ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ವಿರೋಧಿಸಿ ಬಿಜೆಪಿಯಿಂದ ಜೂ.18 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ

0

ಬೆಳ್ತಂಗಡಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ,ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜಮತಾ ಪಕ್ಷ ಬೆಳ್ತಂಗಡಿ ಮಂಡಲ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಜೂ 18ಮಂಗಳವಾರಬೆಳಿಗ್ಗೆ 10.00 ಗಂಟೆಗೆ ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ . ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ‌ ಸೇರಿದಂತೆ ಹಿರಿಯ ಮುಖಂಡರುಗಳು ಭಾಗಬಹಿಸುವ ನಿರೀಕ್ಷೆಯಿದೆ.

ಶಾಸಕ ಹರೀಶ್ ಪೂಂಜರ ‘ಮಸೀದಿ‌ಗಳಲ್ಲಿ ಶಸ್ತ್ರಾಸ್ತ್ರ’ ಹೇಳಿಕೆ; ಬೆಳ್ತಂಗಡಿ ತಾಲೂಕು ಜಮಾಅತ್ ಗಳ ಒಕ್ಕೂಟದಿಂದ ಠಾಣೆಗೆ, ಸ್ಪೀಕರ್ ಗೆ ದೂರು ಸಲ್ಲಿಕೆ

0

ಬೆಳ್ತಂಗಡಿ; ಮುಸ್ಲಿಂ ಸಮುದಾಯದ ಧಾರ್ಮಿಕ ಆರಾಧನಾ ಕೇಂದ್ರಗಳಾದ ಮಸೀದಿ ಮತ್ತು ಮದರಸಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ ಗಳನ್ನು ಪೇರಿಸಿಡಲಾಗಿದೆ ಎಂದು ದ್ವೇಷಪೂರಿತವಾಗಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ‌ಕೈಗೊಳ್ಳಬೇಕೆಂದು ಆಗ್ರಹಿಸಿ‌ 'ಬೆಳ್ತಂಗಡಿ ತಾಲೂಕು ಜಮಾಅತ್ ಗಳ ಒಕ್ಕೂಟ'ದಿಂದ ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಗೂ ವಿಧಾನ ಸಭೆಯ ಸ್ಪೀಕರ್ ಅವರಿಗೆ ಲಿಖಿತ ದೂರು ಸಲ್ಲಿಸಲಾಯಿತು. ತಾಲೂಕಿನ ಜಮಾಅತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಆಯಾಯಾ ಪ್ರದೇಶದ ಜಮಾಅತ್ ಪ್ರಮುಖರನ್ನೊಳಗೊಂಡ ಪಕ್ಷ‌ ಮತ್ತು‌ ವಿವಿಧ ಸಂಘಟನಾ ಅತೀತವಾದ 'ತಾಲೂಕು...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಸಂವಿದಾನ ವಿರೋದಿ ಹೇಳಿಕೆಗೆ ಸಿಪಿಐಎಂ ಖಂಡನೆ — ಬಿ.ಎಂ.ಭಟ್

0

ಬೆಳ್ತಂಗಡಿ; ಎಲ್ಲಾ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಇವೆ ಎಂದು ತಾನೇ ಖುದ್ದಾಗಿ ನೋಡಿ ಬಂದಂತೆ, ಯಾವುದೇ ಸಾಕ್ಷಿಗಳಿಲ್ಲದೆ ಗಂಬೀರ ಆಪಾದನೆ ಮಾಡಿದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರ ಹೇಳಿಕೆ ಖಂಡನೀಯ ಹಾಗೂ ಸಂವಿಧಾನ ವಿರೋದಿ ಮತ್ತು ಮತಾಂಧ ಹೇಳಿಕೆಯಾಗಿದೆ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಬಲವಾಗಿ ಖಂಡಿಸುತ್ತದೆ ಎಂದು ಸಿಪಿಐಎಂ ಮುಖಂಡ ಬಿ.ಎಂ.ಭಟ್ ಹೇಳಿದ್ದಾರೆ.ಈ ರೀತಿ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪೂಂಜರು ಕರ್ನಾಟಕ ರಾಜ್ಯದಲ್ಲಿ ಕಳೆದ 4 ವರ್ಷ ಬಿಜೆಪಿ ಸರಕಾರ ಇದ್ದಾಗ ಎಲ್ಲಾ ಮಸೀದಿಗಳ...

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬೆಳ್ತಂಗಡಿ ಯ ಸಂದೇಶ್. ಎಸ್.ಜೈನ್ ಆಯ್ಕೆ

0

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ:1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

ಶಾಸಕ ಹರೀಶ್ ಪೂಂಜ ವಿರುದ್ದ ಪೂಂಜಾಲಕಟ್ಟೆ ಠಾಣೆಗೆ ದೂರು

0

ಬೆಳ್ತಂಗಡಿ; ಜಾತಿ, ಧರ್ಮಗಳ ನಡುವೆ ವೀಷ ಬೀಜ ಬಿತ್ತುತ್ತಿರುವ ಶಾಸಕರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಖಬೇಕು ಎಂದು ಶಂಸುಲ್ ಹುದಾ ಜುಮಾ ಮಸೀದಿ ಕುಂಡಡ್ಕ ಆಡಳಿತ ಸಮಿತಿಯವರು ಪೂಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಸಮದ್ ಕುಂಡಡ್ಕ ಆರಿಸ್ ಹನಿಪಿ ವೈ.ಕೆ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಯು.ಕೆ ಉಪ ಕಾರ್ಯದರ್ಶಿ ಅನಿಫ್ ಕೇರ್ಯ ಉಪಸ್ಥಿತರಿದ್ದರು

ರಾಜಕೀಯ ಪ್ರೇರಿತ ಸುಳ್ಳು ಪ್ರಕರಣಗಳಲ್ಲಿ ಬಿಜೆಪಿ ನಾಯಕರಿಗೆ ಜಾಮೀನು ಮಂಜೂರು; ಬಿಜೆಪಿ ಸಂತಸ

0

ಬೆಳ್ತಂಗಡಿ :ಕಾಂಗ್ರೆಸ್ ನಾಯಕರ ದ್ವೇಷ ರಾಜಕೀಯದ ಫಲಶ್ರುತಿಯಾಗಿ ವಿವಿಧ ರೀತಿಯಲ್ಲಿ ಸುಳ್ಳು ಪ್ರಕರಣಗಳನ್ನು ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಿದ್ದು. ಈ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯಕ್ಕೆ ಸಂದ ಜಯವೆಂದು ಬೆಳ್ತಂಗಡಿ ಬಿಜೆಪಿ ಸಂತಸ ವ್ಯಕ್ತಪಡಿಸಿದ್ದಾರೆ.ವಿಕಸಿತ ಭಾರತದ ಕಲ್ಪನೆಯಡಿ ಬಿಜೆಪಿ ರಾಷ್ಟ್ರವ್ಯಾಪಿ ಅಭಿವೃದ್ಧಿಯ ಪಣತೊಟ್ಟು ಕಾರ್ಯನಿರ್ವಹಿಸುತ್ತಿದ್ದು. ಹತಾಶೆಯಿಂದ ಸ್ಥಳೀಯ ಕಾಂಗ್ರೆಸ್ಸಿಗರು ವಿಕೃತ ಮನಸ್ಸಿನಿಂದ ಯುವ ನಾಯಕರನ್ನು , ಕಾರ್ಯಕರ್ತರನ್ನು ಹತ್ತಿಕ್ಕುವ ದುರುದ್ದೇಶದಿಂದ ಆಡಳಿತ ವ್ಯವಸ್ಥೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿದ್ದರೂ ಧರ್ಮದ ಈ ನಾಡಿನಲ್ಲಿ ಸತ್ಯ ಹೊರಬೀಳಲಿದೆ. ಬಿಜೆಪಿ ನ್ಯಾಯಾಲಯದ ಮೇಲೆ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು ಉದ್ಘಾಟನೆ

0

ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ "ಉನ್ನತಿ" ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಕಲ್ಲೇರಿಯ ಸಂಘದ ವಠಾರ ನಡೆಯಲಿದೆ. ನೂತನ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ. ರೈತ ಸಭಾ ಭವನ ಹಾಗೂ ಉಪಹಾರ ಭವನವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರು ಆದ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಪ್ರೀತಮ್...

ಕೋಮು ದ್ವೇಷದ ಹೇಳಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಒತ್ತಾಯ

0

ಬೆಳ್ತಂಗಡಿ : ಮಸೀದಿಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕೋಮು ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಎಸ್ ಕೆ‌.ಎಸ್.ಎಸ್. ಎಫ್ ಬೆಳ್ತಂಗಡಿ ಘಟಕ ಆರೋಪಿಸಿದ್ದು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ದಕ ಜಿಲ್ಲೆಯ ಮುಳಿಯಾರಿನಲ್ಲಿ ನಡೆದ ಘಟನೆ ಮುಂದಿಟ್ಟುಕೊಂಡು ಮುಸ್ಲಿಮರ ಧಾರ್ಮಿಕ ಕೇಂದ್ರವಾದ ಮಸೀದಿಗಳ ಬಗ್ಗೆ ಶಾಸಕರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ, ಈ ಮೂಲಕ ಕೋಮು ಸಾಮರಸ್ಯವನ್ನು ಕದಡಿಸುವ ಉದ್ರೇಕಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಪೂಂಜ ವಿರುದ್ಧ ಸೂಕ್ತ ಕಾನೂನು ಕ್ರಮ...

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ

0

ಬೆಳ್ತಂಗಡಿ; ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ...

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಬಾ ಭವನದಲ್ಲಿ ಆಯೋಜಿಸಲಾಗಿತ್ತುತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕುಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿ ಪಡಿಸಬೇಕುಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆ ಗಳನ್ನು ಸಲ್ಲಿಸಬೇಕು ಒಕ್ಕೂಟ ಸಭೆ ಆದ...