ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ಪರಿಶೀಲನೆ

0

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು ಹಾನಿಯಾದ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆ.ಪಿ.ಸಿ.ಸಿ ಸದಸ್ಯ ರಕ್ಷಿತ್ ಶಿವರಾಂ ಅವರು ಸಚಿವರೊಂದಿಗೆ ಇದ್ದು ಮಳೆಯಿಂದಾಗಿ ಆಗಿರುವ ಹಾನಿಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.ಬೆಳ್ತಂಗಡಿ ತಾಲೂಕಿನ ಮದಡ್ಕ - ಪಡಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ಕುಸಿತವಾದ ಪ್ರದೇಶವನ್ನು ಪರಿಶೀಲನೆ ನಡೆಸಿ ಊರವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಲಾಯಿಲ ಗ್ರಾಮದ ಗುರಿಂಗಾನ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಊರಿನವರಿಂದ ತಿಳಿದುಕೊಂಡರು....

ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಆ 2ರಂದು ಶಾಲೆಗಳಿಗೆ ರಜೆ

0

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ, ಗುರುವಾಯನಕೆರೆ ಮಸೀದಿ, ಮೇಲಂತಬೆಟ್ಟು, ಅಳದಂಗಡಿ, ಸವಣಾಲು, ಮೊದಲಾದ ಕಡೆಗಳಿಗೆ ಭೇಟಿ ನೀಡಿ, ಮನೆ ಹಾನಿ, ಗುಡ್ಡ ಕುಸಿತ ಮೊದಲಾದ ಮಳೆ ಹಾನಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಕಂದಾಯ ಇಲಾಖೆ ಸೇರಿದಂತೆ ವಜವಿಧ ಇಲಾಖೆಗಳ ಅಧಿಕಾರಿಗಳು,...

ಮಳೆಹಾನಿ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ; ತಾಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಲವೆಡೆ ಪ್ರತಿ ನಿತ್ಯ ಹಾನಿ ಸಂಭವಿಸುತ್ತಿದ್ದು ಮಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಕಷ್ಟದಲ್ಲಿರುವವರಿಗೆ ಧೈರ್ಯ ತುಂಬಿದರು. ನೆರಿಯ , ಉಜಿರೆ, ಗಾಳಿ ಮಳೆಯಿಂದಾಗಿ ಹಾನಿಯಾದ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ಸಂತ್ರಸ್ತರೊಂದಿಗೆ ಇದ್ದು ಧೈರ್ಯ ತುಂಬಿದರು. ಬಳೆಂಜದಲ್ಲಿ ಮನೆ ಕುಸಿತವಾಗು ಭೀತಿ ಎದುರಿಸುತ್ತಿರುವ ಕುಟುಂಬಗಳನ್ನು ಭೇಟಿಯಾಗಿದ್ದಾರೆ. ಪಟ್ಟಣಪಂಚಾಯತು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾಮಿಯಾಗಿರುವ ಪ್ರದೇಶಗಳಿಗೂ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಮಚ್ಚಿನ ಗ್ರಾಮದಲ್ಲಿ ದೊಡ್ಡ...

ಮುಂದುವರಿದ ಮಳೆ ಹಲವೆಡೆ ಮೋರಿ,‌ ರಸ್ತೆಗಳು ಕುಸಿತ; ಸಂಚಾರಕ್ಕೆ ಅಡಚಣೆ

0

ಬೆಳ್ತಂಗಡಿ; ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿಯುತ್ತಿದ್ದು ಹಲವೆಡೆ ಕಿರು ಸೇತುವೆಗಳು ಮೋರಿಗಳು ಕೊಚ್ಚಿ ಹೋಗಿದ್ದು ಜನರು ಕಷ್ಟದಲ್ಲಿದ್ದಾರೆ.ಒಂದೆಡೆ ಗುಡ್ಡ ಕುಸಿತದಿಂದಾಗಿ ಮನೆಗಳಿಗೆ ಹಾನಿಯಾಗುತ್ತಿದೆ ಮತ್ತೊಂದೆಡೆ ಕೃಷಿಹಾನಿಯಾಗುತ್ತಿದ್ದು ಇದೀಗ ಕಿರು ಸೇತುವೆಗಳು ರಸ್ತೆಗಳು ಕೊಚ್ಚಿ ಹೋಗುತ್ತಿದ್ದು ಸಂಪರ್ಕವೇ ಕಡಿತಗೊಳ್ಳುತ್ತಿದೆ.ಮಾಲಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ನೂತನ ರಸ್ತೆಯ ಕಿರು ಸೇತುವೆ ಕುಸಿದು ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಮರೋಡಿ ಗ್ರಾಮದ ದೇರಜೆ ಎಂಬಲ್ಲಿ ಸಂಪರ್ಕ ರಸ್ತೆಯ ಸೇತುವೆ ಕುಸಿದು ಹೋಗಿದ್ದು ಇಲ್ಲಿನ ನಿವಾಸಿಗಳು ಸಂಕಷ್ಟದಲ್ಲಿದ್ದಾರೆ. ಕಲ್ಮಂಜ ಗ್ರಾಮದಲ್ಲಿಯೂ ಇದೇ ರೀತಿ ಕಿರು ಸೇತುವೆಯೊಂದು...

ಸವಣಾಲು ಸೇರಿದಂತೆ ವಿವಿದೆಡೆ ಭೂಕುಸಿತ ಹಲವು ಮನೆಗಳಿಗೆ ಹಾನಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ವಿವಿದೆಡೆ ಭೂಕುಸಿತಗಳು ಸಂಭವಿಸಿ ಮನೆಗಳಿಗೆ ಹಾನಿ ಸಂಭವಿಸಿದೆ.ಮೇಲಂತಬೆಟ್ಟು ಗ್ರಮಪಂಚಾಯತಿನ ಸವಣಾಲು ಗ್ರಾಮದ ನಡ್ತಿಕಲ್ಲು ಎಂಬಲ್ಲಿ ರವಿಚಂದ್ರ ಭಂಡಾರಿ ಎಂಬವರ ಜಾಗದಲ್ಲಿ ಭಾರೀಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಸ್ಥಳೀಯ ನಿವಾಸಿ ವಸಂತ ಎಂಬವರ ಮನೆಗೆ ಮಣ್ಣು ನೀರು ನುಗ್ಗಿದೆ. ಸಂಜೆಯ ವೇಳೆ ಗುಡ್ಡಕುಸಿತವಾಗಿದ್ದು ಮನೆ ಅಪಾಯದಲ್ಲಿದ್ದು ಮನೆಯವರನ್ನು ಸ್ಥಳಾಂತರಿಸಲಾಗಿದೆ. ಗುರುವಾಯನಕೆರೆ‌ ಮಸೀದಿಯ ಸಮೀಪ ಭೂಕುಸಿತವಾಗಿದ್ದು ಮಸೀದಿಯ ಆವರಣದ ವರೆಗೂ ಕುಸಿದು ಬಿದ್ದಿದೆ. ಬೆಳ್ತಂಗಡಿ ನಗರದ ಚರ್ಚ್ ರೋಡ್ ಸಮೀಪ ನಿವಾಸಿ ವಿನ್ಸೆಂಟ್ ಎಂಬವರ ಮನೆಯ ಸಮೀಪ ಗುಡ್ಡ ಕುಸಿತವಾಗಿದ್ದು ಮನೆಯೊಳಗೆ...

ಭಾರೀ ಮಳೆ ಹಿನ್ನಲೆ ಆ1ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

0

ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ‌ ಮುಂದುವರಿದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆ 1 ಗುರುವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಳಂಜ. ಕುಸಿಯುವ ಭೀತಿಯಲ್ಲಿ ನಾಲ್ಕು ಮನೆಗಳು, ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

0

ಬೆಳ್ತಂಗಡಿ; ಬಳಂಜ ಗ್ರಾಮದ ಕರ್ಮನ್ ದೊಟ್ಟು ಜನತಾ ಕಾಲನಿಯ ನಲ್ಲಿ ಬಾರಿ ಅಪಾಯಕಾರಿ ಧರೆ ಕುಸಿತದಿಂದಾಗಿ ನಾಲ್ಕು ಮನೆಗಳು ಬೀಳುವ ಸಾಧ್ಯತೆ ಇದ್ದು ಕುಟುಂಬಗಳನ್ನು ಗ್ರಾ.ಪಂ ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.ಸರಕಾರದಿಂದ ಕೊಟ್ಟಿರುವ ಜಾಗದಲ್ಲಿ ಇಲ್ಲಿ 20ಕ್ಕೂ ಹೆಚ್ಚು ಕುಟುಂಬಗಳು ಮನೆ ನಿರ್ಮಿಡಿಕೊಂಡಿದ್ದು ಕಡಿದಾದ ಬೆಟ್ಟ ಗುಡ್ಡದ ರೀತಿಯಲ್ಲಿ ಇದ್ದ ಜಾಗವನ್ನು ಸಮತಟ್ಟು ಮಾಡದೇ ಇಚ್ಛಾನುಸಾರ ಮನೆ ಕಟ್ಟಲು ಅವಕಾಶ ಮಾಡಿ ಕೊಡಲಾಗಿದೆ.ಇದರಿಂದಾಗಿ ಇಲ್ಲಿ ಇದೀಗ ಭೂ ಕುಸಿತದ ಭೀತಿ ಎದುರಾಗಿದೆ. ಇದಲ್ಲದೇ ಕೆಳಗಿನ ಭಾಗದಲ್ಲಿ ಮನೆ ನಿರ್ಮಿಸುವ ವೇಳೆ ಜಾಗವನ್ನು ಜೆಸಿಬಿ...

ವಯನಾಡ್ ಜಲಸ್ಪೋಟ ಸಾವಿನ ಸಂಖ್ಯೆ 151ಕ್ಕೆ ಏರಿಕೆ 200 ಕ್ಕೂ ಅಧಿಕ ಜನರು ನಾಪತ್ತೆ

0

ವಯನಾಡ್ : ಭಾರೀ ಮಳೆಯಾಗುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಕನಿಷ್ಠ 151 ಜೀವಗಳನ್ನು ಬಲಿ ಪಡೆದಿದೆ. ಸರಕಾರ ಅಧಿಕೃತವಾಗಿ 151ಮಂದಿ‌ನ ಮೃತಪಟ್ಟಿರುವುದಾಗಿ ಪ್ರಕಟಿಸಿದೆ. ಇನ್ನೂ 98ಮಂದಿ ನಾಪತ್ತೆಯಾಗಿರುವುದಾಗಿ ಸರಕಾರಿ ಅಧಿಕಾರಿಗಳು ಮಾಹಿತಿ ನೀಡಿದೆ. ಆದರೆ 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದಾಗಿ ಸ್ಥಳೀಯರ ಮಾಹಿತಿಯಂತೆ ಕೇರಳದ‌ ಮಾದ್ಯಮಗಳು ವರದಿ ಮಾಡಿದೆ. ಹಲವಾರು ಕುಟುಂಬಗಳು ನಾಪತ್ತೆಯಾಗಿದೆ, ಕಲ್ಲುಮಣ್ಣಿನ ಅವಶೇಷಗಳಡಿ ಸಿಲುಕಿಕೊಂಡಿರುವ ನೂರಾರು ಜನರ ರಕ್ಷಣೆಗಾಗಿ ಸಮರೋಪಾದಿಯಲ್ಲಿ ಕಾರ್ಯಾಚರಣೆಗಳು ನಡೆಯುತ್ತಿವೆ. 130ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮುಂಜಾನೆಯ...

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ.

0

ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜುಲೈ 28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುತ್ತೊಟ್ಟು ಫಿನ್ ಕಾರ್ಪ್ ಮೂಡಬಿದ್ರೆ ಶಾಖೆಯ ಸೀನಿಯರ್ ಮ್ಯಾನೇಜರ್ ಶ್ರೀಮತಿ ಮಲ್ಲಿಕಾ ಪುನೀತ್ ಇವರು ಮಾತನಾಡಿ ತುಳುನಾಡಿನ ಪಾರಂಪರಿಕ ಆಚರಣೆಗಳನ್ನು ಉಳಿಸಿ ಬೆಳೆಸುವುದು ಎಲ್ಲಾ ತುಳುವರ ಕರ್ತವ್ಯವಾಗಿದೆ. ಮಕ್ಕಳಿಗೆ ಪಾರಂಪರಿಕ ಚೆನ್ನೆಮಣೆ ಆಟವನ್ನು ಕಲಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ತುಳು ನಾಟಕ ರಚನೆಕಾರ ಮತ್ತು ರಂಗನಿರ್ದೇಶಕ...