ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಐವಾನ್ ಡಿ ಸೋಜ ಭೇಟಿ
ಬೆಳ್ತಂಗಡಿ; ವಿಧಾನ ಪರಿಷತ್ ಸದಸ್ಯ ಐವಾನ್ ಡಿ ಸೋಜ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಬೆಳ್ತಂಗಡಿ ಧರ್ಮಾಧ್ಯ ಕ್ಷರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಐವಾನ್ ಡಿಸೋಜ ಅವರನ್ನುವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವತಿಯಿಂದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಸನ್ಮಾನಿಸಿಸದರು.ಈ ಸಂದರ್ಭದಲ್ಲಿ ಐವಾನ್ ಡಿ ಸೋಜ ಅವರು ಬಿಷಪ್ ಅವರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಕಾರ್ ಜನರಲ್ ಅ.ವಂ. ಫಾ, ಜೋಸ್ ವಲಿಯಪರಂಬಿಲ್ ಹಾಗೂ ಧರ್ಮಗುರುಗಳು ಸ್ಥಳೀಯ ಮುಖಂಡರುಗಳು...
ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡ “ಶ್ರೀ ಗುರುಸಾನ್ನಿಧ್ಯ” ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 'ಶ್ರೀ ಗುರು ಸಾನಿಧ್ಯ' ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಮತ್ತು ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.ಉದ್ಘಾಟನೆ ನೆರವೇರಿಸಿದಬೆಂಗಳೂರು ಸೋಲೂರು ಮಠ ಆರ್ಯ ಈಡಿಗ ಸಂಸ್ಥಾನದ ಪೀಠಾಧಿಪತಿ ಶ್ರೀವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ" ಕರಾವಳಿಯಲ್ಲಿ ಅತಿ ಹೆಚ್ಚು ಸಹಕಾರ ಸಂಘಗಳಿದ್ದು ಇನ್ನೊಬ್ಬರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂಬ ನಿಟ್ಟಿನಲ್ಲಿ ಅವೆಲ್ಲವೂ ಸೇವೆ ನೀಡುತ್ತಿವೆ" ಎಂದರು. "ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಿಗದ ಸೇವೆ ಸಹಕಾರಿ ಸಂಘಗಳ ಮೂಲಕ ಸಿಗುತ್ತಿದ್ದು ಜನಸಾಮಾನ್ಯರಿಗೆ ಸರಳವಾಗಿ ತ್ವರಿತ...
ಜಿಲ್ಲೆಯಲ್ಲಿ ಪ್ರತಿ ನಿತ್ಯ ವಂಚನಾ ಜಾಲಗಳಿಗೆ ಬಲಿಯಾಗಿ ಲಕ್ಷಾಂತರ ಹಣ ಕಳೆದು ಕೊಳ್ಳುತ್ತಿರುವ ಜನರು
ಬೆಳ್ತಂಗಡಿ; ವಂಚನೆ ಜಾಲಗಳಿಗೆ ಬಲಿಯಾಗಿ ಜನರು ಪ್ರತಿನಿತ್ಯ ಲಕ್ಷಾಂತರ ಹಣ ಕಳೆದುಕೊಂಡು ವಂಚಿತರಾಗುತ್ತಿದ್ದರೂ ಮತ್ತೆ ಮತ್ತೆ ಇಂತಹ ಜಾಲಗಳಿಗೆ ಬಲಿಯಾಗುತ್ತಿರುವ ಘಟನೆಗಳು ಸಂಭವಿಸುತ್ತಿದೆ. ಕಳೆದ ಮೂರು ದಿನಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿದ್ದು ಈಬಗ್ಗೆ ಜಿಲ್ಲೆಯ ಹಲವು ಠಾಣೆಗಳಲ್ಲಿ ಹಾಗೂ ಸಿ.ಎನ್.ಎನ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಾಲಗಿದೆ. ದಾಖಲಾಗಿರುವ ಪ್ರಕರಣಗಳನ್ನು ಗಮನಿಸಿದೆರೆ ಲಕ್ಷಾಂತರ ಹಣವನ್ನು ಕಳೆದುಕೊಂಡಿರುವುದು ಕಂಡುಬರುತ್ತಿದೆ.ಸೈಬರ್ ಕ್ರೈಮ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರಲ್ಲಿ ಮೀಶೋದಲ್ಲಿ ನಗದು ಬಹುಮಾನ ಬಂದಿರುವುದಾಗಿ ತಿಳಿಸಿ ಹಣ ಪಡೆಯಬೇಕಾದರೆ ಟಿ.ಡಿ ಎಸ್. ಜಿ.ಎಸ್.ಟಿ ಸೇರಿದಂತೆ ವಿವಿಧ ರೀತಿಯ ಚಾರ್ಜುಗಳಿಗೆ...
ಧರ್ಮಸ್ಥಳ ಪೊಲೀಸ್ ಠಾಣೆಯ ಪಿ ಎಸ್.ಐ ಅನಿಲ್ ಕುಮಾರ್ ವರ್ಗಾವಣೆ; ಕಿಶೋರ್ ಪಿ ನೇಮಕ
ಬೆಳ್ತಂಗಡಿ: ಪಶ್ಚಿಮ ವಲಯ ಐಜಿಪಿ ಪೊಲೀಸ್ ಇಲಾಖೆಯ 24 ಸಬ್ ಇನ್ಸ್ ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಜು.10 ರಂದು ಆದೇಶಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳೆದ 1 ವರ್ಷ 11 ತಿಂಗಳು ಕರ್ತವ್ಯ ನಿರ್ವಹಿಸಿದ್ದ ಸಬ್ ಇನ್ಸ್ ಪೆಕ್ಟರ್ -1 ಅನಿಲ್ ಕುಮಾರ್ ಡಿ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್-1 ಕಿಶೋರ್.ಪಿ ಅವರನ್ನು ನೇಮಕ ಮಾಡಲಾಗಿದೆ
ಮಂಗಳೂರು ಕಳ್ಳತನ; ಚಡ್ಡಿ ಗ್ಯಾಂಗನ್ನು ಮಟ್ಟಹಾಕಿದ ಪೊಲೀಸರು; ನಾಲ್ವರ ಬಂಧನ
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಮುಂಜಾವ ನುಗ್ಗಿ ಸುಲಿಗೆಗೈದ ಚಡ್ಡಿಗ್ಯಾಂಗ್ನ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ರಾಜು ಸಿಂದ್ವಾನಿಯ (24), ಮಯೂರ್ (30), ಬಾಲಿ (22), ವಿಕಿ (21) ಆರೋಪಿಗಳಾಗಿದ್ದಾರೆ. ಇವರಿಂದ ಸುಲಿಗೆ ಮಾಡಿದ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ಗಳು ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಷೇರು ಮಾರುಕಟ್ಟೆ ಹೆಸರಿನಲ್ಲಿ ಬೆಳ್ತಂಗಡಿಯ ವ್ಯಕ್ತಿಗೆ 3ಲಕ್ಷ ವಂಚನೆ; ಪ್ರಕರಣ ದಾಖಲು
ಬೆಳ್ತಂಗಡಿ; ಷೇರು ಮಾರುಕಟ್ಟೆಯಲ್ಲಿ ಹೂಡಿಕೆಮಾಡುವುದೆಂದು ನಂಬಿಸಿ ಬೆಳ್ತಂಗಡಿಯ ವ್ಯಕ್ತಿಯೊಬ್ಬರಿಂದ ವಂಚಕರು 3,30,000 ಹಣ ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇನ್ಸ್ತಗ್ರಮ್ ನಲ್ಲಿ ಬಂದ ಲಿಂಕ್ ಮೂಲಕ ವಾಟ್ಸಪ್ ಗ್ರೂಪಿಗೆ ಸೇರಿದ ವ್ಯಕ್ತಿಗೆ ಅಲ್ಲಿ ಷೇರು ಮಾರುಕಟ್ಟೆಯ ಬಗೆಗೆ ಮಾಹಿತಿ ನೀಡಿದ್ದಾರೆ ಬಳಿಕ ಅವರು ಕಳುಹಿಸಿದ ಲಿಂಕ್ ಮುಖಾಂತರ ಎ.ಸಿ ಮಾಕ್ಸ್, JOHCM ಎಂಬ ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿದ್ದಾರೆ ಬಳಿಕ ಈ ಆಪ್ ಗಳ ಮೂಲಕ ದೂರುದಾರರ ಖಾತೆಯಿಂದ ಅವರು ಹೇಳಿದ ವಿವಿಧ...
ಅನಂತ ಹುದೆಂಗಜೆ ಅವರ ‘ಸಿರಿಧಾನ್ಯ: ಸಿರಿ – ಸರಿ’ ಕೃತಿ ಬಿಡುಗಡೆ
ಬೆಳ್ತಂಗಡಿ: ಅನಂತ ಹುದೆಂಗಜೆ ಅವರು ಬರೆದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪ್ರಕಾಶನ ಮಾಡಿರುವ 'ಸಿರಿಧಾನ್ಯ: ಸಿರಿ - ಸರಿ' ಕೃತಿಯನ್ನು ಜು. 8ರಂದು ಧರ್ಮಸ್ಥಳದ ಅಮೃತವರ್ಷಿಣಿಯಲ್ಲಿ ಉದ್ಘಾಟನೆಗೊಂಡ ಶ್ರೀ. ಕ್ಷೇ. ಧ.ಗ್ರಾ ಯೋ. ಯೋಜನಾಧಿಕಾರಿಗಳು, ನಿರ್ದೇಶಕರು, ಪ್ರಾದೇಶಿಕ ನಿರ್ದೇಶಕರ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆ ಮಾಡಿದರು. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಸಿರಿ ಮಿಲೆಟ್ಸ್ ಹಿರಿಯ ನಿರ್ದೇಶಕ...
ಪುತ್ತೂರು ಎಸಿ ಯವರಿಂದ ಹೆದ್ದಾರಿ ಪರಿಶೀಲನೆ; ಸಂಚಾರ ಯೋಗ್ಯ ರಸ್ತೆ ನಿರ್ಮಿಸಲು ಸೂಚನೆ
ಬೆಳ್ತಂಗಡಿ; ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಾಗುತ್ತಿದ್ದು ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹೋಪಾತ್ರ ಮಂಗಳವಾರ ಭೇಟಿ ನೀಡಿ ರಸ್ತೆ ಸ್ಥಿತಿ ವೀಕ್ಷಣೆ ನಡೆಸಿದರು.ಉಜಿರೆ,ಕಾಶಿಬೆಟ್ಟು ಮುಂಡಾಜೆ ಮೊದಲಾದ ಕಡೆ ರಸ್ತೆಯ ಪರಿಸ್ಥಿತಿ ವೀಕ್ಷಿಸಿದ ಅವರು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಿ ಮುಂದಿನ ಮೂರು ದಿನಗಳಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿಕೊಡುವಂತೆ ತಿಳಿಸಿದರು.ರಸ್ತೆಯುದ್ದಕ್ಕೂ ಅಲ್ಲಲ್ಲಿ ನಿಂತಿರುವ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ, ನಡೆದಾಡಲು ಸಾಧ್ಯವಾಗದ ಕಡೆಗಳಲ್ಲಿ ಕೆಸರು ತೆರವುಗೊಳಿಸಿ ಜಲ್ಲಿ ಹಾಕುವಂತೆ, ಅಪಾಯಕಾರಿ...
ಗುತ್ತಿಗೆ ದಾರರ ಸಂಘದಿಂದ ಮಾಜಿ ಶಾಸಕ ಬಂಗೇರರಿಗೆ ನುಡಿ ನಮನ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆ ದಾರರರ ಸಂಘದ ಮಹಾ ಸಭೆಯ ಸಂದರ್ಭದಲ್ಲಿ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರಿಗೆ ನುಡಿ ನಮನ ಸಲ್ಲಿಸಲಾಯತು.ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ, ಕಾರ್ಯನಿರ್ವಾಹಕ ಅಭಿಯಂತರರಾದ ನಿತಿನ್, ಸಂಘದ ಕಾರ್ಯದರ್ಶಿ ದಯಾನಂದ, ಮುಖಂಡರುಗಳಾದ ವಸಂತ ಮಜಲು, ಗಿರಿರಾಜ್ ಬಾರಿತ್ತಾಯ, ಆದಂ ಸಾಹೇಬ್, ಕೃಷ್ಣಕುಮಾರ್, ಪ್ರವೀಣ್ ಉಪಸ್ಥಿತರಿದ್ದರು.
ವೈನ್ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ; ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಮೂಡುಕೋಡಿ ವೈನಗ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.ನಿಟ್ಟಡೆ ಗ್ರಾಮದ ನಿವಾಸಿ ಪ್ರಸಾದ ಯಾನೆ ಬಾಡು ಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತಾನು ಮೋಹನ್ ಎಂಬವರೊಂದಿಗೆ ಮೂಡುಕೋಡಿ ಗ್ರಾಮದ ವೈನ್ ಶಾಪಿಗೆ ಬಂದಿದ್ದ ವೇಳೆ ಆರೋಪಿಗಳಾದ ವಸಂತ ಕೋಟ್ಯಾನ್ ಹಾಗೂ ಸಂತೋಷ್ ನಾರ್ಲ ಎಂಬವರು ಪ್ರಸಾದ್ ನನ್ನು ತಡೆದು ನಿಲ್ಲಿಸಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಹಲ್ಲೆಗೆ ಒಳಗಾದ ಪ್ರಸಾದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರು...














