ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿ ಪಲ್ಟಿ

0

ಬೆಳ್ತಂಗಡಿ;  ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಮರ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.ಲಾ ರಿಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಒಂದು ತಾಸು ಹೊತ್ತು ಘಾಟಿಯಲ್ಲಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.

ಆರಂಬೋಡಿ; ಅಕ್ರಮ ಮರಳು ಗಣಿಗಾರಿಕೆ; ಪೊಲೀಸ್ ದಾಳಿ 1.70ಲಕ್ಷ ಮೌಲ್ಯದ ಮರಳು ವಶಕ್ಕೆ ; ಪ್ರಕರಣ ದಾಖಲು

0

ಬೆಳ್ತಂಗಡಿ; ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ 1.70ಲಕ್ಷ ಮೌಲ್ಯದ ಭಾರೀ ಪ್ರಮಾಣದ ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಕಾಂತರಬೆಟ್ಟು ನಿವಾಸಿ ಸುಕೀತ್ ಎಂಬಾತನೇ ಅಕ್ರಮ ಮರಳುಗಣಿಗಾರಿಕೆ ನಡೆಸಿ ಮರಳನ್ನು ಶೇಖರಿಸಿಟ್ಟ ಆರೋಪಿಯಾಗಿದ್ದಾನೆ.ಖಚಿತ ಮಾಹಿತಯ ಮೇರೆಗೆ ವೇಣೂರು ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದು ತೋಟದ ನಡುವೆ ಯಾವುದೇ ಪರವಾನಿಗೆಯಿಲ್ಲದೆ ಶೇಖರಿಸಿಟ್ಟಿದ್ದ 150 ರಿಂದ 170 ಟನ್ ಮರಳನ್ನು ಪತ್ತೆಹಚ್ಚಿದ್ದಾರೆ. ಮಳೆ ಗಾಲಕ್ಕಿಂತ ಮೊದಲು ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಇಲ್ಲಿ ಶೇಖರಿಸಲಾಗಿತ್ತು. ಇದರ ಅಂದಾಜು ಮೌಲ್ಯ ಸುಮಾರು 1,70,000 ಎಂದು...

ವೇಣೂರು; ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

0

ಬೆಳ್ತಂಗಡಿ: ವೇಣೂರು ಠಾಣಾವ್ಯಪ್ತಿಯ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು9ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ...

ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

0

ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಇಂದು ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ...

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

0

ಬೆಳ್ತಂಗಡಿ;  ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಮಾತನಾಡಿ ಹೆತ್ತವರಿಗೆ ನಾವು ಮಕ್ಕಳ ಮುಂದೆ ಯಾವ ರೀತಿಯ ನಡೆದುಕೊಳ್ಳಬೇಕು ಹಾಗೂ ಮಕ್ಕಳನ್ನು ಈ ಆಧುನಿಕ ಯುಗದಲ್ಲಿ ಯಾವ ರೀತಿಯ ಬೆಳೆಸಬೇಕು ಹಾಗೂನಮ್ಮ ಮಕ್ಕಳನ್ನು ಪೋಷಕರು ಎಂದು ಇನ್ನೊಬ್ಬರೊಂದಿಗೆ ತುಲನೆ ಮಾಡಬಾರದು ಬದಲಾಗಿ ಹೆತ್ತವರು ತಮ್ಮ ಮಕ್ಕಳನ್ನು ಸಂಪೂರ್ಣವಾಗಿ ಅರ್ಥಯಿಸಿ ಕೊಂಡು ಅವರ ಇಚ್ಛಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೆರೇಪಿಸಬೇಕು ಆ ಸಾಧನೆ...

ಉರುವಾಲು: ಯುವಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ : ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ. ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿಯ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ದೂರಲಾಗಿದೆ.

ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ಅಕ್ರಮ ಮದ್ಯಮಾರಾಟ; ಪೊಲೀಸ್ ದಾಳಿ ಪ್ರಕರಣ ದಾಖಲು

0

ಬೆಳ್ತಂಗಡಿ; ತಾಲೂಕಿನ ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯಮಾರಾಟ ಕೇಂದ್ರಗಳಿಗೆ ಪೊಲೀಸರು ದಾಳಿ ನಡೆಸಿದ್ದು ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಗರ್ಡಾಡಿ ಗ್ರಾಮದ ಡಂಜೋಳಿ ಕ್ರಾಸ್ ಸಮೀಪ ಇರುವ ಗರ್ಡಾಡಿ ಕೋಳಿ ಫಾರ್ಮ್ಸ್ ಎಂಬಲ್ಲಿ ಅಕ್ರಮ ಮದ್ಯ ಮಾರಾ ಮಾಡುತ್ತಿರುವ ಬಂದ ಮಾಹಿತಿಯ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ಇಲ್ಲಿಂದ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಮದ್ಯದ ಬಾಟ್ಲಿಗಳು ಪತ್ತೆಯಾಗಿದ್ದು ಆರೋಪಿ ಗೋಪಾಲ ಪೂಜಾರಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮತ್ತೊಂದು ಪ್ರಕರಣದಲ್ಲಿ ಹೊಸಂಗಡಿಗ್ರಾಮದ ಚಂದ್ರಕಾಂತ್ ಎಂಬಾತನಿಗೆ ಸೇರಿದ ದಿನಸಿ ಅಂಗಡಿಯಲ್ಲಿ...

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

0

ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇತ್ತೀಚೆಗೆ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿಯಲ್ಲಿ ಇರುವ ಇವರನ್ನು ದಿನಾಂಕ 05.07.2025ರಂದು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಬೇಟಿಯಾಗಿ ಆರೋಗ್ಯ ವಿಚಾರಿಸಿದರು ಈ ಸಂದರ್ಭದಲ್ಲಿ ಸಹಾಯಧನವನ್ನು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಹಸ್ತಾಂತರಿಸಿದರು.ಘಟಕದ ಮಾಜಿ ಅಧ್ಯಕ್ಷರಾದ ಎಂ.ಕೆ ಪ್ರಸಾದ್, ಕೋಶಾಧಿಕಾರಿ ನಾಗೇಶ್ ಆದೇಲು, ಸಂಘಟನಾ...

ಧರ್ಮಸ್ಥಳದಿಂದ  ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

0

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಧರ್ಮಸ್ಥಳದಿಂದ ಪಟ್ರಮೆಗೆ ಕೊಕ್ಕಡ-ಸೌತಡ್ಕ ಮಾರ್ಗವಾಗಿ ಸಂಚರಿಸಲಿದೆ ಧರ್ಮಸ್ಥಳದಿಂದ ಪುತ್ತೂರಿಗೆ ಉಜಿರೆ-ಬೆಳಾಲು-ಬಂದಾರು-ಕುಪ್ಪೆಟ್ಟಿ-ಉಪ್ಪಿನಂಗಡಿ ಮಾರ್ಗವಾಗಿ ಸಂಚರಿಸುತ್ತದೆ. ಧರ್ಮಸ್ಥಳದಿಂದ ನೆಲ್ಯಾಡಿ - ಕುಕ್ಕೆ ಸುಬ್ರಹ್ಮಣ್ಯ ಇದು ಕೊಕ್ಕಡ-ನೆಲ್ಯಾಡಿ-ಬಲ್ಯ-ಕಡಬ ಮಾರ್ಗವಾಗಿ ಸಂಚರಿಸುತ್ತದೆ ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ , ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಧರ್ಮಸ್ಥಳ ಸಿ.ಎ...

ಕಿಲ್ಲೂರು; ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿ ಸಾಯಿಸಿದ  ದುಷ್ಕರ್ಮಿಗಳು; ಪ್ರಕರಣ ದಾಖಲು

0

ಬೆಳ್ತಂಗಡಿ; ಕಿಲ್ಲೂರಿನಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಿಲ್ಲೂರು ಕೋಯನಗರ ಎಂಬಲ್ಲಿ ಘಟನೆ ನಡೆಸಿದೆ ಇಲ್ಲಿನ ನಿವಾಸಿ ಇಸುಬು ಎಂಬವರಿಗೆ ಸೇರಿದ ದನವನ್ನು ಸೋಮವಾರ ಎಂದಿನಂತೆ ಮೇಯಲು ಬಿಟ್ಟಿದ್ದರು. ಸಂಜೆಯ ವೇಳೆ ದನ ಸಾವನ್ನಪದಪಿರುವುದು ಕಂಡು ಬಂದಿದೆ. ನೋಡಿದಾಗ ಇದು ವಿಷ ಪ್ರಾಶನದಿಂದ ಸಾವನ್ನಪ್ಪಿರುವಂತೆ ಕಂಡು ಬಂದಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ...