ಕುತ್ಲೂರು; ಮುರಿದು ಬಿದ್ದ ಸೇತುವೆ, ಕಡಿದ ಸಂಪರ್ಕ, ಗ್ರಾಮಸ್ಥರಿಂದ ಪ್ರತಿಭಟನೆ

0

ಬೆಳ್ತಂಗಡಿ; ಕುತ್ಲೂರು ಗ್ರಾಮದ ಅಲಂಬಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳಾದರೂ ಸೇತುವೆ ದುರಸ್ತಿ ಅಥವಾ ಹೊಸ ಸೇತುವೆಯ ನಿರ್ಮಾಣ ಕಾರ್ಯ ಮಾಡದಿರುವ ಸರಕಾರದ ಅಧಿಕಾರಿಗಳ ನೀತಿಯನ್ನು ಖಂಡಿಸಿ, ಕುತ್ಲೂರಿನ ಮುರಿದ ಸೇತುವೆಯ ಮೇಲೆ ಈ ಸೇತುವೆಯನ್ನು ಅವಲಂಬಿಸಿರುವ ಆದಿವಾಸಿಗಳು ಹಾಗೂ ಸ್ಥಳೀಯರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ ಆದಿವಾಸಿಗಳು ಸೇರಿದಂತೆ ನೂರಾರು ಜನರು ಪ್ರತಿನಿತ್ಯ ಉಪಯೋಗಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳೇ ಕಳೆದರೂ...

ಅಂಡಿಂಜೆ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಒಡೆದು ಕಳ್ಳತನ

0

ಬೆಳ್ತಂಗಡಿ; ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು, ನಗದು ಮತ್ತು ಚಿನ್ನಾವರಣ ಕಳವುಗೈದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಿಂಜೆಯಲ್ಲಿ ನಡೆದಿದೆ.ಅಂಡಿಂಜೆ ಗ್ರಾಮದ ಪಾಂಡಿಲು ಹೊಸ ಮನೆಯ ಸುಜಾತ ಎಂಬವರು ಅ. 27 ರಂದು ಮನೆಗೆ ಬೀಗ ಹಾಕಿ ಅಳಿಯೂರಿನಲ್ಲಿ ಇರುವ ತವರು ಮನೆಗೆ ತೆರಳಿದ್ದರು. ಅ. 28ರಂದು ಮಧ್ಯಾಹ್ನ ವಾಪಸು ಬಂದಾಗ ಮನೆಯ ಬಾಗಿಲಿನ ಬೀಗ ಒಡೆದಿದ್ದು ಕಂಡುಬಂದಿದೆ. ಪರಿಶೀಲಿಸಿದಾಗ ಕಪಾಟಿನಲ್ಲಿದ್ದ 25,000 ರೂ. ನಗದು ಹಾಗೂ ಐದು ಗ್ರಾಂ ತೂಕದ ಚಿನ್ನದ ಒಂದು ಜತೆ ಬೆಂಡೂಲೆ...

ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ಬಂಧನ

0

ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಜಸ್ಟ್ ಮಿಸ್ ಅಗಿ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುವಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರು ಲಾಕ್ ಅಗಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಕಟ್ಟಡದ ನೆಲ ಮಹಡಿಯಲ್ಲಿರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಅ.13 ರಂದು ಭಾನುವಾರ ರಾತ್ರಿ ಕಳ್ಳತನ ನಡೆದಿತ್ತು ಅಂದೆ ದಿನ ರಾತ್ರಿ ಉಜಿರೆಯ...

ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು

0

ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ ಅ 9 ರಂದು ಅಪರಿಚಿತ ವ್ಯಕ್ರಿಯೊಬ್ಬ ಕರೆ ಮಾಡಿ ಆನ್ಲೈನ್ ಕೆಲಸದ ಆಪರ್ ನೀಡಿದ್ದು ಅದರಂತೆ ಮಹಿಖೆ ಕೆಲಸ ಆರಂಭಿಸಿದ್ದು ಆ ಬಳಿಕ ಆರೋಪಿಗಳು ವಿವಿಧ ಕಾರಣಗಳನ್ನು ತಿಳಿಸಿ ಅವರಿಂದ ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮೂಲಕ 4,25,934 ರೂ ಹಣವನ್ನು ವರ್ಗಾಯಿಸಿಕೊಂಡು ಬಳಿಕ ಕರೆ ಸ್ವೀಕರಿಸದೆ...

ಸೌತಡ್ಕ ದೇವಸ್ಥಾನಕ್ಕೆ ಖರೀದಿಸಿದ ಸ್ಟಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ವರ್ಗಾಯಿಸಿದ ನಡೆಯ ವಿರುದ್ದ ಭಕ್ತರ ಆಕ್ರೋಶ ; ಸೌತಡ್ಕ ದೇವಸ್ಥಾನ ಹಿತರಕ್ಷಣಾ ವೇದಿಕೆ ರಚನೆ: ಮರು ಹಸ್ತಾಂತರಕ್ಕೆ ಅಗ್ರಹಿಸಿ ಅನಿರ್ಧಷ್ಟವದಿ ಧರಣಿಗೆ ನಿರ್ಧಾರ.

0

. ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತರ, ಹಿತೈಷಿಗಳಿಂದ ಹಣ ಸಂಗ್ರಹಿಸಿ ಖರೀದಿಸಲಾಗಿದ್ದ ಸ್ಟಿರಾಸ್ತಿಗಳನ್ನು ಮಹಾಗಣಪತಿ ಸೇವಾ ಟ್ರಸ್ಟ್ ಎಂಬ ಬೇನಾಮಿ ಟ್ರಸ್ಟ್ ಗೆ ಮತ್ತು ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಹೆಸರಿಗೆ ಅಕ್ರಮವಾಗಿ ವರ್ಗಾವಣೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದೇವಳದ ಭಕ್ತಾದಿಗಳು ಪಕ್ಷ ಬೇಧ ಮರೆತು ಹೋರಾಟಕ್ಕೆ ಮುಂದಾಗಿದ್ದು ಆ ಬಗ್ಗೆ ಇತ್ತೀಚೆಗೆ ಕೊಕ್ಕಡದ ಅಪೇಕ್ಷಾ ಸಭಾ ಭವನದಲ್ಲಿ ಸೌತಡ್ಕ ಮಹಾಗಣಪತಿ ದೇವಸ್ಥಾನದ...

ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ

0

ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿರುವ 12 ಯಂತ್ರಗಳ ಪೈಕಿ 1 ಯಂತ್ರ ಕೆಟ್ಟು ಹೋಗಿ ತಿಂಗಳಾದರೂ ರಿಪೇರಿ ಮಾಡದ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಡಯಾಲೀಸಸ್ ಯಂತ್ರಕ್ಕೆ ಸಂಬಂಧಿಸಿದ ವಸ್ತುಗಳನ್ನು ಹೊರಗಡೆ ಬೇಕಾಬಿಟ್ಟಿ ಇಟ್ಟಿರುವ ಬಗ್ಗೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಾಗ ಸ್ಟಾಕ್ ರೂಂ ನ ಕೊರತೆಯಿಂದ ಹೊರಗಡೆ ಇಡಬೇಕಾದ...

ಬೆಳ್ತಂಗಡಿ; ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

0

ಬೆಳ್ತಂಗಡಿ : ಗ್ಯಾರೇಜ್ ನಲ್ಲಿ ರಿಪೇರಿಗೆ ಇರಿಸಿದ್ದ ಓಮಿನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ಬೆಳ್ತಂಗಡಿಯಲ್ಲಿ ಅ.22 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ನಗರದ ಕಲ್ಲಗುಡ್ಡೆ ರಸ್ತೆಯಲ್ಲಿ ಅ.22 ರಂದು ರಾತ್ರಿ ಓಮಿನಿ ಕಾರನ್ನು ಬೆಳ್ತಂಗಡಿ ಗ್ಯಾರೇಜಿನ ಮ್ಯಾಕ್ಯಾನಿಕ್ ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಚಾಲಕ ಕಾರಿನಿಂದ ಹೊರಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು...

ಮಿತ್ತಬಾಗಿಲು: ಕಾಡಾನೆ ಗಳ ದಾಳಿ ಕೃಷಿಗೆ ಹಾನಿ

0

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ಭೂಮಿಗೆ ದಾಳಿ ನಡೆಸಿದ್ದು ಕೃಷಿ ಹಾನಿ ಉಂಟುಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದೆ.ಸೋಮವಾರ ರಾತ್ರಿ ಸಮೀಪದ ಮಲವಂತಿಗೆ ಗ್ರಾಮದಲ್ಲಿ 6ಕ್ಕಿಂತ ಅಧಿಕ ಕಾಡಾನೆಗಳು ತೋಟಗಳಿಗೆ ನುಗ್ಗಿ ಹಾನಿ ಉಂಟುಮಾಡಿದ್ದವು.ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದೆ. ಕಾಡಾನೆಗಳನ್ನು ಅರಣ್ಯಕ್ಕೆ...

ಬೆಳ್ತಂಗಡಿ: ನ23 ರಂದು ತಾಲೂಕಿನ 3 ಗ್ರಾ.ಪಂ ಗಳಿಗೆ ಉಪ ಚುನಾವಣೆ

0

ಬೆಳ್ತಂಗಡಿ; ತಾಲೂಕಿನಲ್ಲಿ ತೆರವಾಗಿರುವ ಮೂರು ಗ್ರಮಾಪಂಚಾಯತು ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.ತಾಲೂಕಿನ ಉಜಿರೆ ಗ್ರಾಮದ1, ಕುವೆಟ್ಟು ಗ್ರಾಮದ 1, ಹಾಗೂ ಇಳಂತಿಲ ಗ್ರಾಮದ1 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ನ 6ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನ 12 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ನ13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ನ15ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ, ನ 23ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಚುನಾವಣೆನಡೆಯಲಿದೆ ನ 26ರ.ದು ಬೆಳ್ತಂಗಡಿ ಯಲ್ಲಿ ಮತಗಳ ಎಣಿಕೆ ಕಾರ್ಯ...

ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

0

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ , ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು , ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ , ಡಿಎನ್ಎ ಪರೀಕ್ಷೆ ನಡೆಸಬೇಕಾಗಿದೆ.ಸ್ಥಳೀಯರೇ ಯಾರಾದರೂ...