ಕಳೆಂಜ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

0

ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಜನಪ್ರಿಯ ವೈದ್ಯರಾಗಿದ್ದ ಮಲಬಾರ್ ಕ್ಲಿನಿಕ್ ನ ಡಾ.ಟಿ.ವಿ ಜೋಸೆಫ್( 75) ಅವರು ಫೆ.2 ರಂದು ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು.ಕಳೆಂಜ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ಜನಪ್ರಿಯರಾಗಿದ್ದ ಡಾ. ಜೋಸೆಫ್ ಅವರು ತಮ್ಮ ಮಲವಾರ್ ಕ್ಲಿನಿಕ್ ಮೂಲಕ ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಆರೋಗ್ಯ ಸೇವೆ ನೀಡುತ್ತಿದ್ದರು.ಹಣಕ್ಕಿಂತಲೂ ಮುಖ್ಯವಾಗಿ ಸೇವೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿದ್ದ ಅವರು ಕೊರೋನಾ ಸಂದರ್ಭದಲ್ಲಿಯೂ ಗ್ರಾಮೀಣ ಜನರಿಗೆ ಮುಕ್ತವಾಗಿ ಚಿಕಿತ್ಸೆ ನೀಡುತ್ತಿದ್ದರು.ಮೃತರು ಕುಟುಂಬ ವರ್ಗವನ್ನು ಹಾಗೂ ಅಪಾರ ಬಂಧು...

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

0

ಮಂಗಳೂರು: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಸಲ್ಲಿಸಿದ ವಿಶಿಷ್ಟ ಹಾಗೂ ನಿರಂತರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ “ಆಯುಷ್ ಶ್ರೀ” ಪ್ರಶಸ್ತಿ ಪ್ರದಾನಿಸಲಾಯಿತು. ಡಾ. ಗೋಪಾಲಕೃಷ್ಣ ಕೆ ಅವರು ಆಯುರ್ವೇದ ಮತ್ತು ಸಮಗ್ರ ವೈದ್ಯಕೀಯ...

ಬೆಳ್ತಂಗಡಿ : ಮೂರು ಅನಧಿಕೃತ ಕಟ್ಟಡ ಕಾಮಗಾರಿಗೆ ತಡೆ ನೀಡಿದ ಪಟ್ಟಣ ಪಂಚಾಯತ್

0

ಬೆಳ್ತಂಗಡಿ : ಅನಧಿಕೃತವಾಗಿ ಯಾವುದೇ ಸರಕಾರದ ಅನುಮತಿ ಪಡೆಯದೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಮೂರು ಕಟ್ಟಡ ಕಾಮಗಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ತಡೆ ನೀಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಹಳೆಕೋಟೆ ಸಾಯಿ ಮಂದಿರದ ಎದರುಭಾಗದಲ್ಲಿ ವಲೇರಿಯನ್ ಪಾಯಸ್ ಮಾಲೀಕತ್ವದ ಕಟ್ಟಡ ಕಾಮಗಾರಿ, ಹಳೆಕೋಟೆ ಪೆಟ್ರೋಲ್ ಪಂಪ್ ಬಳಿಯ ಎವರೆಸ್ಟ್ ಡಾಯಸ್ ಮಾಲೀಕತ್ವದ ಕಟ್ಟಡ ಕಾಮಗಾರಿ, ಹಳೆಕೋಟೆ ಪೆಟ್ರೋಲ್ ಪಂಪ್ ಬಳಿಯ ಗಣೇಶ್ ಮಲ್ಯ ಮಾಲೀಕತ್ವದ ಕಟ್ಟಡಗಳಿಗೆ ಸರಕಾರದ ಯಾವುದೇ ಅನುಮತಿ ಪಡೆಯದೆ ಅನಧಿಕೃತ ಕಾಮಗಾರಿ ಕೆಲಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ನಗರ ಪಂಚಾಯತ್...

ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್ – ಹರೀಶ್ ಪೂಂಜ

0

ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ ಬೆಳವಣಿಗೆಯ ಮುನ್ಸೂಚನೆ ನೀಡಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಬಯೋಫಾರ್ಮ್ ಮೂಲಕ ಆರೋಗ್ಯ ಕ್ಷೇತ್ರಕ್ಕೆ 10 ಸಾವಿರ ಕೋಟಿ ಮೀಸಲು ದೇಶದ ಸ್ವಾಸ್ಥ್ಯ ಕ್ಷೇತ್ರದಲ್ಲಿ ಹೊಸ ಆಯಾಮ ನೀಡಲಿದ್ದು ಖಾದಿ ಹಾಗೂ ಕೈ ಮಗ್ಗಕ್ಕೆ ಪ್ರೋತ್ಸಾಹ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಸಾಲದ ಗ್ಯಾರಂಟಿಯೊಂದಿಗೆ...

ರಾಷ್ಟ್ರದ ಪ್ರಗತಿಗೆ ಪೂರಕವಾದ ಬಜೆಟ್; ಡಾ. ಡಿ. ವೀರೇಂದ್ರ ಹೆಗ್ಗಡೆ

0

ಉಜಿರೆ: ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ.ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ ಕೌಶಲಗಳ ಮೂಲಕ ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿದಾಗ ಅದು ಸ್ವಾವಲಂಬನೆ, ಆಂತರಿಕ ಬೆಳವಣಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಪೂರಕವಾಗುವಂತೆ ಈ ಬಾರಿಯ ಬಜೆಟ್ ಮಂಡಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಬಜೆಟ್ ಬಗ್ಯೆ ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ಪ್ರಗತಿಯ ತಳಹದಿಯಾಗಿ ಮಾನವಸಾಮರ್ಥ್ಯವನ್ನು ಬಲಪಡಿಸುವ...

ಉಪ್ಪಿನಂಗಡಿ ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು

0

ಉಪ್ಪಿನಂಗಡಿ; ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರು ತಡೆಗೋಡೆಗೆ ಗುದ್ದಿ ಹೊತ್ತಿ ಉರಿದ ಘಟನೆ ಸಂಭವಿಸಿದೆ. 30.01.2026 ರಂದು 13.30 ಗಂಟೆಗೆ KA-05-NN-8222 ಕಾರಿನ ಚಾಲಕ ಹರ್ಷಿತ್ ಜಿ (29) ರಾಜಾಜಿನಗರ ಬೆಂಗಳೂರು ಅವರು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಅಜಾಗರೂಕ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದ್ದು ಕಾರಿನಲ್ಲಿ ಪ್ರಯಾಣಿಸಿದ್ದವರಿಗೆ ಯಾವುದೇ ಗಾಯಗಳಿಲ್ಲ. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡು...

ಬೆಳ್ತಂಗಡಿ ನಗರದಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ

0

ಬೆಳ್ತಂಗಡಿ; ನಗರದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿಬಳಿಯಲ್ಲಿ ಶನಿವಾರ ಬೆಳಿಗ್ಗೆ 6-00 ಗಂಟೆಗೆಚಿರತೆಯೊಂದು ಪತ್ತೆಯಾಗಿದೆ. ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ತೋಳೆಯಲು ಹೊರಗೆ ಬಂದಾಗ ನಿಲಯಕ್ಕೆ ತಾಗಿಕೊಂಡು ಪಕ್ಕದಲ್ಲಿರುವ ಅಡಿಕೆ ತೋಟದ ಬದಿಯಲ್ಲೇ ಇದ್ದ ಚಿರತೆಯೊಂದನ್ನು ನೋಡಿದಶಾಲಾ ಮಕ್ಕಳು ಹೆದರಿ ನಿಲಯದ ಒಳಗೆ ಓಡಿ ಹೋಗಿ ಬಾಗಿಲು ಹಾಕಿ ಅವಿತು ಕೊಂಡು ನಿಲಯ ಸಿಬ್ಬಂದಿಗೆ ಮತ್ತು ಸ್ಥಳೀಯರಿಗೆ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೇ ಅದೇ ಪರಿಸರದ ಪಕ್ಕದ ಕೆಲ್ಲಗುತ್ತು ಜಂಕ್ಷನ್ ಬಳಿಯಲ್ಲಿ ಮಹಿಳೆಯೊಬ್ಬರು ಬೆಳಿಗ್ಗೆ 7-15...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

0

ಬೆಳ್ತಂಗಡಿ; ಉಜಿರೆಯ ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕಗಕೆ ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ...

ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

0

ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಆತನನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು....

ತಾಲೂಕಿನಲ್ಲಿ ಮುಂದುವರಿದ ಚಿರತೆ ದಾಳಿ; ಆಡನ್ನು ಕೊಂದು ಹಾಕಿದ ಚಿರತೆ

0

ಬೆಳ್ತಂಗಡಿ; ತಾಲೂಕಿನಲ್ಲಿ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಪಡಂಗಡಿ ಗ್ರಾಮದ ಪೊಯ್ಯೆಗುಡ್ಡದಲ್ಲಿ ಚಿರತೆ ಆಡನ್ನು ಕೊಂದುಹಾಕಿದೆ ನಡಗ್ರಾಮ ಪಂಚಾಯತು ವ್ಯಾಪ್ತಿಯ ಕನ್ಯಾಡಿಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಪಡಂಗಡಿ ಪೊಯ್ಯೆಗುಡ್ಡದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮನೆಯ ಸಮೀಪದ ಹಟ್ಟಿಯಲ್ಲಿ ಕಟ್ಟಿದ್ದ ಆಡನ್ನು ಚಿರತೆ ಕೊಂದು ಹಾಕಿದ್ದು ಅರ್ಥ ತಿಂದ ಬಳಿಕ ಬಿಟ್ಟು ಹೋಗಿದೆ.ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿರುವ ನಡ ಗ್ರಾ.ಪಂ ವ್ಯಾಪ್ತಿಯ ಕನ್ಯಾಡಿಯಲ್ಲಿ ಶುಕ್ರವಾರ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಸ್ಥಳೀಯ ನಿವಾಸಿ ರಮಾನಂದ ಶರ್ಮ ಅವರ ಮನೆಯ ಸಮೀಪ ಗದ್ದೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದೇ ಗ್ರಾಮದಲ್ಲಿ ಈ...