ಕೆಸರು ನೀರಿನಿಂದ ತುಂಬಿದ ಹೆದ್ದಾರಿಯಲ್ಲಿ ಪ್ರಯಾಣಿಕರ ಸಂಕಟ; ಉಜಿರೆಯಲ್ಲಿ ರಸ್ತೆಯಲ್ಲಿ ಕುಳಿತು ಪ್ರವೀಣ್ ಅವರಿಂದ ಪ್ರತಿಭಟನೆ

0

ಬೆಳ್ತಂಗಡಿ; ಪೂಂಜಾಲಕಟ್ಟೆ ಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಬೆಳ್ತಂಗಡಿಯಿಂದ ಮುಂಡಾಜೆಯವರೆಗೆ ಸಂಪೂರ್ಣ ರಸ್ತೆ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು ಅಪಘಾತಗಳಿಗೆ ಕಾರಣವಾಗುತ್ತಿದೆ. ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಅವರು ಏಕಾಂಗಿಯಾಗಿ ಭಾನುವಾರ ಉಜಿರೆಯಲ್ಲಿ ರಸ್ತೆಯ ಕೆಸರಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅವರ ಪ್ರತಿಭಟನೆಯೊಂದಿಗೆ ಸಾರ್ವಜನಿಕರು ಕೈಜೋಡಿಸಿದರು. ರಸ್ತೆ ಅಗಲೀಕರಣ ಕಾಮಗಾರಿಯಿಂದ ಉಜಿರೆಯಿಂದ ಮುಂಡಾಜೆ ಸಾಗುವ ರಸ್ತೆ ಬೆಳ್ತಂಗಡಿಯಿಂದ ಮುಂದಕ್ಕೆ ಕಾಶಿಬೆಟ್ಟು ಸಮೀಪ, ಮಡಂತ್ಯಾರಿಂದ ಮುಂದಕ್ಕೆ ಬರುವ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ...

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

0

ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ ಅದನ್ನು ಸಮಾಜಕ್ಕೆ ದಾನ ಮಾಡಬೇಕೆಂಬ ಹೃದಯ ವೈಶಾಲ್ಯತೆ ದೊಡ್ಡದು ಎಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಿಕ ವಸಂತ ಆಚಾರ್ಯ ಹೇಳಿದರು.ನ್ಯಾಯವಾದಿ ಹಾಗೂ ನೋಟರಿ ಪಬ್ಲಿಕ್ ಆಗಿರುವ ಮುರಳೀಧರ ಬಲಿಪ ಅವರು ತಮ್ಮ ಬಲಿಪ ರೆಸಾರ್ಟ್ ಮೂಲಕ ಶನಿವಾರ ಹಮ್ಮಿಕೊಂಡಿದ್ದ 9 ಸರಕಾರಿ ಶಾಲೆಗಳಿಗೆ 2.50 ಲಕ್ಷ ರೂ...

ಉಜಿರೆ ರುಡ್‌ಸೆಟ್‌ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ”

0

ಉಜಿರೆ: ಉಜಿರೆಯ ರುಡ್‌ಸೆಟ್‌ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್‌ ಸಂಸ್ಥೆಗಳ ಅಧ್ಯಕ್ಷರಾದ ಪರಮ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಭಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ರುಡ್‌ಸೆಟ್‌ ಸಂಸ್ಥೆಗಳ ತರಬೇತಿಯಲ್ಲಿ ಪ್ರಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಭಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು, ಇದರಿಂದ ಸ್ವಂತ ಉದ್ಯೋಗ ಪ್ರಾರಂಬಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ...

ಕಳೆಂಜದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

0

ಕಳೆಂಜ; ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾಯರ್ತಡ್ಕ- ಶಿಬರಾಜೆ ರಸ್ತೆಯಲ್ಲಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ವುವ ಕಾರ್ಯ ವನ್ನು ಹಾಗೂ ರಸ್ತೆಯ ಇಕ್ಕೆಲಗಳಲ್ಕಿರುವ ಗಿಡ ಗಂಟಿಗಳನ್ನು ತೆಗೆದು ರಸ್ತೆಯಲ್ಲಿ ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಸಂಘಟನೆಯ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಶ್ರಮದಾನದಲ್ಲಿ ಭಾಗಿಗಳಾದರು.

ತಾಲೂಕಿನಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ, ರೆಡ್ ಅಲೆರ್ಟ್ ಘೋಷಣೆ; ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ

0

ಬೆಳ್ತಂಗಡಿ; ಮುಂಗಾರು ಚುರುಕುಗೊಂಡಿದ್ದು ಜೂನ್ 22ಶನಿವಾರದಿಂದ ನಾಲ್ಕು ದಿನಗಳು ತಾಲೂಕಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಎರಡು ದಿನ ರೆಡ್ ಅಲರ್ಟ್ ಹಾಗೂ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ತಿಳಿಸಿದ್ದಾರೆ.ಜೂ.22 ರಿಂದ ಆರೆಂಜ್ ಅಲೆರ್ಟ್ ಇದ್ದು ಮಳೆ ಪ್ರಮಾಣ ಹೆಚ್ಚಾಗಲಿದೆ.ಜೂ.22ರಂದು ಹಾಗೂ ಜೂ.25 ರಂದು ಆರೆಂಜ್ ಅಲರ್ಟ್, ಜೂ.23 ಮತ್ತು ಜೂ.24ರಂದು ರೆಡ್ ಅಲರ್ಟ್ ಹೊಂದಿದೆ. ಈ ಸಂದರ್ಭದಲ್ಲಿ ಸಿಡಿಲು, ಮಿಂಚು ಸಂಭವಿಸುವ ಸಾಧ್ಯತೆಯಿರುವುದರಿಂದ ಜನಸಾಮಾನ್ಯರು ಮರದಡಿ, ಬಯಲು ಪ್ರದೇಶದಲ್ಲಿ ಒಂದೆಡೆ ನಿಲ್ಲಬಾರದು....

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

0

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಶುಕ್ರವಾರ ಬೆಳ್ತಂಗಡಿ, ಉಜಿರೆ, ಹಳೆಪೇಟೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಸಸಿ ಕಾನೂನು ಬಾಹಿರವಾಗಿ ಎಲ್.ಇ.ಡಿ ಬಲ್ಬ್ ಗಳನ್ನು ಉಪಯೋಗಿಸುವವರಿಗೆ ಎಚ್ಚರಿಕೆ ನೀಡಲಾಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು. ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು...

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಸಂಸ್ಥಾಪನಾ ದಿನಾಚರಣೆ

0

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ )ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ನಗರದ ಪಕ್ಷದ ಕಛೇರಿ ಮುಂಭಾಗದಲ್ಲಿ ದ್ವಜಾರೋಹಣವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಕ್ಷದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ವಹಿಸಿದರು.ಪಕ್ಷದ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಇದರ ಅಧ್ಯಕ್ಷರಾದ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟನೆ

0

ಧರ್ಮಸ್ಥಳ: ಸಹಕಾರಿ ಕ್ಷೇತ್ರ ಬಲಿಷ್ಠವಾದಾಗ ಗ್ರಾಮೀಣ ಪ್ರದೇಶದ ಜನರೂ ಆರ್ಥಿಕ ವಾಗಿ ಸಬಲರಾಗಲು ಸಾಧ್ಯವಿದೆ ಜನರೂ ಸಹಕಾರಿ ಸಂಘಗಳೊಂದಿಗೆ ಸೇರಿ ಸಂಸ್ಥೆಯ ಯಶಸ್ವಿಗೆ ಸಹಕರಿಸಬೇಕು ಎಂದು‌ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರುಅವರು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಸಹಕಾರಿ ರಂಗ ಗಟ್ಟಿಯಾಗಬೇಕು ಮತ್ತು ಬಲಿಷ್ಠವಾಗಬೇಕು.ಧರ್ಮಸ್ಥಳ ಕ್ಷೇತ್ರದಲ್ಲಿರುವ ಸಂಸ್ಥೆ ಒಳ್ಳೆಯ ರೀತಿಯಲ್ಲಿ ನಡೆದು ಸರ್ವಾಂಗೀಣ ಪ್ರಗತಿ ಸಾಧಿಸಿದೆ. ಸಹಕಾರಿ ರಂಗ ಮತ್ತು ಧರ್ಮಸ್ಥಳದ ಸ್ವಸಹಾಯ ಸಂಘಗಳು ಜೊತೆ ಜೊತೆಯಾಗಿ...

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

0

ಬೆಳ್ತಂಗಡಿ:ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ ನಡೆಯಿತು.ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಲಿ ಮದ್ದಡ್ಕ ನೆರೆವೇರಿಸಿದರು ,ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷರಾದ ಹಮೀದ್ ಆಲಂದಿಲ ವಹಿಸಿದ್ದರು.ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ,ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ,ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷರಾದ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು...

ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷರಾಗಿ ಈಶ್ವರಿ, ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರೀ ಕಳೆಂಜ ಆಯ್ಕೆ

0

ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ (ರಿ) ಸಿಐಟಿಯು ಇದರ ಮಹಾಸಭೆಯಲ್ಲಿ ನೂತನನೂತನ ಅದ್ಯಕ್ಷರಾಗಿ ಈಶ್ವರಿ ಶಂಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರಿ ಕಳೆಂಜಖಜಾಂಜಿಯಾಗಿ ಬಿ.ಎಂ.ಭಟ್ಉಪಾದ್ಯಕ್ಷರುಗಳಾಗಿ ನೆಬಿಸಾ, ಸುಂದರಿ ಕುತ್ಲೂರು, ಪುಷ್ಪಾ, ಕುಮಾರಿಸಹಕಾರ್ಯದರ್ಶಿಗಳಾಗಿ ಜಯರಾಮ‌ ಮಯ್ಯ, ಕೈರುನ್ನೀಸಾ, ಪ್ರೇಮ ಕುದ್ಯಾಡಿಸರ್ವಾನುಮತದಿಂದ ಆಯ್ಕೆಯಾದರುಸಮಿತಿ ಸದಸ್ಯರುಗಳಾಗಿ ಯಕ್ಷಲ ಬರಂಗಾಯ, ಪ್ರೇಮ ಲತ ಶಿಬಾಜೆ, ಸಾರಾ, ಜಯಂತಿ ಮುಂಡಾಜೆ, ಹರಿಣಾಕ್ಷಿ ಉಜಿರೆ, ಪದ್ಮಾವತಿ ಬೆಳಾಲು, ಕುಸುಮ ಪಡ್ಪು, ಮಮ್ತಾಜ್ ನಾವೂರು, ಶಾರದಾ ಚಾರ್ಮಾಡಿ, ಸುಮನ ಲ್ಯಾಲ, ಸುನಂದ ಮುಂಡಾಜೆ, ಪ್ರೇಮ ಬೆಳಾಲು, ಡೀಗಯ...