ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ಜು.18ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ.ಬುಧವಾರ ಸಂಜೆಯ ವೇಳೆ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾದ ಹಿನ್ನಲೆಯಲ್ಲಿ ರಜೆ ನೀಡದಿರಲು ನಿರ್ಧರಿಸಲಾಗಿತ್ತು ಈ ಗುರುವಾರದಿಂದ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿದೆ ಎಂದಿದ್ದರು ಈ ತಾಲೂಕುಗಳಲ್ಲಿ ಭರೀ ಮಳೆ ಮುಂದುವರಿಯುತ್ತಿರುವ ಕಾರಣ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ
ಪಂಚೆ ಧರಿಸಿದ ಕಾರಣಕ್ಕೆ ಮಾಲ್ ನ ಒಳಗೆ ಪ್ರವೇಶ ನಿರಾಕರಿಸಿದ ರೈತನನ್ನು ಕರೆದು ಸನ್ಮಾನಿಸಿದ ಮಾಲ್ ನ ಆಡಳಿತ ಮಂಡಳಿ
ಬೆಂಗಳೂರು : ಪಂಚೆ ಧರಿಸಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಮಾಲ್ನೊಳಗೆ ಪ್ರವೇಶಕ್ಕೆ ಅನುಮತಿ ನೀಡದೆ ರೈತನಿಗೆ ಅಪಮಾನ ಮಾಡಿದ್ದ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವತಃ ಮಾಲ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡು ರೈತನನ್ನು ಸನ್ಮಾನಿಸಿದ ಅಪರೂಪದ ಘಟನೆ ಜರುಗಿದೆ. ನಿನ್ನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಿಸಲು ಆಗಮಿಸಿತ್ತು. ಇದೇ ವೇಳೆ ಅವರ ಜೊತೆಗೆ ಫಕೀರಪ್ಪ ಎಂಬ ರೈತರು ಕೂಡ ಬಂದಿದ್ದರು. ಅಲ್ಲಿನ ಭದ್ರತಾ ಸಿಬ್ಬಂದಿ ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಮಾಲ್...
ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ. ಇದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು...
ದ.ಕ ಉಡುಪಿ ಜಿಲ್ಲೆಗಳಲ್ಲಿ ಜು.18,19 ರೆಡ್ ಅಲರ್ಟ್
ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ.ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ.ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಬೆಳ್ತಂಗಡಿಯಲ್ಲಿ ಬಿಜೆಪಿ ವತಿಯಿಂದ ಸನ್ಮಾನ
ಬೆಳ್ತಂಗಡಿ: ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿಸಚಿವ ವಿ ಸೋಮಣ್ಣ ಅವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಸನ್ಮಾನಿಸಲಾಯಿತು. ಕೇಂದ್ರ ಸಚಿವ ವಿ.ಸೋಮಣ್ಣರವರು ಮಾತನಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರಿಗೆ ದೊಡ್ಡ ಭವಿಷ್ಯವಿದೆ. ಕೇವಲ ಐದಾರು ವರ್ಷದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತೀರ....
ಕಡಿರುದ್ಯಾವರದಲ್ಲಿ ಕಾಡಾನೆ ಕಾಟ; ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್...
ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆ ಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ವೇಣೂರುಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ...
ಬೆಳ್ತಂಗಡಿಯಲ್ಲಿ ಆಕ್ಷರ ದಾಸೋಹ ನೌಕರರ ಪ್ರತಿಭಟನೆ; ಜೀತದಾಳುಗಳಂತೆ ದುಡಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಮ — ಬಿ.ಎಂ.ಭಟ್
ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರನ್ನು ಅತೀ ಕಡಿಮೆ ಸಂಬಳದಲ್ಲಿ ಜೀತದಾಳುಗಳನ್ನಾಗಿ ಬೆಳಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆ ತನಕ ದುಡಿಸಿ ನಿವೃತ್ತಿಯಾಗುವಾಗ ಬರೀ ಕೈಯಲ್ಲಿ ಮನೆಗೆ ಕಳುಹಿಸುವುದು ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಚಿಕೆಯ ವಿಚಾರವಾಗಿದೆ ಎಂದು ಸಿಐಟಿಯು ಮುಖಂಡರಾದ ಬಿ.ಎಂ.ಭಟ್ಟ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಮಂಗಳವಾರ ಬೆಂಗಳೂರು ಪ್ರೀಡಂ ಪಾರ್ಕಲ್ಲಿ ಜುಲೈ 15 ರಿಂದ ಅನಿರ್ದಿಷ್ಟ ಕಾಲ ನಡೆಯುತ್ತಿರುವ, ಅಕ್ಷರ ದಾಸೋಹ ನೌಕರರ ಹೋರಾಟಕ್ಕೆ ಬೆಂಬಲಸೂಚಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಕೇಂದ್ರ ಹಾಗೂ ರಾಜ್ಯ ಸರಕಾರದ ಸಮಪಾಲಿನ ಯೋಜನೆಯಾದ ಅಕ್ಷರದಾಸೋಹ...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ "ಘನತೆಯ ಸಮಾಜಕ್ಕೆ ಒಂದಾಗೋಣ" ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಮಾ ಉಜಿರೆಯವರ ನೇತೃತ್ವದಲ್ಲಿ ಬೆಳ್ತಂಗಡಿ ಜೆ.ಎಮ್.ಎಫ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಮಾ ಉಜಿರೆ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರು ಸಂಘಟಿತ ಹೊರಾಟದ ಅಗತ್ಯತೆಯ ಬಗ್ಗೆ ತಿಳಿಸಿದರು. ಮುಖ್ಯ ಅತಿಯಾಗಿ ಆಗಮಿಸಿದ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಪರಂಗಿಪೇಟೆಯವರು ಮಾತನಾಡಿ ಮಹಿಳೆ ಮಾನವ ಕುಲದ...
ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬೆಳ್ತಂಗಡಿ : 'ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳಿಗೆ ಸಿಗುವ ಜವಾಬ್ದಾರಿಯ ಅವಕಾಶ. ಅದನ್ನು ಉತ್ತಮವಾಗಿ ಬಳಸಿಕೊಂಡು ವಿದ್ಯಾಸಂಸ್ಥೆಯನ್ನು ಬೆಳಗಿಸುವ ಪಣತೊಡಬೇಕು. ವಿದ್ಯಾರ್ಜನೆ ಜತೆ ತಾನು ಹಮ್ಮಿಕೊಳ್ಳುವ ಉತ್ತಮ ಚಟುವಟಿಕೆಗಳು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು' ಎಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು ಅವರು ಶುಕ್ರವಾರ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ 2024 ನೇ ಸಾಲಿಗೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ...














