ಕಳೆಂಜದಲ್ಲಿ ಮನೆಗೆ ನುಗ್ಗಿ ತಾಯಿ ಮಗನ ಮೇಲೆ ಹಲ್ಲೆ ಪ್ರಕರಣ‌ ದಾಖಲು

0

ಕಳೆಂಜ; ತಾಲೂಕಿನ ಕಳೆಂಜದಲ್ಲಿ ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಎ.30ರಂದು ರಾತ್ರಿ ತನ್ನ ಮನೆಯಲ್ಲಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಅವರ ಸಂಬಂಧಿಕರೇ ಆದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣು ಗೌಡ, ಹರೀಶ್ ಹಾಗೂ ಇತರರು ಮನೆ ಬಳಿ ಬಂದು ಸೇಸಮ್ಮ ಅವರ ಮಗ ಹರೀಶ್...

ಧರ್ಮಸ್ಥಳ; ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

0

ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶ್ರೀಧರ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಯಾವುದೇ ಪರವಾನಿಗೆಯಿಲ್ಲದೆ ಪಟ್ರಮೆ ಹೊಳೆಯಿಂದ ಮರಳನ್ನು ತೆಗೆದು ರಾಶಿ ಹಾಕುತ್ತಿದ್ದ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 40ಬುಟ್ಟಿಯಷ್ಟು ಮರಳನ್ನು ಸಂಗ್ರಹಿಸಿರುವುದು ಕಂಡು ಬಂದಿದ್ದು ಈ ಬಗ್ಗೆ ಆರೋಪಿ ಶ್ರೀಧರ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ ಮೋದಿಗೆ ಸಿದ್ದರಾಮಯ್ಯ ಪತ್ರ

0

ಬೆಂಗಳೂರು; ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ವಿಡಿಯೊ ಹಗರಣ ಗೊತ್ತಿದ್ದರೂ ನೀವು ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು, ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದ್ದು ಎರಡನೇ ತಪ್ಪು, ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು ಎಂದು ಕಿಡಿಕಾರಿದ್ದಾರೆ. ಆರೋಪಿ ಪ್ರಜ್ವಲ್ ರೇವಣ್ಣ ಭಾರತದಲ್ಲಿ ವಿಚಾರಣೆ ಎದುರಿಸಬೇಕು. ಹೀಗಾಗಿ ಕೂಡಲೇ...

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ; ವೈವಾಹಿಕ ಜೀವನ ಪ್ರವೇಶಿಸಿದ 123ಜೋಡಿ

0

ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೆಯ ವರ್ಷದ ಸಾಮೂಹಿಕ ವಿವಾಹ ಬುಧವಾರ ಸಂಜೆ 6.45ರ ಗೋಧೂಳಿ ಲಗ್ನದಲ್ಲಿ ಸಂಭ್ರಮದಿಂದ ನಡೆಯಿತು.ನಾಡಿನ ವಿವಿಧ ಭಾಗಗಳ 123ಮಂದಿ ವಧು ವರರು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಮಾಣ ಸ್ವೀಕರಿಸಿ ವೈವಾಹಿಕ ಜೀವನವನ್ನು ಪ್ರವೇಶಿಸಿದರು. ವಧು ವರೆನ್ನು ಆಶೀರ್ವದಿಸಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಇಂದಿನ ದಿನಗಳಲ್ಲಿ ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಬೇಕಾಗಿದೆ. ಧರ್ಮಸ್ಥಳ ದಲ್ಲಿ ನಡೆಯುವ ಸಾಮೂಹಿಕ ವಿವಾಹಗಳು ಪವಿತ್ರವಾದ ಕಾರ್ಯ ಎಂದು ಭಾವಿಸಿ ಬರುತ್ತಿದ್ದಾರೆ.ಅಂತರ್ಜಾತಿ ವಿವಾಹಗಳೂ ಆಗುತ್ತಿದೆ. ಇದು ಉತ್ತಮವಿಚಾರ...

ಮೇದಿನ ಕಾರ್ಮಿಕ ವರ್ಗಕ್ಕೆ ಹಕ್ಕು, ಶಕ್ತಿ ತುಂಬಿದ ದಿನ — ಮುನೀರ್ ಕಾಟಿಪಳ್ಳ

0

ಬೆಳ್ತಂಗಡಿ; ಮೇದಿನ ಎಲ್ಲಾ ದಿನದಂತಲ್ಲ ಜಗತ್ತಿನ ಅತ್ಯಂತ ದೊಡ್ಡ ಶಕ್ತಿಯಾದ ದುಡಿಯುವ ಜನರ ದಿನವಾಗಿದ್ದು, ಕಾರ್ಮಿಕ ವರ್ಗಕ್ಕೆ ಹಕ್ಕು, ಶಕ್ತಿ ತುಂಬಿದ ದಿನವೇ ಈ ಮೇದಿನ ಎಂದು ಸಿಪಿಐ(ಎಂ ರಾಜ್ಯ ಸಮಿತಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು.ಅವರು ಇಂದು ಬೆಳ್ತಂಗಡಿಯ ಜಮಾಯಿತುಲ್ ಫಲಾಹ್ ಸಭಾ ಭವನದಲ್ಲಿ ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಮೇದಿನಾಚರಣೆಯ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ಕಾರ್ಮಿಕ ವರ್ಗದ ತ್ಯಾಗ ಬಲಿದಾನಗಳಿಂದ ಕೆಂಬಾವುಟ ಹಿಡಿದು ತಂದ ಕಾರ್ಮಿಕ ವರ್ಗದ ಹಕ್ಕು ಸವಲತ್ತುಗಳನ್ನು ಕಿತ್ತೆಸೆಯುತ್ತಾ ಇರುವ ಕೇಂದ್ರದ ಬಿಜೆಪಿ...

ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ನಗರದಲ್ಲಿ ಕಾರ್ಮಿಕರ ರ್ಯಾಲಿ

0

ಬೆಳ್ತಂಗಡಿ; ಮೇದಿನಾಚರಣೆ ಅಂಗವಾಗಿ ಬೆಳ್ತಂಗಡಿಯಲ್ಲಿ ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ರ್ಯಾಲಿ ನಡೆಸಿದರು.ಬೆಳ್ತಂಗಡಿ ಸಿಐಟಿಯು ಕಚೇರಿಯಿಂದ ಹೊರಟ ಕಾರ್ಮಿಕರ ರ್ಯಾಲಿ ನಗರದಲ್ಲಿ ಸಂಚರಿಸಿತ್ತು. ಕಾರ್ಮಿಕ ದಿನಾಚರಣೆಯ ಘೋಷಣೆಗಳೊಂದಿಗೆ ಕಾರ್ಮಿಕರು ರ್ಯಾಲಿಯಲ್ಲಿ ಭಾಗಿಗಳಾದರು.ಕಾರ್ಮಿಕ ಮುಖಂಡ ಬಿ.ಎಂ ಭಟ್ ರ್ಯಾಲಿಯ ನೇತೃತ್ವ ವಹಿಸಿದ್ದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಕಾರ್ಮಿಕರು ರ್ಯಾಲಿ ಯಲ್ಲಿ ಭಾಗವಹಿಸಿದ್ದರು.

ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ

0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

0

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಮೇ.3 ರಿಂದ ಆರಂಭಗೊಂಡು ಮೇ.12 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಏ.30 ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ...

ಮೇ 1 ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ

0

May 1 52nd Annual Free Mass Marriage Ceremony at Dharmasthala ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೇ ಒಂದರಂದು ಬುಧವಾರ ಸಂಜೆ ಗಂಟೆ 6.45 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.ಈಗಾಗಲೆ 123 ಜೊತೆ ವಧು-ವರರು ವಿವಾಹಕ್ಕೆ ಹೆಸರು ನೋಂದಾಯಿಸಿದ್ದು ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿದ್ದಾರೆವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರವನ್ನು ನೀಡಲಾಗುವುದು.ಬುಧವಾರ ಬೆಳಿಗ್ಯೆಯಿಂದಲೆ ಧರ್ಮಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಧು-ವರರಿಗೆ ಸೀರೆ, ರವಿಕೆಕಣ, ಧೋತಿ ಮತ್ತು ಶಾಲು ವಿತರಿಸುವರು. ಸಂಜೆ 5...

ಟಿ20ವಿಶ್ವಕಪ್ ಭಾರತ ತಂಡ ಪ್ರಕಟ

0

ಹೊಸದಿಲ್ಲಿ: ಟಿ20 ವಿಶ್ವಕಪ್ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಟ್ಸನ್ ಸ್ಥಾನ ಪಡೆದಿದ್ದಾರೆ. ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಪನ್ ಅದ್ಭುತ ನಿರ್ವಹಣೆ ತೋರುವ ಮೂಲಕ 2ನೇ ವಿಕೆಟ್ ಕೀಪರ್ ಸ್ಥಾನಕ್ಕಾಗಿ ಕೆ.ಎಲ್. ರಾಹುಲ್ ಮತ್ತು ಜಿತೇಶ್ ಶರ್ಮ ಅವರನ್ನು ಹಿಂದಿಕ್ಕಿದ್ದಾರೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್, ರಿಷಭ್ ಪಂತ್‌, ಸಂಜು ಸ್ಯಾಮ್ಪನ್, ಶಿವಂ ದುಬೆ, ರವೀಂದ್ರ ಜಡೇಜಾ,...