ತೋಟತ್ತಾಡಿ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವು
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.ಇವರು ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಈಕೆ ಸೋಮವಾರ ಮೃತಪಟ್ಟಿದ್ದಾರೆ.
ಕರಾವಳಿಗೆ ಚಲನೆಯನ್ನು ಕೊಟ್ಟವರು ಮಿಷನರಿಗಳು – ಪುರುಷೋತ್ತಮ ಬಿಳಿಮಲೆ
ಮಂಗಳೂರು; ಕರಾವಳಿಯಲ್ಲಿ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು ಬಾಸೆಲ್ ಮಿಷನರಿಗಳು. ಕರಾವಳಿಗೆ ಒಂದು ಚಲನೆಯನ್ನು ಕೊಟ್ಟವರು ಮಿಷನರಿಗಳು ಎಂದು ಹಿರಿಯ ಚಿಂತಕ ಪುರುಷೋತ್ತಮ ಬಿಳಿಮಲೆ ಹೇಳಿದರು.ಡಿವೈಎಫ್ಐನ 12 ನೇ ರಾಜ್ಯ ಸಮ್ಮೇಳನದ ಎರಡನೆಯ ದಿನ ನಡೆದ “ ಕರಾವಳಿ ಕಟ್ಟಿದ ಬಗೆ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಾರಂಪರಿಕತೆಯನ್ನು ಸಾರ್ವತ್ರಿಕಗೊಳಿಸಿದ ಕ್ರಾಂತಿ ಕರಾವಳಿಯಲ್ಲಿ...
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ
ಉಜಿರೆ, ಫೆ. 26: ಉಜಿರೆಯ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ಇಂದು (ಫೆ. 26) ‘ಭಾರತೀಯ ವೈಜ್ಞಾನಿಕ ಪರಂಪರೆ’ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಿತು. ಕಾಲೇಜಿನ ಭೌತಶಾಸ್ತ್ರ, ಸಂಸ್ಕೃತ ಹಾಗೂ ಗಣಿತಶಾಸ್ತ್ರ ವಿಭಾಗಗಳ ವತಿಯಿಂದ, ಐಐಟಿ ಖರಗ್ಪುರದ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಇಂಡಿಯನ್ ನಾಲೆಜ್ ಸಿಸ್ಟಮ್ಸ್ ಸಹಯೋಗದಲ್ಲಿ ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್-ಇಂಡಿಯನ್ ನಾಲೇಜ್ ಸಿಸ್ಟಮ್ (ಎಐಸಿಟಿಇ- ಐಕೆಎಸ್) ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಶಿಕ್ಷಕರ ಸಂಘದ ಬೆಂಬಲದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶ್ರೀ...
ಚಾರಣಕ್ಕೆ ಬಂದು ಅರಣ್ಯದಲ್ಲಿ ಸಿಲುಕಿಕೊಂಡ ಯುವಕ; ರಕ್ಷಿಸಿದ ಪೊಲೀಸರು
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಬಂಡಾಜೆ ಫಾಲ್ಸ್ ನೋಡಲೆಂದು ಅರಣ್ಯಕ್ಕೆ ಬಂದಿದ್ದ ಚಾರಣಿಗರಲ್ಲಿ ಒರ್ವ ಯುವಕ ರಾತ್ರಿ ನಾಪತ್ತೆಯಾದ ಘಟನೆ ಸಂಭವಿಸಿದ್ದು ನಾಪತ್ತೆಯಾದ ಯುವಕನ್ನು ತಡ ರಾತ್ರಿ ಬಾಳೂರು ಪೊಲೀಸ್ ಠಾಣಾವ್ಯಾಪ್ತಿಯ ಬಲ್ಲಾಳ ರಾಯನ ದುರ್ಗದ ಸಮೀಪ ಪತ್ತೆಹಚ್ಚಿ ರಕ್ಷಿಸಲಾಗಿದೆ.ಚಾರಣಕ್ಕೆಂದು ಬಂದಿದ್ದ ಧನುಷ್ ಎಂಬಾತನೇ ನಾಪತ್ತೆಯಾದ ಯುವಕ, ಅರಣ್ಯದಲ್ಲಿ ಚಾರಣಕ್ಕೆ ಅವಕಾಶ ನಿರಾಕರಿಸಲಾಗಿದ್ದರು ಪೊಲೀಸ್ ಅಧಿಕಾರಿಯೊಬ್ಬರ ಶಿಫಾರಸ್ಸಿನ ಮೂಲಕ ಇವರು ಚಾರಣಕ್ಕೆ ಅವಕಾಶ ಪಡೆದುಕೊಡಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಬೆಳಿಗ್ಗೆ ಇವರು ಚಾರಣಕ್ಕೆ ಹೊರಟಿದ್ದು ಸಂಜೆಯ ವೇಳೆ ಗುಂಪಿನಿಂದ ಇಬ್ಬರು ತಪ್ಪಿಸಿಕೊಂಡಿದ್ದರು, ಬಳಿಕ...
ಮಂಗಳೂರು ಲೋಕಸಭಾ ಕ್ಷೇತ್ರದ ಇತಿಹಾಸ, ಒಂದು ಅವಲೋಕನ
MPs from Mangalore, Mangalore's first MP ಮತ್ತೊಂದು ಲೋಕಸಬಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಿದ್ದವಾಗುತ್ತಿದೆ. 1952 ರಲ್ಲಿ ಜಿಲ್ಲೆ ಮದ್ರಾಸ್ ಪ್ರಾಂತ್ಯದ ಭಾಗವಾಗಿದ್ದಾಲೇ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತ್ತು ಅಂದು ಕಾಸರಗೋಡನ್ನು ತನ್ನ ವ್ಯಾಪ್ತಿಗೆ ಒಳಗೊಂಡಿತ್ತು. ಬಳಿಕ ಹಲವು ಬದಲಾವಣೆಗಳನ್ನು ಕಂಡು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳನ್ನೂ ಒಳಗೊಂಡಿರುವ ಲೋಕಸಭಾ ಕ್ಷೇತ್ರವಾಗಿ ರೂಪಗೊಂಡಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕ್ಷೇತ್ರ ಬಳಿಕ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲಾಗಿ ಪರಿವರ್ತನೆಗೊಂಡಿತ್ತು. ಕಾಂಗ್ರೆಸ್...
ಉಜಿರೆಯಲ್ಲಿ ರಕ್ತದಾನ ಶಿಬಿರ
ಉಜಿರೆ: ರಕ್ತದಾನ ದಾನಗಳಲ್ಲೇ ಅತಿ ಶ್ರೇಷ್ಠವಾದುದು. ರಕ್ತದಾನದಿಂದ ಅಗತ್ಯವುಳ್ಳವರಿಗೆ ಜೀವದಾನ ನೀಡಿದಂತೆ . ಯಾವುದೇ ಜಾತಿ,ಮತ,ಧರ್ಮ ಭೇದವಿಲ್ಲದೆ ಆರೋಗ್ಯವುಳ್ಳವರು ರಕ್ತದಾನ ಮಾಡಿ ಇನ್ನೊಬ್ಬರಿಗೆ ನೆರವಾಗುವುದು ಮಾನವೀಯ ಸೇವೆಯಾಗಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದರು. ಅವರು ಫೆ 25 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಉಜಿರೆಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ) ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್,ಕನ್ಯಾಡಿಯ ಸೇವಾಭಾರತಿ (ರಿ) ಹಾಗು ಮಂಗಳೂರಿನ ಕೆ. ಎಂ.ಸಿ. ಬ್ಲಡ್...
ತಾಲೂಕಿನ ಮಾಧ್ಯಮ ಕ್ಷೇತ್ರದಲ್ಲೊಂದು ಹೊಸ ಪ್ರಯತ್ನ “ಬೆಳ್ತಂಗಡಿ ಸಮಾಚಾರ”
ಬೆಳ್ತಂಗಡಿ ತಾಲೂಕಿನ ಎಲ್ಲ ಸುದ್ದಿಗಳನ್ನೂ ಹಾಗೂ ಜಿಲ್ಲೆಯ, ಹಾಗೂ ಇತರ ಮಹತ್ವದ ಸುದ್ದಿಗಳನ್ನು ಯಾವುದೇ ರಾಗ ದ್ವೇಷವಿಲ್ಲದೆ ತಾಲೂಕಿನ ಜನರಿಗೆ ತಲುಪಿಸಬೇಕು ಎಂಬ ಗುರಿಯೊಂದಿಗೆ ಇಟ್ಟಿರುವ ಒಂದು ಪುಟ್ಟ ಹೆಜ್ಜೆ 'ಬೆಳ್ತಂಗಡಿ ಸಮಾಚಾರ' ಎಂಬ ಈ ಪ್ರಯತ್ನ.ಮಾಧ್ಯಮ ಕ್ಷೇತ್ರ ಪ್ರತಿನಿತ್ಯ ಒಂದಲ್ಲ ಒಂದು ಹೊಸ ಬೆಳವಣಿಗೆಗಳನ್ನು ಕಾಣುತ್ತಲೇ ಇರುತ್ತದೆ, ಇಂದಿನ ಸುದ್ದಿಯನ್ನು ಇಂದೇ ನೋಡಿ ಎಂಬಲ್ಲಿಂದ ಈ ಕ್ಷಣದ ಸುದ್ದಿಯನ್ನು ಈ ಕ್ಷಣವೇ ನೋಡಿ ಎಂಬ ಹಂತಕ್ಕೆ ನಾವು ಬೆಳೆದಿದ್ದೇವೆ. ಆತುರದ ಕ್ಷಣದ ಸುದ್ದಿಯೇ ಇಂದಿನ ಟ್ರೆಂಡ್ ಆಗಿದೆ ಮೊದಲು ಯಾರು ಸುದ್ದಿಯನ್ನು...
ಮಾರ್ಚ್ 1 ರಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಶಾಕೀರ್ ಅಳಕೆ ಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಅಬುಬಕ್ಕರ್ ಮದ್ದ, ವಿಮ್ ರಾಜ್ಯ ಪ್ರಧಾನ...
ಸಂವಿಧಾನ ಉಳಿಸಬೇಕೆಂದು ಪೇಪರ್ನಲ್ಲಿ ಜಾಹೀರಾತು ನೀಡಿದರೆ ಸಾಕಾಗದು. ಚಳುವಳಿ ಕಟ್ಟಬೇಕು ಎ.ಬಿ ಇಬ್ರಾಹಿಂ
ಬೆಳ್ತಂಗಡಿ; "ಜನರು ಭ್ರಮಾಲೋಕದಲ್ಲಿದ್ದು ಮತ ಚಲಾಯಿಸುತ್ತಿದ್ದಾರೆ. ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಆದರೆ ಪ್ರಸಕ್ತ ಸ್ಥಿತಿಯಲ್ಲಿ ನಾವು ಬುದ್ಧಿವಂತರು ಮತ್ತು ಅಕ್ಷರಸ್ಥರ ನಡುವೆ ಬೇರೆಯೇ ವ್ಯಾಖ್ಯಾನವನ್ನು ನೀಡಬೇಕಾಗಿದೆ," ಎಂದು ವಿಶ್ರಾಂತ ಜಿಲ್ಲಾಧಿಕಾರಿ (ಐಎಎಸ್), ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಆದ ಎ.ಬಿ. ಇಬ್ರಾಹಿಂ,ಹೇಳಿದರು.ಅವರು ಮಂಗಳೂರಿನಲ್ಲಿ ಡಿ.ವೈ.ಎಫ್.ಐ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು "ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ನೆಲವಿದು, ರಾಣಿ ಅಬ್ಬಕ್ಕರ ಮಾತೃ ಪ್ರಧಾನ ಸಮಾಜವಿದು. ಇದು ನಮಗೆ ಮಾದರಿಯಾಗಬೇಕಾದ ನೆಲ. ಇದು ಶೇಕಡ 100 ರಷ್ಟು ಅಕ್ಷರಸ್ಥರು ಇರುವ, ಮಾನವ...
ಡಿವೈಎಫ್.ಐ ರಾಜ್ಯ ಸಮ್ಮೇಳನ; ನಿರುದ್ಯೋಗ ಸಮಸ್ಯೆ ಕೋಮುವಾದಕ್ಕೆ ಲಿಂಕ್ ಇದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್
ಬೆಳ್ತಂಗಡಿ; ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ್ಥಿಗಳಿಲ್ಲ. ಅಸಂಪೂರ್ಣೋದ್ಯೋಗ (under employment) ಕೂಡಾ ಒಂದು ಸಮಸ್ಯೆ ಆಗಿದೆ ಎಂದು ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್ ಹೇಳಿದರು. ನಗರದ ಕಲ್ಲಾಪಿನಲ್ಲಿರುವ ಯುನಿಟಿ ಸಭಾಂಗಣದಲ್ಲಿ ಫೆಬ್ರವರಿ 25ರಂದು ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ನ 12ನೇ ರಾಜ್ಯ...





