ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

0

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ "ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ ಹೆಚ್ಚಿರುತ್ತದೆ.ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ತಕ್ಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿದೆ" ಎಂದರುಶಾಲೆಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ ಕುಮಾರ್ ಮಾತನಾಡಿ "ಸರಕಾರಿ ಶಾಲೆಗಳನ್ನು ಉಳಿಸಿ...

ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ

0

ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ ಹಾಲಲ್ಲಿ ಸಂಗಾತಿ ಗುಂಪು ಯೋಜನೆ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ನಡೆದ ರೈತ ಕಾರ್ಮಿಕರ ಆಟೊಯಲ್ಲೊಂದು ದಿನ ಸಂಗಾತಿ ಮಹಾಸಂಗಮವನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ತುಳು ನಾಡಿನ ಮಣ್ಣಿನ ಮಹತ್ವವನ್ನು ತಿಳಿಸಿದ ಅವರು ನೆಲವನ್ನು ಬಿಡಬೇಡ ಮಗನೇ ಎಂದು ತಾಯಿ ಹೇಳಿರುವುದನ್ನು ನೆನಪಿಸಿದರು. ಮುಂದೆ ಅವರು ಬಬ್ಬರಿಯ ದೈವ್ವವನ್ನು ಪ್ರಸ್ತಾಪಿಸಿ...

ಮುಂಡಾಜೆಯಲ್ಲಿ ಸ್ಕೂಟರಿಗೆ ಬೊಲೆರೋ ಡಿಕ್ಕಿ ಶಾಲಾ ಬಾಲಕಿ ಮೃತ್ಯು

0

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗು ಅನರ್ಘ್ಯ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದಿದೆ ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು. ಅನರ್ಘ್ಯ (9) ಗಂಭೀರ ಗಾಯಗೊಂಡಿದ್ದಳು ತಂದೆಗೆ ಗಾಯವಾಗಿದೆ. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದು, ಬಳಿಕ ಮೃಪಟ್ಟಿರುವುದಾಗಿ ತಿಳಿದುಬಂದಿದೆ. ಅನರ್ಘ್ಯ ಉಜಿರೆ...

ಅಣಿಯೂರು ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರು; ಪ್ರಯಾಣಿಕರ ರಕ್ಷಣೆ

0

ಬೆಳ್ತಂಗಡಿ; ನೆರಿಯ ಗ್ರಾಮದ ರಸ್ತೆಯಲ್ಲಿ ಬಾಂದಾಡ್ಕ ಪ್ರದೇಶದಲ್ಲಿ ಅಣಿಯೂರು ನದಿಯಲ್ಲಿ ನಿನ್ನೆ ಒಪ್ಪಿಂದೊಮ್ಮೆಲೆ ನೀರು ಉಕ್ಕಿ ಹರಿದು ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ನೀರಿನಲ್ಲಿ ಮುಳುಗಿರುವ ಘಟನೆ ನಡೆದಿದೆ. ಚಾರ್ಮಾಡಿ ಗ್ರಾಮದ ಕಕ್ಕಿಂಜೆ ನಿವಾಸಿ ಸುಭೀಶ್ ಎಂಬವರು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುವಾಗ ರಾತ್ರಿ 9.30 ಕ್ಕೆ ಬಾಂದಡ್ಕ ಪ್ರದೇಶದಲ್ಲಿ ಅಣಿಯೂರು ಹೊಳೆ ಏಕಾಏಕಿ ಉಕ್ಕಿ ಹರಿದಿದೆ. ನೀರಿನ ಮಟ್ಟ ಏರಿಕೆಯಾಗಿ ಕಾರು ಮುಳುಗಿದೆ. ಕಾರು ಮುಂದಕ್ಕೆ ಚಲಿಸಲಾಗದ ಸ್ಥಿತಿ ಬಂದಿದ್ದು ಪ್ರಚಾಹಕ್ಕೆ ಸಿಲುಕುವ ಭೀತಿ ಎದುರಾಗಿ ಕಾರಿನಲ್ಲಿ ಇದ್ದವರು...

ಬೆಳ್ತಂಗಡಿ ಪಶು ಆಸ್ಪತ್ರೆ ಶೆಡ್ ನಲ್ಲಿ ಕಳಸ ಮೂಲದ ಕಾರ್ಮಿಕನ ಶವ ಪತ್ತೆ

0

ಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್‌ನಲ್ಲಿ ಮಲಗಿದ ರೀತಿಯಲ್ಲಿ ಕಳಸ ಮೂಲದ‌ಕೂಲಿ ಕಾರ್ಮಿಕನ ಮೃತದೇಹ ಪತ್ತೆ ಯಾಗಿದೆ ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತಿದ್ದು ಸಂತೆಕಟ್ಟೆ ಸೇರಿದಂತೆ ಪೇಟೆಯಲ್ಲಿ ರಾತ್ರಿ ಹೊತ್ತು ಮಲಗುತಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಕಳೆದ ರಾತ್ರಿ ಪಶು ಆಸ್ಪತ್ರೆಯ ಪಶು ಆ್ಯಂಬುಲೆನ್ಸ್ ನಿಲ್ಲಿಸುವ ಶೆಡ್ಡಿನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ...

ಮಾಲಾಡಿಯಲ್ಲಿ ಬಿರುಗಾಳಿ ಮನೆ ಕೃಷಿಗೆ ವ್ಯಾಪಕ ಹಾನಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.ಮಾಲಾಡಿಯ ಶಂತಿ ದಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದೆ ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ವಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ. ಲಭ್ಯ ಮಾಹಿತಿಯಂತೆ ಮಾಲಾಡಿ,ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು 11ಮನೆಗಳಿಗೆ ತೀವ್ರತರದ ಹಾನಿಗಳಾಗಿದೆ. ಭಾರೀಗಾತ್ರದ ಮರಗಳು ನೆಲಕ್ಕೆ ಉರುಳಿದೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು ಅಡಿಕೆ...

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ; ಇದೀಗ ಘಾಟಿ ಸಂಚಾರಕ್ಕೆ ಸುಗಮ

0

ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿಯುತ್ತಿದ್ದುಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿದೆಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನಲ್ಲಿ ಗುಡ್ಡ ಕುಸಿತ ವಾಗಿರುವುದಾಗಿ ತಿಳಿದು ಬಂದಿದೆ . ಭೂ ಕುಸಿತದಿಂದಾಗಿ ನೂರಾರು ಸಂಖ್ಯೆಯಲ್ಲಿ ವಾಹನಗಳು ಅಲ್ಲಲ್ಲಿ ಗಂಟೆಗಟ್ಟಲೆ ಕಾಯಬೇಕಾಗಿ ಬಂತು.ರಾತ್ರಿಯ ವೇಳೆ ಭೂ ಕುಸಿತವಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮಣ್ಣು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಭೂ ಕುಸಿತದಿಂದಾಗಿಕೆಲ ಗಂಟೆಗಳ ಕಾಲ ಘಾಟಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಯುಂಟಾಯಿತು. ನೂರಾರು ವಾಹನಗಳು ಘಾಟಿಯಲ್ಲಿ ಹಾಗೂ ಕೊಟ್ಟಿಗೆ ಹಾರದಲ್ಲಿ ಕಾಯಬೇಕಾಗಿ ಬಂತು. ಚಿಕ್ಕಮಗಳೂರು-ದಕ್ಷಿಣಕನ್ನಡ...

ತಾಲೂಕಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊ‌ಂಡರು.ತಾಲೂಕಿನ ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ನೆರಿಯ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ದೊಡ್ಡ ಪ್ರಮಾಣದಲ್ಲಿ ಹಾನಿಗಳಾಗಿದ್ದು ಈ ಪ್ರದೇಶಗಳಿಗೆ ಭೇಟಿ ನೀಡಿದರು. ಮನೆಗಳಿಗೆ ಆಗಿರುವ ಹಾನಿಯನ್ನು ಪರಿಶೀಲಿಸಿದ ಅವರು ಕೃಷಿ ಹಾನಿಯ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಅವರೊಂದಿಗೆ ಮಾತುಕತೆ ನಡೆಸಿ ಮಳೆಯಿಂದಾಗಿ ಹಾನಿಗೀಡಾಗಿರುವವರಿಗೆ...

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ ಗುರುತು ಪರಿಚಯ ಪತ್ತೆಯಾಗಿಲ್ಲ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ನೆರಿಯದಲ್ಲಿ ಬಿರುಗಳಿಗೆ ವ್ಯಾಪಕ ಹಾನಿ, ಜನಜೀವನ ಅಸ್ತವ್ಯಸ್ತ

0

ಬೆಳ್ತಂಗಡಿ: ತಾಲೂಕಿನ ನೆರಿಯ ಸೇರಿದಂತೆ ವಿವಿದೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ ಗಾಳಿಗೆ ಅತಿ ಹೆಚ್ಚಿನ ಹಾನಿಗಳು ಸಂಭವಿಸಿರುವುದಾಗಿ ತಿಳಿದು ಬಂದಿದೆ. ಅಣಿಯೂರಿನಿಂದ ನೆರಿಯ ಗ್ರಾಮಪಂಚಾಯತಿನ ವರೆಗೆ ರಸ್ತೆನದಿಯಲ್ಲಿದ್ದ ಮರಗಳು ಧರೆಗೆ ಉರುಳಿದೆ. ಪೆರಿಯಡ್ಕ ರಸ್ತೆಯಲ್ಲಿಯೂ ಐದಕ್ಕೂ ಅಧಿಕ ಮರಗಳು ಉರುಳಿ ಬಿದ್ದಿದೆ, ಅಣಿಯೂರು ಬೀಟಿಗೆ ರಸ್ತೆ, ಅಪ್ಪಿಲ ಕುಕ್ಕೆಜಾಲು ರಸ್ತೆ, ಸೇರಿದಂತೆ ವಿವಿದೆಡೆ ರಸ್ತೆಗಳಿಗೆ ಮರಗಳು ಮುರಿದು ಬಿದ್ದಿದ್ದು ವಾಹನ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.ಪ್ರಾಥಮಿಕ ಮಾಹಿತಿಯಂತೆ ಸುಮಾರು 50ಕ್ಕೂ ಅಧಿಕ...