ಪಕ್ಷದ ಕಾರ್ಯಕರ್ತರ ಜನಸಾಮಾನ್ಯರ ಹಿತಕಾಯಲು ಸದಾ ಬದ್ದ: ರಕ್ಷಿತ್ ಶಿವರಾಂ

0

ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಈ ಸೋಲಿನಿಂದ ನಾವು ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ. ಅವರ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೆವೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಡೆದ ಮತಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ 16000 ಸಾವಿರ ಮತಗಳನ್ನು ಕಾಂಗ್ರೆಸ್ ಪಕ್ಷ ಪಡೆದಿದೆ. ಬಿಜೆಪಿಗೆ ಈ ಚುನಾವಣೆಯ ಗೆಲುವು ಸೋಲಿನಂತೆ ಬಾಸವಾಗುತ್ತಿದೆ.ವಿರೋಧ ಪಕ್ಷದ...

ದೇಶದಲ್ಲಿ ಮತ್ತಮ್ಮೆ ಬಿಜೆಪಿ ಸರಕಾರ ಪ್ರತಾಪಸಿಂಹ ನಾಯಕ್

0

ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು ಮುಂದಿನ ಐದುವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ದೇಶದಲ್ಲಿ ಅಧಿಕಾರದಲ್ಲಿ ಇರಲಿದೆ.ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ...

1.48 ಲಕ್ಷ ಮತಗಳ ‌ಅಂತರದಲ್ಲಿ ಬ್ರಿಜೇಶ್ ಚೌಟ ಗೆಲುವು

0

ಮಂಗಳೂರು; ರಾಜ್ಯದ ಪ್ರತಿಷ್ಟೆಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣಕನ್ನಡದಲ್ಲಿ ಕಮಲ ಅರಳಿದೆ. ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 1,48,071 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಬ್ರಿಜೇಶ್ ಚೌಟ 7,60,120 ಮತಗಳನ್ನು ಪಡೆದರೆ, ಪದ್ಮರಾಜ್ 6,12,103 ಮತಗಳನ್ನು ಪಡೆದರು. ಬ್ರಿಜೇಶ್ ಚೌಟ ಅವರು 1,48,071 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.ಬಿಜೆಪಿಗೆ ಕಳೆದ ಬಾರಿ ಲಭಿಸಿದ ಮತಗಳ ಸಂಖ್ಯೆ ಕಡಿಮೆಯಾಗಿದೆ ಕಾಂಗ್ರೆಸ್ ಸಮಬಲದ ಹೋರಾಟ...

ಸಸಿಕಾಂತ್ ಸೆಂಥಿಲ್ ಗೆಲುವು, ಅಣ್ಣಾಮಲೈ ಸೋಲು

0

ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಅವರು ಗೆಲುವನ್ನು ಪಡೆದಿದ್ದಾರೆ.ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿದಿದ್ದರು. ಇದೀಗ ಅವರು ಗೆಲುವನ್ನು ಪಡೆದುಕೊಂಡಿದ್ದಾರೆ.ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿದ್ದು ಸೋಲನ್ನು ಕಂಡಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾ ಮಲೈ ಅವರು...

ದ.ಕ ದಲ್ಲಿ ಒಂದು ಲಕ್ಷ ದಾಟಿದ ಬಿಜೆಪಿ ಮುನ್ನಡೆ

0

ಬೆಳ್ತಂಗಡಿ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ನಿರಂತರವಾಗಿ ಕಾಯ್ದುಕೊಂಡಿದ್ದು ಇದೀಗ ಮುನ್ನಡೆಯ ಅಂತರ ಒಂದು ಲಕ್ಷ ದಾಟಿದೆ.ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 4,64,692 ಮತಗಳನ್ನು ಪಡರದಿದ್ದರೆ ಕಾಂಗ್ರಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ 3,52,251 ಮತಗಳನ್ನು ಪಡೆದಿದ್ದಾರೆ. ನೋಟಾಕ್ಕೆ 14,210ಮತಗಳನ್ನು ಪಡೆದುಕೊಂಡಿದ್ದರೆ.ಬಿಜೆಪಿ ಅಭ್ಯರ್ಥಿ ಗೆ ಇದೀಗ 1,12,441 ಮತಗಳ ಮುನ್ನಡೆಯನ್ನು ಗಳಿಸಿದ್ದಾರೆ. ಈಗಾಗಲೇ ಶೇ 60ಕ್ಕಿಂತ ಹೆಚ್ಚು ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದ್ದು ಇನ್ನು ಅಂತಿಮವಾಗಿ ಗೆಲುವಿನ ಅಂತರ ಮಾತ್ರ ನೋಡಬೇಕಾಗಿದೆ

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿನ್ನಡೆ

0

ಬೆಳ್ತಂಗಡಿ; ವಾರಣಾಸಿಯಲ್ಲಿ ಮತಗಳ‌ಎಣಿಕೆ ಮುಂದುವರಿಯುತ್ತಿದ್ದಂತೆಯೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರ ಎದುರು ತೀವ್ರ ಹಿನ್ನಡೆ ಕಂಡಿದ್ದಾರೆ.ಚುನಾವಣಾ ಆಯೋಗದ ಮಾಹಿತಿಯಂತೆ ಸುಮಾರು 4000 ಸಾವಿರಕ್ಕೂ ಅಧಿಕ ಮತಗಳಿಂದ ಹಿಂದಿರುವುದಾಗಿ ತಿಳಿದು ಬಂದಿದೆ.ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟ ಭಾರೀ ಮುನ್ನಡೆಯನ್ನು ಸಾಧಿಸುತ್ತಿದ್ದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಮುನ್ನಡೆಯನ್ನು ಸಾಧಿಸುತ್ತಿದ್ದಾರೆ.

ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ

0

ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ ಸಾಧಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 18181 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಆರ್.ಪದ್ಮರಾಜ್ 10599 ಮತಗಳನ್ನು ಗಳಿಸಿದ್ದಾರೆ. ಚೌಟ 7582 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಮಂಗಳೂರು ಮತ ಎಣಿಕೆ ಆರಂಭ ಬಿಜೆಪಿಗೆ ಮುನ್ನಡೆ

0

ಬೆಳ್ತಂಗಡಿ; ದ.ಕ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಆರಂಭಗಿಂಡಿದ್ದು ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.ಅಂಚೆ ಮತಗಳ ಎಣಿಕೆ ನಡೆದಿದ್ದು ಅಂಚೆ ಮತಗಳಲ್ಲಿ‌ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮುನ್ನಡೆಯನ್ನು ಗಳಿಸಿರುವುದಾಗಿ ತಿಳಿದು ಬಂದಿದೆ.ಮತಯಂತ್ರಗಳ ಎಣಿಕೆ ಕಾರ್ಯ ಇನ್ನಷ್ಟೇ ಆರಂಭವಾಗಬೇಕಾಗಿದೆ.

ನಿವೃತ್ತ ಯೋಧ ಅನೀಶ್ ಡಿ.ಎಲ್. ಅವರಿಗೆ ಭವ್ಯ ಸ್ವಾಗತ

0

ಬೆಳ್ತಂಗಡಿ; ಕಳೆದ 20ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು.ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಕರೆತರಲಾಯಿತು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಭಾಪುರ ಮಠ್ ಸೇರಿದಂತೆ ಗಣ್ಯರು ಪುಷ್ಪ ಗುಚ್ಚನೀಡಿ ಅವರನ್ನು ಸ್ವಾಗತಿಸಿದರು. ಕೆ.ಎಸ್. ಎಂ.ಸಿ ಎ ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ...

ಶಾಸಕ ಹರೀಶ್ ಪೂಂಜ ಹಾಗೂ ಪ್ರತಾಪಸಿಂಹ ನಾಯಕ್ ಅವರಿಂದ ಮತದಾನ

0

ಬೆಳ್ತಂಗಡಿ: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮತದಾನದ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ನಡೆಯುತ್ತಿದೆ.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಬೆಳ್ತಂಗಡಿಯ ಮತಗಟ್ಟೆಗೆ ತರಳಿ ಮತದಾನ ಮಾಡಿದರು.