ಮಡಂತ್ಯಾರಿನಲ್ಲಿ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ‘ ಕಾರ್ಯಕ್ರಮ.

0

ಮಡಂತ್ಯಾರು; ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ14 ರಂದು ಆಯೋಜಿಸಲಾಗಿತ್ತು.ಸೇಕ್ರೆಡ್ ಹಾರ್ಟ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷ ಸ್ಥಾನದಿಂದ ಮಾತನಾಡಿ "ಕ್ರಿಸ್ತ ಜಯಂತಿ ನಾವು ಡಿಸೆಂಬರ್ 25 ರಂದು ಆಚರಿಸುತ್ತೇವೆ. ದೇವರು ಬಡವರಾಗಿ ಮಾನವ ರೂಪ ತಾಳಿ ಈ ಧರೆಗೆ ಬಂದದ್ದು ನಮ್ಮನ್ನು ಶ್ರೀಮಂತಗೊಳಿಸಲು. ದೇವರು 2025 ವರ್ಷದ ಹಿಂದೆ ಕಿಸ್ತನ ಜನನದ ಸಂದೇಶ ಸಾರಲು ಕುರುಬರನ್ನು ಮತ್ತು ನಕ್ಷತ್ರವನ್ನು ಮಾಧ್ಯಮವಾಗಿ ಉಪಯೋಗಿಸಿದರು ಕ್ರಿಸ್ಮಸ್ ಸರ್ವರ ಹಬ್ಬ,...

ದ.ಕ ಜಿಲ್ಲೆಗೆ ಡ್ರಗ್ MDMA ಸರಬರಾಜು ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರ ಬಂಧನ

0

ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ಅಹಮ್ಮದ್ ಶಾಬೀತ್ ಮತ್ತು ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರ ತಂಡ ಡಿ13 ರಂದು ಕಾರಿನಲ್ಲಿ ಬರುತ್ತಿದ್ದವೇಳೆ , ಅರ್ಕುಳ ಬಳಿ ಬಂಧಿಸಿ ಮಾದಕ ವಸ್ತು ಎಂ.ಡಿ.ಎಂ ಅನ್ನು ವಶ ಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಅಹಮ್ಮದ್ ಈತ ಮೂಲತ (35) ಮಂಗಳೂರು ಮಲ್ಲೂರು ನಿವಾಸಿಯಾಗಿದ್ದು ಇದೀಗ ಬಿ.ಸಿ.ರೋಡ್ ಕೈಕಂಬ ನಿವಾಸಿಯಾಗುದ್ದಾನೆ ಮಹಮ್ಮದ್ ಶಂಶೀರ್ (36) ಮೂಡ ಗ್ರಾಮ, ಜೋಡುಮಾರ್ಗ ಪೋಸ್ಟ್, ಬಂಟ್ವಾಳ ತಾಲೂಕುಹಾಗೂ ಶ್ರೀಮತಿ...

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

0

ಬೆಂಗಳೂರು: ಕಾಂಗ್ರೆಸ್ ಪಕ್ಷದ  ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿದ್ದು ಹಲವು ಬಾರಿ ಸಚಿವರಾಗಿದ್ದರು

ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಪೂಂಜಾಲಕಟ್ಟೆ ಪೊಲೀಸರು ಆರೋಪಿ  ಮನೆ ಜಪ್ತಿ

0

ಬೆಳ್ತಂಗಡಿ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು -ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು...

ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆಗೆ ಸನ್ಮಾನ

0

ಬೆಳ್ತಂಗಡಿ:ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ವಿಭಾಗ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಉಡುಪಿ ವತಿಯಿಂದ ಮುಂಡಾಜೆಯ ಸಚಿನ್ ಭಿಡೆ ಅವರನ್ನು ಸನ್ಮಾನಿಸಲಾಯಿತು.ಉಡುಪಿಯ ಖಾಸಗಿ ಹೋಟೆಲ್ ನ ಸಭಾಭವನದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಶನಿವಾರ ಕಾರ್ಯಕ್ರಮ ಜರಗಿತು.ಸಚಿನ್ ಭಿಡೆಯವರುತಮ್ಮ ಸ್ವಂತ 5ಎಕರೆ ಭೂಮಿಯಲ್ಲಿ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಸುಮಾರು 800ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದು, ಇದರಲ್ಲಿ 527 ಗಿಡಗಳನ್ನು ಕಾರ್ಗಿಲ್ ಯೋಧರ ನೆನಪಿಗಾಗಿ ನೆಡಲಾಗಿದೆ.ರಾಷ್ಟ್ರಪ್ರೇಮ, ಪರಿಸರ ಪ್ರೇಮದೊಂದಿಗೆ ಅನೇಕ ವೈದ್ಯಕೀಯ ಆಸರೆ, ಅನಾಥ...

ಲಾಯಿಲ ಬೈಕಿಗೆ ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

0

ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಲಾಯಿಲ ಗ್ರಾಮದ ಪುತ್ರಬೈಲು ಬಳಿ ನಡೆದಿದೆ. ಕಿಲ್ಲೂರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತಿದ್ದ ಬೈಕ್ ಬೆಳ್ತಂಗಡಿ ಯಿಂದ ಶಾಮಿಯಾನ ಹೇರಿಕೊಂಡು ಬರುತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಗಾಯಗೊಂಡವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು. ಬೈಕ್ ಸವಾರರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಬಂಧನ ಹಾಗೂ 810 ಗ್ರಾಂ ಗಾಂಜಾ ಹಾಗು ವಾಹನಗಳು ವಶಕ್ಕೆ

0

ಬಂಟ್ವಾಳ; ತುಂಬೆ ಗ್ರಾಮದ ಹನುಮ ನಗರ ಎಂಬಲ್ಲಿ ಅಕ್ತಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಿಂದ 810ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ‌ ಆರೋಪಿಗಳು ಬಂಟ್ವಾಳ ತುಂಬೆ ನಿವಾಸಿ ಸಮೀರ್‌(31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಆಸಿಫ್ (35) ಎಂಬಾತನಾಗಿದ್ದಾನೆ ಇವರಿಂದ 810ಗ್ರಾಂ ಗಾಂಜಾವನ್ನು ಹಾಗೂ ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಒಂದು ರಿಕ್ಷಾ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.13.12.2025 ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು...

ಅಂತಾರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕೂಟ್ಟೂರ್  ಹಾಜಿ ಬೆಳ್ತಂಗಡಿಗೆ ಭೇಟಿ

0

ಬೆಳ್ತಂಗಡಿ; ಕೇರಳದ ಪ್ರಖ್ಯಾತ "ನಾಲೆಡ್ಜ್ ಸಿಟಿ" ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ "ಜಾಮಿಯಲ್ ಫುತೂಹ್" ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕುಟ್ಟೂರು‌ ಹಾಜಿ) ಅವರು ರವಿವಾರ ಬೆಳ್ತಂಗಡಿಗೆ ಭೇಟಿ ನೀಡಿದರು. ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು. ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ಗ್ರೂಪ್ ಆಫ್...

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

0

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು. ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಶಾಲಾ ಕೊಠಡಿ ನೀಲ ನಕಾಶೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ನೂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್...

ಬಳಂಜ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ ಸರಕಾರಿ ಶಾಲೆ ಅಭಿವೃದ್ದಿಗೆ ಊರವರ ಸಹಕಾರ ಅಗತ್ಯ: ಹರೀಶ್ ಕುಮಾರ್

0

ಬೆಳ್ತಂಗಡಿ: ಹಿರಿಯರು ಗ್ರಾಮದ ವಿದ್ಯಾರ್ಥಿಗಳು ಶಿಕ್ಷಣವಂತರಾಗಬೇಕು ಎಂದು ಕಷ್ಟದ ಸಮಯದಲ್ಲಿ ಶಾಲೆ ಪ್ರಾರಂಬಿಸಿದ ಪರಿಣಾಮ ಸಾವಿರಾರು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಇಂತಹ ಹಿರಿಯರ ಕೊಡುಗೆಯನ್ನು ಮರೆಯಬಾರದು.ಈ ನಿಟ್ಟಿನಲ್ಲಿ ಬಳಂಜದಲ್ಲಿ ಇವರ ಸೇವೆಯನ್ನು ಮುಂದುವರೆಸುವ ಕಾರ್ಯ ನಡೆಯುತ್ತಿದ್ದು ಇದು ಇತರರಿಗೆ ಮಾದರಿಯಾಗಿದೆ. ಸರಕಾರಿ ಶಾಲೆ ಉಳಿಸಿ ಬೆಳೆಸಲು ಗ್ರಾಮಸ್ಥರ ಕೊಡುಗೆ ಅಗತ್ಯ ಎಂದು ಮಂಗಳೂರು ಮೆಸ್ಕಾಂ ಅದ್ಯಕ್ಷ ಕೆ ಹರೀಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ರಿ...