಆಲಂಕಾರು ಕಜೆಯ ಬಾಡಿಗೆ ಮನೆಯೊಂದರಲ್ಲಿ ಜೂನ್ 20 ರಂದು ನಡೆದಿದೆ. ಅಪ್ಪ ಅಮ್ಮನನ್ನು ಕಳೆದುಕೊಂಡು 2 ವರ್ಷದ ಪುಟ್ಟ ಕಂದಮ್ಮ ಅನಾಥವಾಗಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್‌ ನಡೆಸುತ್ತಿದ್ದ ಬಜಗೋಳಿಯ ನಿವಾಸಿಗಳಾಗಿರುವ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ಎಂಬವರೇ ಮೃತಪಟ್ಟವರಾಗಿದ್ದಾರೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಇಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಇವರು, ಜೂ.19ರ ಸಂಜೆ ಪುನಃ ಬಂದಿದ್ದರು. ಜೂ.20ರಂದು ಘಟನೆ...

ಕಕ್ಕಿಂಜೆಯ ಆಲ್ವಿನ್ ಸಿ.ಜೆ ಅವರಿಗೆ ಅಂತಾರಾಷ್ಟ್ರೀಯ “ಯುವ ವಿಜ್ಞಾನಿ ಪ್ರಶಸ್ತಿ”

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಮೂಲದ ಸಿ. ಎ. ಜೋನಿ ಮತ್ತು ಸಿನ್ಸಿ ದಂಪತಿಯ ಪುತ್ರರಾದ ಆಲ್ಬಿನ್ ಸಿ. ಜೆ ಅವರು ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ "ಯುವ ವಿಜ್ಞಾನಿ ಪ್ರಶಸ್ತಿ" (Young Scientist Award) ಗೆ ಭಾಜನರಾಗಿದ್ದಾರೆ.ಜೂನ್ 05 ಮತ್ತು 06, 2026 ರಂದು ನಡೆದ “ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮ” ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಆಲ್ಬಿನ್ ಅವರು ಪ್ರಸ್ತುತ ತುಮಕೂರಿನ ಶ್ರೀ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (SSIT -...

ಕಡಿರುದ್ಯಾವರದಲ್ಲಿ ಒಂಟಿ ಸಲಗನ ಓಡಾಟ

0

ಬೆಳ್ತಂಗಡಿ; ಗುರುವಾರ, ರಾತ್ರಿ ಕಡಿರುದ್ಯಾವರ ಗ್ರಾಮದ ವಿವಿದೆಡೆ ಒಂಟಿಸಲಗವೊಂದು ಓಡಾಟ ನಡೆಸಿದ್ದು ಕಂಡುಬಂದಿದೆ ಆದರೆ ಎಲ್ಲಿಯೂ ಹೆಚ್ಚಿನ ಕೃಷಿಗೆ ಹಾನಿಯುಂಟುಮಾಡಿಲ್ಲ. ಕಡಿರುದ್ಯಾವರ ಗ್ರಾಮದ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಸಂಚರಿಸಿದ್ದು ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿರುವ ಬಗ್ಗೆ‌ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಾಡಾನೆ ಯಾವುದೇ ಕೃಷಿಗೆ ಹಾನಿಯುಂಟು...