ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ.ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ ಚಾಲಕ ರಾಮ ಮೂರ್ತಿ ಎಂಬಾತ ದುಡುಕುತನದಿಂದ ಚಲಾಯಿಸಿ ಮುಂದಿನಿಂದ ಹೋಗುತ್ತಿದ್ದ ರಘುರಾಮ ಶೆಟ್ಟಿ ಅವರು ಚಲಾಯಿಸುತ್ತಿದ್ದ ಸೈಕಲ್ ಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರಘುರಾಮ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ...
ಮಾಚಾರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
ಬೆಳ್ತಂಗಡಿ; ಬುಧವಾರ ಸಂಜೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿದಿದೆ.ಮಾಚಾರಿನಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಸಂಭವಿಸಿದೆ.ಮಾಚಾರು ನಿವಾಸಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಮನೆಯ ಮೀಟರ್ ಬೀರ್ಡ್, ವಿದ್ಯುತ್ ಉಪಕರಣಗಳು, ಹಾಗೂ ಮನೆಯ ಗೋಡೆ ಹಾಗೂ ಶೀಟ್ ಗಳಿಗೂ ಹಾನಿ ಸಂಭವಿಸಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಹವಾಮಾನ ಬದಲಾವಣೆ ಬಗ್ಗೆ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ; ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಸಹಕಾರದಿಂದ ಕ್ಲಸ್ಟರ್ ಮಟ್ಟದ ಹವಾಮಾನ ಬದಲಾವಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ದಿನಾಂಕ 15.05.2024 ರಂದು ಆಯೋಜಿಸಿಲಾಗಿತ್ತು. ಹವಾಮಾನ ಬದಲಾವಣೆಯು ಇತ್ತೀಚೆಗೆ ನಮ್ಮನ್ನು ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ, ಇದರ ಬಗ್ಗೆ ಅರಿವು ಪಡೆಯುವುದು ಅತ್ಯಗತ್ಯ ಎಂದು ಉದ್ಘಾಟನೆಯನ್ನು ನೆರವೇರಿಸಿದ ಕ್ರಾಸ್ ಸಂಸ್ಥೆ ಬೆಂಗಳೂರು ಇದರ ರಾಜ್ಯ ಸಂಯೋಜಕಿ ಲೈನಾ ಲಸ್ರಾದೊ ರವರು ತಿಳಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ...
ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ
ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಕೊಲೆ ಮಾಡಿದ ಆರೋಪಿ. ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ. 'ಪರಸ್ಪರ ಪ್ರೀತಿಸುತ್ತಿದ್ದ ಅಂಜಲಿ ಮತ್ತು ಗಿರೀಶ ನಡುವೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ಗಿರೀಶ್, ಬುಧವಾರ ಬೆಳಗಿನ ಜಾವ 5ಗಂಟೆಗೆ ಅಂಜಲಿ ಮನೆಗೆ ಹೋಗಿ...
ಕೊಕ್ಕಡದಲ್ಲಿ ಪಶು ವೈದ್ಯರಿಂದ ಹಲ್ಲೆ ವ್ಯಕ್ತಿ ಸಾವು
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯರೋರ್ವರ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುವೈದ್ಯ ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ.ಧರ್ಮಸ್ಥಳ ಠಾಣೆ ಪೊಲೀಸರು...
ಕುದ್ಯಾಡಿಯಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ. ಇವರು ಮೇ 11ರಂದು ಮನೆಯ ಬೀಗ ಹಾಕಿ ತವರನೆಗೆ ತೆರಳಿದ್ದರು. ಸೋಮವಾರ ಮದ್ಯಾಹ್ನ ಸಮೀಪದ ಮನೆಯವರು ನೋಡಿದಾಗ ಮನೆಯ ಬಾಗಿಲು ತೆರೆದಿರುವುದನ್ನು ನೋಡಿ ನೀತಾ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಗೋಡ್ರೇಜ್ ಬೀಗ ಮುರಿದು ಅದರಲ್ಲಿ ಇರಿಸಲಾಗಿದ್ದ 1,98,000ಮೌಲ್ಯದ 33 ಗ್ರಾಂ ಚಿನ್ನಾಭರಣಗಳನ್ನು...
ಚಿಬಿದ್ರೆಯಲ್ಲಿ ಮಿನಿ ಬಸ್ ಪಲ್ಟಿ ಹಲವರಿಗೆ ಗಾಯ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಚಾರ್ಮಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ
ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು.ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ...
ಪೊಲೀಸ್ ದಾಳಿಗೆ 12 ನಕ್ಸಲರು ಬಲಿ
ಬಿಜಾಪುರ(ಛತ್ತೀಸಗಢ) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. 12 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಮುಖ್ಯಮಂತ್ರಿ...
ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅವರ ಮೃತದೇಹವು ಮೇ.10ರಂದು ಕಾಶಿಬೆಟ್ಟು ಸನಿಹದ ಅರಳಿ ಎಂಬಲ್ಲಿ ದೊರೆತಿದೆ. ಇದೀಗ ನಾಪತ್ತೆ ಪ್ರಕರಣ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಅಸಹಜ ಸಾವಾಗಿ ಪರಿವರ್ತನೆಯಾಗಿದೆ.















