ಎನ್.ಡಿ ಗೆ ಮತ್ತೊಂದು ಗೆಲುವಿನ ಭವಿಷ್ಯ ನುಡಿದ ಚುನಾವಣೋತ್ತರ‌ ಸಮೀಕ್ಷೆಗಳು

0

ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ‌ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ.ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ. ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ ಕೇವಲ 125ರಿಂದ 150ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂಬುದು ಎಲ್ಲ ಸಮೀಕ್ಷೆಗಳ ಬಹುತೇಕ ಸಾರಾಂಶವಾಗಿದೆ. ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್‌ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ,...

ನಗರದ ಹಳೆಕೋಟೆಯಲ್ಲಿ ಬೈಕ್ ಟಿಪ್ಪರ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

0

ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ. ಬೈಕ್‌ ಸವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದು ಬೈಕ್ ಟಿಪ್ಪರ್ ನ ಟಯರ್ನ ಅಡಿಗೆ ಸಲುಕಿಕೊಂಡು ನುಜ್ಜುಗುಜ್ಜಾಗಿಧ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಆತ ಮೃತಪಟ್ಟಿದ್ದ. ಮೃತ ಬೈಕ್ ಸವಾರನ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ...

ಉಜಿರೆ ಕ್ರೀಡಾ ನಿಲಯದ ವಿಧ್ಯಾರ್ಥಿನಿ ನಾಪತ್ತೆ

0

ಬೆಳ್ತಂಗಡಿ; ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ ಎಸ್. ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ಪಡೆದುಕೊಂಡು ಹೋದವಳು ಹಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ.ಇದೀಗ ಘಟನೆಯ...

ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ನಾಯಕ್ ಅವರಿಗೆ ಬೀಳ್ಕೊಡುಗೆ

0

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿಸಂಘದ ಅಧ್ಯಕ್ಷ ಪೀತಮ್ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು...

ಮಾಲಾಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಲ್ಲಿ ವಂಚನೆ ರೂ 4.65 ಲಕ್ಷ ಕಳೆದುಕೊಂಡ ಮಹಿಳೆ

0

ಬೆಳ್ತಂಗಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಿನಲ್ಲಿ ಬಂದ ಮೆಸೇಜ್ ಅನ್ನು ನಂಬಿ ಮಾಲಾಡಿಯ ಮಹಿಳೆಯೊಬ್ಬರು ರೂ 4.65ಲಕ್ಷ ಹಣ ಕಳೆದುಕೊಂಡಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಮಾಲಾಡಿ ನಿವಾಸಿಯಾಗಿರುವ ಮಹಿಳೆಗೆ 2024ರ ಏಪ್ರಿಲ್ ತಿಂಗಳಿನಲ್ಲಿ ಫೇಸ್ ಬುಕ್ ನಲ್ಲಿ ಬಂದ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕ್ಲಾಸ್ ನ ಲಿಂಕ್ ನಲ್ಲಿ ಕಂಪೆನಿಯ ಖಾತೆಯಲ್ಲಿ ಹೂಡಿಕೆ ಮಾಡುವ ಸಲುವಾಗಿ ಒಟ್ಟು ರೂ 1,45,000 ಹಣವನ್ನು‌ ಹೂಡಿಕೆ ಮಾಡುತ್ತಾರೆ ಇದಾದ ಬಳಿಕ ಅವರಿಂದ ಬಂದ ಬೇಡಿಕೆಯಂತೆ ರೂ 3,20,000ಹಣವನ್ನು ಹೂಡಿಕೆ ಮಾಡಿದ್ದಾರೆ. ಇದಾದ ಬಳಿಕ...

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

0

ಬೆಳ್ತಂಗಡಿ; ಈ ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣೀಭೂತರಾದ ಸಂಸ್ಥೆಯ ಶಿಕ್ಷಕ ಬಳಗಕ್ಕೆ ವಿಶೇಷ ಕೃತಜ್ಞತೆಗಳು. ತಮ್ಮ ಈ ರೀತಿಯ ಕಾರ್ಯ ಸದಾ ಮುಂದುವರಿಯಲಿ. ನಮ್ಮ ಸಹಕಾರ ಸದಾ ನಿಮ್ಮೊಂದಿಗಿದೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಪದ್ಮನಾಭರವರು ಹೇಳಿದರು.ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನನ್ನ ಮಗು-ನನ್ನಗಿಡ ಧ್ಯೇಯ...

ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರ. ಪಿ. ಕೆ ರಾಜು ಪೂಜಾರಿ

0

ಬೆಳ್ತಂಗಡಿ; ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು ಎಂದು ಬೆಳ್ತಂಗಡಿ ತಾಲೂಕಿನ ಜನ ಜಾಗೃತಿ ವೇದಿಕಯ ಮಾಜಿ ಅಧ್ಯಕ್ಷ ಪಿ. ಕೆ ಪೂಜಾರಿಯವರು ಕರೆ ನೀಡಿದರುಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸರಕಾರಿ ಪ್ರೌಡ ಶಾಲೆ ನಾರಾವಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ...

ಬೆಳ್ತಂಗಡಿ : ಹರೀಶ್ ಪೂಂಜ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಅರ್ಜಿ ವಿಚಾರಣೆ; ಶಾಸಕ ಹರೀಶ್ ಪೂಂಜ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ

0

ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಮೇ.31 ರಂದು(ಇಂದು) ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ. ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್...

ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ಪೊಲೀಸ್ ವಶಕ್ಕೆ

0

ಬೆಂಗಳೂರು: ಲೈಂಗಿಕ ದೌರ್ಜನ್ಯ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವಿಶೇಷ ತನಿಖಾ ದಳ(ಎಸ್‌ಐಟಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ದಿನ (ಎ.26)ದಂದು ಮತಚಲಾಯಿಸಿ ಎ.27ರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಮೇ 30ರ ಮಧ್ಯಾಹ್ನದ ವೇಳೆಗೆ ಜರ್ಮನಿಯ ಮ್ಯೂನಿಕ್ ನಗರದಿಂದ ಲುಫ್ತಾನ್ನಾ ಏರ್ ಲೈನ್ಸ್...

ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ

0

ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಹಾಗೂ ಕಾರ್ಮಿಕ ಇಲಾಖೆ ಇವರ ಜಂಟಿ ಆಶಯದಲ್ಲಿ ಮೇ 30 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಮಹತ್ವ ಮತ್ತು ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಳ್ತಂಗಡಿ ನ್ಯಾಯಾಲಯದ...