ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆ ದೂರು
ಬೆಳ್ತಂಗಡಿ; ಶಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಯಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು. ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು...
ಇಂದಬೆಟ್ಟು ರಸ್ತೆ ದುರಸ್ತಿಗೆ ಒಂದು ರುಪಾಯಿ ಕೇಳಿ ಬ್ಯಾನರ್; ಹದಗೆಟ್ಟ ರಸ್ತೆಯ ಬಗ್ಗೆ ಹೋಗೊಂದು ಪ್ರತಿಭಟನೆ
ಬೆಳ್ತಂಗಡಿ; ಇಂದಬೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ್ದು , ಈ ಬ್ಯಾನರ್ ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಶ್ರೀ ಅರ್ಧನಾರೀಶ್ವರಿ ದೇವಸ್ಥಾನ ಅತ್ಯಂತ ಪುರಾತನವಾಗಿದ್ದು , ಇತಿಹಾಸ ಪ್ರಸಿದ್ಧವಾಗಿದೆ. ದಿನನಿತ್ಯ ನೂರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಲ್ಲಿ ಭಕ್ತರು ಕಾಲ್ನಡಿಗೆ , ವಾಹನಗಳಲ್ಲಿ ಸಂಚರಿಸಲು ಅಸಾಧ್ಯವಾದ...
ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್
ನವದೆಹಲಿ : ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ನೀಡುವಂತಹ ಪ್ರಶಸ್ತಿಯಾದ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್ ಅನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಗುರುಗಳಾದ ರೆ.ಫಾ.ಆದರ್ಶ್ ಜೋಸೆಫ್ ಅವರಿಗೆ ನೀಡಿ ಗೌರವಿಸಿದೆ. ಅವರು ವಿವಿಧ ಸಂಸ್ಥೆಗಳ ಮೂಲಕ ಹಾಗೂ ವೈಯುಕ್ತಿಕವಾಗಿ ಸಮಾಜಕ್ಕೆ ನೀಡಿದ ವಿವಿಧ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ " ಈ ವರ್ಷದ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 " ನೀಡಿ ಗೌರವಿಸಲಾಯಿತ್ತು. ಕೇಂದ್ರ ಸರಕಾರದ ಮಾಜಿ...
ಕಾಂತಾರ ಸಿನಿಮಾದ ಅಭಿನಯಕ್ಕೆ ರಿಷಬ್ ಶೆಟ್ಟಿಗೆ ಒಲಿದ ರಾಷ್ಟ್ರ ಪ್ರಶಸ್ತಿ
ಬೆಂಗಳೂರು;ಕಾಂತಾರ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ಕನ್ನಡದ ಹೆಮ್ಮೆಯ ನಟ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟನೆಗಾಗಿನ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ.ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ಇದೀಗ ನೀಗಿಸಿದ್ದಾರೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ...
ಕೂಲಿ ಕಾರ್ಮಿಕ ಕುಸಿದು ಬಿದ್ದು ಸಾವು
ಬೆಳ್ತಂಗಡಿ: ಕೂಲಿ ಕಾರ್ಮಿಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಅರಸಿನಮಕ್ಕಿಯಲ್ಲಿ ಗುರುವಾರ ಸಂಜೆ ನಡೆದಿದೆ. ಬಿ.ಎಸ್.ಎನ್. ಎಲ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಶಿವಮೊಗ್ಗದ ಹೊನ್ನಳ್ಳಿಯಿಂದ ಐವರು ಕಾರ್ಮಿಕರು ಬಂದಿದ್ದು ಇವತ್ತು ಅರಸಿನಮಕ್ಕಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಸತೀಶ್ (44) ಕುಳಿತಲ್ಲೇ ಕುಸಿದು ಬಿದಿದ್ದು ತಕ್ಷಣ ಇತರರು ಕೊಕ್ಕಡ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರು ಪರೀಕ್ಷಿಸಿ ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡು ಹೋಗಲು ಸೂಚಿಸಿದ್ದಾರೆ. ಅದರೆ ಬೆಳ್ತಂಗಡಿ ಆಸ್ಪತ್ರೆಗೆ ತರುವಷ್ಟರಲ್ಲಿ ವ್ಯಕ್ತಿ ಮೃತ ಪಟ್ಟಿರುವುದಾಗಿ...
ಸ್ವಾತಂತ್ರ್ಯ ದಿನಾಚರಣೆಯ ಧ್ವಜ ಇಳಿಸುವ ವೇಳೆ ವಿದ್ಯುತ್ ತಗುಲಿ ಚರ್ಚ್ ಫಾದರ್ ಮೃತ್ಯು
ಕಾಸರಗೋಡು; ಸ್ವಾತಂತ್ರ್ಯ ದಿನಾಚರಣೆಗೆ ಹಾರಿಸಲಾಗಿದ್ದ ಧ್ವಜ ಇಳಿಸುವ ವೇಳೆ ಧ್ವಜ ಸ್ತಂಭ ವಿದ್ಯುತ್ ಲೈನಿಗೆ ತಾಗಿ ವಿದ್ಯುತ್ ಶಾಕ್ ಹೊಡೆದು ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದಲ್ಲಿರುವ ಇನ್ಫೆಂಟ್ ಜೀಸಸ್ ಚರ್ಚ್ನ ಧರ್ಮಗುರು ಕುಡಿಲಿಲ್ ಮ್ಯಾಥ್ಯು (ಶಿನ್ಸ್ ಅಗಸ್ಟಿನ್) (29) ಮೃತಪಟ್ಟ ಘಟನೆ ಸಂಭವಿಸಿದೆ. ಚರ್ಚ್ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಧ್ವಜಾರೋಹಣ ಮಾಡಲಾಗಿತ್ತು ಸಂಜೆಯ ವೇಳೆ ಧ್ವಜವನ್ನು ಇಳಿಸುತ್ತಿದ್ದಾಗ ಕಬ್ಬಿಣದ ಧ್ವಜ ಸ್ತಂಭ ಮಗುಚಿ ಬಿದ್ದಿದೆ ಮಗುಚಿ ಬಿದ್ದ ಧ್ವಜ ಸ್ತಂಭವು ಹತ್ತಿರದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಇದರ ಪರಿಣಾಮವಾಗಿ ವಿದ್ಯುತ್ ಹರಿದು...
ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ
ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ ವತಿಯಿಂದ ರೂ .25000/- ಚೆಕ್ಕ್ ಅನ್ನು ಹಸ್ತಾಂತರಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿಗೆ ನೆರವನ್ನು ನೀಡಿದರು.ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಂಗಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.
ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ .ಸಿ ಘಟಕದ ಅಧ್ಯಕ್ಷರಾದ ಶೇಖರ ಕುಕ್ಕೆಡಿ ಇವರು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ. ಬೆಳ್ತಂಗಡಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷರಾಗಿ ನೇಮಿರಾಜ್ ಕಿಲ್ಲೂರು ಮತ್ತು ನಗರ ಸಮಿತಿಯ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಬಜಿರೆ.ಮತ್ತು ಜಿಲ್ಲಾ ಎಸ್.ಸಿ...
ಡಿ. ಕೆ.ಆರ್.ಡಿ.ಎಸ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ ಬೆಳ್ತಂಗಡಿ, ಕೃಪ ಸ್ವ-ಸಹಾಯ ಸಂಘ ತೋಟತ್ತಾಡಿ ಇವುಗಳ ಸಹಕಾರದೊಂದಿಗೆ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಎಸ್.ಎಂ.ವೈ .ಎಂ, ಮಾತೃವೇದಿ, ಫ್ಯಾಮಿಲಿ ಅಪೋಸ್ಟೆಲೆಟ್ ಬೆಳ್ತಂಗಡಿ ಈ ಸಂಘಟನೆಗಳ ನಿರ್ದೇಶಕರಾದ ವಂ.ಫಾದರ್ ಜೋಬಿ ಪುಲ್ಲಾಟ್ ಇವರು ಆಗಮಿಸಿ, ಶೋಷಿತ ವರ್ಗದವರಿಗೋಸ್ಕರ ಸಂಸ್ಥೆಯು ಮಾಡುತ್ತಿರುವ ಕೆಲಸ ಕಾರ್ಯಗಳನ್ನು ಅಭಿನಂದಿಸಿದರು, ಜೀವನದಲ್ಲಿ ಪರಸ್ಪರ ಜೊತೆಯಾಗಿ ನಿಲ್ಲುವ ಮೂಲಕ...
ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ಒದಗಿಸುವಂತೆ ತೋಟತ್ತಾಡಿ ಗುರುನಾರಾಯಣ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ಅವರಿಗೆ ಮನವಿ
ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ನಿಯೋಗದಿಂದ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಹೊಸಮನೆ, ಯುವ ಬಿಲ್ಲವ...















