ಶಿಬಾಜೆಯಲ್ಲಿ ವಿದ್ಯುತ್ ಆಘಾತಕ್ಕೆ ಯುವತಿ ಬಲಿ
ಬೆಳ್ತಂಗಡಿ; ಸ್ಟೇ ವಯರ್ ನಲ್ಲಿ ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳುಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಲಾ ಎಂಬಲ್ಲಿ ಜೂನ್ 27 ಗುರುವಾರ ಸಂಜೆ ನಡೆದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿಯಾಗಿದ್ದಾರೆ ಮನೆಯ ಸಮೀಪದ ರಸ್ತೆಗೆ ಪಾರ್ಸೆಲ್ ಬಂದಿದ್ದರಿಂದ ಅದನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾಳೆ ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸಮಾಡುತ್ತಿದ್ದಳುಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾರ್...
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಶಾಸಕ ಹರೀಶ್ ಪೂಂಜ ಸೇರಿದಂತೆ 65ಮಂದಿಗೆ ನ್ಯಾಯಾಲಯದ ಸಮನ್ಸ್ ಜಾರಿ
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತುಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ 65 ಮಂದಿ ಆರೋಪಿಗಳಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಥಮ ಕೇಸ್ನಲ್ಲಿ 28 ಮಂದಿ ಮತ್ತು 2ನೇ ಕೇಸ್ನಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು,...
ಮಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು
ಮಂಗಳೂರು, ಜೂ. 27. ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು, ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಛ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು....
ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನ ಬೆಂಕಿಗಾಹುತಿ
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರ್ರಾಷ್ಟೀಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ; ಪಾರೆಂಕಿಯ ಫ್ರಾನ್ಸಿಸ್ ಮತ್ತು ಡಯನಾ ಮಿಸ್ಕಿತ್ ರವರ ಪುತ್ರ ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆ ಮಡಂತ್ಯಾರ್9ನೇ ಕ್ಲಾಸಿನ ವಿಧ್ಯಾರ್ಥಿಫ್ಲಾಯ್ಡ್ ಅವರು ಭಾರತೀಯ ಟಾರ್ಗೆಟ್ ಬಾಲ್ ಏಸೋಸಿಯೇಶನ್ (ರಿ) ಇವರ ವತಿಯಿಂದರಾಜಸ್ತಾನದ ಅಲ್ವಾರ್ನಲ್ಲಿ, ರಾಷ್ಟ್ರ ಮಟ್ಟದಲ್ಲಿ ನಡೆದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಜುಲಾಯಿ 8 ರಿಂದ 11 ರವರೆಗೆ ನೇಪಾಳದ ಕಟ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಶ್ಯಾ ಟಾರ್ಗೆಟ್ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವರು. ಶಾಲಾ ದೈಹಿಕ ಶಿಕ್ಷಕರು ಮಂಜುನಾಥ್ ಅವರಿಂದ ಇವರು ತರಬೇತಿ ಪಡೆದಿದ್ದಾರೆ.
ಜೂ 27ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮಲ್ಕೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಉಜಿರೆಯಲ್ಲಿ ಮರ ಬಿದ್ದು ವಾಹನಗಳು ಜಖಂ; ಪ್ರತಿಭಟಿಸಿದ ಉದ್ಯಮಿ ಪ್ರವೀಣ್ ಹಳ್ಳಿಮನೆ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರು ಮತ್ತು ಓಮ್ಮಿ ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್ ಸೇರಿದಂತೆ 15ಮಂದಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂ 24ರಂದು ಉಜಿರೆ ಪೇಟೆಯಲ್ಲಿ ಭಾರೀ ಗಾತ್ರದ ಮರ ರಸ್ತೆಮೇಲೆ ಉರುಳಿ ಬಿದ್ದು ವಾಹನಗಳು ಜಂಖಂಗೊಂಡು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಹೆದ್ದಾರಿ ಕಾಮಗಾರಿ ನಡೆಸುತ್ತಿರುವವರ ಬೇಜವಾಬ್ದಾರಿಯಿಂದಾಗಿ ಘಟನೆ ಸಂಭವಿಸಿದೆ ಎಂದು ಸಾರ್ವಜಮಿಕರು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸ್ಥಳೀಯರು,...
ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆಯನ್ನು ಸಂಚಾರಕ್ಕೆ ತೆರವು ಗೊಳಿಸಲು ಕಾರ್ಯಾಚರಣೆ ನಡೆಸಿದರು.ಎಸ್ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಹೈವೇ ಕಾಮಗಾರಿಯಲ್ಲಿ ತೊಎಗಿದ್ದ ಕಾರ್ಮಿಕರು ಸಹಕರಿಸಿದರು. ಪ್ರತಿನಿತ್ಯ ಮರಗಳು ಮುರಿದು ಬೀಳುತ್ತಿರುವುದು...
ಉಳ್ಳಾಲ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತ್ಯು
ಉಳ್ಳಾಲ: ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಎರಡೂ ಮನೆಗಳು ಅಕ್ಕಪಕ್ಕದಲ್ಲಿಯೇ ಇವೆ. ಆವರಣಗೋಡೆ ಇನ್ನೊಂದು ಮನೆಯ ಗೋಡೆಯ...
ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ಕಾರ್ಯದರ್ಶಿಯಾಗಿ ಜೈಸನ್ ಪಟ್ಟೇರಿಲ್ ಆಯ್ಕೆ
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಯುವ ಮುಖಂಡ ಜೈಸನ್ ಪಟ್ಟೇರಿಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಕಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಸಮಿತಿಯ ಪದಾಧಿಕಾರಿಗಳ ಚುನಾವಣೆ ಇತ್ತೀಚೆಗೆ ನಡೆಯಿತು. ಸಮಿತಿಯ ಕಾರ್ಯದರ್ಶಿ ಯಾಗಿ ಜೈಸನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೈಸನ್ ಕೆ.ಎಸ್.ಎಂ.ಸಿ ಎ ಯ ಧರ್ಮಸ್ಥಳ ವಲಯ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.















