ಶಾಸಕ ಹರೀಶ್ ಪೂಂಜ ಅವರಿಂದ ಮತದಾನ

0

ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ನೆರವೇರಿಸಿದರು.ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿರುವ ಪಕ್ಷಕ್ಕೆ ಮತ ನೀಡಿಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದ್ದಾರೆ

ತಾಲೂಕಿನಲ್ಲಿ ಮತದಾನಕ್ಕೆ ಚಾಲನೆ; ಉತ್ಸಾಹದಿಂದ ಭಾಗವಹಿಸುತ್ತಿರುವ ಮತದಾರರು

0

ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗಿಗಳಾಗುತ್ತಿದ್ದಾರೆ. ತಾಲೂಕಿಕಿನ 241 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ.ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಮತಗಟ್ಟೆಗಳ ಹೊರಗೆ ಇದ್ದು ಮತದಾರರ ಮೇಲೆ ಪ್ರಭಾವ ಬೀರುವ, ಮತದಾರರಿಗೆ ನೆರವಾಗುವ ಕಾರ್ಯ ಮಾಡುತ್ತಿದ್ದಾರೆ.ತಾಲೂಕಿನ ಒಂದೆರಡು ಮತಗಟ್ಟೆಗಳಲ್ಲಿ ಮತಯಂತ್ರದ ಸಣ್ಣ ಸಮಸ್ಯೆಗಳು ಆಗಿರುವುದನ್ನು ಹೊರತು ಪಡಿಸಿದರೆ ಮತದಾನ ಸುಗಮವಾಗಿಯೇ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ 232817 ಮತದಾರರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,17,603 ಮತದಾರರು ಮತ...

ಮುಂಡಾಜೆಯಲ್ಲಿ ಮತಯಂತ್ರದ ಸಮಸ್ಯೆ ತಡವಾಗಿ ಆರಂಭಗೊಂಡ ಮತದಾನ

0

ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ತಾಲೂಕಿನ ಮುಂಡಾಜೆಯ 74 ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟು ವಿಳಂಬವಾಗಿ ಮತದಾನ ಪ್ರಕ್ರಿಯೆ ಆರಂಭಗೊಂಡಿತ್ತು. ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಆರು ಗಂಟೆಯಿಂದಲೇ ಮತದಾರರು ಸರತಿಯ ಸಾಲಿನಲ್ಲಿ ನಿಂತಿದ್ದರು. ಆದರೆ ಏಳು ಗಂಟೆಯ ವೇಳೆ ಮತಯಂತ್ರ ಸರಿಯಿಲ್ಲದ ಕಾರಣ ಮತ ಮತದಾನ ಆರಂಭಿಸಲು ಸಾಧ್ಯವಾಗಲಿಲ್ಲ. ನೂರಾರು ಸಂಖ್ಯೆಯಲ್ಲಿ ಜನರು ಮತಗಟ್ಟೆಯ ಎದುರು ಕಾಯುವಂತಾಯಿತು. 7.30ರ ಬಳಿಕ ಮತಯಂತ್ರವನ್ನು ಸರಿಪಡಿಸಿ ಮತದಾನಕ್ಕೆ ಅವಕಾಶ ಒದಗಿಸಲಾಯಿತು. ಸರತಿಯ ಸಾಲಿನಲ್ಲಿ ನಿಂತು ಕಾಯುತ್ತಿದ್ದ ಮತದಾರರು ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ...

ಎರಡನೇ ಹಂತದಲ್ಲಿ ಶುಕ್ರವಾರ 88 ಕ್ಷೇತ್ರಗಳಿಗೆ ಚುನಾವಣೆ

0

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ ಕ್ಷೇತ್ರಗಳ ಮತದಾರರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಗಳಾಗಲಿದ್ದಾರೆ. ಕೇರಳದಲ್ಲಿ ಎಲ್ಲಾ 20, ಕರ್ನಾಟಕದಲ್ಲಿ 14, ರಾಜಸ್ಥಾನದಲ್ಲಿ 13, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 6, ಬಿಹಾರ ಮತ್ತು ಅಸ್ಸಾಂನಲ್ಲಿ ತಲಾ 5, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಮತ್ತು ತ್ರಿಪುರಾ,ಮಣಿಪುರ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ...

ಅನಾರೋಗ್ಯ ಪೀಡಿತ ವ್ಯಕ್ತಿ ಚರಂಡಿಗೆ ಬಿದ್ದು ಸಾವು

0

ವೇಣೂರು; ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಮನೆಯ ಕಾಂಪೌಂಡ್ ಸಮೀಪದ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಿಲ್ಯ ಗ್ರಾಮದ ನಿವಾಸಿ ನಾರಾಯಣ ಪೂಜಾರಿ (58)ಎಂಬವರಾಗಿದ್ದಾರೆಇವರು ವರ್ಷದ ಹಿಂದೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು ಎದ್ದು ನಡೆಯಲಾರದ ಸ್ಥಿತಿಯಲ್ಲಿದ್ದರು. ತೆವಳುತ್ತಾ ಮನೆಯಿಂದ ಹೊರಗೆ ಹೋಗುತ್ತಿದ್ದರು ಎನ್ನಲಾಗಿದೆ. ರಾತ್ರಿಯ ವೇಳೆ ಮನೆಯಿಂದ ಹೇಗೋ ಹೊರಗೆ ಹೋದ ಅವರು ಚರಂಡಿಗೆ ಬಿದ್ದು ಮೇಲೇಳಲಾರದೆ ಮೃತಪಟ್ಟಿರುವುದಾಗಿ ದೂರು ನೀಡಲಾಗಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಮತದಾನಕ್ಕೆ ಸಿದ್ದತೆಗಳು ಪೂರ್ಣ; ಮತಗಟ್ಟೆ ತಲುಪಿದ ಮತಯಂತ್ರಗಳು

0

ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಚುನಾವಣೆಯ ಮಸ್ಟರಿಂಗ್ ಕಾರ್ಯ ಉಜಿರೆಯ ಎಸ್ ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದು ತಲೂಕಿನ ಎಲ್ಲ ಮತಗಟ್ಟೆಗಳಿಗೆ ಅಧಿಕಾರಿಗಳು ಮತಯಂತ್ರಗಳೊಂದಿಗೆ ತೆರಳಿದ್ದಾರೆ.ಬೆಳ್ತಂಗಡಿ ತಾಲೂಕಿಗೆ ಓರ್ವ ಡಿವೈಎಸ್ ಪಿ, ನಾಲ್ವರು ಇನ್ಸ್ ಪೆಕ್ಟರ್ ಗಳು, 15 ಸಬ್ ಇನ್ಸ್ ಪೆಕ್ಟರ್ ಗಳು, ಒಂದು ಅರಸೇನಾಪಡೆ,ಒಂದು ಕೆಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ ಸೇರಿದಂತೆ 400 ಪೊಲೀಸರು ಹಾಗೂ 1,156 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.ಒಂದು ಮತಗಟ್ಟೆಗೆ 7 ಮಂದಿ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು 1,200ಕ್ಕಿಂತ ಹೆಚ್ಚು ಮತದಾರರಿರುವ...

ಉಜಿರೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

0

ಬೆಳ್ತಂಗಡಿ; ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚುನಾವಣಾ ಕರ್ತವ್ಯಕ್ಕೆ ತೆರಳಲು ಸಿದ್ದರಾದ ಸಿಬ್ಬಂದಿ ಗಳೊಂದಿಗೆ ಮಾತುಕತೆ ನಡೆಸಿದ ಅವರು ವಿವಿಧ ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಕೆಂಪೇಗೌಡ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಹಾಗೂ ಇತರ ಅಧಿಕಾರಿಗಳು ಇದ್ದರು

ಧರ್ಮಸ್ಥಳ; ಅಪರಿಚಿತ ಮಹಿಳೆ ಬಸ್ಸಿನಡಿಗೆ ಸಿಲುಕಿ ಸಾವು

0

ಧರ್ಮಸ್ಥಳ: ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್‌ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ24ಬುಧವಾರ ಮಧ್ಯಾಹ್ನ ನಡೆದಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯ‌ರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

ಚಾರ್ಮಾಡಿ; ಅಕ್ರಮ ಮರಳು ಸಾಗಾಟ ಪತ್ತೆ, ವಾಹನ ಹಾಗೂ ಮರಳು ಪೊಲೀಸ್ ವಶಕ್ಕೆ

0

ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ ಫಯಾಜ್ ಎಂಬಾತ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಪೊಲೀಸರು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಮರಳನ್ನು ಮೃತ್ಯುಂಜಯ ನದಿಯಿಂದ ತೆಗೆದು ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾನೆ .ವಾಹನ ಹಾಗೂ ಮರಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌

ಮುಂಡಾಜೆ; ರಾಷ್ಟ್ರೀಯ ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ

0

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ...